Homeದಲಿತ್ ಫೈಲ್ಸ್ತಮಿಳುನಾಡು: ‘ದನದ ಮಾಂಸ’ ಇಲ್ಲದ ಅಂಬೂರ್‌ ಬಿರಿಯಾನಿ ಹಬ್ಬ; ದಲಿತರಿಂದ ವ್ಯಾಪಕ ಟೀಕೆ

ತಮಿಳುನಾಡು: ‘ದನದ ಮಾಂಸ’ ಇಲ್ಲದ ಅಂಬೂರ್‌ ಬಿರಿಯಾನಿ ಹಬ್ಬ; ದಲಿತರಿಂದ ವ್ಯಾಪಕ ಟೀಕೆ

ತಮಿಳುನಾಡು ಸರ್ಕಾರ ಅಂಬೂರು ಬಿರಿಯಾನಿ ಹಬ್ಬ ಆಯೋಜಿಸಿ, ‘ದನ ಹಾಗೂ ಹಂದಿ’ ಮಾಂಸಗಳಿಗೆ ನಿಷೇಧ ಹೇರಿರುವುದು ವ್ಯಾಪಕ ಟೀಕೆಗೆ ಒಳಗಾಗಿದೆ.

- Advertisement -
- Advertisement -

ತಮಿಳುನಾಡು ಸರ್ಕಾರ ಆಯೋಜಿಸಿರುವ ಅಂಬೂರ್ ಬಿರಿಯಾನಿ ಹಬ್ಬದಲ್ಲಿ ದನದ ಮಾಂಸ ಮತ್ತು ಹಂದಿ ಮಾಂಸವನ್ನು ನಿಷೇಧಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಕಾರ್ಯಕ್ರಮದ ಆವರಣದಲ್ಲಿ ದನದ ಮಾಂಸ ಮತ್ತು ಹಂದಿಮಾಂಸವನ್ನು ತಿರುಪತ್ತೂರ್ ಜಿಲ್ಲಾಧಿಕಾರಿಗಳು ನಿಷೇಧಿಸಲು ನಿರ್ಧರಿಸಿದ ನಂತರ ಅಂಬೂರ್‌ ಬಿರಿಯಾನಿ ಹಬ್ಬ ವ್ಯಾಪಕ ಟೀಕೆಗೆ ಒಳಗಾಗಿದೆ. ವಿಶಿಷ್ಠ ಹಾಗೂ ರಾಜ್ಯದ್ಯಾಂತ ಜನಪ್ರಿಯಯವಾಗಿರುವ ಅಂಬೂರ್ ಬಿರಿಯಾನಿಗೆ ಅಂಬೂರು ಪಟ್ಟಣ ಹೆಸರಾಗಿದೆ.

ತಮಿಳುನಾಡಿನಲ್ಲಿ ಪ್ರಸಿದ್ಧವಾಗಿರುವ ಅಂಬೂರ್ ಬೀಫ್‌ ಬಿರಿಯಾನಿಯನ್ನು ಆಹಾರೋತ್ಸವದಿಂದ ಹೊರಗಿಡಲಾಗಿದೆ. ಕಾರ್ಯಕ್ರಮದ ಆವರಣದಲ್ಲಿ ದನ ಹಾಗೂ ಹಂದಿಯ ಬಿರಿಯಾನಿಯನ್ನು ಬ್ಯಾನ್‌ ಮಾಡುವ ಮೂಲಕ ಜಿಲ್ಲಾಧಿಕಾರಿ ಅಮರ್ ಕುಶ್ವಾಹ ವಿವಾದ ಸೃಷ್ಟಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಂಬೂರಿನಲ್ಲಿ ಬೀಫ್ ಬಿರಿಯಾನಿ ಜನಪ್ರಿಯವಾಗಿದೆ. ಹಂದಿ ಮಾಂಸದ ಬಿರಿಯಾನಿ ಅಪರೂಪವೆನ್ನಬಹುದು. ಆದರೆ ಗೋಮಾಂಸ ಹಾಗೂ ಹಂದಿ ಮಾಂಸ ಎರಡನ್ನೂ ನಿಷೇಧಿಸಿ ಬ್ಯಾಲೆನ್ಸ್ ಮಾಡಲಾಗಿದೆ ಎಂದು ಸಮರ್ಥಿಸಲಾಗುತ್ತಿದೆ.

ಈ ಹಬ್ಬವು ಮೇ 12ರಂದು ಆರಂಭವಾಗಿದ್ದು, ಮೇ 14 ರವರೆಗೆ ಮುಂದುವರಿಯುತ್ತದೆ. ಬಿರಿಯಾನಿಗೆ ಹೆಸರಾಗಿರುವ ಈ ಊರು ತಿರುಪತ್ತೂರ್ ಜಿಲ್ಲೆಯಲ್ಲಿದೆ. ತಮಿಳುನಾಡು ಮೂಲದ ಪರಿಮಳಯುಕ್ತ ಸೀರಗ ಸಾಂಬಾ ಅಕ್ಕಿಯ ಬಳಕೆಯ ಕಾರಣ ಈ ಬಿರಿಯಾನಿ ಶೈಲಿಯು ರಾಜ್ಯಾದ್ಯಂತ ಜನಪ್ರಿಯವಾಗಿದೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ದಲಿತರ ಹತ್ಯೆ ಪ್ರಕರಣ: ಅನುಮಾನಕ್ಕೆ ಆಸ್ಪದ ನೀಡಿದ ತನಿಖಾಧಿಕಾರಿಗಳ ಜಾತಿ, ಹಿನ್ನೆಲೆ; ಆರೋಪ

ಅಂಬೂರು ಬೀಫ್‌ ಬಿರಿಯಾನಿಗೆ ನಿಷೇಧ ಹೇರಿರುವುದು ದಲಿತ ಮತ್ತು ಇತರ ಅನೇಕ ದಮನಿತ ಸಮುದಾಯಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಮುದಾಯಗಳಲ್ಲಿ ಗೋಮಾಂಸವು ಪ್ರಧಾನ ಆಹಾರವಾಗಿದೆ.

ದ್ರಾವಿಡ ಮಾದರಿಗೆ ವಿರುದ್ಧ

ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಉಪ ಪ್ರಧಾನ ಕಾರ್ಯದರ್ಶಿ ವನ್ನಿ ಅರಸು ಸೇರಿದಂತೆ ಪ್ರಸಿದ್ಧ ಬರಹಗಾರರು, ರಾಜಕೀಯ ಮುಖಂಡರು ಪ್ರತಿಕ್ರಿಯೆ ನೀಡಿದ್ದಾರೆ. ಬಿರಿಯಾನಿ ಹಬ್ಬದಲ್ಲಿ ಗೋಮಾಂಸ ನಿಷೇಧವು ಸಾಮಾಜಿಕ ನ್ಯಾಯ ಮತ್ತು ಪ್ರಸ್ತುತ ಅಧಿಕಾರದಲ್ಲಿರುವ ಡಿಎಂಕೆ ಮುಂದಾಳತ್ವದ ‘ದ್ರಾವಿಡ ಮಾದರಿ’ಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ, “ಎರಡು ಗುಂಪುಗಳಿವೆ. ಒಬ್ಬರು ಹಂದಿ ಬಿರಿಯಾನಿ ಕೇಳಿದರೆ ಮತ್ತೊಬ್ಬರು ಬೀಫ್ ಬಿರಿಯಾನಿ ಕೇಳುತ್ತಾರೆ. ಹಿಂದೂಗಳು ಹಾಗೂ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಬಾರದೆಂಬ ಕಾರಣದಿಂದ ಎರಡನ್ನೂ ನಿಷೇಧಿಸಿದ್ದೇವೆ” ಎಂದಿರುವುದಾಗಿ ‘ದಿ ನ್ಯೂಸ್‌ ಮಿನಿಟ್’ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ಹಬ್ಬದಲ್ಲಿ ತಯಾರಿಸಲಾಗುವ ಅಂಬೂರ್‌ ಬಿರಿಯಾನಿಯು ಕೇವಲ ಕುರಿ, ಕೋಳಿ ಮತ್ತು ಮೀನುಗಳಿಗೆ ಸೀಮಿತವಾಗಿದೆ. ಬಿರಿಯಾನಿಯನ್ನು ಉಚಿತವಾಗಿ ನೀಡುವುದಿಲ್ಲ. ಜನರು ಅದನ್ನು ಖರೀದಿಸಬೇಕಾಗುತ್ತದೆ. ದನ ಅಥವಾ ಹಂದಿಮಾಂಸ ಬೇಕಾದರೆ ಹಬ್ಬದ ಆವರಣದಿಂದ ಹೊರಗೆ ಇರುವ ಅಂಗಡಿಯಲ್ಲಿ ಖರೀದಿಸಬಹುದು” ಎಂದಿದ್ದಾರೆ.

ಇದನ್ನೂ ಓದಿರಿ: ಸುರಕೋಡ: ಮಠಕ್ಕೆ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ; 23 ಸವರ್ಣೀಯರ ವಿರುದ್ಧ ಎಫ್‌ಐಆರ್‌

ಹಬ್ಬಕ್ಕೆ ಸಂಬಂಧಿಸಿದಂತೆ ಬಂದಿರುವ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, “ಇದು ಸವರ್ಣೀಯ ಅಥವಾ ದಮನಿತ ಸಮುದಾಯಗಳ ಸಮಸ್ಯೆಯಲ್ಲ. ನಾನು ಗೋಮಾಂಸ ಅಥವಾ ಹಂದಿ ಮಾಂಸದ ವಿರೋಧಿಯಲ್ಲ. ಜನರು ತಮಗೆ ಬೇಕಾದುದನ್ನು ತಿನ್ನಲಿ. ಜನರು ನನ್ನೊಂದಿಗೆ ಕುಳಿತು ತಮಗೆ ಬೇಕಾದುದನ್ನು ತಿನ್ನಬಹುದು. ಜನಸಂಖ್ಯೆಯ 0.5% ಜನರು ಮಾತ್ರ ಸಮಸ್ಯೆಯನ್ನು ಸೃಷ್ಟಿಸುತ್ತಿದ್ದಾರೆ. ನಾನು ಅಧಿಕಾರಿಯಾಗಿ, ಉಳಿದ 99.5% ಬಗ್ಗೆ ಯೋಚಿಸಬೇಕಾಗಿದೆ. ಯಾವುದೇ ವಿವಾದಗಳು ನಡೆಯುವುದನ್ನು ನಾನು ಬಯಸುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಅಂಬೂರು ಮೂಲದ ದಲಿತ ಕವಿ ಯಲನ್ ಆಠಿ ಅವರು ಜಿಲ್ಲಾಧಿಕಾರಿಯವರ ಹೇಳಿಕೆಯನ್ನು ಖಂಡಿಸಿದ್ದು, “ಬೀಫ್ ಬಿರಿಯಾನಿ ಇಲ್ಲದೆ ಅಂಬೂರ್ ಬಿರಿಯಾನಿ ಇಲ್ಲ. ನೀವು ಅಂಬೂರಿಗೆ ಬಂದರೆ, ದನದ ಬಿರಿಯಾನಿ ಅಂಗಡಿಗಳ ಪ್ರಮಾಣವನ್ನು ನೀವೇ ನೋಡಬಹುದು. ಅಂಬೂರಿನಲ್ಲಿ ಬಿರಿಯಾನಿ ಸ್ಟಾಲ್ ನೋಡದೆ ನೀವು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಲು ಸಾಧ್ಯವಿಲ್ಲ” ಎಂದಿದ್ದಾರೆ.

“ಅಂಬೂರು ಪಟ್ಟಣವು ಚರ್ಮದ ಉದ್ಯಮ ಕೇಂದ್ರವಾಗಿದೆ. ಇಲ್ಲಿನ ಬಹುಪಾಲು ಜನರು ಕಾರ್ಮಿಕ ವರ್ಗದವರಾಗಿದ್ದಾರೆ. ಅವರ ಜೀವನವು ಈ ಉದ್ಯಮವನ್ನು ಅವಲಂಬಿಸಿದೆ. ಒಂದು ಪ್ಲೇಟ್ ಮಟನ್ ಬಿರಿಯಾನಿಯ ಬೆಲೆ ಸುಮಾರು 225 ರೂ., ಬೀಫ್ ಬಿರಿಯಾನಿಯ ಬೆಲೆ 50 ರಿಂದ 70 ರೂ” ಎಂದು ವಿವರಿಸಿದ್ದಾರೆ.

“ಹಿಂದೂಗಳ ಭಾವನೆ ಮುಖ್ಯವಾದರೆ, ದಲಿತರ ಭಾವನೆಗಳ ಬಗ್ಗೆ ಏನು ಹೇಳುತ್ತಾರೆ? ನಾನು ಚಿಕನ್ ಅಥವಾ ಮಟನ್ ತಿನ್ನುವುದಿಲ್ಲ. ಹಾಗಾದರೆ ಸರ್ಕಾರ ನಡೆಸುತ್ತಿರುವ ಆ ಉತ್ಸವದಲ್ಲಿ ನನಗೆ ಅವಕಾಶವಿದೆಯೇ ಅಥವಾ ಇಲ್ಲವೇ? ನಾನು ಈ ಸಮಾಜದ ಪ್ರಜೆಯೇ ಅಥವಾ ಅಲ್ಲವೇ? ಚರ್ಮದ ಉದ್ಯಮದಲ್ಲಿ ಕೆಲಸ ಮಾಡುವ ಬಹುಪಾಲು ಜನರು ದಲಿತರು ಅಥವಾ ಮುಸ್ಲಿಮರು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿರಿ: ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌

ಬೀಫ್ ಬಿರಿಯಾನಿಗೆ ಹೆಸರುವಾಸಿಯಾಗಿರುವ ಅಂಬೂರಿನಲ್ಲಿರುವ ರೆಸ್ಟೊರೆಂಟ್‌ವೊಂದರ ಬಗ್ಗೆ ಹೇಳುತ್ತಾ ಕವಿ ಯಲನ್‌, “ಆ ಅಂಗಡಿಯೊಂದರಲ್ಲಿ ದಿನಕ್ಕೆ 200 ಕಿಲೋ ಗೋಮಾಂಸ ಬಿರಿಯಾನಿ ಮಾರಾಟವಾಗುತ್ತದೆ. ಹಂದಿಮಾಂಸವನ್ನು ನಿಷೇಧಿಸುವ ಕ್ರಮವು ಕಣ್ಣೊರಿಸುವ ತಂತ್ರವಾಗಿದೆಯಷ್ಟೇ. ಹಂದಿ ಬಿರಿಯಾನಿಯನ್ನು ಯಾರು ಕೇಳಿದ್ದಾರೆ? ಆದರೆ ಜನರು ಹಂದಿಮಾಂಸವನ್ನು ಬಯಸಿದರೆ, ಅದನ್ನು ಸಹ ತಿನ್ನಲಿಬಿಡಿ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾಧಿಕಾರಿಯ ನಡೆಯನ್ನು ಖಂಡಿಸಿ ವಿಸಿಕೆಯ ವನ್ನಿ ಅರಸು ಟ್ವೀಟ್ ಮಾಡಿದ್ದು, “ನಿರ್ದಿಷ್ಟ ಸಮುದಾಯದ ಆಹಾರವನ್ನು ಹೊರಗಿಟ್ಟು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ದ್ರಾವಿಡ ಮಾದರಿಯನ್ನು ಕಡೆಗಣಿಸಿದ್ದಾರೆ. 75% ಜನರು ಸೇವಿಸುವ ದನದ ಮಾಂಸವನ್ನು ಮೇ 12, 13 ಮತ್ತು 14 ರಂದು ನಡೆಯುವ ಬಿರಿಯಾನಿ ಹಬ್ಬದಲ್ಲಿ ಒಳಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...