Homeಕರ್ನಾಟಕಕುವೆಂಪು, ಕೆಂಪೇಗೌಡರಿಗೆ ಅವಮಾನ ಆರೋಪ; ಕಾಳಿ ಸ್ವಾಮೀಜಿ ಮುಖಕ್ಕೆ ಮಸಿ ಬಳಿದು ಆಕ್ರೋಶ

ಕುವೆಂಪು, ಕೆಂಪೇಗೌಡರಿಗೆ ಅವಮಾನ ಆರೋಪ; ಕಾಳಿ ಸ್ವಾಮೀಜಿ ಮುಖಕ್ಕೆ ಮಸಿ ಬಳಿದು ಆಕ್ರೋಶ

- Advertisement -
- Advertisement -

ರಾಷ್ಟ್ರಕವಿ ಕುವೆಂಪು ಹಾಗೂ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ಕಾಳಿ ಸ್ವಾಮಿ (ಋಷಿ ಕುಮಾರ ಸ್ವಾಮೀಜಿ) ಅವರಿಗೆ ಮಸಿ ಬಳಿಯಲಾಗಿದೆ.

ಶಿವರಾಮೇಗೌಡ ಬಣದ ಕನ್ನಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲ್ಲೇಶ್ವರದ ಗಂಗಮ್ಮ ದೇವಾಲಯಕ್ಕೆ ಋಷಿಕುಮಾರ ಸ್ವಾಮಿ ಬಂದಿದ್ದ ವೇಳೆ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಋಷಿಕುಮಾರ ಸ್ವಾಮೀಜಿಗೆ ಧಿಕ್ಕಾರ ಕೂಗಿ ಮುಖಕ್ಕೆ ಕಪ್ಪುಮಸಿ ಬಳಿದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾಡಗೀತೆಯ ಕುರಿತು ಋಷಿಕುಮಾರ ಸ್ವಾಮೀಜಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಲಾಗಿದೆ. ಘಟನೆಯನ್ನು ಶಿವರಾಮೇಗೌಡರ ಬಣದ ಕರವೇ ಸಮರ್ಥಿಸಿಕೊಂಡಿದೆ.

ಘಟನೆ ಕುರಿತು ಕಾಳಿ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, “ನಾನು ಯಾರನ್ನು ಅವಮಾನಿಸಿಲ್ಲ. ದಾಖಲೆಗಳಿದ್ದರೆ ಕೋರ್ಟ್‌ನಲ್ಲಿ ದಾವೆ ಹೂಡಲಿ. ಇದರಿಂದ ನಾನೇನು ವಿಚಲಿತನಾಗಿಲ್ಲ” ಎಂದಿದ್ದಾರೆ.

ಋಷಿ ಕುಮಾರ ಸ್ವಾಮೀಜಿ ಕಾಲಿಗೆ ಪೆಟ್ಟು ಬಿದ್ದಿದೆ ಎಂದು ಆರೋಪಿಸಲಾಗಿದ್ದು, ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ ಎನ್ನಲಾಗಿದೆ.

“ನಾಡಗೀತೆಯನ್ನು ಅನುಸರಿಸುತ್ತಿರುವ ಕನ್ನಡಪರ ಹೋರಾಟಗಾರರನ್ನು ಗುಂಡಿಕ್ಕಿ ಕೊಲ್ಲಬೇಕು” ಎಂದು ಕಾಳಿ ಸ್ವಾಮೀಜಿ ಹೇಳಿದ್ದರೆಂದು ದೂರಲಾಗುತ್ತಿದೆ.

ಸ್ವಾಮೀಜಿ ಹೇಳಿದ್ದೇನು?

“ಕಾಳಿಕಾ ಸೇನೆಯ ವತಿಯಿಂದ ಮಲ್ಲೇಶ್ವರಂನಲ್ಲಿ ಗಂಗಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಇತ್ತು. ಪೂಜೆ ಬಹಳ ಚೆನ್ನಾಗಿ ಆಯ್ತು. ನನಗೆ ಬಹಳ ಖುಷಿ ಆಯ್ತು. ಪೂಜೆ ಮುಗಿಸಿ ಹೊರ ಬರುವ ವೇಳೆ ಕೆಲವರು ಬಂದು ನೀವು ಕುವೆಂಪು ಅವರನ್ನು ಮತ್ತು ಕನ್ನಡ ಪಡೆಗಳನ್ನು ನಿಂದಿಸಿದ್ದೀರಾ ಎಂದು ಸೃಷ್ಟಿ ಮಾಡಿಕೊಂಡು ನನ್ನ ಬಳಿ ಜಗಳ ಮಾಡಿದ್ರು. ಕುವೆಂಪು ಅವರನ್ನು ಕನ್ನಡ ಪಡೆಗಳನ್ನು ನಾನು ಯಾವತ್ತಿಗೂ ನಿಂದಿಸಿಲ್ಲ. ನಿಮ್ಮ ಬಳಿ ದಾಖಲೆಗಳಿದ್ರೆ ಅದನ್ನು ತರಬೇಕು. ಅದನ್ನು ಬಿಟ್ಟು ಕಪ್ಪು ಮಸಿ ಬಳಿದ್ರೆ ಹೇಗೆ” ಎಂದು ಕಾಳಿ ಸ್ವಾಮೀಜಿ ಕೇಳಿದ್ದಾರೆ.

ಇದನ್ನೂ ಓದಿರಿ: ದೇಶದಲ್ಲಿ ಹಿಜಾಬ್‌ ನಿಷೇಧಿಸಬೇಕು: ಕಾಳಿ ಸ್ವಾಮೀಜಿ ಮತ್ತೆ ವಿವಾದಾತ್ಮಕ ಹೇಳಿಕೆ

ವಿವಾದಗಳನ್ನು ಸೃಷ್ಟಿಸುತ್ತಿರುವ ಕಾಳಿ ಸ್ವಾಮೀಜಿ

ಕನ್ನಡ ನಾಡನ್ನು ರಾಷ್ಟ್ರಕವಿ ಕುವೆಂಪು ಅವರು “ಸರ್ವ ಜನಾಂಗದ ಶಾಂತಿ ತೋಟ” ಎಂದು ಕರೆದಿದ್ದಾರೆ. ನಾಡಗೀತೆಯ ಎಲ್ಲ ಜನವರ್ಗವನ್ನು ಸೌಹಾರ್ದತೆಯಿಂದ ಬದುಕಲು ಪ್ರೇರೇಪಿಸುತ್ತದೆ. ಅನೇಕ ಮಹನೀಯರು ಇದನ್ನೇ ಸಾರಿದ್ದಾರೆ. ಆದರೆ ಕಾಳಿ ಸ್ವಾಮೀಜಿ ಒಂದಲ್ಲ ಒಂದು ವಿವಾದವನ್ನು ಸೃಷ್ಟಿಸುತ್ತಾ “ಸರ್ವಜನಾಂಗದ ಶಾಂತಿಯ ತೋಟ”ವನ್ನು ಹದಗೆಡಿಸುತ್ತಿರುವುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಹಿಂದೂ ಮುಸ್ಲಿಂ ಸಮುದಾಯದ ನಡುವೆ ಬೆಂಕಿ ಹಚ್ಚುವ ಕೆಲಸವನ್ನು ಕಾಳಿ ಸ್ವಾಮೀಜಿ ಎಗ್ಗಿಲ್ಲದೆ ಮಾಡುತ್ತಿರುವುದು ಕಂಡು ಬರುತ್ತಿದೆ ಎಂಬ ಆರೋಪಗಳು ಬರುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ಜರುಗಿಸುತ್ತಿಲ್ಲ.

“ಬಾಬ್ರಿ ಮಸೀದಿಯಂತೆ ಶ್ರೀರಂಗಪಟ್ಟಣದ ಮಸೀದಿಯನ್ನೂ ಕೆಡವಬೇಕು” ಎಂದು ಕಾಳಿ ಸ್ವಾಮೀಜಿ ಹೇಳಿಕೆ ನೀಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಕೆಲಸ ಮಾಡಿದ್ದರು. ಪ್ರಕರಣ ಕೂಡ ದಾಖಲಾಗಿತ್ತು. ನಂತರದಲ್ಲೂ ಕೋಮುದ್ವೇಷವನ್ನು ಮುಂದುವರಿಸಿದ ಸ್ವಾಮೀಜಿ, “ಅದಾನ್‌ ವಿರುದ್ಧ ಸುಪ್ರಬಾತ” ಎಂಬ ವಿವಾದದಲ್ಲೂ ಪಾಲ್ಗೊಂಡಿದ್ದರು. “ಹಲಾಲ್‌ ಕಟ್‌ಗೆ ವಿರೋಧ ವ್ಯಕ್ತಪಡಿಸಿ ಜಟ್ಕಾ ಕಟ್‌” ಎಂದು ಕೋಳಿಯನ್ನು ಕೊಯ್ದು ಪ್ರಚಾರ ಪಡೆದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...