Homeಸಿನಿಮಾಕ್ರೀಡೆIPL2022: ಪವರ್ ಕಟ್ ಸಮಸ್ಯೆಯಿಂದ ಸಿಎಸ್‌ಕೆ ತಂಡದ ಕಾನ್ವೆ ಔಟ್? ನೆಟ್ಟಿಗರಿಂದ ತರಾಟೆ

IPL2022: ಪವರ್ ಕಟ್ ಸಮಸ್ಯೆಯಿಂದ ಸಿಎಸ್‌ಕೆ ತಂಡದ ಕಾನ್ವೆ ಔಟ್? ನೆಟ್ಟಿಗರಿಂದ ತರಾಟೆ

- Advertisement -
- Advertisement -

ನಾಲ್ಕು ಬಾರಿ IPL ಚಾಂಪಿಯನ್ ಆಗಿರುವ ಚನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಈ ಬಾರಿ ಸೋಲಿನ ಮೇಲೆ ಸೋಲುಗಳು ಕಾಡುತ್ತಿವೆ. ಈ ಬಾರಿಯ ಟೂರ್ನಿಯಲ್ಲಿ ನಾಯಕತ್ವವನ್ನು ಜಡೇಜಾರಿಂದ ಧೋನಿಗೆ ವಹಿಸಿದರೂ ಸೋಲುಗಳು ಮಾತ್ರ ನಿಂತಿಲ್ಲ. ಆಡಿರುವ 12 ಪಂದ್ಯಗಳಲ್ಲಿ 8 ಅನ್ನು ಸೋತು, 4 ಅನ್ನು ಗೆದ್ದು ಸದ್ಯ 9ನೇ ಸ್ಥಾನದಲ್ಲಿರುವ ಸಿಎಸ್‌ಕೆ ತನ್ನ ಪ್ಲೆ ಆಫ್ ಕನಸ್ಸನ್ನು ಕೈಬಿಟ್ಟಿದೆ. ಗುರುವಾರ ನಡೆದ ಮುಂಬೈ ವಿರುದ್ಧದ ಪಂದ್ಯದಲ್ಲಿ ಪವರ್ ಕಟ್ ಸಮಸ್ಯೆಯೂ ಕೂಡ ಸಿಎಸ್‌ಕೆ ತಂಡವನ್ನು ಕಾಡಿತು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 49 ಎಸೆತಗಳಲ್ಲಿ 87 ರನ್ ಸಿಡಿಸಿ ತಂಡದ ಜಯಕ್ಕೆ ಕಾರಣವಾಗಿದ್ದ ಚನ್ನೈ ತಂಡದ ಆಟಗಾರ ಡೆವೊನ್ ಕಾನ್ವೆ ಮುಂಬೈ ಎದುರಿನ ಪಂದ್ಯದಲ್ಲಿ ಮಾತ್ರ ಎಲ್‌ಬಿಡಬ್ಲೂ ಆಗಿ ಸೊನ್ನೆಗೆ ಔಟ್ ಆಗಬೇಕಾಯಿತು. ವಾಸ್ತವದಲ್ಲಿ ಅವರು ಔಟ್ ಆಗಿರಲಿಲ್ಲ, ಬಾಲ್ ವಿಕೆಟ್‌ನಿಂದ ಹೊರಹೋಗುವಂತಿತ್ತು. ಆದರೆ ಅದನ್ನು ಅವರು ರಿವ್ಯೂ ಮಾಡಲು ಸಾಧ್ಯವಾಗಲಿಲ್ಲ. ಏಕೆಂದರೆ ಪವರ್ ಕಟ್ ಸಮಸ್ಯೆಯಿಂದಾಗಿ ಪಂದ್ಯದ ಮೊದಲ 10 ಎಸೆತಗಳಲ್ಲಿ ಡಿಆರ್‌ಎಸ್ ವರ್ಕ್ ಆಗಲಿಲ್ಲ!

ಡ್ಯಾನಿಯಲ್ ಸ್ಯಾಮ್ಸ್ ಎಸೆದ ಎರಡನೆ ಎಸೆತ ಕಾನ್ವೆ ಪ್ಯಾಡ್‌ಗೆ ತಗುಲಿತು. ಬೌಲರ್ ಮನವಿ ಪುರಸ್ಕರಿಸಿದ ಮೊದಲ ಅಂಪೈರ್ ಔಟ್ ಎಂದು ತೀರ್ಪಿತ್ತರು. ಆದರೆ ಕಾನ್ವೆ ಅದನ್ನು ಒಪ್ಪಲು ಸಿದ್ದರಿರಲಿಲ್ಲ. ಡಿಆರ್‌ಎಸ್ ಇಲ್ಲದ ಕಾರಣ ಒಲ್ಲದ ಮನಸ್ಸಿನಿಂದಲೇ ಪೆವಿಲಿಯನ್‌ನತ್ತ ಹೆಜ್ಜೆ ಹಾಕಿದರು. ಅಲ್ಲಿಂದ ಮುಂದಕ್ಕೆ ಮೋಯಿನ್ ಅಲಿ, ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್‌ವಾಡ್ ಹೀಗೆ ಸಾಲು ಸಾಲು ವಿಕೆಟ್‌ ಬಿದ್ದು ಚನ್ನೈ 97 ರನ್‌ಗಳಿಗೆ ಆಲೌಟ್‌ ಆಯಿತು ಮತ್ತು 5 ವಿಕೆಟ್‌ಗಳ ಹೀನಾಯ ಸೋಲುಂಡಿತು.

ಕಾನ್ವೆ ಔಟ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆಗಳು ಆರಂಭವಾಗಿವೆ. ವೀಕ್ಷಕ ವಿವರಣೆ ನೀಡುತ್ತಿದ್ದ ಸುನೀಲ್ ಗಾವಸ್ಕರ್ ಕೂಡ ಇದು ಕಳಪೆ ತೀರ್ಪು ಎಂದು ಉಚ್ಚರಿಸಿದ್ದಾರೆ. ಪ್ರಪಂಚದ ದೊಡ್ಡ ಟೂರ್ನಿಯಲ್ಲಿ ಪವರ್ ಕಟ್ ಸಮಸ್ಯೆಯೇ ಎಂದು ಹಲವರು ಟೀಕಿಸಿದ್ದಾರೆ. ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಕೂಡ ಟೀಕೆ ವ್ಯಕ್ತಪಡಿಸಿದ್ದಾರೆ.

ಮುಂಬೈ ಇಂಡಿಯನ್ಸ್ ಮಾಲೀಕರಾದ ಮುಖೇಶ್ ಅಂಬಾನಿ ವಿರುದ್ಧವೂ ಟ್ರೋಲ್‌ಗಳು ಕಂಡುಬಂದಿವೆ. ಅವುಗಳನ್ನು ಈ ಕೆಳಗೆ ನೋಡಬಹುದು.

ಇದೇ ರೀತಿಯ ವಿವಾದ ಕಳೆದ ಪಂದ್ಯದಲ್ಲಿ ರೋಹಿತ್ ಶರ್ಮಾ ಔಟಾದಾಗ ಉಂಟಾಗಿತ್ತು. ಕೀಪರ್ ಕ್ಯಾಚ್ ಮನವಿಯನ್ನು ಡಿಆರ್‌ಎಸ್‌ ಮೂಲಕ ಚೆಕ್ ಮಾಡಲಾಗಿತ್ತು. ಆಗ ಬಾಲ್ ಬ್ಯಾಟ್‌ ಹತ್ತಿರ ಬರುವ ಮುನ್ನವೇ ಅಲ್ಟ್ರಾ ಎಡ್ಜ್‌ನಲ್ಲಿ ಸ್ಪೈಕ್ ಆಗುತ್ತಿತ್ತು. ಅದನ್ನು ಔಟ್ ಎಂದು ಘೋಷಿಸಿದಾಗ ರೋಹಿತ್ ಶರ್ಮಾ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಐಪಿಎಲ್‌: ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಕ್ರೀಡಾಸ್ಫೂರ್ತಿ ಮೆರೆದ ಕ್ವಿಂಟನ್ ಡಿಕಾಕ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...