Homeರಾಜಕೀಯಕಾಂಗ್ರೆಸ್ ಚಿಂತನ್‌ ಶಿಬಿರ: ಒಂದು ಕುಟುಂಕ್ಕೆ ಒಂದು ಟಿಕೆಟ್‌, ನಾಯಕತ್ವಕ್ಕೆ ವಯಸ್ಸಿನ ಮಿತಿ, ನಿವೃತ್ತಿ ಬಗ್ಗೆ...

ಕಾಂಗ್ರೆಸ್ ಚಿಂತನ್‌ ಶಿಬಿರ: ಒಂದು ಕುಟುಂಕ್ಕೆ ಒಂದು ಟಿಕೆಟ್‌, ನಾಯಕತ್ವಕ್ಕೆ ವಯಸ್ಸಿನ ಮಿತಿ, ನಿವೃತ್ತಿ ಬಗ್ಗೆ ಚರ್ಚೆ ಸಾಧ್ಯತೆ

- Advertisement -
- Advertisement -

ಪಕ್ಷಕ್ಕೆ ಹೊಸ ಮುಖಗಳನ್ನು ನಾಯಕತ್ವದ ಮಟ್ಟಕ್ಕೆ ತರುವ ಆಮೂಲಾಗ್ರ ಚಿಂತನೆಯನ್ನು ಕಾಂಗ್ರೆಸ್ ಉನ್ನತ ನಾಯಕರು ಪರಿಗಣಿಸುತ್ತಿರುವುದಾಗಿ ವರದಿಯಾಗಿದೆ. ಒಂದು ಕುಟುಂಬಕ್ಕೆ ಒಂದು ಟಿಕೆಟ್‌‌, ರಾಜ್ಯಸಭಾ ಸದಸ್ಯರ ಅವಧಿಗೆ ಮಿತಿ ಹೇರುವುದು, ಜೊತೆಗೆ ಸಂಘಟನೆಯ ಎಲ್ಲಾ ಹಂತಗಳಲ್ಲಿ ಸ್ಥಾನಮಾನಗಳನ್ನು ಅಲಂಕರಿಸಲು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಲು ನಾಯಕರಿಗೆ ವಯಸ್ಸಿನ ಮಿತಿಯನ್ನು ವಿಧಿಸಲು ಪಕ್ಷವು ಗಂಭೀರವಾಗಿ ಚಿಂತನೆ ನಡೆಸುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಉದಯಪುರದಲ್ಲಿ ಶುಕ್ರವಾರ ಪ್ರಾರಂಭವಾಗುವ ‘‘ಕಾಂಗ್ರೆಸ್ ಚಿಂತನ್ ಶಿಬಿರ್‌”ನಲ್ಲಿ ಈ ಬಗ್ಗೆ ಪಕ್ಷವು “ಗಂಭೀರವಾಗಿ ಯೋಚಿಸುತ್ತಿದೆ” ಎಂದು ಪಕ್ಷದ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌‌ಪ್ರೆಸ್‌ ಹೇಳಿದ್ದು, ಆದರೆ ಈ ಪ್ರಸ್ತಾಪಗಳು ಯಾವ ರೂಪವನ್ನು ಪಡೆಯುತ್ತದೆ ಎಂದು ಇನ್ನೂ ಸ್ಪಷ್ಟವಾಗಿಲ್ಲ ಎಂದು ವರದಿ ಮಾಡಿದೆ. ಕಾಂಗ್ರೆಸ್‌ನ ಈ ಚಿಂತನೆಯು ಪಕ್ಷಕ್ಕೆ “ಯುವತ್ವವನ್ನು” ನೀಡುವ ಪ್ರಯತ್ನದ ಭಾಗವಾಗಿದೆ ಎಂದು ಅದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ದಿಕ್ಕಿನಲ್ಲಿ ಖಂಡಿತವಾಗಿಯೂ ಚಿಂತನೆ ಇದೆ ಎಂದು ನಾನು ನಿಮಗೆ ಹೇಳಬಲ್ಲೆ… ಈ ಬಗ್ಗೆ ನಾವು ಗಂಭೀರವಾಗಿ ಯೋಚಿಸುತ್ತಿದ್ದೇವೆ, ಆದರೆ ಅದು ಹೇಗೆ ಚರ್ಚೆಯಾಗುತ್ತದೆ ಎಂದು ನಾನು ಈಗ ಹೇಳಲಾರೆ” ಎಂದು ಕಾಂಗ್ರೆಸ್‌ ನಾಯಕರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮಂಥವರಿಂದ ಕಾಂಗ್ರೆಸ್ ದುಸ್ಥಿತಿಗಿಳಿದಿದೆ: ಪಿ.ಚಿದಂಬರಂ ವಿರುದ್ಧ ಕಾಂಗ್ರೆಸ್‌ ವಕೀಲರ ಆಕ್ರೋಶ

ಪಕ್ಷದ ಚುನಾವಣಾ ಪುನರುಜ್ಜೀವನಕ್ಕೆ ಉದ್ದೇಶಪೂರ್ವಕವಾಗಿ ಮತ್ತು ಮಾರ್ಗಸೂಚಿಯನ್ನು ಕಂಡುಕೊಳ್ಳಲು ನಡೆಯುತ್ತಿರುವ ಚಿಂತನ ಶಿಬಿರದಲ್ಲಿ ಈ ವಿಚಾರಗಳು ಚರ್ಚೆಗೆ ಬರುತ್ತವೆಯೇ ಎಂಬುದನ್ನು ಕಾದು ನೋಡಬೇಕಾಗಿದೆ. ಸುಮಾರು 430 ಕಾಂಗ್ರೆಸ್ ನಾಯಕರು ಶಿಬಿರದಲ್ಲಿ ಒಟ್ಟುಗೂಡಲಿದ್ದಾರೆ ಎಂದು ವರದಿಯಾಗಿದ್ದು, 2014 ರಲ್ಲಿ ಪಕ್ಷದ ಚುನಾವಣಾ ಹಿನ್ನಡೆ ಪ್ರಾರಂಭವಾದ ನಂತರ ಕಾಂಗ್ರೆಸ್‌ ಸೇರುತ್ತಿರುವ ಮೊದಲ ಚಿಂತನಾ ಅಧಿವೇಶನವಾಗಿದೆ.

ಶಿಬಿರದಲ್ಲಿ ಎರಡು ಪ್ರಸ್ತಾವನೆಗಳ ಕುರಿತು ಅಂತಿಮ ರೂಪುರೇಷೆ ಹೊರಬೀಳಬೇಕಿದೆ ಎಂದು ಮೂಲಗಳು ತಿಳಿಸಿವೆ. ವಯಸ್ಸಿನ ಮಿತಿ ಏನಾಗಿರಬೇಕು: 70 ಅಥವಾ 75? ಮತ್ತು ರಾಜ್ಯಸಭೆಯ ಅವಧಿಯನ್ನು 2 ಅಥವಾ 3 ಕ್ಕೆ ಸೀಮಿತಗೊಳಿಸಬೇಕೇ? ಮುಂತಾದ ವಿಷಯದ ಕುರಿತು ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ.

“ಸಾಂಸ್ಥಿಕ ಪುನರುಜ್ಜೀವನ ನಡೆದಾಗ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಥವಾ ಕೇಂದ್ರ ಚುನಾವಣಾ ಸಮಿತಿಯಲ್ಲಿ ನಿರ್ದಿಷ್ಟ ಶೇಕಡಾವಾರು ಯುವ ನಾಯಕರಿಗೆ ಸ್ಥಾನ ಸಿಗುವಂತೆ ನೋಡಿಕೊಳ್ಳಲಾಗುತ್ತದೆ. ಇದು ಪಿಸಿಸಿ (ರಾಜ್ಯ ಘಟಕಗಳು) ಮತ್ತು ಜಿಲ್ಲಾ ಸಮಿತಿಗಳಿಗೂ ಅನ್ವಯಿಸುತ್ತದೆ” ಎಂದು ಕಾಂಗ್ರೆಸ್‌ ನಾಯಕರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಕಮಲ್ ನಾಥ್ ರಾಜೀನಾಮೆ

70 ಮತ್ತು 75 ವರ್ಷ ಮೇಲ್ಪಟ್ಟ ನಾಯಕರು ಪಕ್ಷದಲ್ಲಿ ಹಲವು ಹಂತಗಳಲ್ಲಿ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಅವರು ಕೆಳಗಿಳಿಯುವಂತೆ ಕೇಳುವ ಸಾಧ್ಯತೆ ಇಲ್ಲ ಎಂದು ಪಕ್ಷದ ಮೂಲಗಳು ತಿಳಿಸಿದ್ದು, ಇದು “ಕ್ರಮೇಣ ಹಂತ-ಹಂತ ಆಗಬಹುದು” ಎಂದು ತಿಳಿಸಿದೆ.

ಸೋನಿಯಾ ಗಾಂಧಿ ಅವರಿಗೆ ವಯಸ್ಸು 75. 2024ರ ಲೋಕಸಭೆ ಚುನಾವಣೆವರೆಗೂ ಅವರನ್ನು ಮುಂದುವರಿಸಬೇಕು ಎಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಒತ್ತಾಯಿಸದ ಹೊರತು ಅವರು ಆಗಸ್ಟ್-ಸೆಪ್ಟೆಂಬರ್‌ನಲ್ಲಿ ಹೊಸ ಅಧ್ಯಕ್ಷರ ಆಯ್ಕೆಗೆ ದಾರಿ ಮಾಡಿಕೊಡುವ ಸೂಚನೆಗಳಿವೆ.

ಉದಯಪುರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಸಂವಹನ ವಿಭಾಗದ ಮುಖ್ಯಸ್ಥ ರಣದೀಪ್ ಸುರ್ಜೇವಾಲಾ, “ಕಾಂಗ್ರೆಸ್ ಜನ (ಜನರು) ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಬೇಕೆಂದು ಬಯಸುತ್ತಾರೆ” ಎಂದು ಪುನರುಚ್ಚರಿಸಿದ್ದು, ಆದರೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಸಾಂಸ್ಥಿಕ ಚುನಾವಣಾ ಪ್ರಕ್ರಿಯೆಯು ನಡೆಯುತ್ತಿದೆ ಮತ್ತು ಇದು ಆಗಸ್ಟ್‌ನಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಬಿಜೆಪಿಯಲ್ಲಿ ಕೆಲವು ಒಳ್ಳೆಯ ವಿಷಯಗಳಿವೆ…’: ಕಾಂಗ್ರೆಸ್‌ಗೆ ಎಚ್ಚರಿಕೆ ರವಾನಿಸಿದ ಹಾರ್ದಿಕ್‌ ಪಟೇಲ್!

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಯಸ್ಸು 79. ಎಐಸಿಸಿ ಪ್ರಧಾನ ಕಾರ್ಯದರ್ಶಿ ಉಮ್ಮನ್ ಚಾಂಡಿ ಅವರ ವಯಸ್ಸು 78, ಸಿಡಬ್ಲ್ಯುಸಿ ಸದಸ್ಯರಾದ ಮನಮೋಹನ್ ಸಿಂಗ್ ಮತ್ತು ಎ.ಕೆ. ಆಂಟನಿ 80 ಮತ್ತು ಅಂಬಿಕಾ ಸೋನಿ, ಹರೀಶ್ ರಾವತ್, ಪಿ. ಚಿದಂಬರಂ, ಗುಲಾಂ ನಬಿ ಆಜಾದ್ 70 ವರ್ಷಕ್ಕಿಂತ ಮೇಲ್ಪಟ್ಟವರು. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ 71 ವರ್ಷ.

ಕಾಂಗ್ರೆಸ್‌ನ ರಾಜ್ಯ ನಾಯಕರುಗಳಲ್ಲಿ, ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರ ವಯಸ್ಸು 75. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮರಳಿದರೆ, ಅವರು ಮುಖ್ಯಮಂತ್ರಿ ಹುದ್ದೆಗೆ ಮುಂಚೂಣಿಯಲ್ಲಿರುವ ಸಾಧ್ಯತೆಯಿದೆ. ಹರಿಯಾಣದಲ್ಲಿ ಭೂಪಿಂದರ್ ಸಿಂಗ್ ಹೂಡಾ ಪ್ರಕರಣವೂ ಇದೇ ಆಗಿದೆ. ಹಾಗಾದರೆ ಇವರುಗಳ ವಿಷಯದಲ್ಲಿ ಪಕ್ಷವೂ ವಿನಾಯಿತಿ ನೀಡಲಿವೆಯೇ? ಎಂಬ ಅಂಶಗಳ ಬಗ್ಗೆ ಇನ್ನೂ ಸ್ಪಷ್ಟತೆ ಹೊರಬರಬೇಕಿದೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ ಚಿಂತನ್ ಶಿಬಿರ್‌ದ ಅರ್ಧದಷ್ಟು ಪ್ರತಿನಿಧಿಗಳು 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕತ್ವ ಖಚಿತಪಡಿಸಿದೆ.

ಇದನ್ನೂ ಓದಿ: ತನ್ನ ಹಳ್ಳಿಗೆ ಉತ್ತಮ ರಸ್ತೆ ಕೇಳಿದ ಯುವಕನ ಮೇಲೆ ಹಲ್ಲೆ ನಡೆಸಿದ ಪಾವಗಡ ಕಾಂಗ್ರೆಸ್‌ ಶಾಸಕ ವೆಂಕಟರಮಣಪ್ಪ

ಸಂಘಟನೆಯಲ್ಲಿ ಹುದ್ದೆಗಳನ್ನು ಅಲಂಕರಿಸಲು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಈಗಾಗಲೇ 75 ವರ್ಷ ವಯಸ್ಸಿನ ಮಿತಿಯನ್ನು ನಿಗದಿಪಡಿಸಿದೆ. ಸಿಪಿಎಂ ಪಾಲಿಟ್‌ಬ್ಯೂರೊ ಮತ್ತು ಕೇಂದ್ರ ಸಮಿತಿ ಸೇರಿದಂತೆ ಎಲ್ಲಾ ತಮ್ಮ ಎಲ್ಲಾ ಸಂಸ್ಥೆಗಳಲ್ಲಿ ಸದಸ್ಯರಿಗೆ 75 ರ ನಿವೃತ್ತಿ ವಯಸ್ಸನ್ನು ಜಾರಿಗೆ ತಂದಿದೆ. ಜೊತೆಗೆ ಸದಸ್ಯರೊಬ್ಬರು ಮೂರನೇ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗುವುದನ್ನು ತಡೆಯುವ ನಿಯಮವನ್ನು ಜಾರಿಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...