Homeಮುಖಪುಟನಮ್ಮನ್ನು ಕೊಲ್ಲುವುದಕ್ಕಾಗಿ ಮರಳಿ ಕರೆತಂದಿರಾ? ಕೇಂದ್ರ ಸರ್ಕಾರ, BJP ವಿರುದ್ಧ ಕಾಶ್ಮೀರಿ ಪಂಡಿತರ ಪ್ರತಿಭಟನೆ

ನಮ್ಮನ್ನು ಕೊಲ್ಲುವುದಕ್ಕಾಗಿ ಮರಳಿ ಕರೆತಂದಿರಾ? ಕೇಂದ್ರ ಸರ್ಕಾರ, BJP ವಿರುದ್ಧ ಕಾಶ್ಮೀರಿ ಪಂಡಿತರ ಪ್ರತಿಭಟನೆ

ಬುಡ್ಗಾಮ್ ಜಿಲ್ಲೆಯ ಶೇಕಾಪೊರದಲ್ಲಿ ಪ್ರತಿಭಟನಾನಿರತ ಕಾಶ್ಮೀರಿ ಪಂಡಿತರಿಗೆ ಬೆಂಬಲ ವ್ಯಕ್ತಪಡಿಸಿ ಸ್ಥಳೀಯ ಮುಸ್ಲಿಮರು ಜೊತೆಗೂಡಿದ್ದಾರೆ.

- Advertisement -
- Advertisement -

ಸರ್ಕಾರಿ ಉದ್ಯೋಗಿಯಾಗಿದ್ದ ರಾಹುಲ್ ಭಟ್ ಎಂಬ ಕಾಶ್ಮೀರಿ ಪಂಡಿತನ ಕೊಲೆ ಖಂಡಿಸಿ ಜಮ್ಮು ಕಾಶ್ಮೀರದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಶ್ರೀನಗರದ ವಿಮಾನ ನಿಲ್ದಾಣದ ಕಡೆ ಮೆರವಣಿಗೆ ಹೊರಟಿದ್ದ ಕಾಶ್ಮೀರಿ ಪಂಡಿತರನ್ನು ಚದುರಿಸಲು ಪೊಲೀಸರು ಅಶ್ರವಾಯು ಸಿಡಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಹಲವಾರು ನಗರಗಳಲ್ಲಿ ಸಾರಿಗೆ ಶಿಬಿರಗಳಲ್ಲಿ ವಾಸಿಸುತ್ತಿರುವ ಕಾಶ್ಮೀರಿ ಪಂಡಿತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ರಸ್ತೆ ತಡೆ ನಡೆಸಿದ್ದಾರೆ. ಹಲವೆಡೆ ಮೊಂಬತ್ತಿ ಬೆಳಗಿ ಪ್ರತಿಭಟನೆ ದಾಖಲಿಸಲಾಗಿದೆ. ನಮಗೆ ರಕ್ಷಣೆ ಕೊಡಲು ವಿಫಲವಾಗಿವೆ ಎಂದು ಆರೋಪಿಸಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ ವಿರುದ್ಧ ಘೋಷಣೆ ಕೂಗಿರುವ ಪ್ರತಿಭಟನಾಕಾರರು ನಮ್ಮನ್ನು ಕೊಲ್ಲುವುದಕ್ಕಾಗಿ ಕಣಿವೆಗೆ ವಾಪಸ್ ಕರೆತಂದಿರಾ ಎಂದು ಪ್ರಶ್ನಿಸಿದ್ದಾರೆ.

ಕಾಶ್ಮೀರಿ ಪಂಡಿತನ ಕೊಲೆಯನ್ನು ತೀವ್ರವಾಗಿ ಖಂಡಿಸುತ್ತೇವೆ. ಇಲ್ಲಿ ನಮಗೆ ಯಾವುದೇ ರಕ್ಷಣೆ ಇಲ್ಲ. ಇದನ್ನು ಪುನರ್ವಸತಿ ಎಂದು ಕರೆಯಲಾಗುತ್ತದೆಯೇ? ನಮ್ಮನ್ನು ಕೊಲ್ಲುವುದಕ್ಕಾಗಿ ಇಲ್ಲಿಗೆ ಕರೆತರಲಾಗಿದೆಯೇ? ಎಂಬ ರಂಜನ್ ಝುತ್ಸಿ ಎಂಬ ಪ್ರತಿಭಟನಾಕಾರರ ಹೇಳಿಕೆಯನ್ನು ಎನ್‌ಡಿಟಿವ ಉಲ್ಲೇಖಿಸಿದೆ.

ನಾವಿಲ್ಲಿ ಕೆಲಸ ಮಾಡಲು ಬಂದಿದ್ದೇವೆ. ಅದನ್ನು ಬಿಟ್ಟು ಬೇರೆನನ್ನೂ ಮಾಡುತ್ತಿಲ್ಲ. ಆದರೂ ನಮ್ಮನ್ನು ಏಕೆ ಕೊಲ್ಲಲಾಗುತ್ತಿದೆ? ನಾವು ಮಾಡಿದ ಅಪರಾಧವಾದರೂ ಏನು? ಇಲ್ಲಿನ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಮತ್ತೊಬ್ಬ ಪ್ರತಿಭಟನಾಕಾರರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಧಿಕಾರಿಗಳು ಭರವಸೆ ನೀಡುತ್ತಾರೆ. ಆದರೆ ಮತ್ತೊಂದು ಕಡೆ ನಮ್ಮ ಸಮುದಾಯವನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆಯುತ್ತಿವೆ. ಪರಿಸ್ಥಿತಿಯ ಗಂಭೀರವಾಗಿದೆ. ಸುರಕ್ಷಿತವಾದ ತಹಸೀಲ್ದಾರ್ ಕಚೇರಿಯಲ್ಲಿಯೇ ಹಣೆಗೆ ಗುಂಡಿಕ್ಕಿ ಹತ್ಯೆ ಮಾಡಲಾಗುತ್ತಿದೆ ಅಂದರೆ ಇಲ್ಲಿನ ವ್ಯವಸ್ಥೆ ಕುಸಿದಿದೆ, ಭದ್ರತೆ ಕುಸಿದಿದೆ, ಸುರಕ್ಷತೆ ಕುಸಿದಿದೆ” ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

ಬುಡ್ಗಾಮ್ ಜಿಲ್ಲೆಯ ಶೇಕಾಪೊರದಲ್ಲಿ ಪ್ರತಿಭಟನಾನಿರತ ಕಾಶ್ಮೀರಿ ಪಂಡಿತರಿಗೆ ಬೆಂಬಲ ವ್ಯಕ್ತಪಡಿಸಿ ಸ್ಥಳೀಯ ಮುಸ್ಲಿಮರು ಜೊತೆಗೂಡಿದ್ದಾರೆ. ನೀರು ಮತ್ತಿತರ ಆಹಾರ ಒದಗಿಸಿರುವ ಮುಸ್ಲಿಮರು, ಕಾಶ್ಮೀರಿ ಪಂಡಿತರಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಇಲ್ಲಿ ಮುಸ್ಲಿಂ ಸಹೋದರರು ನಮ್ಮ ಪರವಾಗಿ ನಿಂತಿದ್ದಾರೆ. ನಮ್ಮ ಸೇವೆ ಮಾಡುತ್ತಿದ್ದಾರೆ. ನಮಗೆ ಹೆಗಲು ಕೊಟ್ಟ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇವೆ ಎಂದು ಸಂಜಯ್ ಎಂಬ ಪ್ರತಿಭಟನಾಕಾರರು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿದರುವ ಜಾವೇದ್ ಇಕ್ಬಾಲ್ ಮಾತನಾಡಿ ”ಕಾಶ್ಮೀರದಲ್ಲಿರುವ ಎಲ್ಲ ಮುಸ್ಲಿಮರು ಮುಂದೆ ಬಂದು ಪ್ರತಿಭಟಿಸಲು ನಾನು ಮನವಿ ಮಾಡುತ್ತೇನೆ. ಕಾಶ್ಮೀರಿ ಪಂಡಿತರನ್ನು ರಕ್ಷಿಸುವಲ್ಲಿ ಆಡಳಿತವು ಸಂಪೂರ್ಣವಾಗಿ ವಿಫಲವಾಗಿದೆ, ತಹಶೀಲ್ದಾರ್ ಕಚೇರಿಯಲ್ಲಿಯೇ ಒಬ್ಬ ವ್ಯಕ್ತಿಯನ್ನು ಕೊಂದರೆ, ಕಾಶ್ಮೀರಿ ಪಂಡಿತರು ಎಲ್ಲಿಗೆ ಹೋಗಬೇಕು” ಎಂದು ಪ್ರಶ್ನಿಸಿದ್ದಾರೆ.

ಗುರುವಾರ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಚಾದೂರ ಗ್ರಾಮದ ತಹಸೀಲ್ದಾರ್ ಕಚೇರಿಯಲ್ಲಿ ಕಾಶ್ಮೀರಿ ಪಂಡಿತ ರಾಹುಲ್ ಭಟ್ ಎಂಬುವವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇಬ್ಬರು ಭಯೋತ್ಪಾದಕರು ಸರ್ಕಾರಿ ಕಚೇರಿಗೆ ನುಗ್ಗಿ ಅಲ್ಲಿನ ಉದ್ಯೋಗಿ ರಾಹುಲ್ ಭಟ್ ಅವರ ಹಣೆಗೆ ಗುಂಡಿಟ್ಟು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಲಸೆ ಕಾರ್ಮಿಕರು ಮತ್ತು ಸ್ಥಳೀಯ ಅಲ್ಪಸಂಖ್ಯಾತರ ಮೇಲೆ ಕಳೆದ ಎಂಟು ತಿಂಗಳಿನಿಂದ ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಉದ್ದೇಶಿತ ದಾಳಿಗೆ ಇದು ಮತ್ತೊಂದು ಸೇರ್ಪಡೆಯಾಗಿದೆ. ಅಕ್ಟೋಬರ್‌ ತಿಂಗಳಿನಿಂದ ಹೆಚ್ಚಾಗಿ ಹೊರಗಿನಿಂದ ಉದ್ಯೋಗ ಅರಸಿ ಬಂದ ವಲಸಿಗರು ಮತ್ತು ಸ್ಥಳೀಯ ಕಾಶ್ಮೀರಿ ಪಂಡಿತರ ಮೇಲೆ ದಾಳಿಗಳಾಗುತ್ತಿವೆ ಎಂದು ವರದಿಯಾಗಿದೆ. ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಓಮರ್ ಅಬ್ದುಲ್ಲಾ ಕೊಲೆಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದ ತಹಶೀಲ್ದಾರ್ ಕಚೇರಿಯಲ್ಲಿ ಭಯೋತ್ಪಾದಕರಿಂದ ಕಾಶ್ಮೀರಿ ಪಂಡಿತನ ಹತ್ಯೆ: ವರದಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸ್ಥಳೀಯರನ್ನು ರಕ್ಷಿಸುವಲ್ಲಿ ವಿಫಲವಾಗುತ್ತಿದೆ ಎಂದು ವಿರೋಧ ಪಕ್ಷವಾದ ಕಾಂಗ್ರೆಸ್ ಆರೋಪಿಸಿದೆ. ಕಾಶ್ಮೀರ ಪಂಡಿತರ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ, ಪಂಡಿತರು ಬೀದಿಯಲ್ಲಿ ಕೊಲೆಯಾಗುತ್ತಿರುವಾಗ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...