Homeಮುಖಪುಟ’ಪ್ರಧಾನಿ ಅಮಿತ್ ಶಾ’ ಎಂದು ಕರೆದ ಅಸ್ಸಾಂ ಸಿಎಂ ಹಿಮಂತ ಶರ್ಮಾ: ನಂತರ ಮೋದಿ ಪ್ರತಿಕ್ರಿಯಿಸಿದ್ದು...

’ಪ್ರಧಾನಿ ಅಮಿತ್ ಶಾ’ ಎಂದು ಕರೆದ ಅಸ್ಸಾಂ ಸಿಎಂ ಹಿಮಂತ ಶರ್ಮಾ: ನಂತರ ಮೋದಿ ಪ್ರತಿಕ್ರಿಯಿಸಿದ್ದು ಹೀಗೆ…

- Advertisement -
- Advertisement -

ಅಸ್ಸಾಂ ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಗೌಹಾಟಿಯಲ್ಲಿ ನಡೆದ ಬೃಹತ್ ರ್‍ಯಾಲಿಯಲ್ಲಿ ಮಾತನಾಡಿದ ಹಿಮಂತ ಬಿಸ್ವ ಶರ್ಮಾ, ’ಪ್ರಧಾನಿ ಅಮಿತ್ ಶಾರವರೆ ಮತ್ತು ಗೃಹ ಮಂತ್ರಿ ನರೇಂದ್ರ ಮೋದಿಯವರೆ’ ಎಂದು ಸಂಬೋಧಿಸಿ ಚರ್ಚೆಗೆ ಗ್ರಾಸವಾಗಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದಲ್ಲದೆ, ಹಿಮಂತ ಶರ್ಮಾ ಬೇಕಂತಲೇ ಅಮಿತ್ ಶಾರವರನ್ನು ಪ್ರಧಾನಿ ಎಂದು ಕರೆದಿದ್ದಾರೆ ಎಂದು ಪ್ರತಿಪಾದಿಸಲಾಗುತ್ತಿದೆ.

2024ರ ಚುನಾವಣೆಗೆ ಗೃಹ ಸಚಿವ ಅಮಿತ್‌ ಶಾರವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲಾಗುತ್ತಿದೆ ಎಂಬ ಉಹಾಪೋಹಗಳ ನಡುವೆ ಅವರ ನಿಕಟವರ್ತಿಯಾದ ಅಸ್ಸಾಂ ಸಿಎಂ ಹಿಮಂತ ಶರ್ಮಾ ಈ ರೀತಿಯ ಹೇಳಿಕೆ ನೀಡಿದ್ದು ಅದಕ್ಕೆ ಮತ್ತಷ್ಟು ಪುಷ್ಠಿ ನೀಡಿತ್ತು.

ಈ ಚರ್ಚೆ ಆರಂಭವಾಗುತ್ತಲೇ ಎಚ್ಚೆತ್ತುಕೊಂಡಿರುವ ಪ್ರಧಾನಿ ಮೋದಿ ಆ ಕುರಿತು ಪ್ರತಿಕ್ರಿಯಿಸಿದ್ದಾರೆ. ಹಿಮಂತ ಶರ್ಮಾ ಹೇಳಿಕೆ ನೀಡಿದ ಎರಡು ದಿನದ ನಂತರ ಗುಜರಾತ್‌ನಲ್ಲಿ ನಡೆದ ವರ್ಚುವಲ್ ರ್‍ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ “ಮೂರನೇ ಅವಧಿಗೆ ಪ್ರಧಾನಿಯಾಗಲು ತಯಾರಿಯಾಗಿದ್ದು, ಶೇ.100 ರಷ್ಟು ಕೆಲಸಗಳನ್ನು ಮಾಡಲು 2024ರ ಚುನಾವಣೆಯಲ್ಲಿಯೂ ತಾನು ಪ್ರಧಾನಿ ಅಭ್ಯರ್ಥಿಯಾಗಿರುತ್ತೇನೆ” ಎಂಬ ಸಂದೇಶ ರವಾನಿಸಿದ್ದಾರೆ.

ಈ ವಿಷಯ ಪ್ರಸ್ತಾಪಿಸಿದ ಅವರು, “ಒಮ್ಮೆ ನಾನು ಗೌರವಿಸುವ ವಿರೋಧ ಪಕ್ಷದ ಹಿರಿಯ ಮುಖಂಡರೊಬ್ಬರು ನನ್ನನ್ನು ಭೇಟಿಯಾಗಿದ್ದರು. ಕೆಲ ವಿಷಯಗಳನ್ನು ಮಾತನಾಡಿದ ನಂತರ, ಮೋದಿಜಿ ನಿಮಗೆ ಇನ್ನೇನು ಬೇಕು, ಈ ದೇಶ ನಿಮ್ಮನ್ನು ಎರಡು ಬಾರಿಗೆ ಪ್ರಧಾನಿಯನ್ನಾಗಿ ಮಾಡಿದೆ ಎಂದರು. ಎರಡು ಬಾರಿ ಪ್ರಧಾನಿಯಾಗುವುದು ದೊಡ್ಡ ಸಾಧನೆ ಎಂದು ಅವರು ಭಾವಿಸಿದ್ದರು. ಆದರೆ ಈ ಮೋದಿಯವರ ಮನಸ್ಸಿನಲ್ಲಿ ಬೇರೆ ಇದೆ ಎಂಬುದು ಅವರಿಗೆ ಗೊತ್ತಿರಲಿಲ್ಲ. ಗುಜರಾತ್ ಮಣ್ಣಿನಲ್ಲಿ ಹುಟ್ಟಿಬಂದ ನಾನು ವಿಶ್ರಾಂತಿ ಪಡೆಯಬಹುದಾದಷ್ಟನ್ನು ಇನ್ನು ಸಾಧಿಸಿಲ್ಲ. ಎಲ್ಲಾ ಸರಿ ಇದೆ ಎಂದು ನಾನು ವಿಶ್ರಾಂತಿ ಪಡೆಯಲು ಸಾಧ್ಯವಿಲ್ಲ. ನನ್ನ ಕನಸುಗಳು ಮುಗಿದಿಲ್ಲ, 100% ಕೆಲಸ ಮಾಡಬೇಕಿದೆ” ಎಂದು ಮೋದಿ ಹೇಳಿದ್ದಾರೆ.

ಮೋದಿಯವರ ಆರೋಗ್ಯ ಸರಿ ಇಲ್ಲ, ಅವರಿಗೆ ರಕ್ಷಣಾ ಬೆದರಿಕೆ ಇದೆ ಎಂಬ ಊಹಾಪೋಹಗಳನ್ನು ಒಬ್ಬರು ನನ್ನ ಬಳಿ ಹೇಳಿದರು. ಆಗ ನಾನು ಹೇಳಿದೆ, “ನನಗೆ ಕೋಟ್ಯಾಂತರ ತಾಯಂದಿರ ಮತ್ತು ಸಹೋದರಿಯರ ಆರ್ಶೀವಾದವಿದೆ. ಆ ರಕ್ಷಾ ಕವಚವಿರುವುದರಿಂದ ಯಾರೂ ನನ್ನನ್ನು ಏನು ಮಾಡಲು ಸಾಧ್ಯವಿಲ್ಲ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ; ಕಾಂಗ್ರೆಸ್ ಚಿಂತನ್‌ ಶಿಬಿರ: ಒಂದು ಕುಟುಂಕ್ಕೆ ಒಂದು ಟಿಕೆಟ್‌, ನಾಯಕತ್ವಕ್ಕೆ ವಯಸ್ಸಿನ ಮಿತಿ, ನಿವೃತ್ತಿ ಬಗ್ಗೆ ಚರ್ಚೆ ಸಾಧ್ಯತೆ

ಸದ್ಯ ಬಿಜೆಪಿ 75 ವರ್ಷ ದಾಟಿದವರು ಅಧಿಕಾರದ ಸ್ಥಾನಗಳಲ್ಲಿ ಇರಬಾರದು ಎಂಬ ನಿಯಮ ಘೋಷಿಸಿದೆ. ಹಾಗೆ ನೋಡಿದರೆ 2024ರ ಚುನಾವಣೆ ಹೊತ್ತಿಗೆ ನರೇಂದ್ರ ಮೋದಿಯವರಿಗೆ 74 ವರ್ಷ ತುಂಬಿರುತ್ತದೆ. ಅವರು ಪ್ರಧಾನಿಯಾದರೆ 79 ವರ್ಷದವರೆಗೂ ಅಧಿಕಾರದಲ್ಲಿ ಇದ್ದ ಹಾಗೆ ಆಗುತ್ತದೆ. ಅದು ಬಿಜೆಪಿಯ ನಿಯಮವನ್ನು ಉಲ್ಲಂಘಿಸಿದಂತೆ ಆಗುವುದಿಲ್ಲವೇ ಎಂಬ ಪ್ರಶ್ನೆಗಳು ಸಹ ಎದ್ದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...