Homeಮುಖಪುಟ’ಪ್ರಧಾನಿ ಅಮಿತ್ ಶಾ’ ಎಂದು ಕರೆದ ಅಸ್ಸಾಂ ಸಿಎಂ ಹಿಮಂತ ಶರ್ಮಾ: ನಂತರ ಮೋದಿ ಪ್ರತಿಕ್ರಿಯಿಸಿದ್ದು...

’ಪ್ರಧಾನಿ ಅಮಿತ್ ಶಾ’ ಎಂದು ಕರೆದ ಅಸ್ಸಾಂ ಸಿಎಂ ಹಿಮಂತ ಶರ್ಮಾ: ನಂತರ ಮೋದಿ ಪ್ರತಿಕ್ರಿಯಿಸಿದ್ದು ಹೀಗೆ…

- Advertisement -
- Advertisement -

ಅಸ್ಸಾಂ ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಗೌಹಾಟಿಯಲ್ಲಿ ನಡೆದ ಬೃಹತ್ ರ್‍ಯಾಲಿಯಲ್ಲಿ ಮಾತನಾಡಿದ ಹಿಮಂತ ಬಿಸ್ವ ಶರ್ಮಾ, ’ಪ್ರಧಾನಿ ಅಮಿತ್ ಶಾರವರೆ ಮತ್ತು ಗೃಹ ಮಂತ್ರಿ ನರೇಂದ್ರ ಮೋದಿಯವರೆ’ ಎಂದು ಸಂಬೋಧಿಸಿ ಚರ್ಚೆಗೆ ಗ್ರಾಸವಾಗಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದಲ್ಲದೆ, ಹಿಮಂತ ಶರ್ಮಾ ಬೇಕಂತಲೇ ಅಮಿತ್ ಶಾರವರನ್ನು ಪ್ರಧಾನಿ ಎಂದು ಕರೆದಿದ್ದಾರೆ ಎಂದು ಪ್ರತಿಪಾದಿಸಲಾಗುತ್ತಿದೆ.

2024ರ ಚುನಾವಣೆಗೆ ಗೃಹ ಸಚಿವ ಅಮಿತ್‌ ಶಾರವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲಾಗುತ್ತಿದೆ ಎಂಬ ಉಹಾಪೋಹಗಳ ನಡುವೆ ಅವರ ನಿಕಟವರ್ತಿಯಾದ ಅಸ್ಸಾಂ ಸಿಎಂ ಹಿಮಂತ ಶರ್ಮಾ ಈ ರೀತಿಯ ಹೇಳಿಕೆ ನೀಡಿದ್ದು ಅದಕ್ಕೆ ಮತ್ತಷ್ಟು ಪುಷ್ಠಿ ನೀಡಿತ್ತು.

ಈ ಚರ್ಚೆ ಆರಂಭವಾಗುತ್ತಲೇ ಎಚ್ಚೆತ್ತುಕೊಂಡಿರುವ ಪ್ರಧಾನಿ ಮೋದಿ ಆ ಕುರಿತು ಪ್ರತಿಕ್ರಿಯಿಸಿದ್ದಾರೆ. ಹಿಮಂತ ಶರ್ಮಾ ಹೇಳಿಕೆ ನೀಡಿದ ಎರಡು ದಿನದ ನಂತರ ಗುಜರಾತ್‌ನಲ್ಲಿ ನಡೆದ ವರ್ಚುವಲ್ ರ್‍ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ “ಮೂರನೇ ಅವಧಿಗೆ ಪ್ರಧಾನಿಯಾಗಲು ತಯಾರಿಯಾಗಿದ್ದು, ಶೇ.100 ರಷ್ಟು ಕೆಲಸಗಳನ್ನು ಮಾಡಲು 2024ರ ಚುನಾವಣೆಯಲ್ಲಿಯೂ ತಾನು ಪ್ರಧಾನಿ ಅಭ್ಯರ್ಥಿಯಾಗಿರುತ್ತೇನೆ” ಎಂಬ ಸಂದೇಶ ರವಾನಿಸಿದ್ದಾರೆ.

ಈ ವಿಷಯ ಪ್ರಸ್ತಾಪಿಸಿದ ಅವರು, “ಒಮ್ಮೆ ನಾನು ಗೌರವಿಸುವ ವಿರೋಧ ಪಕ್ಷದ ಹಿರಿಯ ಮುಖಂಡರೊಬ್ಬರು ನನ್ನನ್ನು ಭೇಟಿಯಾಗಿದ್ದರು. ಕೆಲ ವಿಷಯಗಳನ್ನು ಮಾತನಾಡಿದ ನಂತರ, ಮೋದಿಜಿ ನಿಮಗೆ ಇನ್ನೇನು ಬೇಕು, ಈ ದೇಶ ನಿಮ್ಮನ್ನು ಎರಡು ಬಾರಿಗೆ ಪ್ರಧಾನಿಯನ್ನಾಗಿ ಮಾಡಿದೆ ಎಂದರು. ಎರಡು ಬಾರಿ ಪ್ರಧಾನಿಯಾಗುವುದು ದೊಡ್ಡ ಸಾಧನೆ ಎಂದು ಅವರು ಭಾವಿಸಿದ್ದರು. ಆದರೆ ಈ ಮೋದಿಯವರ ಮನಸ್ಸಿನಲ್ಲಿ ಬೇರೆ ಇದೆ ಎಂಬುದು ಅವರಿಗೆ ಗೊತ್ತಿರಲಿಲ್ಲ. ಗುಜರಾತ್ ಮಣ್ಣಿನಲ್ಲಿ ಹುಟ್ಟಿಬಂದ ನಾನು ವಿಶ್ರಾಂತಿ ಪಡೆಯಬಹುದಾದಷ್ಟನ್ನು ಇನ್ನು ಸಾಧಿಸಿಲ್ಲ. ಎಲ್ಲಾ ಸರಿ ಇದೆ ಎಂದು ನಾನು ವಿಶ್ರಾಂತಿ ಪಡೆಯಲು ಸಾಧ್ಯವಿಲ್ಲ. ನನ್ನ ಕನಸುಗಳು ಮುಗಿದಿಲ್ಲ, 100% ಕೆಲಸ ಮಾಡಬೇಕಿದೆ” ಎಂದು ಮೋದಿ ಹೇಳಿದ್ದಾರೆ.

ಮೋದಿಯವರ ಆರೋಗ್ಯ ಸರಿ ಇಲ್ಲ, ಅವರಿಗೆ ರಕ್ಷಣಾ ಬೆದರಿಕೆ ಇದೆ ಎಂಬ ಊಹಾಪೋಹಗಳನ್ನು ಒಬ್ಬರು ನನ್ನ ಬಳಿ ಹೇಳಿದರು. ಆಗ ನಾನು ಹೇಳಿದೆ, “ನನಗೆ ಕೋಟ್ಯಾಂತರ ತಾಯಂದಿರ ಮತ್ತು ಸಹೋದರಿಯರ ಆರ್ಶೀವಾದವಿದೆ. ಆ ರಕ್ಷಾ ಕವಚವಿರುವುದರಿಂದ ಯಾರೂ ನನ್ನನ್ನು ಏನು ಮಾಡಲು ಸಾಧ್ಯವಿಲ್ಲ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ; ಕಾಂಗ್ರೆಸ್ ಚಿಂತನ್‌ ಶಿಬಿರ: ಒಂದು ಕುಟುಂಕ್ಕೆ ಒಂದು ಟಿಕೆಟ್‌, ನಾಯಕತ್ವಕ್ಕೆ ವಯಸ್ಸಿನ ಮಿತಿ, ನಿವೃತ್ತಿ ಬಗ್ಗೆ ಚರ್ಚೆ ಸಾಧ್ಯತೆ

ಸದ್ಯ ಬಿಜೆಪಿ 75 ವರ್ಷ ದಾಟಿದವರು ಅಧಿಕಾರದ ಸ್ಥಾನಗಳಲ್ಲಿ ಇರಬಾರದು ಎಂಬ ನಿಯಮ ಘೋಷಿಸಿದೆ. ಹಾಗೆ ನೋಡಿದರೆ 2024ರ ಚುನಾವಣೆ ಹೊತ್ತಿಗೆ ನರೇಂದ್ರ ಮೋದಿಯವರಿಗೆ 74 ವರ್ಷ ತುಂಬಿರುತ್ತದೆ. ಅವರು ಪ್ರಧಾನಿಯಾದರೆ 79 ವರ್ಷದವರೆಗೂ ಅಧಿಕಾರದಲ್ಲಿ ಇದ್ದ ಹಾಗೆ ಆಗುತ್ತದೆ. ಅದು ಬಿಜೆಪಿಯ ನಿಯಮವನ್ನು ಉಲ್ಲಂಘಿಸಿದಂತೆ ಆಗುವುದಿಲ್ಲವೇ ಎಂಬ ಪ್ರಶ್ನೆಗಳು ಸಹ ಎದ್ದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...