Homeಮುಖಪುಟ’ಪ್ರಧಾನಿ ಅಮಿತ್ ಶಾ’ ಎಂದು ಕರೆದ ಅಸ್ಸಾಂ ಸಿಎಂ ಹಿಮಂತ ಶರ್ಮಾ: ನಂತರ ಮೋದಿ ಪ್ರತಿಕ್ರಿಯಿಸಿದ್ದು...

’ಪ್ರಧಾನಿ ಅಮಿತ್ ಶಾ’ ಎಂದು ಕರೆದ ಅಸ್ಸಾಂ ಸಿಎಂ ಹಿಮಂತ ಶರ್ಮಾ: ನಂತರ ಮೋದಿ ಪ್ರತಿಕ್ರಿಯಿಸಿದ್ದು ಹೀಗೆ…

- Advertisement -
- Advertisement -

ಅಸ್ಸಾಂ ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಗೌಹಾಟಿಯಲ್ಲಿ ನಡೆದ ಬೃಹತ್ ರ್‍ಯಾಲಿಯಲ್ಲಿ ಮಾತನಾಡಿದ ಹಿಮಂತ ಬಿಸ್ವ ಶರ್ಮಾ, ’ಪ್ರಧಾನಿ ಅಮಿತ್ ಶಾರವರೆ ಮತ್ತು ಗೃಹ ಮಂತ್ರಿ ನರೇಂದ್ರ ಮೋದಿಯವರೆ’ ಎಂದು ಸಂಬೋಧಿಸಿ ಚರ್ಚೆಗೆ ಗ್ರಾಸವಾಗಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದಲ್ಲದೆ, ಹಿಮಂತ ಶರ್ಮಾ ಬೇಕಂತಲೇ ಅಮಿತ್ ಶಾರವರನ್ನು ಪ್ರಧಾನಿ ಎಂದು ಕರೆದಿದ್ದಾರೆ ಎಂದು ಪ್ರತಿಪಾದಿಸಲಾಗುತ್ತಿದೆ.

2024ರ ಚುನಾವಣೆಗೆ ಗೃಹ ಸಚಿವ ಅಮಿತ್‌ ಶಾರವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲಾಗುತ್ತಿದೆ ಎಂಬ ಉಹಾಪೋಹಗಳ ನಡುವೆ ಅವರ ನಿಕಟವರ್ತಿಯಾದ ಅಸ್ಸಾಂ ಸಿಎಂ ಹಿಮಂತ ಶರ್ಮಾ ಈ ರೀತಿಯ ಹೇಳಿಕೆ ನೀಡಿದ್ದು ಅದಕ್ಕೆ ಮತ್ತಷ್ಟು ಪುಷ್ಠಿ ನೀಡಿತ್ತು.

ಈ ಚರ್ಚೆ ಆರಂಭವಾಗುತ್ತಲೇ ಎಚ್ಚೆತ್ತುಕೊಂಡಿರುವ ಪ್ರಧಾನಿ ಮೋದಿ ಆ ಕುರಿತು ಪ್ರತಿಕ್ರಿಯಿಸಿದ್ದಾರೆ. ಹಿಮಂತ ಶರ್ಮಾ ಹೇಳಿಕೆ ನೀಡಿದ ಎರಡು ದಿನದ ನಂತರ ಗುಜರಾತ್‌ನಲ್ಲಿ ನಡೆದ ವರ್ಚುವಲ್ ರ್‍ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ “ಮೂರನೇ ಅವಧಿಗೆ ಪ್ರಧಾನಿಯಾಗಲು ತಯಾರಿಯಾಗಿದ್ದು, ಶೇ.100 ರಷ್ಟು ಕೆಲಸಗಳನ್ನು ಮಾಡಲು 2024ರ ಚುನಾವಣೆಯಲ್ಲಿಯೂ ತಾನು ಪ್ರಧಾನಿ ಅಭ್ಯರ್ಥಿಯಾಗಿರುತ್ತೇನೆ” ಎಂಬ ಸಂದೇಶ ರವಾನಿಸಿದ್ದಾರೆ.

ಈ ವಿಷಯ ಪ್ರಸ್ತಾಪಿಸಿದ ಅವರು, “ಒಮ್ಮೆ ನಾನು ಗೌರವಿಸುವ ವಿರೋಧ ಪಕ್ಷದ ಹಿರಿಯ ಮುಖಂಡರೊಬ್ಬರು ನನ್ನನ್ನು ಭೇಟಿಯಾಗಿದ್ದರು. ಕೆಲ ವಿಷಯಗಳನ್ನು ಮಾತನಾಡಿದ ನಂತರ, ಮೋದಿಜಿ ನಿಮಗೆ ಇನ್ನೇನು ಬೇಕು, ಈ ದೇಶ ನಿಮ್ಮನ್ನು ಎರಡು ಬಾರಿಗೆ ಪ್ರಧಾನಿಯನ್ನಾಗಿ ಮಾಡಿದೆ ಎಂದರು. ಎರಡು ಬಾರಿ ಪ್ರಧಾನಿಯಾಗುವುದು ದೊಡ್ಡ ಸಾಧನೆ ಎಂದು ಅವರು ಭಾವಿಸಿದ್ದರು. ಆದರೆ ಈ ಮೋದಿಯವರ ಮನಸ್ಸಿನಲ್ಲಿ ಬೇರೆ ಇದೆ ಎಂಬುದು ಅವರಿಗೆ ಗೊತ್ತಿರಲಿಲ್ಲ. ಗುಜರಾತ್ ಮಣ್ಣಿನಲ್ಲಿ ಹುಟ್ಟಿಬಂದ ನಾನು ವಿಶ್ರಾಂತಿ ಪಡೆಯಬಹುದಾದಷ್ಟನ್ನು ಇನ್ನು ಸಾಧಿಸಿಲ್ಲ. ಎಲ್ಲಾ ಸರಿ ಇದೆ ಎಂದು ನಾನು ವಿಶ್ರಾಂತಿ ಪಡೆಯಲು ಸಾಧ್ಯವಿಲ್ಲ. ನನ್ನ ಕನಸುಗಳು ಮುಗಿದಿಲ್ಲ, 100% ಕೆಲಸ ಮಾಡಬೇಕಿದೆ” ಎಂದು ಮೋದಿ ಹೇಳಿದ್ದಾರೆ.

ಮೋದಿಯವರ ಆರೋಗ್ಯ ಸರಿ ಇಲ್ಲ, ಅವರಿಗೆ ರಕ್ಷಣಾ ಬೆದರಿಕೆ ಇದೆ ಎಂಬ ಊಹಾಪೋಹಗಳನ್ನು ಒಬ್ಬರು ನನ್ನ ಬಳಿ ಹೇಳಿದರು. ಆಗ ನಾನು ಹೇಳಿದೆ, “ನನಗೆ ಕೋಟ್ಯಾಂತರ ತಾಯಂದಿರ ಮತ್ತು ಸಹೋದರಿಯರ ಆರ್ಶೀವಾದವಿದೆ. ಆ ರಕ್ಷಾ ಕವಚವಿರುವುದರಿಂದ ಯಾರೂ ನನ್ನನ್ನು ಏನು ಮಾಡಲು ಸಾಧ್ಯವಿಲ್ಲ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ; ಕಾಂಗ್ರೆಸ್ ಚಿಂತನ್‌ ಶಿಬಿರ: ಒಂದು ಕುಟುಂಕ್ಕೆ ಒಂದು ಟಿಕೆಟ್‌, ನಾಯಕತ್ವಕ್ಕೆ ವಯಸ್ಸಿನ ಮಿತಿ, ನಿವೃತ್ತಿ ಬಗ್ಗೆ ಚರ್ಚೆ ಸಾಧ್ಯತೆ

ಸದ್ಯ ಬಿಜೆಪಿ 75 ವರ್ಷ ದಾಟಿದವರು ಅಧಿಕಾರದ ಸ್ಥಾನಗಳಲ್ಲಿ ಇರಬಾರದು ಎಂಬ ನಿಯಮ ಘೋಷಿಸಿದೆ. ಹಾಗೆ ನೋಡಿದರೆ 2024ರ ಚುನಾವಣೆ ಹೊತ್ತಿಗೆ ನರೇಂದ್ರ ಮೋದಿಯವರಿಗೆ 74 ವರ್ಷ ತುಂಬಿರುತ್ತದೆ. ಅವರು ಪ್ರಧಾನಿಯಾದರೆ 79 ವರ್ಷದವರೆಗೂ ಅಧಿಕಾರದಲ್ಲಿ ಇದ್ದ ಹಾಗೆ ಆಗುತ್ತದೆ. ಅದು ಬಿಜೆಪಿಯ ನಿಯಮವನ್ನು ಉಲ್ಲಂಘಿಸಿದಂತೆ ಆಗುವುದಿಲ್ಲವೇ ಎಂಬ ಪ್ರಶ್ನೆಗಳು ಸಹ ಎದ್ದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...