Homeಮುಖಪುಟದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

ದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

ನಮ್ಮ ಕೈಯಲ್ಲಿ ಈ ದೇಶದ ಮಣ್ಣಿದೆ. ಸೂಫಿ ಪರಂಪರೆಯಿದೆ. ಬುದ್ದ, ಬಸವಣ್ಣ, ಭಗತ್ ಸಿಂಗ್, ಮೌಲಾನ ಆಜಾದ್ ಇದ್ದಾರೆ. ಅಂಬೇಡ್ಕರ್‌ರವರ ಸಂವಿಧಾನವಿದೆ.

- Advertisement -
- Advertisement -

ಯಾರು ಈ ದೇಶವನ್ನು ಕಟ್ಟುತ್ತಾರೋ, ಒಗ್ಗೂಡಿಸುತ್ತಾರೊ ಅವರು ದೇಶಪ್ರೇಮಿಗಳು. ಹಿಂದೂ – ಮುಸ್ಲಿಂ, ಹಿಂದೂ – ಸಿಖ್ಖರ ನಡುವೆ ಜಗಳ ತರುವವರು ದೇಶದ್ರೋಹಿಗಳು ಎಂದು ಚಿಂತಕ, ಮಾನವ ಹಕ್ಕುಗಳ ಹೋರಾಟಗಾರ ಯೋಗೇಂದ್ರ ಯಾದವ್‌ ಅಭಿಪ್ರಾಯಪಟ್ಟಿದ್ದಾರೆ.

ಉಡುಪಿಯಲ್ಲಿ ನಡೆದ ಸಹಬಾಳ್ವೆ ಸಮಾವೇಶದಲ್ಲಿ ಮಾತನಾಡಿದ ಅವರು, “ಕೆಲವರು ಇಲ್ಲಿಯೇ ಮಂದಿರ ಕಟ್ಟುತ್ತೇವೆ ಎಂದು ಹೇಳುತ್ತಾರೆ. ನಾವು ಇಲ್ಲಿಯೇ ಸಾಮರಸ್ಯ ಮೂಡಿಸುತ್ತೇವೆ, ಸ್ನೇಹ ಬೆಳೆಸುತ್ತೇವೆ ಎನ್ನುತ್ತೇವೆ. ಅವರು ಒಡೆಯುತ್ತಾರೆ, ನಾವು ಕೂಡಿಸುತ್ತೇವೆ. ಅದು ದೆಹಲಿ‌ ತನಕ‌ ಕೇಳಿಸಲಿ. ಇದು ನನ್ನೊಬ್ಬನ ಹೃದಯದ ಮಾತಲ್ಲ, ನಿಮ್ಮೆಲ್ಲರ ಹೃದಯದ ಮಾತಾಗಿದೆ” ಎಂದರು.

ಈ ಸಮಾವೇಶಕ್ಕೆ ಉಡುಪಿಯನ್ನು ಆಯ್ದುಕೊಂಡಿದ್ದಕ್ಕೆ ಧನ್ಯವಾದಗಳು. ಏಕೆಂದರೆ ಇತ್ತೀಚಿನ ದ್ವೇಷದ ಅಲೆಗೆ ಉಡುಪಿಯನ್ನು ಆಯ್ದುಕೊಳ್ಳಲಾಗಿತ್ತು. ಉಡುಪಿಯ ಹೆಸರು ದೇಶದ ಎಲ್ಲಾ ಟಿವಿ ಚಾನೆಲ್‌ಗಳಲ್ಲಿ ಹರಡಿತು. ಕರಾವಳಿ ಕರ್ನಾಟಕ ಒಂದು ಸುಂದರ ತಾಣ. ಇಲ್ಲಿ ಎಲ್ಲವೂ ಬೆಳೆಯುತ್ತದೆ, ಇದು ಫಲವತ್ತಾದ ಸ್ಥಳವಾಗಿದೆ. ಹೀಗಾಗಿ ಇಲ್ಲೂ ಒಂದಿಷ್ಟು ದ್ವೇಷ ಬಿತ್ತೋಣ ಎಂದುಕೊಂಡಿದ್ದಾರೆ. ಆದರೆ ಅದರ ಫಸಲು ಬೆಳೆಯಲು ನಾವು ಬಿಡುವುದಿಲ್ಲ ಎಂದರು.

ಅವರು ಎರಡು ದರ್ಜೆಯ ಜನರನ್ನಾಗಿ ವಿಂಗಡಿಸಲು ಯತ್ನಿಸುತ್ತಾರೆ. ಪ್ರಥಮೆ, ಎರಡನೇ ದರ್ಜೆಯ ನಾಗರಿಕರನ್ನಾಗಿ ವಿಭಜಿಸಲು ಅವರು ಯತ್ನಿಸುತ್ತಾರೆ. ಮನೆಯ ಮಾಲಿಕ ಮತ್ತು ಮನೆಯ ಬಾಡಿಗೆದಾರ ಎಂಬ ವರ್ಗಗಳನ್ನು ಸೃಷ್ಟಿಸುತ್ತಾರೆ. ಹಿಂದಿ ರಾಷ್ಟ್ರ ಭಾಷೆ ಎಂದು ಕೆಲವರು ಹೇಳುತ್ತಾರೆ. ಹಿಂದಿ ಇನ್ನೂರು ವರ್ಷ ಹಳೆಯದು. ಆದರೆ ಕನ್ನಡ ಎರಡೂವರೆ ಸಾವಿರ ವರ್ಷ ಹಳೆಯದು. ಹೀಗಿರುವಾಗ ಹಿಂದಿ ಮಾತನಾಡುವ ಜನರು ಮನೆಯ ಮಾಲೀಕರು ಮತ್ತು ಕನ್ನಡ ಮಾತನಾಡುವ ಜನರು ಹೇಗೆ ಬಾಡಿಗೆದಾರರಾಗಲು ಸಾಧ್ಯ? ಅವರು ಒಂದು ಧರ್ಮದ ಜನರು ಮಾಲೀಕರಾಗಲು ಮತ್ತು ಉಳಿದ ಧರ್ಮದ ಜನರು ಬಾಡಿಗೆದಾರರಾಗುವಂತೆ ಮಾಡುತ್ತಿದ್ದಾರೆ. ನಾವು ಉಡುಪಿಯಲ್ಲಿ ಘೋಷಿಸುತ್ತೇವೆ. ಯಾರ್ಯಾರ ಪೂರ್ವಿಕರ ರಕ್ತ ಇಲ್ಲಿದೆಯೋ ಅವರೆಲ್ಲರೂ ಈ ದೇಶದ ಮಾಲೀಕರು. ನಾವು ಯಾರ ಗುಲಾಮರಲ್ಲ ಎಂದು ಯಾದವ್ ತಿಳಿಸಿದರು.

ಸೆಕ್ಯುಲರಿಸಂ ಎಂಬ ಪದ ಇಂದಿರಾಗಾಂಧಿ ಸಂವಿಧಾನದಲ್ಲಿ ಸೇರಿಸುವ ಮೊದಲು ಇರಲಿಲ್ಲ ಎಂದು ಅವರು ಹೇಳುತ್ತಾರೆ. ಸಮಾನತೆಯ ಹಕ್ಕು, ಸಾಂಸ್ಕೃತಿಕ ಹಕ್ಕು ಮತ್ತು ಧಾರ್ಮಿಕ ಸ್ವಾತಂತ್ರ್‍ಯದ ಹಕ್ಕು 1950 ರ ಸಂವಿಧಾನದಲ್ಲಿಯೇ ಇತ್ತು. ಅದೇ ಸೆಕ್ಯುಲರಿಸಂ. ಸಂವಿಧಾನದ ಕರಡು ರಚನೆ ಸಂದರ್ಭದಲ್ಲಿಯೇ ಈ ಆಶಯಗಳನ್ನು ಸೇರಿಸಲಾಗಿತ್ತು, ಅವು ಸ್ವಾತಂತ್ರ್‍ಯ ಹೋರಾಟದ ಫಲಗಳು ಎಂದು ಯಾದವ್ ಹೇಳಿದರು.

ಗೌತಮ ಬುದ್ಧ ಮೈತ್ರಿ ಬಗ್ಗೆ ಹೇಳುತ್ತಾರೆ. ಅಶೋಕ ಮತ್ತು ಅಕ್ಬರ್ ಕೂಡ ಮೈತ್ರಿ ಬಗ್ಗೆ ಮಾತನಾಡುತ್ತಾರೆ. ಇದು ಭಾರತದ ಪರಂಪರೆ. ಸೆಕ್ಯುಲರಿಸಂ ಬ್ರಿಟಿಷರ ಕೊಡುಗೆ ಅಲ್ಲ. ಐದು ಸಾವಿರ ವರ್ಷಗಳಿಂದ ಈ ದೇಶ ಹೀಗೆಯೇ ನಡೆಯುತ್ತಿದೆ. ಸಿಂಹಾಸನದ ಮೇಲೆ ಕುಳಿತಿರುವವರು ತಾವೇ ದೇವರು ಎಂದು ನಂಬಿದ್ದಾರೆ. ಅವರ ಮುಂಚೆಯೂ ಈ ದೇಶ ಇತ್ತು, ಅವರ ನಂತರವೂ ಈ ದೇಶ ಇರುತ್ತದೆ. ಎಲ್ಲರನ್ನೂ ಗೌರವಿಸುವ, ಒಟ್ಟಿಗೆ ಕರೆದೊಯ್ಯುವುದು ಈ ದೇಶದ ಧರ್ಮ ಎಂಬುದನ್ನು ಅವರು ಮರೆಯಬಾರದು ಎಂದರು.

ಇಂದು ದೇಶದಲ್ಲಿ ಬುಲ್ಡೋಜರ್‌ ಚಲಾಯಿಸಲಾಗುತ್ತಿದೆ. ಕೇವಲ ಕಟ್ಟಡಗಳ ಮೇಲೆ ಅಲ್ಲ ಹಿಂದೂಸ್ಥಾನದ ಮೇಲೆ, ಸಂವಿಧಾನದ ಮೇಲೆ ಬುಲ್ಡೋಜರ್‌ ಚಲಾಯಿಸಲಾಗುತ್ತಿದೆ. ಮೀಡಿಯಾ ಪ್ರಾಮಾಣಿಕವಾಗಿದ್ದರೆ ಈ ಉಡುಪಿ ಸಮಾವೇಶ ನಾಳೆ ಮುಖಪುಟದ ಹೆಡ್ಲೈನ್ ಆಗುತ್ತದೆ. ನಾನು ಪತ್ರಕರ್ತರನ್ನು ದೂರುವುದಿಲ್ಲ. ಅವರು ತಮ್ಮ ಕೆಲಸ ಮಾಡುತ್ತಿದ್ದಾರೆ. ಆದರೆ ಯಾರ ಬಳಿ ಹಣ ಮತ್ತು ಅಧಿಕಾರವಿದೆಯೇ ಅವರು ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದಾರೆ ಎಂದರು.

ನಮ್ಮ ಕೈಯಲ್ಲಿ ಈ ದೇಶದ ಮಣ್ಣಿದೆ. ಸೂಫಿ ಪರಂಪರೆಯಿದೆ. ಬುದ್ದ, ಬಸವಣ್ಣ, ಭಗತ್ ಸಿಂಗ್, ಮೌಲಾನ ಆಜಾದ್ ಇದ್ದಾರೆ. ಅಂಬೇಡ್ಕರ್‌ರವರ ಸಂವಿಧಾನವಿದೆ. ಪ್ರಶ್ನೆ ಇರುವುದು ನಾವು ಗೆದಿಲ್ಲ ಎನ್ನುವುದಲ್ಲ, ಹೇಗೆ ಮತ್ತು ಯಾವಾಗ ಗೆಲ್ಲುತ್ತೇವೆ ಎನ್ನುವುದಾಗಿದೆ. ದೊಡ್ಡ ಪರಂಪರೆ ನಮಗಿರುವುದರಿಂದ ಹೋರಾಡುತ್ತೇವೆ ಮತ್ತು ನಾವು ಗೆಲ್ಲುತ್ತೇವೆ ಎಂದರು.

ಇದನ್ನೂ ಓದಿ; ಏಳು ಬಣ್ಣಗಳ ಬಾವುಟ ಬೀಸಿ ಬಹುತ್ವ ಸಂದೇಶದೊಂದಿಗೆ ಉಡುಪಿಯ ಸಾಮರಸ್ಯ ನಡಿಗೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಮ್ಯೂನಿಸ್ಟ್ ಉಗ್ರರು ಯಾವಾಗಲೂ ಮಾಡಿರುವ ದಾಖಲೆ ದೇಶ ಒಡೆಯುವ ಕೆಲಸವೇ ಅಲ್ಲವೇ ಪ್ರಪಂಚದ ಇತಿಹಾಸದಲ್ಲಿ

  2. ದ್ವೇಷದ ಹೋರಾಟ ಹೇಗೆ ಇಡೀ ಪ್ರಪಂಚಕ್ಕೆ ಸುದ್ದಿ ಮಾದ್ಯಮಗಳಲ್ಲಿ ಬಿತ್ತರವಾಯಿತೋ ಹಾಗೆಯೆ ಸಾಮರಸ್ಯದ ಹೋರಾಟವೂ ಪ್ರಪಂಚದೆಲ್ಲೆಡೆ ಪ್ರಸಾರವಾಗಲಿ ಎಂದು ಆಶಿಸುತ್ತೇನೆ. ಪ್ರಜಾಪ್ರಭಹತ್ವ=ಜಾತ್ಯಾತೀತತೆ, ಇದಕ್ಕೆ ಮತ್ತೊಂದು ವಿವರಣೆಯ ಅವಶ್ಯಕತೆ ಇಲ್ಲ. ಪ್ರಜೆ ಎಂದರೆ ಜಾತಿ, ಧರ್ಮ, ಭಾಷೆ, ಪ್ರದೇಶ, ಇತರೆ ಎಲ್ಲವನ್ನೂ ಮೀರಿದ ಭಾರತೀಯ. ಆನಂತರ ಅವೆಲ್ಲವನ್ನೂ ಪರಿಗಣಿಸ ಬಹುದು. ಈ ವಿಚಾರದಲ್ಲಿ ವಿದ್ಯಾವಂತರನ್ನೂ ತಪ್ಪು ದಾರಿಗೆಳೆಯಲಾಗುತ್ತಿದೆ. ಇದರಿಂದ ದೇಶ ಸರ್ವನಾಶದ ಕಡೆಗೆ ಹೆಜ್ಜೆ ಇಡುತ್ತಿದೆ. ಈ ಸಾಮರಸ್ಯದ ಸಮಾವೇಷ ಸಹಬಾಳ್ವಗೆ ಮತ್ತು ದೇಶದ ಏಳಿಗೆಯ ಆರಂಬ. ಇದನ್ನು ಆಯೋಜಿಸಿದವರೆಲ್ಲರಿಗೂ ವಂದನೆಗಳು.

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...