Homeಮುಖಪುಟದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

ದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

ನಮ್ಮ ಕೈಯಲ್ಲಿ ಈ ದೇಶದ ಮಣ್ಣಿದೆ. ಸೂಫಿ ಪರಂಪರೆಯಿದೆ. ಬುದ್ದ, ಬಸವಣ್ಣ, ಭಗತ್ ಸಿಂಗ್, ಮೌಲಾನ ಆಜಾದ್ ಇದ್ದಾರೆ. ಅಂಬೇಡ್ಕರ್‌ರವರ ಸಂವಿಧಾನವಿದೆ.

- Advertisement -
- Advertisement -

ಯಾರು ಈ ದೇಶವನ್ನು ಕಟ್ಟುತ್ತಾರೋ, ಒಗ್ಗೂಡಿಸುತ್ತಾರೊ ಅವರು ದೇಶಪ್ರೇಮಿಗಳು. ಹಿಂದೂ – ಮುಸ್ಲಿಂ, ಹಿಂದೂ – ಸಿಖ್ಖರ ನಡುವೆ ಜಗಳ ತರುವವರು ದೇಶದ್ರೋಹಿಗಳು ಎಂದು ಚಿಂತಕ, ಮಾನವ ಹಕ್ಕುಗಳ ಹೋರಾಟಗಾರ ಯೋಗೇಂದ್ರ ಯಾದವ್‌ ಅಭಿಪ್ರಾಯಪಟ್ಟಿದ್ದಾರೆ.

ಉಡುಪಿಯಲ್ಲಿ ನಡೆದ ಸಹಬಾಳ್ವೆ ಸಮಾವೇಶದಲ್ಲಿ ಮಾತನಾಡಿದ ಅವರು, “ಕೆಲವರು ಇಲ್ಲಿಯೇ ಮಂದಿರ ಕಟ್ಟುತ್ತೇವೆ ಎಂದು ಹೇಳುತ್ತಾರೆ. ನಾವು ಇಲ್ಲಿಯೇ ಸಾಮರಸ್ಯ ಮೂಡಿಸುತ್ತೇವೆ, ಸ್ನೇಹ ಬೆಳೆಸುತ್ತೇವೆ ಎನ್ನುತ್ತೇವೆ. ಅವರು ಒಡೆಯುತ್ತಾರೆ, ನಾವು ಕೂಡಿಸುತ್ತೇವೆ. ಅದು ದೆಹಲಿ‌ ತನಕ‌ ಕೇಳಿಸಲಿ. ಇದು ನನ್ನೊಬ್ಬನ ಹೃದಯದ ಮಾತಲ್ಲ, ನಿಮ್ಮೆಲ್ಲರ ಹೃದಯದ ಮಾತಾಗಿದೆ” ಎಂದರು.

ಈ ಸಮಾವೇಶಕ್ಕೆ ಉಡುಪಿಯನ್ನು ಆಯ್ದುಕೊಂಡಿದ್ದಕ್ಕೆ ಧನ್ಯವಾದಗಳು. ಏಕೆಂದರೆ ಇತ್ತೀಚಿನ ದ್ವೇಷದ ಅಲೆಗೆ ಉಡುಪಿಯನ್ನು ಆಯ್ದುಕೊಳ್ಳಲಾಗಿತ್ತು. ಉಡುಪಿಯ ಹೆಸರು ದೇಶದ ಎಲ್ಲಾ ಟಿವಿ ಚಾನೆಲ್‌ಗಳಲ್ಲಿ ಹರಡಿತು. ಕರಾವಳಿ ಕರ್ನಾಟಕ ಒಂದು ಸುಂದರ ತಾಣ. ಇಲ್ಲಿ ಎಲ್ಲವೂ ಬೆಳೆಯುತ್ತದೆ, ಇದು ಫಲವತ್ತಾದ ಸ್ಥಳವಾಗಿದೆ. ಹೀಗಾಗಿ ಇಲ್ಲೂ ಒಂದಿಷ್ಟು ದ್ವೇಷ ಬಿತ್ತೋಣ ಎಂದುಕೊಂಡಿದ್ದಾರೆ. ಆದರೆ ಅದರ ಫಸಲು ಬೆಳೆಯಲು ನಾವು ಬಿಡುವುದಿಲ್ಲ ಎಂದರು.

ಅವರು ಎರಡು ದರ್ಜೆಯ ಜನರನ್ನಾಗಿ ವಿಂಗಡಿಸಲು ಯತ್ನಿಸುತ್ತಾರೆ. ಪ್ರಥಮೆ, ಎರಡನೇ ದರ್ಜೆಯ ನಾಗರಿಕರನ್ನಾಗಿ ವಿಭಜಿಸಲು ಅವರು ಯತ್ನಿಸುತ್ತಾರೆ. ಮನೆಯ ಮಾಲಿಕ ಮತ್ತು ಮನೆಯ ಬಾಡಿಗೆದಾರ ಎಂಬ ವರ್ಗಗಳನ್ನು ಸೃಷ್ಟಿಸುತ್ತಾರೆ. ಹಿಂದಿ ರಾಷ್ಟ್ರ ಭಾಷೆ ಎಂದು ಕೆಲವರು ಹೇಳುತ್ತಾರೆ. ಹಿಂದಿ ಇನ್ನೂರು ವರ್ಷ ಹಳೆಯದು. ಆದರೆ ಕನ್ನಡ ಎರಡೂವರೆ ಸಾವಿರ ವರ್ಷ ಹಳೆಯದು. ಹೀಗಿರುವಾಗ ಹಿಂದಿ ಮಾತನಾಡುವ ಜನರು ಮನೆಯ ಮಾಲೀಕರು ಮತ್ತು ಕನ್ನಡ ಮಾತನಾಡುವ ಜನರು ಹೇಗೆ ಬಾಡಿಗೆದಾರರಾಗಲು ಸಾಧ್ಯ? ಅವರು ಒಂದು ಧರ್ಮದ ಜನರು ಮಾಲೀಕರಾಗಲು ಮತ್ತು ಉಳಿದ ಧರ್ಮದ ಜನರು ಬಾಡಿಗೆದಾರರಾಗುವಂತೆ ಮಾಡುತ್ತಿದ್ದಾರೆ. ನಾವು ಉಡುಪಿಯಲ್ಲಿ ಘೋಷಿಸುತ್ತೇವೆ. ಯಾರ್ಯಾರ ಪೂರ್ವಿಕರ ರಕ್ತ ಇಲ್ಲಿದೆಯೋ ಅವರೆಲ್ಲರೂ ಈ ದೇಶದ ಮಾಲೀಕರು. ನಾವು ಯಾರ ಗುಲಾಮರಲ್ಲ ಎಂದು ಯಾದವ್ ತಿಳಿಸಿದರು.

ಸೆಕ್ಯುಲರಿಸಂ ಎಂಬ ಪದ ಇಂದಿರಾಗಾಂಧಿ ಸಂವಿಧಾನದಲ್ಲಿ ಸೇರಿಸುವ ಮೊದಲು ಇರಲಿಲ್ಲ ಎಂದು ಅವರು ಹೇಳುತ್ತಾರೆ. ಸಮಾನತೆಯ ಹಕ್ಕು, ಸಾಂಸ್ಕೃತಿಕ ಹಕ್ಕು ಮತ್ತು ಧಾರ್ಮಿಕ ಸ್ವಾತಂತ್ರ್‍ಯದ ಹಕ್ಕು 1950 ರ ಸಂವಿಧಾನದಲ್ಲಿಯೇ ಇತ್ತು. ಅದೇ ಸೆಕ್ಯುಲರಿಸಂ. ಸಂವಿಧಾನದ ಕರಡು ರಚನೆ ಸಂದರ್ಭದಲ್ಲಿಯೇ ಈ ಆಶಯಗಳನ್ನು ಸೇರಿಸಲಾಗಿತ್ತು, ಅವು ಸ್ವಾತಂತ್ರ್‍ಯ ಹೋರಾಟದ ಫಲಗಳು ಎಂದು ಯಾದವ್ ಹೇಳಿದರು.

ಗೌತಮ ಬುದ್ಧ ಮೈತ್ರಿ ಬಗ್ಗೆ ಹೇಳುತ್ತಾರೆ. ಅಶೋಕ ಮತ್ತು ಅಕ್ಬರ್ ಕೂಡ ಮೈತ್ರಿ ಬಗ್ಗೆ ಮಾತನಾಡುತ್ತಾರೆ. ಇದು ಭಾರತದ ಪರಂಪರೆ. ಸೆಕ್ಯುಲರಿಸಂ ಬ್ರಿಟಿಷರ ಕೊಡುಗೆ ಅಲ್ಲ. ಐದು ಸಾವಿರ ವರ್ಷಗಳಿಂದ ಈ ದೇಶ ಹೀಗೆಯೇ ನಡೆಯುತ್ತಿದೆ. ಸಿಂಹಾಸನದ ಮೇಲೆ ಕುಳಿತಿರುವವರು ತಾವೇ ದೇವರು ಎಂದು ನಂಬಿದ್ದಾರೆ. ಅವರ ಮುಂಚೆಯೂ ಈ ದೇಶ ಇತ್ತು, ಅವರ ನಂತರವೂ ಈ ದೇಶ ಇರುತ್ತದೆ. ಎಲ್ಲರನ್ನೂ ಗೌರವಿಸುವ, ಒಟ್ಟಿಗೆ ಕರೆದೊಯ್ಯುವುದು ಈ ದೇಶದ ಧರ್ಮ ಎಂಬುದನ್ನು ಅವರು ಮರೆಯಬಾರದು ಎಂದರು.

ಇಂದು ದೇಶದಲ್ಲಿ ಬುಲ್ಡೋಜರ್‌ ಚಲಾಯಿಸಲಾಗುತ್ತಿದೆ. ಕೇವಲ ಕಟ್ಟಡಗಳ ಮೇಲೆ ಅಲ್ಲ ಹಿಂದೂಸ್ಥಾನದ ಮೇಲೆ, ಸಂವಿಧಾನದ ಮೇಲೆ ಬುಲ್ಡೋಜರ್‌ ಚಲಾಯಿಸಲಾಗುತ್ತಿದೆ. ಮೀಡಿಯಾ ಪ್ರಾಮಾಣಿಕವಾಗಿದ್ದರೆ ಈ ಉಡುಪಿ ಸಮಾವೇಶ ನಾಳೆ ಮುಖಪುಟದ ಹೆಡ್ಲೈನ್ ಆಗುತ್ತದೆ. ನಾನು ಪತ್ರಕರ್ತರನ್ನು ದೂರುವುದಿಲ್ಲ. ಅವರು ತಮ್ಮ ಕೆಲಸ ಮಾಡುತ್ತಿದ್ದಾರೆ. ಆದರೆ ಯಾರ ಬಳಿ ಹಣ ಮತ್ತು ಅಧಿಕಾರವಿದೆಯೇ ಅವರು ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದಾರೆ ಎಂದರು.

ನಮ್ಮ ಕೈಯಲ್ಲಿ ಈ ದೇಶದ ಮಣ್ಣಿದೆ. ಸೂಫಿ ಪರಂಪರೆಯಿದೆ. ಬುದ್ದ, ಬಸವಣ್ಣ, ಭಗತ್ ಸಿಂಗ್, ಮೌಲಾನ ಆಜಾದ್ ಇದ್ದಾರೆ. ಅಂಬೇಡ್ಕರ್‌ರವರ ಸಂವಿಧಾನವಿದೆ. ಪ್ರಶ್ನೆ ಇರುವುದು ನಾವು ಗೆದಿಲ್ಲ ಎನ್ನುವುದಲ್ಲ, ಹೇಗೆ ಮತ್ತು ಯಾವಾಗ ಗೆಲ್ಲುತ್ತೇವೆ ಎನ್ನುವುದಾಗಿದೆ. ದೊಡ್ಡ ಪರಂಪರೆ ನಮಗಿರುವುದರಿಂದ ಹೋರಾಡುತ್ತೇವೆ ಮತ್ತು ನಾವು ಗೆಲ್ಲುತ್ತೇವೆ ಎಂದರು.

ಇದನ್ನೂ ಓದಿ; ಏಳು ಬಣ್ಣಗಳ ಬಾವುಟ ಬೀಸಿ ಬಹುತ್ವ ಸಂದೇಶದೊಂದಿಗೆ ಉಡುಪಿಯ ಸಾಮರಸ್ಯ ನಡಿಗೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಮ್ಯೂನಿಸ್ಟ್ ಉಗ್ರರು ಯಾವಾಗಲೂ ಮಾಡಿರುವ ದಾಖಲೆ ದೇಶ ಒಡೆಯುವ ಕೆಲಸವೇ ಅಲ್ಲವೇ ಪ್ರಪಂಚದ ಇತಿಹಾಸದಲ್ಲಿ

  2. ದ್ವೇಷದ ಹೋರಾಟ ಹೇಗೆ ಇಡೀ ಪ್ರಪಂಚಕ್ಕೆ ಸುದ್ದಿ ಮಾದ್ಯಮಗಳಲ್ಲಿ ಬಿತ್ತರವಾಯಿತೋ ಹಾಗೆಯೆ ಸಾಮರಸ್ಯದ ಹೋರಾಟವೂ ಪ್ರಪಂಚದೆಲ್ಲೆಡೆ ಪ್ರಸಾರವಾಗಲಿ ಎಂದು ಆಶಿಸುತ್ತೇನೆ. ಪ್ರಜಾಪ್ರಭಹತ್ವ=ಜಾತ್ಯಾತೀತತೆ, ಇದಕ್ಕೆ ಮತ್ತೊಂದು ವಿವರಣೆಯ ಅವಶ್ಯಕತೆ ಇಲ್ಲ. ಪ್ರಜೆ ಎಂದರೆ ಜಾತಿ, ಧರ್ಮ, ಭಾಷೆ, ಪ್ರದೇಶ, ಇತರೆ ಎಲ್ಲವನ್ನೂ ಮೀರಿದ ಭಾರತೀಯ. ಆನಂತರ ಅವೆಲ್ಲವನ್ನೂ ಪರಿಗಣಿಸ ಬಹುದು. ಈ ವಿಚಾರದಲ್ಲಿ ವಿದ್ಯಾವಂತರನ್ನೂ ತಪ್ಪು ದಾರಿಗೆಳೆಯಲಾಗುತ್ತಿದೆ. ಇದರಿಂದ ದೇಶ ಸರ್ವನಾಶದ ಕಡೆಗೆ ಹೆಜ್ಜೆ ಇಡುತ್ತಿದೆ. ಈ ಸಾಮರಸ್ಯದ ಸಮಾವೇಷ ಸಹಬಾಳ್ವಗೆ ಮತ್ತು ದೇಶದ ಏಳಿಗೆಯ ಆರಂಬ. ಇದನ್ನು ಆಯೋಜಿಸಿದವರೆಲ್ಲರಿಗೂ ವಂದನೆಗಳು.

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....