Homeಮುಖಪುಟಭಾರತವನ್ನು ನಂಬದ ಮನಸ್ಥಿತಿಯವರು ತಮ್ಮ ದ್ವೇಷಕ್ಕೆ ಉಡುಪಿ ಆಯ್ದುಕೊಂಡು ತಪ್ಪು ಮಾಡಿದರು: ಸಸಿಕಾಂತ್ ಸೆಂಥಿಲ್

ಭಾರತವನ್ನು ನಂಬದ ಮನಸ್ಥಿತಿಯವರು ತಮ್ಮ ದ್ವೇಷಕ್ಕೆ ಉಡುಪಿ ಆಯ್ದುಕೊಂಡು ತಪ್ಪು ಮಾಡಿದರು: ಸಸಿಕಾಂತ್ ಸೆಂಥಿಲ್

ನೀವು ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುತ್ತಿದ್ದೀರಿ. ಅವರಿಗಾಗಿ ಆಸ್ತಿ ಮಾಡುತ್ತಿದ್ದೀರಿ. ಆದರೆ ಸಮಾಜದಲ್ಲಿ ಉತ್ತಮ ಸೌಹಾರ್ದ ವಾತವಾರಣ ಇಲ್ಲದೆ ಇದ್ದರೆ ಏನು ಪ್ರಯೋಜನ? ದ್ವೇಷಮಯ ಸಮಾಜದಲ್ಲಿ ಅವರು ಹೇಗೆ ಬದುಕಬೇಕು? ಸೆಂಥಿಲ್ ಪ್ರಶ್ನೆ

- Advertisement -
- Advertisement -

ನೀವು ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುತ್ತಿದ್ದೀರಿ. ಅವರಿಗಾಗಿ ಆಸ್ತಿ ಮಾಡುತ್ತಿದ್ದೀರಿ. ಆದರೆ ಸಮಾಜದಲ್ಲಿ ಉತ್ತಮ ಸೌಹಾರ್ದ ವಾತವಾರಣ ಇಲ್ಲದೆ ಇದ್ದರೆ ಏನು ಪ್ರಯೋಜನ? ದ್ವೇಷಮಯ ಸಮಾಜದಲ್ಲಿ ಅವರು ಹೇಗೆ ಬದುಕಬೇಕು? ಹಾಗಾಗಿ ನಿಮಗಾಗಿ, ನಿಮ್ಮ ಮಕ್ಕಳಿಗಾಗಿ ದನಿಯೆತ್ತಿ ಮಾತನಾಡಿ. ನಿಮಗೆ ಮಾತನಾಡದೆ ಬೇರೆ ಆಯ್ಕೆಯೇ ಇಲ್ಲ. ಅವರ ಬದುಕನ್ನು ಸುಂದರಗೊಳಿಸಲು ಸಹೋದರತ್ವವನ್ನು, ಭಾರತೀಯತೆಯನ್ನು ಆಚರಿಸಿ ಎಂದು ಮಾಜಿ ಐಎಸ್‌ಐ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌ ಕರೆ ನೀಡಿದರು.

ಉಡುಪಿಯ ಕ್ರಿಶ್ಚಿಯನ್ ಶಾಲೆ ಮೈದಾನದಲ್ಲಿ ನಡೆದ ಸಹಬಾಳ್ವೆ ಸಮಾವೇಶದ ಅಧ್ಯಕ್ಷೀಯ ಮಾತುಗಳನ್ನಾಡಿದ ಅವರು, “ಇಂದು ನಡೆಯುತ್ತಿರುವುದು ಧರ್ಮಗಳ ಸಮಸ್ಯೆಯಲ್ಲ. ಇದು ಹಿಂದೂ ಮುಸ್ಲಿಂ ಸಮಸ್ಯೆಯೂ ಅಲ್ಲ. ಆದರೆ ಇದು ಎರಡು ಮನಸ್ಥಿತಿಗಳ ನಡುವಿನ ಸಮಸ್ಯೆಯಾಗಿದ್ದು, ಭಾರತದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ತಾವು ಎಲ್ಲರಿಗಿಂತ ಮೇಲೆಂಬ ಮನಸ್ಥಿತಿಯೊಂದಿದೆ. ಅದು ಸಮಾಜ ಎಂದರೆ ಮೇಲು ಕೀಳು ಇರಬೇಕೆಂದು ಬಯಸುತ್ತದೆ. ಅದನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಭಯ, ದ್ವೇಷ ಹುಟ್ಟುಹಾಕುತ್ತದೆ. ಅವರು ದೇಶವನ್ನು ತಮ್ಮ ಆಸ್ತಿಯಾಗಿ ಆಗಿ ನೋಡುತ್ತಾರೆ. ಈ ಮನಸ್ಥಿತಿಯು ಭಾರತೀಯತೆಗೆ ವಿರುದ್ಧವಾಗಿದೆ. ಈ ಸಮಸ್ಯೆಯು ಭಾರತವನ್ನು ನಂಬದೆ ಇರುವವರಿಂದ ಹುಟ್ಟಿದೆ” ಎಂದು ವಿಶ್ಲೇಷಿಸಿದರು.

ಇನ್ನೊಂದು ಮನಸ್ಥಿತಿ ಇದೆ. ಅದು ನಮ್ಮ ನಮ್ಮ ಮನಸ್ಥಿತಿ. ತಾರತಮ್ಯವಿಲ್ಲದ ಸಮಾನತೆಯ ಕನಸು ಹೊತ್ತಿರುವ ಮನಸ್ಥಿತಿ. ಅಂದರೆ ದೇಶವನ್ನು ನಂಬುವ ಭಾರತೀಯ ಎಂಬ ಚಿಂತನೆಯನ್ನು ಆಧರಿಸಿರುವ ಮನಸ್ಥಿತಿ. ದೇಶವೆಂದರೆ ಅಲ್ಲಿನ ಜನರು ಎಂದು ನಂಬಿ ಭಾರತದ ಜನತೆಗೆ ಜಯವಾಗಲಿ ಎಂದು ಕೂಗುತ್ತೇವೆ. ಈ ಎರಡು ಮನಸ್ಥಿತಿಗಳ ನಡುವೆ ಹೋರಾಟ ನಡೆಯುತ್ತಿದೆ. ಹಾಗಾಗಿ ಇದನ್ನು ಭಾರತವನ್ನು ನಂಬದ ಅವರ ಮತ್ತು ಭಾರತವನ್ನು ನಂಬುವ ನಮ್ಮ ಮನಸ್ಥಿತಿಗಳ ನಡುವಿನ ಹೋರಾಟವನ್ನಾಗಿ ನೋಡಬೇಕು ಎಂದರು.

“ನಮ್ಮ ಸಮಸ್ಯೆ ಎಂದರೆ ಭಾರತೀಯತೆ ಎಂಬ ಚಿಂತನೆಯನ್ನು ಆಚರಿಸುವುದನ್ನು ಮರೆತುಬಿಟ್ಟಿದ್ದೇವೆ. 50 ವರ್ಷಗಳಿಂದ ನಿಜವಾದ ಭಾರತವನ್ನು ಆಚರಣೆ ಮಾಡುವುದನ್ನು ನಾವು ಮರೆತಿದ್ದೇವೆ. ನಾವು ಇನ್ನು ಮುಂದೆ ಆಚರಣೆ ಮಾಡಬೇಕಾಗಿದೆ. ಈ ಆಚರಣೆ ಇಲ್ಲಿಂದ ಶುರುವಾಗಬೇಕಿದೆ ಅದಕ್ಕೆ ಸಮಾವೇಶ ಹಮ್ಮಿಕೊಂಡಿದ್ದೇವೆ. ಎಲ್ಲಾ ಕಡೆ ಈ ಸಹೋದರತ್ವ, ಬಂಧುತ್ವವನ್ನು ಆಚರಿಸಬೇಕಿದೆ” ಎಂದು ತಿಳಿಸಿದರು.

ಭಾರತವನ್ನು ನಂಬದೆ ಇರುವವರು ಕೇವಲ ಶೇ. 10-15 ಮಾತ್ರ ಇದ್ದಾರೆ. ಆದರೆ ನಾವು ಶೇ. 85% ಕ್ಕಿಂತ ಹೆಚ್ಚಿದ್ದರೂ ಸುಮ್ಮನಿದ್ದೇವೆ. ಇಂದು ’ದ್ವೇಷ‘ ಹರಡುತ್ತಿರುವುದು ಸಮಸ್ಯೆಯಲ್ಲ. ಆದರೆ ಅದನ್ನು ನೋಡಿಕೊಂಡು ಸುಮ್ಮನಿರುವುದು ಸಮಸ್ಯೆಯಾಗಿದೆ. ಎಲ್ಲರೂ ಒಳ್ಳೆಯವರೇ ಆದರೆ ಅವರು ಮಾತನಾಡುತ್ತಿಲ್ಲ. ನಮ್ಮನ್ನು ಎಲ್ಲಿ ಸಿಕ್ಕಿ ಹಾಕಿಸುತ್ತಾರೊ ಎಂಬ ಭಯ ಅವರದು. ಎಚ್.ಎಸ್ ದೊರೆಸ್ವಾಮಿಯವರು ಯಾರಿಗೆ ಸಮಸ್ಯೆಯಾದರೂ ನಾವು ಅವರ ಜೊತೆ ನಿಲ್ಲಬೇಕೆಂದು ಹೇಳುತ್ತಿದ್ದರು ಮತ್ತು ಹೋರಾಡುತ್ತಿದ್ದರು. ಅವರು ನಮಗೆ ಮಾದರಿಯಾಗಬೇಕು. ದಲಿತರಿಗೆ, ಅಲ್ಪಸಂಖ್ಯಾತರಿಗೆ ಯಾರಿಗೆ ಸಮಸ್ಯೆಯಾದರೂ ನಾವು ಅವರ ಜೊತೆ ನಿಲ್ಲಬೇಕೆಂದು ಸೆಂಥಿಲ್ ಹೇಳಿದರು.

ನಾವು ಸಮಾಜದ ಸಮಸ್ಯೆಗಳನ್ನು ಹಿಂದೂ ಮುಸ್ಲಿಂ ಸಮಸ್ಯೆ ಎಂದು ಪರಿಗಣಿಸಬಾರದು. ಇದು ಧರ್ಮದ ಒಳಗಿನ ಜಗಳವಲ್ಲ. ಭಾರತೀಯರು ಮತ್ತು ಭಾರತವನ್ನು ಒಪ್ಪದೆ ಇರುವವರ ಸಮಸ್ಯೆ ಎಂದು ಮಾತನಾಡಬೇಕು, ಅದರನ್ನು ಸರಿಪಡಿಸಲು ಹೋರಾಡಬೇಕು. ನಮ್ಮಲ್ಲಿರುವ ಸಹೋದರತ್ವ, ಪ್ರೀತಿಯನ್ನು ಆಚರಿಸೋಣ, ಹಂಚೋಣ. ಅದೇ ಸರಿಯಾದ ಉತ್ತರವಾಗಿರುತ್ತದೆ. ಆಗ ಮಾತ್ರ ಭಾರತದ ಆತ್ಮವನ್ನು ಉಳಿಸಿಕೊಳ್ಳಲು ಸಾಧ್ಯ ಎಂದರು.

ಇದನ್ನೂ ಓದಿ: ದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

ಭಾರತವನ್ನು ನಂಬದ ಮನಸ್ಥಿತಿಯವರು ತಮ್ಮ ದ್ವೇಷ ಹರಡಲು ಉಡುಪಿ ಆಯ್ದುಕೊಂಡು ತಪ್ಪು ಮಾಡಿದ್ದಾರೆ. ಅದಕ್ಕೆ ಈಗ ಭಾರತೀಯ ಜನರಿಂದಲೇ ದೊಡ್ಡ ಪ್ರತಿಕ್ರಿಯೆ ಬರುತ್ತಿದೆ. ಈ ಸಮಾವೇಶ ಸಂಪೂರ್ಣ ಯಶಸ್ವಿಯಾಗಿದೆ. ಈ ಯಶಸ್ಸನ್ನು ಎಲ್ಲಾ ಜಿಲ್ಲೆಗಳಿಗೂ ತೆಗೆದುಕೊಂಡು ಹೋಗಬೇಕು. ಇಲ್ಲಿನ ಆಶಯವನ್ನು ಹಳ್ಳಿಹಳ್ಳಿಗೆ ತಲುಪಿಸಬೇಕು. ಅದಕ್ಕೆ ಯುವಶಕ್ತಿ ಸಜ್ಜುಗೊಳ್ಳಬೇಕು ಎಂದರು.

ತಾವು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿದ್ದ ಸಮಯವನ್ನು ಸ್ಮರಿಸಿಕೊಂಡ ಅವರು, ಆಗ ನಾನು ಅತಿ ಹೆಚ್ಚಿನ ಮಳೆಯಿಂದಾಗಿ ಶಾಲಾ ಮಕ್ಕಳಿಗೆ 13 ದಿನ ರಜೆ ಕೊಟ್ಟಿದೆ. ನನ್ನ ಮಕ್ಕಳ ಸುರಕ್ಷತೆಯ ಬಗ್ಗೆ ನನಗೆ ಭಯ ಇತ್ತು. ಅದಕ್ಕಾಗಿ ಇಂದಿಗೂ ಮಕ್ಕಳು ನನ್ನನ್ನು ನೆನೆಸಿಕೊಳ್ಳುತ್ತಾರೆ. ಆ ನಮ್ಮ ಮಕ್ಕಳ ಭವಿಷ್ಯಕ್ಕಾಗಿ ನಾವು ಮಾತನಾಡಬೇಕಿದೆ. ವಯಕ್ತಿಕ ನೆಲೆಯಲ್ಲಾದರೂ ನೀವು ಮಾತನಾಡಿ, ಫೇಸ್‌ಬುಕ್‌ನಲ್ಲಿ ಸಹಬಾಳ್ವೆಯ ಸ್ಟೇಟಸ್ ಹಾಕಿ, ಹಾಡು ಹಾಡಿ ಮತ್ತು ಭಾರತೀಯತೆಯನ್ನು ಆಚರಿಸಿ ಎಂದು ಸೆಂಥಿಲ್ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...