Homeಮುಖಪುಟಬಿಜೆಪಿಯ ‘ಬುಲ್ಡೋಜರ್‌’ ರಾಜಕಾರಣ ಎದುರಿಸಲು ಎಎಪಿ ಎಂಎಲ್‌ಎಗಳೊಂದಿಗೆ ಇಂದು ಕೇಜ್ರಿವಾಲ್‌ ಸಭೆ

ಬಿಜೆಪಿಯ ‘ಬುಲ್ಡೋಜರ್‌’ ರಾಜಕಾರಣ ಎದುರಿಸಲು ಎಎಪಿ ಎಂಎಲ್‌ಎಗಳೊಂದಿಗೆ ಇಂದು ಕೇಜ್ರಿವಾಲ್‌ ಸಭೆ

- Advertisement -
- Advertisement -

ಬಿಜೆಪಿ ಆಡಳಿತದಲ್ಲಿರುವ ದೆಹಲಿಯ ಮೂರು ಮುನ್ಸಿಪಲ್ ಕಾರ್ಪೊರೇಷನ್‌ಗಳು ನಡೆಸುತ್ತಿರುವ ಬುಲ್ಡೋಜರ್ ರಾಜಕೀಯದ ಕುರಿತು ಚರ್ಚಿಸಲು ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸೋಮವಾರ ಬೆಳಿಗ್ಗೆ ಪಕ್ಷದ ದೆಹಲಿ ಶಾಸಕರ ಸಭೆ ಕರೆದಿದ್ದಾರೆ.

ಎಎಪಿ ರಾಜಕೀಯ ಪ್ರತಿತಂತ್ರವನ್ನು ರೂಪಿಸಲು ನೋಡುತ್ತಿದೆ ಪಕ್ಷದ ನಾಯಕರು ತಿಳಿಸಿದ್ದಾರೆ. ಈ ಹಿಂದೆ ಶನಿವಾರ ಸಭೆ ಕರೆಯಲಾಗಿತ್ತು, ಆದರೆ ಮುಂಡ್ಕ ಬೆಂಕಿ ದುರಂತದ ಕಾರಣ ಸಭೆಯನ್ನು ಮುಂದೂಡಲಾಯಿತು.

ಮೂರು ಕಾರ್ಪೋರೇಷನ್‌ಗಳಿಂದ ನಡೆಯುತ್ತಿರುವ ಅತಿಕ್ರಮಣ ವಿರೋಧಿ ಅಭಿಯಾನವು “ನಿರ್ದಿಷ್ಟ ಸಮುದಾಯವನ್ನು, ಬಡವರನ್ನು ಗುರಿಯಾಗಿಸಿಕೊಂಡಿದೆ” ಎಂದು ಎಎಪಿ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬುಲ್ಡೋಜರ್ ರಾಜಕೀಯ” ಎಎಪಿ ಮತ್ತು ಬಿಜೆಪಿ ನಡುವೆ ಹೊಸ ವಾಗ್ವಾದವನ್ನು ಉಂಟು ಮಾಡಿದೆ. ಕೇಂದ್ರ ನಾಗರಿಕ ಸಂಸ್ಥೆಗಳ ಪದಾಧಿಕಾರಿಗಳ ವಿರುದ್ಧ ತನಿಖೆ ನಡೆಸುವವರೆಗೆ ರಾಜಧಾನಿಯಲ್ಲಿ ತೆರವು ಕಾರ್ಯಾಚರಣೆಯನ್ನು ನಿಲ್ಲಿಸಬೇಕು ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದ್ದಾರೆ.

ಬುಲ್ಡೋಜರ್‌ ರಾಜಕಾರಣದ ಕುರಿತು ಮೊದಲು ತುಸು ಮೌನವಾಗಿದ್ದ ಎಎಪಿ, ನಂತರ ಬಿಜೆಪಿ ವಿರುದ್ಧ ತಿರುಗಿ ಬಿದ್ದಿದೆ. ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಮನೀಶ್‌ ಸಿಸೋಡಿಯಾ ಅವರು, “ಬಿಜೆಪಿ ಬುಲ್ಡೋಜರ್ ರಾಜಕೀಯ ಮಾಡುತ್ತಿದ್ದು, ಇದರಿಂದ ಇಡೀ ದೆಹಲಿಯೇ ಧ್ವಂಸವಾಗಲಿದೆ” ಎಂದು ಎಚ್ಚರಿಸಿದ್ದರು.

“ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಮೊದಲು ಅನುಮತಿ ನೀಡಿದ ಕೌನ್ಸಿಲರ್‌ಗಳಿಗೂ ನೋಟಿಸ್ ಜಾರಿ ಮಾಡಬೇಕು” ಎಂದು ಒತ್ತಾಯಿಸಿದ್ದರು.

“1,750 ಅನಧಿಕೃತ, ನಿಯಮಿತವಲ್ಲದೆ ಕಾಲೋನಿಗಳಿಗೆ ನೋಟಿಸ್ ಕಳುಹಿಸಲಾಗಿದೆ. ಇಲ್ಲಿ 50 ಲಕ್ಷಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಇದು ಬುಲ್ಡೋಜರ್ ರಾಜಕಾರಣ. ಈ ಜನರನ್ನು ನಿರಾಶ್ರಿತರನ್ನಾಗಿ ಮಾಡಲು ಬಿಜೆಪಿ ಬಯಸುತ್ತಿದೆ. ಜೊತೆಗೆ 10 ಲಕ್ಷ ಜನರು ವಾಸಿಸುವ ಜೆಜೆ ಕ್ಲಸ್ಟರ್‌ಗಳ 860 ಕಾಲೋನಿಗಳಿಗೂ ನೋಟಿಸ್‌ಗಳನ್ನು ಕಳುಹಿಸಲಾಗಿದೆ. ಈ ರೀತಿಯಾಗಿ ಇಡೀ ದೆಹಲಿಯನ್ನು ಧ್ವಂಸ ಮಾಡಲು ಬಿಜೆಪಿ ಹೊರಟಿದೆ” ಎಂದು ಆತಂಕ ವ್ಯಕ್ತಪಡಿಸಿದ್ದರು.

ಇದನ್ನೂ ಓದಿರಿ: ಸಿಎಎ ವಿರೋಧಿ ಹೋರಾಟದ ಕೇಂದ್ರ ಶಾಹೀನ್‌ಬಾಗ್‌ನಲ್ಲಿ ಬುಲ್ಡೋಜರ್‌ಗಳು: ದ್ವೇಷ ರಾಜಕಾರಣಕ್ಕೆ ಮುಂದಾದ ಬಿಜೆಪಿ

ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಫ್ಲಾಟ್‌ಗಳಲ್ಲಿ ಹೆಚ್ಚುವರಿ ಬಾಲ್ಕನಿ ಅಥವಾ ಕೊಠಡಿಯನ್ನು ನಿರ್ಮಿಸಿದ ಜನರಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದ್ದ ಅವರು, “ಕಳೆದ ಎರಡು ವರ್ಷಗಳಲ್ಲಿ ಸುಮಾರು ಮೂರು ಲಕ್ಷ ಜನರು ಇಂತಹ ನೋಟಿಸ್‌ಗಳನ್ನು ಸ್ವೀಕರಿಸಿದ್ದಾರೆ” ಎಂದು ಮಾಹಿತಿ ನೀಡಿದ್ದರು.

“ನಾವು ಜನರಿಗೆ ಮನೆ ನೀಡಲು ಪ್ರಯತ್ನಿಸುತ್ತಿದ್ದೇವೆ ಮತ್ತು ಬಿಜೆಪಿ ಬುಲ್ಡೋಜರ್‌ ಮೂಲಕ ಅವುಗಳನ್ನು ಉರುಳಿಸುತ್ತದೆ” ಎಂದು ಕಟುವಾಗಿ ಟೀಕಿಸಿದ್ದರು.

ದೆಹಲಿಯ ಜಹಾಂಗೀರ್‌ಪುರಿ ಕೋಮು ಸಂಘರ್ಷ ನಡೆದ ಬಳಿಕ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ಬಿಜೆಪಿ ಆರಂಭಿಸಿತು. ಸುಪ್ರೀಂ ಕೋರ್ಟ್ ತಡೆಯಾಜ್ಞೆಯ ನಡುವೆಯೂ ಕಾರ್ಯಾಚರಣೆಯನ್ನು ನಡೆಸಿದ್ದು ಚರ್ಚೆಗೆ ಗ್ರಾಸವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...