Homeಕರ್ನಾಟಕಕೊಡಗು: ಬಜರಂಗದಳದಿಂದ ತ್ರಿಶೂಲ, ಬಂದೂಕು ತರಬೇತಿ; ರಾಜಕಾರಣಿಗಳ ಮಕ್ಕಳೂ ಇದ್ದರೆ?

ಕೊಡಗು: ಬಜರಂಗದಳದಿಂದ ತ್ರಿಶೂಲ, ಬಂದೂಕು ತರಬೇತಿ; ರಾಜಕಾರಣಿಗಳ ಮಕ್ಕಳೂ ಇದ್ದರೆ?

ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳ ಕಾರ್ಯಕರ್ತರಿಗೆ ಕೊಡಗಿನ ಪೊನ್ನಂಪೇಟೆಯಲ್ಲಿ ತ್ರಿಶೂಲ ದೀಕ್ಷೆ ಹಾಗೂ ಏರ್‌ಗನ್‌ ತರಬೇತಿ ನೀಡಿರುವ ಕುರಿತು ವರದಿಯಾಗಿದೆ.

- Advertisement -
- Advertisement -

ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳ ಕಾರ್ಯಕರ್ತರಿಗೆ ಕೊಡಗಿನ ಪೊನ್ನಂಪೇಟೆಯಲ್ಲಿ ತ್ರಿಶೂಲ ದೀಕ್ಷೆ ಹಾಗೂ ಏರ್‌ಗನ್‌ ತರಬೇತಿ ನೀಡಿರುವ ಕುರಿತು ವರದಿಯಾಗಿದ್ದು, ಈ ಅಸಂವಿಧಾನಿಕ ನಡೆಗೆ ಆಕ್ರೋಶ ವ್ಯಕ್ತಪವಾಗಿದೆ.

ಕೊಡಗಿನ ಪೊನ್ನಂಪೇಟೆಯ ಸಾಯಿ ಶಂಕರ ವಿದ್ಯಾಸಂಸ್ಥೆಯಲ್ಲಿ ನಡೆದ ‘ಶೌರ್ಯ ಪ್ರಶಿಕ್ಷಣ ವರ್ಗ’ದಲ್ಲಿ ಬಜರಂಗದಳದ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ, ತ್ರಿಶೂಲ ದೀಕ್ಷೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪ್ರಶ್ನೆ ಎತ್ತಿರುವ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್‌ ಕೊಡ್ಲಿಪೇಟೆಯವರು, “ಶಾಲೆಯ ವಿರುದ್ಧ ಕ್ರಮ ಜರುಗಿಸಿ” ಎಂದು ಶಿಕ್ಷಣ ಸಂಸ್ಥೆಯನ್ನು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರೇ, ಶಾಲೆಗಳಲ್ಲಿ ಹಿಜಾಬ್‌ ನಿರ್ಬಂಧ ವಿಧಿಸಿರುವ ನಿಮ್ಮ ಸರ್ಕಾರ, ಬಜರಂಗದಳಕ್ಕೆ ಒಂದು ವಾರ ಅಕ್ರಮ ಶಸ್ತ್ರಾಸ್ತ್ರ ತರಬೇತಿ ಶಿಬಿರ ನಡೆಸಲು ಅನುಮತಿ ಕೊಟ್ಟ ಪೊನ್ನಂಪೇಟೆಯ ಸಾಯಿ ಶಂಕರ ಶಿಕ್ಷಣ ಸಂಸ್ಥೆಯ ವಿರುದ್ಧ ಯಾವ ಕ್ರಮ ಕೈಗೊಂಡಿದೆ” ಎಂದು ಅಫ್ಸರ್‌ ಪ್ರಶ್ನಿಸಿದ್ದಾರೆ.

ಸುಮಾರು ಹತ್ತು ದಿನಗಳ ಕಾಲ ನಡೆದ ತರಬೇತಿಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್‌, ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್‌ ಸದಸ್ಯ ಸುಜಾ ಕುಶಾಲಪ್ಪ ಅವರೂ ಪಾಲ್ಗೊಂಡಿದ್ದರೆಂದು ಮೂಲಗಳು ತಿಳಿಸಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.

ಶಾಲಾ ಆವರಣದಲ್ಲಿ ಬಂದೂಕು ಹಿಡಿದು ತರಬೇತಿ ಪಡೆಯುತ್ತಿರುವುದು, ಸಂಸ್ಥೆಯ ಸಭಾಂಗಣ ಮತ್ತು ಆವರಣದಲ್ಲಿ ತ್ರಿಶೂಲ ಹಿಡಿದು ದೀಕ್ಷೆ ಪಡೆಯುತ್ತಿರುವುದು, ತ್ರಿಶೂಲಕ್ಕೆ ಪೂಜೆ ಸಲ್ಲಿಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಟೀಕೆಗಳು ವ್ಯಕ್ತವಾಗಿವೆ.

ವಿವಿಧ ಜಿಲ್ಲೆಯಿಂದ ಆಗಮಿಸಿದ ಬಜರಂಗದಳ, ವಿಶ್ವ ಹಿಂದೂ ಪರಿಷತ್‌ನ 119 ಶಿಕ್ಷಣಾರ್ಥಿಗಳು ಸೇರಿ 140 ಮಂದಿ ತರಬೇತಿಯಲ್ಲಿ ಹಾಜರಿದ್ದರೆಂದು ವರದಿಯಾಗಿದೆ.

ಇದನ್ನೂ ಓದಿರಿ: ಜಹಾಂಗೀರ್‌ಪುರಿ ಹಿಂಸಾಚಾರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆ ವಿಎಚ್‌ಪಿ, ಬಜರಂಗದಳ ಭಾಗಿ ಎಂದ ದೆಹಲಿ ಪೊಲೀಸರು; ಕೆಲವೇ ಗಂಟೆಗಳಲ್ಲಿ ಹೇಳಿಕೆ…

ಶಂಕರ ವಿದ್ಯಾಸಂಸ್ಥೆಯ ಅಧ್ಯಕ್ಷ ಜರು ಗಣಪತಿ ಮಾತನಾಡಿದ್ದು, “ಬಂದೂಕು ತರಬೇತಿ ನೀಡಿರುವ ಕುರಿತು ಮಾಹಿತಿ ಇಲ್ಲ. ಆಯೋಜಕರೇ ಊಟ, ಮತ್ತಿತರ ವ್ಯವಸ್ಥೆ ಮಾಡಿಕೊಂಡಿದ್ದರು. ಇದಕ್ಕೂ ವಿದ್ಯಾಸಂಸ್ಥೆಗೂ ಯಾವುದೇ ಸಂಬಂಧವಿಲ್ಲ. ರಜೆಯಿದ್ದ ಕಾರಣ ಶಿಕ್ಷಕರೂ ಇರಲಿಲ್ಲ. ಈ ಹಿಂದೆ ರಾಷ್ಟ್ರಮಟ್ಟದ ತರಬೇತಿಯೂ ನಡೆದಿತ್ತು. ಹೊರ ರಾಜ್ಯದಿಂದ ಶಿಕ್ಷಣಾರ್ಥಿಗಳುಬಂದಿದ್ದರು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

“ಯೋಗ ಕಲಿಸಿ, ಆತ್ಮಸ್ಥೈರ್ಯ ತುಂಬಿದ್ದೇವೆ” ಎಂದು ವಿಶ್ವ ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಪಿ.ಕೃಷ್ಣಮೂರ್ತಿ ಹೇಳಿದ್ದಾರೆ. ಆದರೆ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಫೋಟೋಗಳು ಬೇರೆಯೇ ಕಥೆಯನ್ನು ಹೇಳುತ್ತಿವೆ. ಈ ಶಸ್ತ್ರಾಸ್ತ್ರ ತರಬೇತಿಯಲ್ಲಿ ಎಷ್ಟು ಮಂದಿ ರಾಜಕಾರಣಿಗಳ ಮಕ್ಕಳು, ಸಂಘ ಪರಿವಾರದ ನಾಯಕರ ಮಕ್ಕಳು ಭಾಗವಹಿಸಿದ್ದರೆಂಬ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ಹೆಚ್ಚಿನ ವಿವರ ಸಂಗ್ರಹಿಸಲು ‘ನಾನುಗೌರಿ.ಕಾಂ’ ಪ್ರಯತ್ನಿಸುತ್ತಿದೆ.

ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಯ್ಯಪ್ಪ ಅವರನ್ನು ಸಂಪರ್ಕಿಸಲು ‘ನಾನುಗೌರಿ.ಕಾಂ’ ಪ್ರಯತ್ನಿಸಿದೆ. ಆದರೆ ಅವರು ಕರೆ ಸ್ವೀಕರಿಸಿಲ್ಲ. ಘಟನೆಯ ಕುರಿತು ಎದ್ದಿರುವ ಹಲವು ಪ್ರಶ್ನೆಗಳಿಗೆ ಪೊಲೀಸ್ ವರಿಷ್ಠಾಧಿಕಾರಿ ಪ್ರತಿಕ್ರಿಯೆ ನೀಡಿದ ತಕ್ಷಣ ಅಪ್‌ಡೇಟ್ ಮಾಡಲಾಗುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...