Homeಮುಖಪುಟಬಂಧಿತ ಐಎಎಸ್‌ ಅಧಿಕಾರಿ ಜೊತೆ ಅಮಿತ್ ಶಾ ಇರುವ ಹಳೆಯ ಪೋಟೋ ಪೋಸ್ಟ್‌ ಮಾಡಿದ್ದಕ್ಕೆ ನಿರ್ದೇಶಕನ...

ಬಂಧಿತ ಐಎಎಸ್‌ ಅಧಿಕಾರಿ ಜೊತೆ ಅಮಿತ್ ಶಾ ಇರುವ ಹಳೆಯ ಪೋಟೋ ಪೋಸ್ಟ್‌ ಮಾಡಿದ್ದಕ್ಕೆ ನಿರ್ದೇಶಕನ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಇತ್ತೀಚೆಗೆ ಬಂಧಿಸಿರುವ ಜಾರ್ಖಂಡ್ ಕೇಡರ್ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿರುವ ಫೋಟೋವನ್ನು ಹಂಚಿಕೊಂಡ ಆರೋಪದ ಮೇಲೆ ಅಹಮದಾಬಾದ್ ಅಪರಾಧ ವಿಭಾಗದ (ಡಿಸಿಬಿ) ಘಟಕವು ಚಲನಚಿತ್ರ ನಿರ್ದೇಶಕ ಅವಿನಾಶ್ ದಾಸ್ ವಿರುದ್ಧ ಪ್ರಕರಣ ದಾಖಲಿಸಿದೆ.

2017ರಲ್ಲಿ ರಾಂಚಿಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಅಮಿತ್ ಶಾ ಮತ್ತು ಸಿಂಘಾಲ್ ಪರಸ್ಪರ ಮಾತನಾಡುತ್ತಿರುವ ಫೋಟೋವನ್ನು ಅವಿನಾಶ್ ದಾಸ್‌ ಹಂಚಿಕೊಂಡಿದ್ದು ಜನರನ್ನು ದಾರಿತಪ್ಪಿಸಲು ಮತ್ತು ‌ಅಮಿತ್ ಶಾ ಅವರ ಪ್ರತಿಷ್ಠೆಗೆ ಕುಂದುತರಲು ಯತ್ನಿಸಿದ್ದಾರೆಂದು ಪೊಲೀಸರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತ್ರಿವರ್ಣ ಧ್ವಜವನ್ನು ಧರಿಸಿರುವ ಮಹಿಳೆಯ ಚಿತ್ರವನ್ನು ಶೇರ್ ಮಾಡುವ ಮೂಲಕ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆಯೂ ‘ಅನಾರ್ಕಲಿ ಆಫ್ ಆರಾಹ್’ ಚಿತ್ರದ ನಿರ್ದೇಶಕ ದಾಸ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

2009-10ರ ಅವಧಿಯಲ್ಲಿ ರಾಜ್ಯದ ಖುಂಟಿ ಜಿಲ್ಲೆಯಲ್ಲಿ ಡೆಪ್ಯುಟಿ ಕಮಿಷನರ್ ಆಗಿದ್ದ ಅವಧಿಯಲ್ಲಿ ನರೇಗ ನಿಧಿಯನ್ನು ಬೇರೆಡೆಗೆ ತಿರುಗಿಸಿದ ಆರೋಪದ ಮೇಲೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಗಣಿ ಕಾರ್ಯದರ್ಶಿ ಸಿಂಘಾಲ್ ಅವರನ್ನು ಇ.ಡಿ. ಬುಧವಾರ ಬಂಧಿಸಿತ್ತು. ಜಾರ್ಖಂಡ್‌ನಲ್ಲಿ ಸಿಂಘಾಲ್‌ಗೆ ಸಂಬಂಧವಿದೆ ಎನ್ನಲಾದ ಚಾರ್ಟರ್ಡ್ ಅಕೌಂಟೆಂಟ್‌ನ ಮನೆಯಿಂದ 18 ಕೋಟಿ ರೂ.ಗಿಂತ ಹೆಚ್ಚು ಹಣವನ್ನು ವಶಕ್ಕೆ ಪಡೆಯಲಾಗಿತ್ತು.

ಇದನ್ನೂ ಓದಿರಿ: ಪೊನ್ನಂಪೇಟೆಯಲ್ಲಿ ಕೊಟ್ಟಿದ್ದು ಏರ್‌ಗನ್‌ ತರಬೇತಿ- ಸಿ.ಟಿ.ರವಿ; ನಡೆದದ್ದು ಯೋಗ ತರಬೇತಿ ಎಂದ ಹಿಂಜಾವೇ ಮುಖಂಡ

“ಮಹಿಳೆಯ ಮೇಲೆ ತ್ರಿವರ್ಣ ಧ್ವಜವನ್ನು ತೋರಿಸುವ ಅಶ್ಲೀಲ ಚಿತ್ರವನ್ನು ಮಾರ್ಚ್ 17 ರಂದು ಅವಿನಾಶ್ ದಾಸ್ ಎಂಬ ವ್ಯಕ್ತಿ ಹಂಚಿಕೊಂಡಿದ್ದಾರೆ ಎಂದು ಡಿಸಿಬಿಯ ತಾಂತ್ರಿಕ ಪಿಎಸ್ಐ ಕೆ ಪಿ ಪಟೇಲ್ ಅವರ ಗಮನಕ್ಕೆ ತರಲಾಯಿತು. ಹೆಚ್ಚುವರಿಯಾಗಿ, ಮೇ 8 ರಂದು ದಾಸ್ ಅವರ ಟ್ವಿಟ್ಟರ್ ಖಾತೆಯಲ್ಲಿ ಜನರನ್ನು ದಾರಿತಪ್ಪಿಸುವ ಉದ್ದೇಶದಿಂದ, ಶಾ ಅವರ ಪ್ರತಿಷ್ಠೆಗೆ ಹಾನಿ ಮಾಡುವ ಸಲುವಾಗಿ ಮತ್ತೊಂದು ಪೋಸ್ಟ್‌ ಮಾಡಲಾಯಿತು. ಐಎಎಸ್ ಪೂಜಾ ಸಿಂಘಾಲ್ ಅವರೊಂದಿಗೆ ಅಮಿತ್ ಶಾ ಅವರಿರುವ ಸುಮಾರು ಐದು ವರ್ಷಗಳ ಹಳೆಯ ಚಿತ್ರವನ್ನು ಹಂಚಿಕೊಳ್ಳಲಾಯಿತು. ಆ ನಿಟ್ಟಿನಲ್ಲಿ ದಾಸ್ ವಿರುದ್ಧ ಐಪಿಸಿ ಸೆಕ್ಷನ್‌ 469, ಐಟಿ ಕಾಯ್ದೆಯ ಸೆಕ್ಷನ್ 67, ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಅಹಮದಾಬಾದ್ ಡಿಸಿಬಿ ಘಟಕ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...