Homeಅಂತರಾಷ್ಟ್ರೀಯ‘ಪ್ರಧಾನಿಯ ಸಕಾರಾತ್ಮಕ ಕ್ರಮಗಳನ್ನು ಬೆಂಬಲಿಸುತ್ತೇವೆ, ಆದರೆ...’: ಶ್ರೀಲಂಕಾ ವಿಪಕ್ಷ ನಾಯಕನ ಎಚ್ಚರಿಕೆ

‘ಪ್ರಧಾನಿಯ ಸಕಾರಾತ್ಮಕ ಕ್ರಮಗಳನ್ನು ಬೆಂಬಲಿಸುತ್ತೇವೆ, ಆದರೆ…’: ಶ್ರೀಲಂಕಾ ವಿಪಕ್ಷ ನಾಯಕನ ಎಚ್ಚರಿಕೆ

- Advertisement -
- Advertisement -

ಶ್ರೀಲಂಕಾದ ಪ್ರತಿಪಕ್ಷದ ನಾಯಕ ಮತ್ತು ಸಮಗಿ ಜನ ಬಲವೇಗಯ (ಎಸ್‌ಜೆಬಿ) ಮೈತ್ರಿಕೂಟದ ಮುಖ್ಯಸ್ಥ ಸಜಿತ್ ಪ್ರೇಮದಾಸ ಅವರು ದೇಶದ ಆರ್ಥಿಕತೆಯನ್ನು ಪುನರ್ನಿರ್ಮಿಸಲು ಬೇಕಾಗಿ, ಹೊಸ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ತೆಗೆದುಕೊಳ್ಳುವ ಎಲ್ಲಾ ಸಕಾರಾತ್ಮಕ ಕ್ರಮಗಳನ್ನು ಪ್ರತಿಪಕ್ಷಗಳು ಬೆಂಬಲಿಸುತ್ತವೆ ಎಂದು ಹೇಳಿದ್ದಾರೆ.

ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಹೊಸ ಪ್ರಧಾನಿಯನ್ನು ನೇಮಕ ಮಾಡುವ ಮೊದಲು ಪ್ರಮುಖ ವಿರೋಧ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸದಿದ್ದಕ್ಕಾಗಿ ವಿರೋಧ ಪಕ್ಷದ ನಾಯಕ ನಿರಾಶೆಗೊಂಡಿದ್ದರು. ಆದರೆ ಇದೀಗ ಸಕಾರಾತ್ಮಕ ಕ್ರಮಗಳನ್ನು ಬೆಂಬಲಿಸಲಿದ್ದೇವೆ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆರ್ಥಿಕ ಬಿಕ್ಕಟ್ಟು ಬಗೆಹರಿಯುತ್ತದೆಯೇ ಎಂಬುದು ಸರ್ಕಾರದ ಮುಂದೆ ಉಳಿದಿರುವ ಪ್ರಶ್ನೆಯಾಗಿದೆ. ರಚನಾತ್ಮಕ ಮತ್ತು ಪ್ರಗತಿಪರ ಪ್ರತಿಪಕ್ಷವಾಗಿ, ಜನ ಸಾಮಾನ್ಯರ ದುಃಖವನ್ನು ನಿವಾರಿಸುವ ಗುರಿಯನ್ನು ಹೊಂದಿರುವ ಯಾವುದೇ ಸಕಾರಾತ್ಮಕ ಪ್ರಸ್ತಾಪಗಳಿಗೆ ರಚನಾತ್ಮಕ ಬೆಂಬಲವನ್ನು ನೀಡಲು ನಿರ್ಧರಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡದೆ.

ಇದನ್ನೂ ಓದಿ: ಭೀಕರ ಆರ್ಥಿಕ ಬಿಕ್ಕಟ್ಟಿನ ನಡುವೆ ಲಂಕಾ ಪ್ರಧಾನಿಯಾಗಿ ರನಿಲ್ ವಿಕ್ರಮಸಿಂಘೆ ಪ್ರಮಾಣ ವಚನ ಸ್ವೀಕಾರ

“ಶ್ರೀಲಂಕಾದ ಜನಸಾಮಾನ್ಯರ ಕೂಗು ಮತ್ತು ನಾವು ತೆಗೆದುಕೊಂಡ ತತ್ವದ ನಿಲುವಿನಿಂದ ನಾವು ಹಿಂತಿರುಗಲು ಸಾಧ್ಯವಿಲ್ಲ. ನಾವು ವಿಶ್ವಾಸಾರ್ಹತೆ ಮತ್ತು ಸಮಗ್ರತೆಯ ರಾಜಕಾರಣಿಗಳಾಗಿದ್ದು, ನಿಷ್ಠಾವಂತ ಪ್ರತಿಪಕ್ಷವಾಗಿ ಜನರು ನಮ್ಮನ್ನು ನಂಬಿದ್ದಾರೆ. ಹೀಗಾಗಿ ಜನರ ಆಶಯಗಳನ್ನು ನಾವು ಈಡೇರಿಸುತ್ತೇವೆ’’ ಎಂದು ಅವರು ಹೇಳಿದ್ದಾರೆ.

“ವಿರೋಧ ಪಕ್ಷದ ನಾಯಕರು ಅಧ್ಯಕ್ಷೀಯ ವ್ಯವಸ್ಥೆಯನ್ನು ತೊಡೆದುಹಾಕಲು ಮತ್ತು ಅಧ್ಯಕ್ಷರ ರಾಜೀನಾಮೆಗೆ ಸಾಂವಿಧಾನಿಕ ಬದಲಾವಣೆಗೆ ಒತ್ತಾಯಿಸುತ್ತಿದ್ದಾರೆ. ಆದರೆ ಜನಸಾಮಾನ್ಯರ ನೋವನ್ನು ನಿವಾರಿಸಲು ಬೇಕಾಗಿ, ಮಂಡಿಸಲಾಗಿರುವ ಪ್ರಸ್ತಾಪಗಳನ್ನು ‘ರಚನಾತ್ಮಕವಾಗಿ ಮತ್ತು ಪ್ರಗತಿಪರವಾಗಿ’ ಬೆಂಬಲಿಸಲಿದ್ದೇವೆ” ಎಂದು ಅವರು ಹೇಳಿದ್ದಾರೆ.

“ನಾವು ವಿರೋಧ ಪಕ್ಷವಾಗಿ ಜನಾದೇಶವನ್ನು ಪಡೆದಿದ್ದೇವೆಯೆ ಹೊರತು ಸರ್ಕಾರವಾಗಿ ಅಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರತಿಭಟನೆಯನ್ನು ಹತ್ತಿಕ್ಕಲು ಭಾರತೀಯ ಸೈನಿಕರ ಆಗಮನದ ವರದಿಯನ್ನು ನಿರಾಕರಿಸಿದ ಶ್ರೀಲಂಕಾ ಸೇನೆ

ಆಹಾರ ಭದ್ರತೆಯನ್ನು ಹೆಚ್ಚಿಸುವ ಮತ್ತು ಇಂಧನ, ವಿದ್ಯುತ್, ಅನಿಲ, ರಸಗೊಬ್ಬರ ಮತ್ತು ಇತರ ಅಗತ್ಯ ವಸ್ತುಗಳು ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡುವ ಯಾವುದೇ ನೀತಿಗಳನ್ನು ಪ್ರತಿಪಕ್ಷಗಳು ವಿರೋಧಿಸುವುದಿಲ್ಲ ಎಂದು ಪ್ರೇಮದಾಸ ಒತ್ತಿ ಹೇಳಿದ್ದಾರೆ. “ಅಂತಹ ಉತ್ಪಾದಕ ಚಟುವಟಿಕೆಗಳಿಗೆ ಕಾರಣವಾಗುವ ಎಲ್ಲಾ ಪ್ರಸ್ತಾಪಗಳನ್ನು ನಾವು ಬೆಂಬಲಿಸುತ್ತೇವೆ” ಎಂದು ಅವರು ತಿಳಿಸಿದ್ದಾರೆ.

ಆಡಳಿತ ಪಕ್ಷ ಮತ್ತು ‘ಆಡಳಿತದ ಗಣ್ಯರು’ ಎಂದು ಕರೆಯಲ್ಪಡುವವರು ವಿರೋಧ ಪಕ್ಷಗಳ ಜನರನ್ನು ಸವಲತ್ತುಗಳು ಮತ್ತು ಆಡಳಿತಾತ್ಮಕ ಸ್ಥಾನಗಳನ್ನು ಒದಗಿಸುವ ಮೂಲಕ ಬೇಟೆಯಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

“ಇದನ್ನು ನಾವು ಸಹಿಸುವುದಿಲ್ಲ. ಹಾಗೆ ನೋಡಿದರೆ ಪ್ರತಿಪಕ್ಷಗಳು ಸರ್ಕಾರವನ್ನು ಬೆಂಬಲಿಸುವುದಿಲ್ಲ. ಆದ್ದರಿಂದ, ಈ ಬಿಕ್ಕಟ್ಟಿನ ನಡುವೆ ರಾಜಕೀಯ ಪಿತೂರಿ ಅಥವಾ ರಾಜಕೀಯ ಸಂಗೀತ ಕುರ್ಚಿಗಳ ಆಟದಲ್ಲಿ ತೊಡಗಬಾರದು. ಬದಲಾಗಿ ರಾಷ್ಟ್ರೀಯ ಸವಾಲುಗಳು ಮತ್ತು ರಾಷ್ಟ್ರೀಯ ಉದ್ದೇಶಗಳ ಮೇಲೆ ಗಮನವನ್ನು ಕೇಂದ್ರೀಕರಿಸಬೇಕು. ಏಕೆಂದರೆ ಆ ಉದ್ದೇಶಗಳನ್ನು ಸಾಧಿಸಲು ನಾವು ಬೆಂಬಲ ನೀಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟು: ಕಾಗದದ ಕೊರತೆಯಿಂದಾಗಿ ಶಾಲಾ ಪರೀಕ್ಷೆಗಳನ್ನು ರದ್ದುಗೊಳಿಸಿದ ಶ್ರೀಲಂಕಾ!

ಇಂತಹ ಸಮಯದಲ್ಲಿ ದೇಶಕ್ಕೆ ಪ್ರಚಂಡ ಬೆಂಬಲ ನೀಡಿದ್ದಕ್ಕಾಗಿ ಅವರು ಪ್ರಧಾನಿ ಮೋದಿ ಮತ್ತು ಭಾರತೀಯರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. “ಭಾರತೀಯ ನೆರವು ಅನಿವಾರ್ಯ ಮತ್ತು ಅತ್ಯಮೂಲ್ಯವಾಗಿದೆ. ನಮ್ಮ ತಾಯಿನಾಡಿಗೆ ಹೆಚ್ಚು ಸಹಾಯ ಮಾಡಲು ನಾನು ಭಾರತವನ್ನು ಪ್ರೋತ್ಸಾಹಿಸುತ್ತೇನೆ” ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...