Homeಸಿನಿಮಾಕ್ರೀಡೆ'ಈ ಸಲ ಕಪ್ ನಮ್ದೆ' ಆಗಲು RCB ಮುಂದಿನ ನಾಲ್ಕೂ ಪಂದ್ಯಗಳನ್ನು ಗೆಲ್ಲಲೇಬೇಕು, ಜೊತೆಗೆ ಅದೃಷ್ಟವೂ...

‘ಈ ಸಲ ಕಪ್ ನಮ್ದೆ’ ಆಗಲು RCB ಮುಂದಿನ ನಾಲ್ಕೂ ಪಂದ್ಯಗಳನ್ನು ಗೆಲ್ಲಲೇಬೇಕು, ಜೊತೆಗೆ ಅದೃಷ್ಟವೂ ಇರಬೇಕು

ಪ್ಲೇಆಫ್‌ ಪ್ರವೇಶಿಸಿದರೆ ಅಲ್ಲಿನ ಎಲಿಮಿನೇಟರ್, ಕ್ವಾಲಿಫೈಯರ್ ಮತ್ತು ಫೈನಲ್ ಈ ಎಲ್ಲಾ ಪಂದ್ಯಗಳಲ್ಲಿ RCB ಗೆಲ್ಲಲೇಬೇಕಿದೆ.

- Advertisement -
- Advertisement -

‘ಈ ಸಲ ಕಪ್ ನಮ್ದೆ’ ಇದು RCB ಅಭಿಮಾನಿಗಳ 13 ವರ್ಷದ ಕೂಗು. ಆದರೆ ಇದುವರೆಗೂ 3 ಬಾರಿ ಫೈನಲ್ ತಲುಪಿರುವ RCB ತಂಡ ಒಮ್ಮೆಯೂ ಗೆಲುವು ಸಾಧಿಸಿ ಕಪ್ ತನ್ನದಾಗಿಸಿಕೊಳ್ಳಲು ಸಾಧ್ಯವಾಗಿಲ್ಲ. 15ನೇ ಆವೃತ್ತಿಯ ಈ ಬಾರಿಯ IPL2022 ನಲ್ಲಿ ಆರಂಭದಲ್ಲಿ ಉತ್ತಮ ಪ್ರದರ್ಶನ ತೋರಿದ ಅದು ನಂತರ ಸೋಲುಗಳ ಸುಳಿಗೆ ಸಿಲುಕಿ ಪ್ಲೇಆಫ್ ತಲುಪಲು ಒದ್ದಾಡುತ್ತಿದೆ. ಈ ಬಾರಿಯಾದರೂ ಆರ್‌ಸಿಬಿ ಕಪ್ ಗೆಲ್ಲಬೇಕಾದರೆ ಮುಂದಿನ ನಾಲ್ಕೂ ಪಂದ್ಯಗಳನ್ನು ಗೆಲ್ಲಲೇಬೇಕು, ಜೊತೆಗೆ ಅದೃಷ್ಟವೂ ಇರಬೇಕು. ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಎದರು ಗೆದ್ದರಷ್ಟೆ ಅದು ಮುಂದಕ್ಕೆ ಸಾಗಲು ಸಾಧ್ಯ. ಇಲ್ಲದಿದ್ದಲ್ಲೆ ಮನೆಗೆ ಹೋಗಬೇಕಾಗುತ್ತದೆ. ಜೊತೆಗೆ ಅದೃಷ್ಟ ಎಂದರೆ ಮೇ 21ರ ಶನಿವಾರ ನಡೆಯುವ ಮುಂಬೈ ಮತ್ತು ಡೆಲ್ಲಿ ನಡುವಿನ ಪಂದ್ಯದಲ್ಲಿ ಡೆಲ್ಲಿ ಸೋತರಷ್ಟೇ ಆರ್‌ಸಿಬಿಗೆ ಅವಕಾಶ. ಒಂದು ವೇಳೆ ಆ ಪಂದ್ಯದಲ್ಲಿ ಡೆಲ್ಲಿ ಗೆಲುವು ಸಾಧಿಸಿದರೆ ಅದು ಪ್ಲೇಆಫ್ ಪ್ರವೇಶಿಸುತ್ತದೆ. ಆರ್‌ಸಿಬಿ ಟೂರ್ನಿಯಿಂದ ಹೊರಬೀಳುತ್ತದೆ. ಅದು ಹೇಗೆಂದು ವಿವರವಾಗಿ ನೋಡೋಣ.

ಟೂರ್ನಿಯುದ್ದಕ್ಕೂ ಸಾಂಘಿಕ ಪ್ರದರ್ಶನ ನೀಡಿರುವ ಗುಜರಾತ್ ಟೈಟನ್ಸ್ ತಂಡ 10 ಗೆಲುವುಗಳೊಂದಿಗೆ 20 ಅಂಕ ಗಳಿಸಿ ಅಗ್ರಸ್ಥಾನದೊಂದಿಗೆ ಈಗಾಗಲೇ ಪ್ಲೇಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿದೆ. ಎರಡನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಮತ್ತು ಮೂರನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ತಲಾ 16 ಅಂಕ ಪಡೆದಿದ್ದು, ಉಳಿದ ತಲಾ ಒಂದೊಂದು ಪಂದ್ಯಗಳಲ್ಲಿ ಗೆದ್ದರೂ, ಸೋತರೂ ಸುಲಭವಾಗಿ ಪ್ಲೇ ಆಫ್ ಪ್ರವೇಶಿಸಲಿವೆ. ಉಳಿದ ಒಂದು ಸ್ಥಾನಕ್ಕಾಗಿ RCB ಸೇರಿದಂತೆ 5 ತಂಡಗಳು ಸೆಣಸಾಟ ನಡೆಸುತ್ತಿವೆ. ಆದರೆ ಹೆಚ್ಚಿನ ಸಾಧ್ಯತೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು RCB ತಂಡಕ್ಕಿದೆ.

ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಮತ್ತು ಚನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ ರೇಸ್‌ನಿಂದ ಈಗಾಗಲೇ ಹೊರಬಿದ್ದಿವೆ. ಉಳಿದ ಹೈದರಾಬಾದ್ ಸನ್‌ರೈಸರ್ಸ್ (10 ಅಂಕ), ಪಂಜಾಬ್ ಕಿಂಗ್ಸ್ (12 ಅಂಕ), ಕೋಲ್ಕತ್ತಾ ನೈಟ್ ರೈಡರ್ಸ್ (12 ಅಂಕ), ಡೆಲ್ಲಿ ಕ್ಯಾಪಿಟಲ್ಸ್ (14 ಅಂಕ) ಮತ್ತು RCB (14 ಅಂಕ) ಪ್ಲೇ ಆಫ್ ಆಸೆ ಜೀವಂತವಾಗಿಟ್ಟುಕೊಂಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಈ ಐದು ತಂಡಗಳಲ್ಲಿ ಒಂದು ತಂಡ ಮಾತ್ರ ಪ್ಲೇ ಆಫ್ ಪ್ರವೇಶ ಸಾಧ್ಯ. 14 ಅಂಕ ಗಳಿಸಿರುವ RCB ಪ್ಲೇ ಆಫ್‌ ತಲುಪಬೇಕಾದರೆ ಅದು ತನ್ನ ಕೊನೆಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಎದರು ದೊಡ್ಡ ಅಂತರದಲ್ಲಿ ಜಯಿಸಬೇಕು. ಆಗ ಅದು 16 ಅಂಕ ಗಳಿಸಿರುತ್ತದೆ. ಇನ್ನೂ ವಿವರವಾಗಿ ನೋಡುವ ಮೊದಲು ಅಂಕ ಪಟ್ಟಿಯ ಮೇಲೆ ಕಣ್ಣಾಡಿಸೋಣ ಬನ್ನಿ.

ಮೇ 16ರ ಸೋಮವಾರದ ಪಂದ್ಯದ ಅಂತ್ಯಕ್ಕೆ

ಆರ್‌ಸಿಬಿ 13 ಪಂದ್ಯಗಳಲ್ಲಿ 14 ಅಂಕ ಗಳಿಸಿದ್ದರೂ ಸಹ ಅದರ ನೆಟ್‌ ರನ್‌ರೇಟ್ -323 ಇರುವುದು ಸಮಸ್ಯೆಯಾಗಿದೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡ 13 ಪಂದ್ಯಗಳಲ್ಲಿ 14 ಅಂಕ ಗಳಿಸಿದೆ ಮತ್ತು ಅದರ ನೆಟ್‌ ರನ್‌ರೇಟ್ +255 ಇರುವುದು ಅದಕ್ಕೆ ವರವಾಗಿ ಪರಿಣಮಿಸಿದೆ.

ಗುರುವಾರ ಆರ್‌ಸಿಬಿ ತಂಡ ತನ್ನ ಲೀಗ್‌ನ ಕೊನೆಯ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಎದುರು ಕಣಕ್ಕಿಳಿಯಲಿದೆ. ಅಲ್ಲಿ ಗೆದ್ದರಷ್ಟೆ ಅದಕ್ಕೆ ಅವಕಾಶ. ಗೆಲುವು ಸಾಧಿಸಿದರೆ 16 ಅಂಕಗಳೊಂದಿಗೆ ತನ್ನ ಲೀಗ್ ಹೋರಾಟ ಮುಕ್ತಾಯಗೊಳಿಸಿ ಡೆಲ್ಲಿ ಸೋಲಿಗಾಗಿ ಕಾಯುತ್ತಾ ಕೂರಬೇಕಿದೆ. ಒಂದು ವೇಳೆ ಆ ಪಂದ್ಯದಲ್ಲಿ ಆರ್‌ಸಿಬಿ ಸೋತಲ್ಲಿ ಅದು ಟೂರ್ನಿಯಿಂದ ಹೊರಬೀಳುತ್ತದೆ. ಏಕೆಂದರೆ ಆಗ ಅದು ಕೇವಲ 14 ಅಂಕ ಗಳಿಸಿರುತ್ತದೆ ಮತ್ತು ಅದರ ನೆಟ್ ರನ್‌ ರೇಟ್ ಡೆಲ್ಲಿ, ಕೋಲ್ಕತಾ ತಂಡಗಳಿಗಿಂತ ಕಡಿಮೆ ಇರುವುದರಿಂದ ಅವುಗಳಿಗೆ ಪ್ಲೇ ಆಫ್ ಅವಕಾಶವಿರುತ್ತದೆ.

ಡೆಲ್ಲಿ ತಂಡವೂ ಸಹ ಆರ್‌ಸಿಬಿ ಸೋಲಿಗಾಗಿ ಕಾಯುತ್ತಿದೆ. ಏಕೆಂದರೆ ಅದು ತನ್ನ ಕೊನೆಯ ಪಂದ್ಯ ಮುಂಬೈ ಇಂಡಿಯನ್ಸ್ ಎದುರು ಆಡಲಿದೆ. ಅಲ್ಲಿ ಗೆದ್ದರೆ ಅದು ಸುಲಭವಾಗಿ ಪ್ಲೇ ಆಫ್ ಪ್ರವೇಶಿಸುತ್ತದೆ. ಒಂದು ವೇಳೆ ಅಲ್ಲಿ ಸೋತರೂ ಕೂಡ 14 ಅಂಕಗಳೊಂದಿಗೆ ಉತ್ತಮ ನೆಟ್ ರನ್‌ರೇಟ್ ಇರುವುದರಿಂದ ಅದಕ್ಕೆ ಪ್ಲೇ ಆಫ್ ಅವಕಾಶ ಹೆಚ್ಚು. ಅದಕ್ಕಾಗಿ ಅದು ಆರ್‌ಸಿಬಿ ಸೋಲನ್ನು ಎದುರು ನೋಡುತ್ತಿದೆ.

ಇನ್ನು ಕೋಲ್ಕತ್ತಾ ಮತ್ತು ಪಂಜಾಬ್ ತಂಡಗಳು ಡೆಲ್ಲಿ ಮತ್ತು ಆರ್‌ಸಿಬಿ ಎರಡೂ ತಂಡಗಳ ಸೋಲಿಗಾಗಿ ಪ್ರಾರ್ಥಿಸುತ್ತಿವೆ. ಏಕೆಂದರೆ ಆ ಎರಡು ತಂಡಗಳು ತಲಾ 12 ಅಂಕ ಗಳಿಸಿದ್ದು ತಮ್ಮ ಕಡೆಯ ಪಂದ್ಯದಲ್ಲಿ ಅತಿ ದೊಡ್ಡ ಅಂತರದಲ್ಲಿ ಗೆದ್ದು ನೆಟ್ ರನ್ ರೇಟ್ ಆಧಾರದಲ್ಲಿ ಪ್ಲೇ ಆಫ್‌ಗೇರಲು ಕನಸು ಕಾಣುತ್ತಿವೆ. ಹೈದರಾಬಾದ್ ಸನ್‌ರೈಸರ್ಸ್ ತಂಡ ಕೇವಲ 10 ಅಂಕ ಗಳಿಸಿದ್ದು, ಉಳಿದ ಎರಡೂ ಪಂದ್ಯ ದೊಡ್ಡ ಅಂತರದಲ್ಲಿ ಗೆದದ್ದು 14 ಅಂಕ ಮತ್ತು ಉತ್ತಮ ರನ್ ರೇಟ್ ಆಧಾರದಲ್ಲಿ ಪ್ಲೇ ಆಫ್ ಕನಸು ಕಾಣುತ್ತಿದೆ. ಆದರೆ ಅದರ ಸಾಧ್ಯತೆ ತೀರಾ ಕಡಿಮೆ ಇದೆ.

ಒಂದು ವೇಳೆ ಆರ್‌ಸಿಬಿ ಬಯಸಿದಂತೆ ಅದು ಗುಜರಾತ್ ಎದುರು ಗೆದ್ದು, ಡೆಲ್ಲಿ ತಂಡವು ಮುಂಬೈ ಎದುರು ಸೋತರೆ ಆರ್‌ಸಿಬಿ ಪ್ಲೇ ಆಫ್ ಪ್ರವೇಶಿಸುತ್ತದೆ. ಆದರೆ ಅಲ್ಲಿ ಅದು ಅಗ್ರ 4ರಲ್ಲಿ 4 ಸ್ಥಾನದಲ್ಲಿರುವುದರಿಂದ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ 3ನೇ ಸ್ಥಾನದ ತಂಡದೊಂದಿಗೆ ಕಣಕ್ಕಿಳಿದು ಗೆಲುವು ಸಾಧಿಸಬೇಕು. ನಂತರ ಸೆಮಿಫೈನಲ್ (2ನೇ ಕ್ವಾಲಿಫೈಯರ್) ಪಂದ್ಯದಲ್ಲಿ ಗೆಲುವು ಸಾಧಿಸಬೇಕು ಮತ್ತು ಅಂತಿಮವಾಗಿ ಫೈನಲ್‌ ನಲ್ಲಿ ಗೆಲುವು ಸಾಧಿಸಿದರೆ ಈ ಸಲ ಕಪ್ ನಮ್ದೆ ಎಂಬ ಘೋಷಣೆ ನಿಜವಾಗುತ್ತದೆ. ಕಷ್ಟದ ಹಾದಿ ಮುಂದಿದೆ. ಆದರೆ ಅಸಾಧ್ಯವಾದುದ್ದೇನಲ್ಲ. ಆರ್‌ಸಿಬಿ ಯಾವ ರೀತಿ ಪ್ರದರ್ಶನ ನೀಡುತ್ತದೆ ನೋಡೋಣ.

ಇದನ್ನೂ ಓದಿ: ಥಾಮಸ್ ಕಪ್: ಚೊಚ್ಚಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಭಾರತ

ಇದನ್ನೂ ಓದಿ: ಪೊನ್ನಂಪೇಟೆಯಲ್ಲಿ ಕೊಟ್ಟಿದ್ದು ಏರ್‌ಗನ್‌ ತರಬೇತಿ- ಸಿ.ಟಿ.ರವಿ; ನಡೆದದ್ದು ಯೋಗ ತರಬೇತಿ ಎಂದ ಹಿಂಜಾವೇ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...