Homeಕರ್ನಾಟಕಮೈಸೂರಿನ ‘ಹದಿನಾರು’ ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆ ಕೆಡವಿದಾಗ ಸಿಕ್ಕಿತ್ತು ಜೈನ ವಿಗ್ರಹ!

ಮೈಸೂರಿನ ‘ಹದಿನಾರು’ ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆ ಕೆಡವಿದಾಗ ಸಿಕ್ಕಿತ್ತು ಜೈನ ವಿಗ್ರಹ!

- Advertisement -
- Advertisement -

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದಲ್ಲಿ ನಾಲ್ಕು ವರ್ಷಗಳ ಹಿಂದೆ ವೈಷ್ಣವ ದೇವಾಲಯ (ಚೆನ್ನಕೇಶವ ದೇವಾಲಯ) ಕೆಡವಿದಾಗ ಜೈನ ವಿಗ್ರಹ ಪತ್ತೆಯಾಗಿತ್ತು ಎಂಬುದು ಚರ್ಚೆಯ ಮುನ್ನೆಲೆಗೆ ಬಂದಿದೆ.

ಟಿಪ್ಪು ಸುಲ್ತಾನ್‌ ಆಳ್ವಿಕೆಯ ಅವಧಿಯಲ್ಲಿ ದೇವಾಲಯವನ್ನು ಕೆಡವಿ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಕಟ್ಟಲಾಗಿದೆ ಎಂಬ ಚರ್ಚೆ ನಡೆಯುತ್ತಿದ್ದು, ಜೈನ ಹಾಗೂ ಬೌದ್ಧ ಧಾರ್ಮಿಕ ಕೇಂದ್ರಗಳ ಮೇಲೆ ವೈಷ್ಣವ ಹಾಗೂ ಶೈವ ದೇವಾಲಯಗಳನ್ನು ನಿರ್ಮಿಸಿರುವ ವಿಷಯಗಳೂ ಚರ್ಚೆಯಾಗುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಟಿಪ್ಪು ಸುಲ್ತಾನ್’ ಹಾಗೂ ‘ಮೈಸೂರು ಇತಿಹಾಸ’ದ ಕುರಿತು ಆಳವಾಗಿ ಅಧ್ಯಯನ ಮಾಡಿದವರಾದ ಪ್ರೊ.ಪಿ.ವಿ.ನಂಜರಾಜ ಅರಸು ರವರು, ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, ಜಾಮೀಯ ಮಸೀದಿ ಇತಿಹಾಸದ ಜೊತೆಗೆ ಹದಿನಾರು ಗ್ರಾಮದ ಚೆನ್ನಕೇಶವ ದೇವಾಲಯದ ಕುತಿತೂ ವಿವರಿಸಿದ್ದಾರೆ.

“ಶ್ರೀರಂಗಪಟ್ಟಣದಲ್ಲಿ ದೇವಸ್ಥಾನ ಇದ್ದದ್ದು ನಿಜ. ಒಂದು ರಾಜ್ಯದ ರಾಜಧಾನಿ ಅಂದಾಗ ಶತ್ರುಗಳ ದಾಳಿಯನ್ನು ಗಮನಿಸುತ್ತಿರಬೇಕಾಗುತ್ತದೆ. ಅದಕ್ಕಾಗಿ ಕಾವಲು ಗೋಪುರಗಳು ಬೇಕಾಗಿರುತ್ತವೆ. ಬ್ರಿಟಿಷರ ನಡುವೆ ಟಿಪ್ಪು ನಡೆಸಿದ ನಾಲ್ಕು ಆಂಗ್ಲೋ ಮೈಸೂರು ಯುದ್ಧದಲ್ಲೂ ಬ್ರಿಟಿಷರು ದಾಳಿ ಮಾಡಿದ್ದು ಮಳವಳ್ಳಿ ಕಡೆಯಿಂದ. ಮದ್ದೂರು, ಮಂಡ್ಯ ಕಡೆಯಿಂದ ಬರಲು ಸಾಧ್ಯವಾಗುತ್ತಿರಲಿಲ್ಲ. ಯಾಕೆಂದರೆ ನದಿ ದಾಟುವುದು ಕಷ್ಟವಿತ್ತು. ಹೀಗಾಗಿ ಮಳವಳ್ಳಿ ಮಾರ್ಗವನ್ನು ಬ್ರಿಟಿಷರು ಆಯ್ದುಕೊಂಡರು. ಹೀಗಾಗಿ ಕಾವಲು ಗೋಪುರಗಳನ್ನು ನಿರ್ಮಿಸಲಾಯಿತು. ಈ ಮಸೀದಿಯಲ್ಲಿನ ಕಾವಲು ಗೋಪುರದ ಒಳಗೆ 200 ಮೆಟ್ಟಿಲುಗಳಿವೆ. ಈಗ ಬೀಗ ಹಾಕಿದ್ದಾರೆ. ನೀವು ಬೀಗ ತೆಗೆಸಿ ಹೋಗಿ ನೋಡಿ. ಸುಮಾರು ನಲವತ್ತು ಮೈಲಿ ದೂರದ ಮಳವಳ್ಳಿವರೆಗೂ ನೋಡಬಹುದು. ಮತ್ತೆ ಈ ಕಡೆ ತಿರುಗಿ ನೋಡಿದರೆ ಮದ್ದೂರುವರೆಗೂ ನೋಡಬಹುದು. ಇದಕ್ಕಾಗಿ ದೇವಾಲಯವನ್ನು ಮಸೀದಿಯಾಗಿ ರೂಪಾಂತರಿಸುತ್ತಾನೆ. ಅಲ್ಲಿನ ಆಂಜನೇಯ ದೇವರನ್ನು ಕೋಟೆಗೆ ಸ್ಥಳಾಂತರಿಸುತ್ತಾನೆ” ಎಂದು ವಿವರಿಸಿದ ಅವರು, “ಹದಿನಾರು ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆಯನ್ನು ಒಡೆದಾಗ ಜೈನ ತೀರ್ಥಂಕರರ ವಿಗ್ರಹ ಪತ್ತೆಯಾಗಿದೆ. ಇಲ್ಲಿನ ಚೆನ್ನಕೇಶವ ದೇವಾಲಯ ಕೆಡವಿ ಬಸದಿಯನ್ನು ಮುತಾಲಿಕ್‌ ನಿರ್ಮಿಸುತ್ತಾರೆಯೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ಟಿಪ್ಪು ಮತ್ತು ಮೈಸೂರು ಚರಿತ್ರೆ ಕುರಿತ ಎರಡು ಅಮೂಲ್ಯ ಬರಹಗಳು

ಇತಿಹಾಸವನ್ನು ಕೆದಕುತ್ತಾ ಹೋದರೆ ದೇವಾಲಯಗಳ ಅಡಿಯಲ್ಲಿ ಜೈನ ಹಾಗೂ ಬೌದ್ಧ ಧರ್ಮದ ಕುರುಹುಗಳು ಸಿಗುತ್ತವೆ ಎಂಬುದಕ್ಕೆ ಸಾಕಷ್ಟು ಉದಾಹರಣೆಗಳಿವೆ. ಇದಕ್ಕೆ ಪೂರಕವಾಗಿ ಹದಿನಾರು ಗ್ರಾಮದ ಇತಿಹಾಸವನ್ನು ಪ್ರೊ.ನಂಜರಾಜ ಅರಸು ಉಲ್ಲೇಖಿಸುತ್ತಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನ್‌ರನ್ನು ಜಿಹಾದಿ, ಅತ್ಯಾಚಾರಿ ಎಂದು ಕರೆದಿಲ್ಲ

“ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಹದಿನಾರು ಗ್ರಾಮದ ಇತಿಹಾಸವನ್ನು ಬರೆಯಲು ಹೊರಟಾಗ ಹಲವಾರು ಸಂಗತಿಗಳು ತೆರೆದುಕೊಂಡವು. ಯದುವಂಶರು ಹುಟ್ಟಿದ್ದು ಇದೇ ಗ್ರಾಮದಲ್ಲಿ ಎನ್ನುತ್ತಾರೆ. ಈ ಹಿಂದೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ, ಹದಿನಾರು ಗ್ರಾಮದ ನಿವಾಸಿ ಡಾ.ಎಚ್.ಸಿ.ಮಹದೇವಪ್ಪ ಅವರು ತಮ್ಮ ಅಧಿಕಾರವಧಿಯಲ್ಲಿ ಹದಿನಾರು ಗ್ರಾಮದ ಅಭಿವೃದ್ಧಿಗೆ, ದೇವಾಲಯಗಳ ಜೀರ್ಣೋದ್ಧಾರಕ್ಕೆ ಕ್ರಮ ವಹಿಸಿದರು. ಆಗ ಜೈನ ತೀರ್ಥಂಕರರ ವಿಗ್ರಹ ಪತ್ತೆಯಾಗಿತ್ತು” ಎಂದು ಹೇಳುತ್ತಾರೆ ನಂಜರಾಜ ಅರಸು.

“ಹದಿನಾರು ಗ್ರಾಮದಲ್ಲಿ ಚೆನ್ನಕೇಶವ ದೇವಾಲಯವಿದೆ. ಅದು ವೈಷ್ಣವ ದೇವರು. ವಿಜಯನಗರ ಕಾಲದ ವಾಸ್ತುಶಿಲ್ಪ ಶೈಲಿಯಲ್ಲಿ ದೇವಾಲಯವನ್ನು ಕಾಣಬಹುದು. ದೇವಾಲಯದ ಗೋಡೆಗಳು ಶಿಥಿಲವಾಗಿದ್ದರಿಂದ ಹೊಸದಾಗಿಯೇ ಕಟ್ಟಲು ಅಂದಿನ ಸಚಿವ ಮಹದೇವಪ್ಪ ಸೂಚಿಸಿದರು. ಗರ್ಭಗುಡಿಯಲ್ಲಿನ ದೇವರನ್ನು ಗೋಣಿಚೀಲ, ಟಾರ್ಪಲ್‌ ಇತ್ಯಾದಿಗಳಿಂದ ಮುಚ್ಚಿ ಸುರಕ್ಷಿತವಾಗಿಟ್ಟು ಗೋಡೆಗಳನ್ನು ಒಡೆಯಲಾಯಿತು. ಹೊಸದಾಗಿ ಗೋಡೆ ನಿರ್ಮಿಸಲು ಒಂದು ಬದಿಯ ಗೋಡೆಯ ಬಳಿ ಆರು ಅಡಿ ಅಗೆದಾಗ ತೀರ್ಥಂಕರರ ಅರ್ಧಭಾಗ (ಸೊಂಟದ ಮೇಲಿನ ಭಾಗ) ಸಿಕ್ಕಿತು. ಇನ್ನೊಂದು ಗೋಡೆ ಒಡೆದಾಗ ಸೊಂಟದಿಂದ ಕೆಳಭಾಗ ಸಿಕ್ಕಿತು. ಅಂದರೆ ಇಲ್ಲಿ ಮೊದಲು ಜೈನರ ಬಸದಿ ಇತ್ತು. ಅದನ್ನು ವೈಷ್ಣವರು ಒಡೆದುಹಾಕಿದ್ದಾರೆ. ತೀರ್ಥಂಕರರ ವಿಗ್ರಹವನ್ನು ಅಲ್ಲಿಯೇ ಮುಚ್ಚಿಹಾಕಿ ವಿಷ್ಣು ದೇವಾಲಯ ಕಟ್ಟಿದ್ದಾರೆ ಎಂದಾಯಿತಲ್ಲ. ಮುತಾಲಿಕ್ ಹಾಗೂ ಕೆಲವು ಸ್ವಾಮೀಜಿಗಳು ಚೆನ್ನಕೇಶವನ ವಿಗ್ರಹ ತೆರವು ಮಾಡಿ, ಪಾರ್ಶ್ವನಾಥರ ವಿಗ್ರಹವನ್ನು ಪ್ರತಿಷ್ಠಾಪಿಸಬೇಕಲ್ಲವೇ?” ಎಂದು ಪ್ರಶ್ನಿಸಿದರು.

“ನನಗೆ ಯಾವ ದೇವರ ಬಗ್ಗೆಯೂ ಆಸಕ್ತಿ ಇಲ್ಲ. ಆದರೆ ಮಸೀದಿ ಒಡೆದು ದೇವಸ್ಥಾನ ಮಾಡುತ್ತೇವೆ ಎನ್ನುತ್ತಾರಲ್ಲ. ಹದಿನಾರು ಗ್ರಾಮದಲ್ಲಿ ಯಾವುದನ್ನು ಒಡೆಯುತ್ತಾರೆ? ಮೈಸೂರಿನಿಂದ ಪಶ್ಚಿಮವಾಹಿನಿಗೆ ಹೊರಟರೆ ದಾರಿಯಲ್ಲಿ ಕಳಸ್ತವಾಡಿ ಎಂಬ ಗ್ರಾಮ ಸಿಗುತ್ತದೆ. ಮುತಾಲಿಕ್‌ ಉಲ್ಲೇಖಿಸುವ ಬ್ರಿಟಿಷರೇ ಬರೆದ ಪ್ರಕಾರ, 1484ರ ಅವಧಿಯಲ್ಲಿ ತಿಮ್ಮಣ್ಣನಾಯಕನಿಗೆ ವಿಜಯನಗರದ ಅರಸರು ಅನುಮತಿ ನೀಡಿ ಕಳಸ್ತವಾಡಿಯಲ್ಲಿದ್ದ 100 ಜೈನಬಸದಿಗಳನ್ನು ಒಡೆದುಹಾಕುತ್ತಾರೆ. ನಂತರ ಇಲ್ಲಿನ ಜೈನ ಬಸದಿಗಳಿಂದ ಕಲ್ಲು, ಮರದ ವಸ್ತುಗಳನ್ನು ತೆಗೆದುಕೊಂಡು ಹೋಗಿ ಶ್ರೀರಂಗಪಟ್ಟಣದಲ್ಲಿರುವ ರಂಗನಾಥಸ್ವಾಮಿ ದೇವಸ್ಥಾನವನ್ನು ವಿಸ್ತಾರಗೊಳಿಸಲಾಗುತ್ತದೆ. ಮುತಾಲಿಕ್‌ ಅವರೇ ಇದನ್ನು ನಿಮ್ಮ ಬ್ರಿಟಿಷರೇ ಬರೆದಿದ್ದಾರೆ. ನೂರೊಂದು ಜೈನ ಬಸದಿ ಇತ್ತೆಂದು ಇಲ್ಲಿನ ಜನರಿಗೇ ಗೊತ್ತೇ ಇಲ್ಲ. ಹೊಸದಾಗಿ ಪ್ರತಿಷ್ಠಾಪನೆ ಮಾಡುತ್ತೀರಾ?” ಎಂದು ಕೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಶೀರರ ಯೋಗ್ಯತೆಗಳ ಅನಾವರಣ ತಿಳಿತಿದೆ ,ಶಾಂತಿದೂತರ ಬಣ್ಣ ಬಯಲು ಆಗಲೇ ಬೇಕಿದೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...