Homeಕರ್ನಾಟಕ84 ವರ್ಷದ ನಂದಿಪಾಪಯ್ಯರಿಗೆ ಕಳೆದ 65 ವರ್ಷಗಳಿಂದ ಸಾಗುವಳಿ ಮಾಡಿದರೂ ಸಿಗದ ಭೂಮಿ! ವಿಡಿಯೋ ನೋಡಿ

84 ವರ್ಷದ ನಂದಿಪಾಪಯ್ಯರಿಗೆ ಕಳೆದ 65 ವರ್ಷಗಳಿಂದ ಸಾಗುವಳಿ ಮಾಡಿದರೂ ಸಿಗದ ಭೂಮಿ! ವಿಡಿಯೋ ನೋಡಿ

ನಾನು ಬಡ್ವ ಎಲ್ಡ್ ಎಕರೆ ಭೂಮಿ ಇರ್ಬೇಕೊ ಬ್ಯಾಡ್ವೋ ... ನಾನು ಕೇಳುವುದರಲ್ಲಿ ನ್ಯಾಯ ಐತೋ ಇಲ್ವೋ

- Advertisement -
- Advertisement -

84 ವರ್ಷದ ನಂದಿಪಾಪಯ್ಯ, ಕಳೆದ 65 ವರ್ಷಗಳಿಂದ ಮೊಳಕಾಲ್ಮೂರು ತಾಲ್ಲೂಕು ತುಮಕೂರ್ಲಹಳ್ಳಿ ಗ್ರಾಮದ ಸರ್ವೆ‌ ನಂ. 78 ರಲ್ಲಿ 3 ಎಕರೆ ಭೂಮಿಯಲ್ಲಿ ಸಾಗುವಳಿ ಮಾಡುತ್ತಾ ಬಂದಿದ್ದರೂ ಭೂಮಿ ಅವರದ್ದಾಗಿಲ್ಲ. ಅರಣ್ಯ ಹಕ್ಕು ಕಾಯ್ದೆಯನ್ವಯ ಭೂಮಿ ತನ್ನ ಹೆಸರಿಗೆ ಮಾಡಿಕೊಡಬೇಕೆಂದು ಅರ್ಜಿ‌ಸಲ್ಲಿಸಿದ್ದಾರೆ.
ಈ ವಯೋವೃದ್ದ ಪಾಪಯ್ಯ ಬದುಕಿಗಾಗಿ ಭೂಮಿಯನ್ನು ಪಡೆಯಬೇಕೆಂಬ ಛಲದಿಂದ ಹಲವಾರು ವರ್ಷಗಳಿಂದ ನಡೆಸುತ್ತಿರುವ ಪ್ರತಿಭಟನೆ, ಧರಣಿಯಿಂದ ಹಿಂದೆ ಸರಿದಿಲ್ಲ. “ನಾನು ಬಡ್ವ ಎಲ್ಡ್ ಎಕರೆ ಭೂಮಿ ಇರ್ಬೇಕೊ ಬ್ಯಾಡ್ವೋ … ನಾನು ಕೇಳುವುದರಲ್ಲಿ ನ್ಯಾಯ ಐತೋ ಇಲ್ವೋ” ಎಂಬ ಇವರ ಮಾತಿಗೆ ಯಾವ ಅಧಿಕಾರಿಯೂ ಉತ್ತರ ನೀಡಲು ತಬ್ಬಿಬ್ಬಾಗುತ್ತಾರೆ.

Posted by Kumar Samathala on Tuesday, June 25, 2019

ಆ ಊರಿನಲ್ಲಿ ಅರಣ್ಯ ಇಲಾಖೆಯವರು 38 ಕುಟುಂಬಗಳನ್ನು ಹೊರಹಾಕಿ ಜನರನ್ನು ಬೀದಿಗೆ ತಳ್ಳಿದ್ದಾರೆ. ಊರುಗೋಲ ಆಸರೆಯಲ್ಲೇ ಕಛೇರಿ ಕಛೇರಿಗಳನ್ನು ಅಲೆಯುತ್ತಿದ್ದರೂ ಪರಿಹಾರ ಸಿಕ್ಕಿಲ್ಲ. ಇವರು ಪ್ರತಿಭಟನೆಯು ಆರಂಭದಿಂದಲೂ ಪ್ರತಿದಿನ ತಪ್ಪದೇ ಭಾಗವಹಿಸುವ, ರಾತ್ರಿಯು ಪ್ರತಿಭಟನೆಯ ಜಾಗ ಬಿಟ್ಟು ಕದಲದ ವ್ಯಕ್ತಿ ನಂದಿಪಾಪಯ್ಯ.

ಅದೇ ರೀತಿ ಹೊಳಲ್ಕೆರೆ ತಾಲ್ಲೂಕಿನ ನೇರಲಕಟ್ಟೆ ಗ್ರಾಮದಲ್ಲಿ ಒಂದೇ ಸಮುದಾಯದ 70 ಕುಟುಂಬಗಳು ಭೂಮಿಗಾಗಿ ಹೋರಾಡಿ ಕೇಸು ಹಾಕಿಸಿಕೊಂಡು ಜೈಲಿಗೂ ಹೋಗಿದ್ದಾರೆ. ಇಂತಹ ಸಾವಿರಾರು ಪ್ರಕರಣಗಳು, ಘಟನೆಗಳು ಕಳೆದ ಐದಾರು ದಶಕಗಳಿಂದಲೂ ನಡೆಯುತ್ತಲೇ ಇವೆ. ಕಂದಾಯ, ಅರಣ್ಯ ಭೂಮಿಗಳಲ್ಲಿ ಸಾಗುವಳಿ‌ ಮಾಡುತ್ತಾ ಹಕ್ಕುಪತ್ರಕ್ಕಾಗಿ ಒಂದು ಲಕ್ಷಕ್ಕೂ ಅಧಿಕ ಕುಟುಂಬಗಳು ಕಾಯುತ್ತಿವೆ ಆದರೆ ಅವರಿಗೆ ಸಿಕ್ಕಿರುವುದು ತೀವ್ರ ನಿರಾಶೆ ಮಾತ್ರ ಎನ್ನುತ್ತಾರೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೇತೃತ್ವ ವಹಿಸಿರುವ ಕುಮಾರ್ ಸಮತಳ.

ಚಿತ್ರದುರ್ಗದ ಜಿಲ್ಲಾಡಳಿತ ಜನರ ಸಮಸ್ಯೆಗಳನ್ನು ಬಗೆ ಹರಿಸದೆ, ನಿಷ್ಕಾಳಜಿ, ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ. ಕಳೆದ 10 ದಿನಗಳಿಂದ ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಹಗಲು ರಾತ್ರಿ ಪ್ರತಿಭಟನೆ ನಡೆಸುತ್ತಿದ್ದರೂ, ನಿಮ್ಮ ಸಮಸ್ಯೆ ಏನೆಂದು ಕೇಳುವ ಕನಿಷ್ಠ ವ್ಯವಧಾನವೂ ಅವರಿಗಿಲ್ಲ. ಜನಪ್ರತಿನಿಧಿಗಳಿಗೂ ಇಲ್ಲ. ಜನರು ಚುನಾವಣೆಯ ಸಂದರ್ಭದಲ್ಲಿ ಮಾತ್ರ ಕಣ್ಣಿಗೆ ಕಾಣುತ್ತಾರೆ ಬಿಟ್ಟರೆ ಬಾಕಿ‌ ಸಮಯದಲ್ಲಿ ಕಾಣುವುದಿಲ್ಲ. ಅಂದರೆ ಅಧಿಕಾರಿಗಳು, ಕಾನೂನು ಜಾರಿ ಮಾಡಬೇಕಿರುವವರು, ಇದೇ ಜನರು ಬೆಳೆದ ಅನ್ನ ತಿನ್ನುತ್ತಿಲ್ಲವೇ? ಎಂದು ಕುಮಾರ್ ಸಮತಳ ಪ್ರಶ್ನಿಸಿದ್ದಾರೆ.

ಭೂಮಿ ವಸತಿಗಾಗಿ ಬಡವರು ನಡೆಸುತ್ತಿರುವ ಹೋರಾಟಕ್ಕೆ ಜಿಲ್ಲೆಯ ಜನತೆ, ನಾಡಿನ ಪ್ರಜ್ಞಾವಂತರು, ಹೋರಾಟಗಾರರು ಬಡ ಜನರ ಕೂಗಿಗೆ ದ್ವನಿಗೂಡಿಸಬೇಕೆಂದು ಅವರು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಈ ಮೂಲಕ ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...