Homeಕರ್ನಾಟಕಸರ್ಕಾರ ಹೊರಗಿಟ್ಟಿರುವ ಕ್ರಾಂತಿಕಾರಿ ‘ಭಗತ್‌ಸಿಂಗ್‌’ ಪಾಠದಲ್ಲಿ ಇರುವುದೇನು? ಆ ಪುಟ್ಟ ಪಠ್ಯ ಇಲ್ಲಿದೆ

ಸರ್ಕಾರ ಹೊರಗಿಟ್ಟಿರುವ ಕ್ರಾಂತಿಕಾರಿ ‘ಭಗತ್‌ಸಿಂಗ್‌’ ಪಾಠದಲ್ಲಿ ಇರುವುದೇನು? ಆ ಪುಟ್ಟ ಪಠ್ಯ ಇಲ್ಲಿದೆ

ಅಷ್ಟಕ್ಕೂ ಸರ್ಕಾರಕ್ಕೆ ಭಗತ್‌ಸಿಂಗ್‌ ಅವರನ್ನು ಕಂಡರೆ ಭಯ ಯಾಕೆ? ಒಬ್ಬ ಕ್ರಾಂತಿಕಾರಿ ಸ್ವಾತಂತ್ಯ್ರ ಯೋಧನ ಬಗ್ಗೆ ನಮ್ಮ ಮಕ್ಕಳಿಗೆ ಕಲಿಸಿದರೆ ತಪ್ಪೇನು?

- Advertisement -
- Advertisement -

ಅಪ್ರತಿಮ ದೇಶಪ್ರೇಮಿ, ಸ್ವಾತಂತ್ರ್ಯ ಹೋರಾಟಕ್ಕಾಗಿ ಜೀವವನ್ನೇ ಬಲಿಕೊಟ್ಟ ಮಹಾನ್‌ ವ್ಯಕ್ತಿ ಭಗತ್‌ಸಿಂಗ್ ಕುರಿತ ಪಠ್ಯವನ್ನು ರಾಜ್ಯ ಸರ್ಕಾರ ಕೈ ಬಿಟ್ಟಿದೆ. ರೋಹಿತ್‌ ಚಕ್ರತೀರ್ಥ ನೇತೃತ್ವದಲ್ಲಿ ರಚನೆಯಾಗಿದ್ದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಹಲವು ಬದಲಾವಣೆಗಳನ್ನು ಮಾಡಿದೆ. ಕನ್ನಡ ಖ್ಯಾತ ಲೇಖಕರಾದ ಪಿ.ಲಂಕೇಶ್‌, ಸಾ.ರಾ.ಅಬೂಬುಕರ್‌ ಅವರ ಪಠ್ಯಗಳ ಜೊತೆಗೆ ಸರಳ ಸಜ್ಜನಿಕೆಗೆ ಹೆಸರಾದ ಡಾ.ಜಿ.ರಾಮಕೃಷ್ಣ ಅವರು ಬರೆದಿರುವ ‘ಭಗತ್‌ಸಿಂಗ್‌’ ಪಠ್ಯವನ್ನು ಹೊರಗಿಡಲಾಗಿದೆ.

ಜಾತಿವಾದ, ಮತೀಯವಾದವನ್ನು ಪ್ರತಿಪಾದಿಸಿದ, ಸ್ವಾತಂತ್ರ್ಯ ಹೋರಾಟಕ್ಕೆ ವಿರುದ್ಧವಾಗಿದ್ದ ಆರ್‌ಎಸ್‌ಎಸ್‌ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್‌ ಭಾಷಣವನ್ನು ಪಠ್ಯದಲ್ಲಿ ಸೇರಿಸಲಾಗಿದೆ. ‘ಧ್ವಜ’ (ಭಗವಾಧ್ವಜ)ದ ಕುರಿತು ಮಾತನಾಡುವ ಈ ಪಠ್ಯವನ್ನು ಸೇರಿಸಿಕೊಂಡು, ಆರ್‌ಎಸ್‌ಎಸ್‌ ಕುರಿತು ಮಕ್ಕಳಿಗೆ ಪರಿಚಯ ಮಾಡಿಕೊಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಭಗತ್‌ಸಿಂಗ್ ಪಠ್ಯವನ್ನು ಕೈಬಿಡಲು ಕಾರಣವೇನು? ಎರಡು ಪುಟಗಳ ಈ ಪುಟ್ಟ ಪಾಠದಲ್ಲಿ ಅಂತಹ ಯಾವ ಆಕ್ಷೇಪಣೀಯ ಅಂಶಗಳಿವೆ? ಅಷ್ಟಕ್ಕೂ ಸರ್ಕಾರಕ್ಕೆ ಭಗತ್‌ಸಿಂಗ್‌ ಅವರನ್ನು ಕಂಡರೆ ಭಯ ಯಾಕೆ? ಒಬ್ಬ ಕ್ರಾಂತಿಕಾರಿ ಸ್ವಾತಂತ್ಯ್ರ ಯೋಧನ ಬಗ್ಗೆ ನಮ್ಮ ಮಕ್ಕಳಿಗೆ ಕಲಿಸಿದರೆ ತಪ್ಪೇನು? ನಾಡಿನ ಜನತೆಯೇ ಓದಿ ನಿರ್ಧರಿಸಬೇಕೆಂದು ಜಿ.ರಾಮಕೃಷ್ಣ ಅವರು ಬರೆದಿರುವ ಈ ಪಾಠವನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ. ಓದಿ….


ಪಠ್ಯಪೂರಕ ಅಧ್ಯಯನ; ಪುಟ ಸಂಖ್ಯೆ-169


೩. ಭಗತ್‌ಸಿಂಗ್‌‌

– ಡಾ. ಜಿ. ರಾಮಕೃಷ್ಣ

ಪ್ರವೇಶ: ಭಾರತ ಸ್ವತಂತ್ರಗೊಂಡು ಸ್ವಾತಂತ್ರ್ಯದ ಸವಿಯನ್ನು ನಾವಿಂದು ಅನುಭವಿಸುತ್ತಿದ್ದೇವೆ. ಆದರೆ ಆ ಸ್ವಾತಂತ್ರ್ಯಕ್ಕೋಸ್ಕರ ಹೋರಾಡಿ ಮಡಿದವರು ಅಸಂಖ್ಯಾತ ದೇಶಭಕ್ತರು. ಸ್ವಾತಂತ್ರ್ಯ ತ್ಯಾಗ ಬಲಿದಾನದ ಫಲ. ವೀರ ಸ್ವಾತಂತ್ರ್ಯ ಯೋಧರ ಬಲಿದಾನವನ್ನು ಸ್ಮರಿಸುವುದು ಭಾರತೀಯರೆಲ್ಲರ ಜವಾಬ್ದಾರಿ.

ಹನ್ನೆರಡು ವರ್ಷದ ಒಬ್ಬ ಬಾಲಕ ಅಮೃತಸರದ ಜಲಿಯನ್‌ ವಾಲಾಬಾಗ್‌ನಲ್ಲಿ ಮೂಕನಂತೆ ಅತ್ತಿಂದಿತ್ತ ಓಡಾಡುತ್ತಿದ್ದ. ಶಾಲೆಗೆ ಹೋಗಬೇಕಾಗಿದ್ದ ಆ ಬಾಲಕ ಅಂದು ತನ್ನ ಹಳ್ಳಿಯಿಂದ ರೈಲಿನಲ್ಲಿ ಅಮೃತಸರದಲ್ಲಿ ಬಂದಿಳಿದಿದ್ದ. ಒಂದೆರೆಡು ಪುಸ್ತಕಗಳು ಹಾಗೂ ಒಂದು ಪುಟ್ಟ ಡಬ್ಬಿಯಿದ್ದ ಕೈಚೀಲ ಅವನ ಬಳಿಯೇ ಇತ್ತು. ತುಸು ಹೊತ್ತಿನ ನಂತರ ಹುಡುಗ ಜಲಿಯನ್‌ ವಾಲಾಬಾಗ್‌ನಲ್ಲಿ ಒಂದೆಡೆ ಅಂತರ್ಮುಖಿಯಾಗಿ ಬಹುಕಾಲ ನಿಂತ. ನಂತರ ಅಲ್ಲಿದ್ದ ಸ್ವಲ್ಪ ಮಣ್ಣನ್ನು ತೆಗೆದುಕೊಂಡು ಹಣೆಗಿಟ್ಟುಕೊಂಡ. ಇನ್ನಷ್ಟನ್ನು ತನ್ನಲ್ಲಿದ್ದ ಡಬ್ಬಿಯಲ್ಲಿ ಶೇಖರಿಸಿಕೊಂಡು ಹಿಂತಿರುಗಿದ. ರಾತ್ರಿ ಮನೆಗೆ ಹಿಂತಿರುಗಿದಾಗ ಅವನ ಸಹೋದರಿ ಎಂದಿನಂತೆ ಅವನನ್ನು ಊಟಕ್ಕೆಬ್ಬಿಸಿದರೆ ಒಲ್ಲೆನೆಂದು ಮುಖ ತಿರುಗಿಸಿದ. ಅವನಿಗೆ ಪ್ರಿಯವಾದ ಮಾವಿನ ಹಣ್ಣೊಂದನ್ನು ಕೂಡ ನಿರಾಕರಿಸಿ, ಅವಳನ್ನು ಮನೆಯ ಹಿಂಭಾಗಕ್ಕೆ ಕರೆದೊಯ್ದು. ತನ್ನ ಡಬ್ಬಿಯಲ್ಲಿದ್ದ ಮಣ್ಣನ್ನು ತೋರಿಸಿದ. ರಕ್ತದಲ್ಲಿ ಕಲೆಸಿದಂತಿದ್ದ ಆ ಮಣ್ಣು ಎಲ್ಲಿಯದೆಂದು ತಿಳಿದಾಗ ಅವನ ಉಪವಾಸಕ್ಕೆ ಕಾರಣ ಅವಳಿಗೆ ಗೊತ್ತಾಯಿತು. ‘ತ್ಯಾಗದ ಪ್ರತೀಕ ಆ ಮಣ್ಣು’ ಎಂದವಳಿಗೆ ತಿಳಿಯ ಹೇಳಿದ.

ಏಪ್ರಿಲ್‌ ೧೩, ೧೯೧೯ ರಂದು ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡದಲ್ಲಿ ಪ್ರಾಣ ಕಳೆದುಕೊಂಡಿದ್ದವರಿಗೆ ನಮನ ಸಲ್ಲಿಸಲು ಹೋಗಿದ್ದ ಆ ಬಾಲಕ ಭಗತ್‌ಸಿಂಗ್‌. ಇಂದು ಜಲಿಯನ್‌ ವಾಲಾಬಾಗ್‌ನಲ್ಲಿರುವ ಒಕ್ಕಣೆ ಹೀಗಿದೆ: “ಏಪ್ರಿಲ್‌- ೧೩- ೧೯೧೯ ರಂದು ಬ್ರಿಟೀಷರ ಗುಂಡುಗಳಿಗೆ ಆಹುತಿಯಾದ ಸುಮಾರು ೨೦೦೦ ಮುಗ್ಧ ಹಿಂದೂ, ಸಿಖ್‌ ಮತ್ತು ಮುಸಲ್ಮಾನರ ಸಮ್ಮಿಳಿತ ರಕ್ತದಿ೦ದ ಈ ಪ್ರದೇಶ ಪಾವನವಾಗಿದೆ.” ಭಗತ್‌ಸಿಂಗ್‌ ಅಲ್ಲಿಗೆ ಹೋಗಿ ಅಂತರ್ಮುಖಿಯಾಗಿ ನಿಂತಾಗ ಈ ಭಾವನೆ ಅವನ ಮನಸ್ಸಿನಲ್ಲಿ ಹಾಯುತ್ತಿರಬೇಕು.

ಜಲಿಯನ್‌ ವಾಲಾಬಾಗ್‌ನಲ್ಲಿ ನೆರೆದಿದ್ದ ಜನಕ್ಕೆ ತಾವೊಂದು ರಾಜಕೀಯ ಆಂದೋಳನದಲ್ಲಿ ಭಾಗಿಗಳಾಗಬೇಕೆಂಬ ಆಕಾಂಕ್ಷೆಯಾಗಲಿ ಹುತಾತ್ಮರಾಗಬೇಕೆಂಬ ಅಭಿಲಾಷೆಯಾಗಲಿ ಇದ್ದಿರಲಾರದು. ಜನರಲ್‌‌ ಡಯರ್‌ ಸಹ ತನ್ನ ಪೈಶಾಚಿಕ ಘಾತುಕತೆಯನ್ನುಳಿದ ಬೇರಾವ ಭಾವನೆಯಿಂದಲೂ ಪ್ರೇರಿತನಾಗಿದ್ದ ಎಂದು ನಂಬುವುದು ಕಷ್ಟ. ಕ್ರೂರ ಮಾರ್ಗದಿಂದ ಭಾರತೀಯರನ್ನೂ ಬಗ್ಗು ಬಡಿಯಬಹುದೆಂದು ಅವನ ಎಣಿಕೆ. ಬ್ರಿಟಷ್‌ ಸಾಮ್ರಾಜ್ಯದ ಅನವರತ ಏಳಿಗೆಗೆ ಇದಕ್ಕಿಂತಲೂ ಸುಲಭವಾದ ಮಾರ್ಗವನ್ನು ಚಿಂತಿಸಲು ಅವನು ಅಶಕ್ತನಾಗಿದ್ದ. ಒಟ್ಟು ೧೬೫೦ ಸುತ್ತುಗಳಷ್ಟು ಗುಂಡಿನ ಮಳೆ ಕರೆಯಿಸಿದ್ದ ಅವನು ಹೆಮ್ಮೆಯಿಂದ ಹೇಳಿಕೊಂಡದ್ದು ಇದು “ಒಂದೇ ಒಂದು ಗುಂಡು ಸಹ ದಂಡವಾಗಲಿಲ್ಲ”. ಅಂದು ಪ್ರಾಣ ಕಳೆದುಕೊಂಡವರ ಸಂಖ್ಯೆ ಇದನ್ನು ಖಚಿತಗೊಳಿಸಿತ್ತು.

ಜಲಿಯನ್‌ ವಾಲಾಬಾಗಿನ ರಕ್ತಸಿಕ್ತವಾಗಿದ್ದ ಮಣ್ಣನ್ನು ನಿಧಿಯಂತೆ ಕಾಪಾಡಿಕೊಂಡು ಬಂದಿದ್ದ ಬಾಲಕ ಭಗತ್‌ಸಿಂಗ್‌ ಮುಂದೆ ತನ್ನ ಕ್ರಾಂತಿಕಾರಿ ಗುಂಪಿನ ಸಹಾಯದಿಂದ ಬ್ರಿಟಿಷ್‌ ಸರ್ಕಾರದ ವಿರುದ್ಧ ತನ್ನ ಸೇಡನ್ನು
ತೀರಿಸಿಕೊಳ್ಳುತ್ತಾನೆ. ಇದರ ಫಲವಾಗಿ ಮರಣ ದಂಡನೆಗೆ ಈಡಾಗಿ ತನ್ನ ಸಹಚರರಾದ ಸುಖ್‌ದೇವ್‌, ರಾಜ್‌ಗುರು, ಭಟುಕೇಶ್ವರ ದತ್ತರೊಂದಿಗೆ ಹಸನ್ಮುಖಿಯಾಗಿ ತಾಯಿ ಭಾರತಾಂಬೆಯ ಸ್ವಾತಂತ್ರ್ಯದ ಹಣತೆಗೆ ತೈಲವೆಂಬಂತೆ ವೀರಯೋಧನಾಗಿ ಅಮರನಾದನು.

ಇಂಕ್ವಿಲಾಬ್‌ ಜಿಂದಾಬಾದ್‌…!

ಕೃತಿಕಾರರ ಪರಿಚಯ

ಡಾ. ಜಿ. ರಾಮಕೃಷ್ಣ : ಗಂಪಲಹಳ್ಳಿ ರಾಮಕೃಷ್ಣರವರು ಕ್ರಿ.ಶ. ೧೯೩೯ರಲ್ಲಿ ಬೆಂಗಳೂರು ಗ್ರಾಮಾಂತರ ಮಾಗಡಿ ಬಳಿಯ ಕೆಂಪಸಾಗರದಲ್ಲಿ ಜನಿಸಿದರು. ಮಹಾರಾಷ್ಟ್ರದ ಅಂಬೇಡ್ಕರ್‌ ಕಾಲೇಜಿನಲ್ಲಿ ಇಂಗ್ಲಿಷ್‌‌ ಪ್ರೊಫೆಸರಾಗಿ, ಬೆಂಗಳೂರಿನ ಬಸವನಗುಡಿ ನ್ಯಾಷನಲ್‌ ಕಾಲೇಜಿನಲ್ಲಿ ಇಂಗ್ಲಿಷ್‌‌ ಪ್ರಾಧ್ಯಾಪಕರಾಗಿ, ಹಂಪಿ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.ದೇವಿಪ್ರಸಾದ್‌ ಮತ್ತು ಲೋಕಾಯತ ದರ್ಶನ, ಭಗತ್‌ಸಿಂಗ್‌, ಭೂಪೇಶಸುಪ್ತ, ಚೆಗೆವಾರ, ಲೆನಿನ್‌, ಅನುವಾದ – ಬಾ ನೊಣವೇ, ವಾನರನಿಂದ ಮಾನವ ದರ್ಶನ ಮತ್ತು ಹಲವಾರು ಸಂಪಾದಿತ ಕೃತಿಗಳನ್ನು ರಚಿಸಿದ್ದಾರೆ. ಇವರಿಗೆ ರಾಜ್ಯಸಾಹಿತ್ಯ ಅಕಾಡೆಮಿ ಬಹುಮಾನವನ್ನು ನೀಡಿ ಗೌರವಿಸಲಾಗಿದೆ. ಪ್ರಸ್ತುತ ಪಾಠವನ್ನು ಜಿ. ರಾಮಕೃಷ್ಣರ ‘ಭಗತ್‌ಸಿಂಗ್‌’ ಎಂಬ ಜೀವನ ಚರಿತ್ರೆಯಿಂದ ಆರಿಸಿಕೊಳ್ಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...