Homeರಾಷ್ಟ್ರೀಯವಿವಾದದ ನಡುವೆ ತಾಜ್‌ಮಹಲ್ ಭೂಗತ ಕೋಣೆಯ ಚಿತ್ರಗಳನ್ನು ಬಿಡುಗಡೆ ಮಾಡಿದ್ದ ಪುರಾತತ್ವ ಇಲಾಖೆ

ವಿವಾದದ ನಡುವೆ ತಾಜ್‌ಮಹಲ್ ಭೂಗತ ಕೋಣೆಯ ಚಿತ್ರಗಳನ್ನು ಬಿಡುಗಡೆ ಮಾಡಿದ್ದ ಪುರಾತತ್ವ ಇಲಾಖೆ

- Advertisement -
- Advertisement -

ವಿಶ್ವವಿಖ್ಯಾತ ತಾಜ್‌ಮಹಲ್‌ನ 22 ಬೀಗ ಹಾಕಿದ ಕೊಠಡಿಗಳ ಒಳಗೆ ಹಿಂದೂ ವಿಗ್ರಹಗಳು ಅಥವಾ ಧರ್ಮಗ್ರಂಥಗಳ ಇದೆ ಎಂದು ಆರೋಪಿಸಿ ಅದನ್ನು ಪರಿಶೀಲಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯ ಮೂರು ದಿನಗಳ ಮೊದಲು, ಮೇ 9 ರಂದು ತಾಜ್ ಮಹಲ್‌ನಲ್ಲಿನ ಭೂಗತ ಕೊಠಡಿಯಲ್ಲಿನ ಚಿತ್ರಗಳನ್ನು ಭಾರತೀಯ ಪುರಾತತ್ವ ಇಲಾಖೆ ಬಿಡುಗಡೆ ಮಾಡಿತ್ತು.

ಮೇ 12 ರಂದು, ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಅಯೋಧ್ಯೆಯಲ್ಲಿನ ಬಿಜೆಪಿಯ ಮಾಧ್ಯಮ ಘಟಕದ ಉಸ್ತುವಾರಿ ರಜನೀಶ್ ಸಿಂಗ್ ಸಲ್ಲಿಸಿದ ಮನವಿಯನ್ನು ವಜಾಗೊಳಿಸಿತ್ತು. ತಾಜ್ ಮಹಲ್ ಶಿವನ ಹಳೆಯ ದೇವಾಲಯವಾಗಿದ್ದು, ಅದನ್ನು ತೇಜೋ ಮಹಾಲಯ ಎಂದು ಕರೆಯಲಾಗುತ್ತದೆ ಎಂದು ಸಿಂಗ್ ವಾದಿಸಿದ್ದರು. ಸ್ಮಾರಕದ “ನೈಜ ಇತಿಹಾಸ”ವನ್ನು ಅಧ್ಯಯನ ಮಾಡಲು ಕೊಠಡಿಗಳನ್ನು ತೆರೆದು ಸತ್ಯಶೋಧನಾ ಸಮಿತಿಯನ್ನು ರಚಿಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣೆಗೆ ನಿರ್ದೇಶನಗಳನ್ನು ನೀಡಬೇಕು ಎಂದು ಅವರು ಕೋರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ, ನ್ಯಾಯಾಲಯವು ರಜನೀಶ್ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡು, ಅಂತಹ ವಿಷಯಗಳನ್ನು ಇತಿಹಾಸಕಾರರು, ಶಿಕ್ಷಣ ತಜ್ಞರು ಮತ್ತು ವಿದ್ವಾಂಸರು ಚರ್ಚಿಸಬೇಕು ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತ್ತು.

ಇದನ್ನೂ ಓದಿ: ತಾಜ್‌ಮಹಲ್‌ನ 22 ಬಾಗಿಲುಗಳನ್ನು ತೆರೆಯಬೇಕೆಂಬ ಬಿಜೆಪಿ ಮುಖಂಡನ ಅರ್ಜಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

ಆದರೆ ಈ ವಿಚಾರಣೆಗೂ ಮೊದಲು ಮೇ 9 ರಂದು ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಟ್ವಿಟರ್‌ನಲ್ಲಿ ಜನವರಿ 2022 ರ ತನ್ನ ವರದಿಯನ್ನು ಹಂಚಿಕೊಂಡಿದೆ. ಕೊಠಡಿಗಳ ಬಗ್ಗೆ ತಪ್ಪು ಮಾಹಿತಿ ಹರಡುವುದನ್ನು ತಡೆಯಲು ಸಂಸ್ಥೆಯು ಈ ಚಿತ್ರಗಳನ್ನು ಟ್ವೀಟ್ ಮಾಡಿದೆ ಎಂದು ಪ್ರವಾಸೋದ್ಯಮ ಉದ್ಯಮದ ಅಧಿಕಾರಿಗಳು ಇಂಡಿಯಾ ಟುಡೇಗೆ ತಿಳಿಸಿದ್ದಾರೆ.

“ನದಿ ಭಾಗದ ಭೂಗತ ಕೋಣೆಗಳ ನಿರ್ವಹಣೆಯ ಕೆಲಸವನ್ನು ಮಾಡಲಾಗಿದೆ” ಎಂದು ಈ ವರದಿಯು ಎರಡು ಚಿತ್ರಗಳನ್ನು ಪ್ರಕಟಿಸಿದೆ. ಜೊತೆಗೆ ನಿರ್ವಹಣೆಗೆ ಮೊದಲು ಮತ್ತು ನಂತರ ಹೇಗಿದೆ ಎಂದು ಕೂಡಾ ಅದು ಚಿತ್ರದಲ್ಲಿ ಪ್ರಕಟಿಸಿದೆ.

“ಹಾಳಾಗಿರುವ ಸುಣ್ಣದ ಮೇಲ್ಪದರವನ್ನು ತೆಗೆದು, ಅದಕ್ಕೆ ಮತ್ತೆ ಸಾಂಪ್ರದಾಯಿಕ ಸುಣ್ಣದ ಸಂಸ್ಕರಣೆಯನ್ನು ಹಾಕುವ ಮೂಲಕ ಸುಣ್ಣವನ್ನು ಬಳಿಯಲಾಯಿತು” ಎಂದು ಅದು ಹೇಳಿದೆ.

ತಾಜ್ ಮಹಲ್‌ನ ಭೂಗತ ಕೊಠಡಿಗಳಲ್ಲಿ ಕೈಗೊಂಡಿರುವ ನಿರ್ವಹಣಾ ಕಾರ್ಯಗಳ ಚಿತ್ರಗಳು.(ನಿರ್ವಹಣೆಗೂ ಮೊದಲು ಮತ್ತು ನಂತರ)

ಮೊಘಲ್ ರಾಜ ಷಹಜಹಾನ್ 1632 ರಲ್ಲಿ ತಾಜ್ ಮಹಲ್ ನಿರ್ಮಾಣವನ್ನು ನಿಯೋಜಿಸಿದನು. ಯೋಜನೆಯು 1653 ರಲ್ಲಿ ಪೂರ್ಣಗೊಂಡಿತು. ಆದರೆ ಕೆಲವು ಹಿಂದುತ್ವದ ಹುಸಿ ಇತಿಹಾಸಕಾರರು ಸ್ಮಾರಕವು ಷಹಜಹಾನ್‌‌ಗಿಂತ ಮೊದಲೇ ಅದರಲ್ಲೂ ಭಾರತದಲ್ಲಿ ಮುಸ್ಲಿಂ ಆಳ್ವಿಕೆಯು ಪ್ರಾರಂಭವಾಗುವ ಮೊದಲೇ ನಿರ್ಮಿಸಲಾಗಿತ್ತು ಎಂದು ಸುಳ್ಳೇ ಸುಳ್ಳು ಪ್ರತಿಪಾದಿಸುತ್ತಿದ್ದಾರೆ.

ಇದನ್ನೂ ಓದಿ: ತಾಜ್‌ಮಹಲ್ ಆವರಣದಲ್ಲಿ ಶಿವಪೂಜೆ: ಹಿಂದೂ ಮಹಾಸಭಾ ಕಾರ್ಯಕರ್ತರ ಬಂಧನ

ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾದ ಆಗ್ರಾ ಸರ್ಕಲ್ ಘಟಕದ ಅಧಿಕಾರಿಯೊಬ್ಬರು, “ವರದಿಯಲ್ಲಿ ಪ್ರಕಟವಾದ ಚಿತ್ರಗಳು ಕಳೆದ ಡಿಸೆಂಬರ್‌ ತಿಂಗಳದ್ದಾಗಿದೆ. ಅದರ ನಂತರವೂ ಅಲ್ಲಿ ಕೆಲಸಗಳು ನಡೆದಿದೆ. ಮತ್ತು ಅದರ ಚಿತ್ರಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಹೇಳಿದ್ದಾರೆ. ಅದರೆ ಸಂಸ್ಥೆಯು ತನ್ನ ಮುಂದಿನ ವರದಿಯಲ್ಲಿ ಅದನ್ನು ಪ್ರಕಟಿಸುತ್ತಾರೆಯೆ ಎಂದು ಸಂಪಾದಕೀಯ ನಿರ್ಧಾರಿಸುತ್ತದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....