Homeರಾಷ್ಟ್ರೀಯವಿವಾದದ ನಡುವೆ ತಾಜ್‌ಮಹಲ್ ಭೂಗತ ಕೋಣೆಯ ಚಿತ್ರಗಳನ್ನು ಬಿಡುಗಡೆ ಮಾಡಿದ್ದ ಪುರಾತತ್ವ ಇಲಾಖೆ

ವಿವಾದದ ನಡುವೆ ತಾಜ್‌ಮಹಲ್ ಭೂಗತ ಕೋಣೆಯ ಚಿತ್ರಗಳನ್ನು ಬಿಡುಗಡೆ ಮಾಡಿದ್ದ ಪುರಾತತ್ವ ಇಲಾಖೆ

- Advertisement -
- Advertisement -

ವಿಶ್ವವಿಖ್ಯಾತ ತಾಜ್‌ಮಹಲ್‌ನ 22 ಬೀಗ ಹಾಕಿದ ಕೊಠಡಿಗಳ ಒಳಗೆ ಹಿಂದೂ ವಿಗ್ರಹಗಳು ಅಥವಾ ಧರ್ಮಗ್ರಂಥಗಳ ಇದೆ ಎಂದು ಆರೋಪಿಸಿ ಅದನ್ನು ಪರಿಶೀಲಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯ ಮೂರು ದಿನಗಳ ಮೊದಲು, ಮೇ 9 ರಂದು ತಾಜ್ ಮಹಲ್‌ನಲ್ಲಿನ ಭೂಗತ ಕೊಠಡಿಯಲ್ಲಿನ ಚಿತ್ರಗಳನ್ನು ಭಾರತೀಯ ಪುರಾತತ್ವ ಇಲಾಖೆ ಬಿಡುಗಡೆ ಮಾಡಿತ್ತು.

ಮೇ 12 ರಂದು, ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಅಯೋಧ್ಯೆಯಲ್ಲಿನ ಬಿಜೆಪಿಯ ಮಾಧ್ಯಮ ಘಟಕದ ಉಸ್ತುವಾರಿ ರಜನೀಶ್ ಸಿಂಗ್ ಸಲ್ಲಿಸಿದ ಮನವಿಯನ್ನು ವಜಾಗೊಳಿಸಿತ್ತು. ತಾಜ್ ಮಹಲ್ ಶಿವನ ಹಳೆಯ ದೇವಾಲಯವಾಗಿದ್ದು, ಅದನ್ನು ತೇಜೋ ಮಹಾಲಯ ಎಂದು ಕರೆಯಲಾಗುತ್ತದೆ ಎಂದು ಸಿಂಗ್ ವಾದಿಸಿದ್ದರು. ಸ್ಮಾರಕದ “ನೈಜ ಇತಿಹಾಸ”ವನ್ನು ಅಧ್ಯಯನ ಮಾಡಲು ಕೊಠಡಿಗಳನ್ನು ತೆರೆದು ಸತ್ಯಶೋಧನಾ ಸಮಿತಿಯನ್ನು ರಚಿಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣೆಗೆ ನಿರ್ದೇಶನಗಳನ್ನು ನೀಡಬೇಕು ಎಂದು ಅವರು ಕೋರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ, ನ್ಯಾಯಾಲಯವು ರಜನೀಶ್ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡು, ಅಂತಹ ವಿಷಯಗಳನ್ನು ಇತಿಹಾಸಕಾರರು, ಶಿಕ್ಷಣ ತಜ್ಞರು ಮತ್ತು ವಿದ್ವಾಂಸರು ಚರ್ಚಿಸಬೇಕು ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತ್ತು.

ಇದನ್ನೂ ಓದಿ: ತಾಜ್‌ಮಹಲ್‌ನ 22 ಬಾಗಿಲುಗಳನ್ನು ತೆರೆಯಬೇಕೆಂಬ ಬಿಜೆಪಿ ಮುಖಂಡನ ಅರ್ಜಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

ಆದರೆ ಈ ವಿಚಾರಣೆಗೂ ಮೊದಲು ಮೇ 9 ರಂದು ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಟ್ವಿಟರ್‌ನಲ್ಲಿ ಜನವರಿ 2022 ರ ತನ್ನ ವರದಿಯನ್ನು ಹಂಚಿಕೊಂಡಿದೆ. ಕೊಠಡಿಗಳ ಬಗ್ಗೆ ತಪ್ಪು ಮಾಹಿತಿ ಹರಡುವುದನ್ನು ತಡೆಯಲು ಸಂಸ್ಥೆಯು ಈ ಚಿತ್ರಗಳನ್ನು ಟ್ವೀಟ್ ಮಾಡಿದೆ ಎಂದು ಪ್ರವಾಸೋದ್ಯಮ ಉದ್ಯಮದ ಅಧಿಕಾರಿಗಳು ಇಂಡಿಯಾ ಟುಡೇಗೆ ತಿಳಿಸಿದ್ದಾರೆ.

“ನದಿ ಭಾಗದ ಭೂಗತ ಕೋಣೆಗಳ ನಿರ್ವಹಣೆಯ ಕೆಲಸವನ್ನು ಮಾಡಲಾಗಿದೆ” ಎಂದು ಈ ವರದಿಯು ಎರಡು ಚಿತ್ರಗಳನ್ನು ಪ್ರಕಟಿಸಿದೆ. ಜೊತೆಗೆ ನಿರ್ವಹಣೆಗೆ ಮೊದಲು ಮತ್ತು ನಂತರ ಹೇಗಿದೆ ಎಂದು ಕೂಡಾ ಅದು ಚಿತ್ರದಲ್ಲಿ ಪ್ರಕಟಿಸಿದೆ.

“ಹಾಳಾಗಿರುವ ಸುಣ್ಣದ ಮೇಲ್ಪದರವನ್ನು ತೆಗೆದು, ಅದಕ್ಕೆ ಮತ್ತೆ ಸಾಂಪ್ರದಾಯಿಕ ಸುಣ್ಣದ ಸಂಸ್ಕರಣೆಯನ್ನು ಹಾಕುವ ಮೂಲಕ ಸುಣ್ಣವನ್ನು ಬಳಿಯಲಾಯಿತು” ಎಂದು ಅದು ಹೇಳಿದೆ.

ತಾಜ್ ಮಹಲ್‌ನ ಭೂಗತ ಕೊಠಡಿಗಳಲ್ಲಿ ಕೈಗೊಂಡಿರುವ ನಿರ್ವಹಣಾ ಕಾರ್ಯಗಳ ಚಿತ್ರಗಳು.(ನಿರ್ವಹಣೆಗೂ ಮೊದಲು ಮತ್ತು ನಂತರ)

ಮೊಘಲ್ ರಾಜ ಷಹಜಹಾನ್ 1632 ರಲ್ಲಿ ತಾಜ್ ಮಹಲ್ ನಿರ್ಮಾಣವನ್ನು ನಿಯೋಜಿಸಿದನು. ಯೋಜನೆಯು 1653 ರಲ್ಲಿ ಪೂರ್ಣಗೊಂಡಿತು. ಆದರೆ ಕೆಲವು ಹಿಂದುತ್ವದ ಹುಸಿ ಇತಿಹಾಸಕಾರರು ಸ್ಮಾರಕವು ಷಹಜಹಾನ್‌‌ಗಿಂತ ಮೊದಲೇ ಅದರಲ್ಲೂ ಭಾರತದಲ್ಲಿ ಮುಸ್ಲಿಂ ಆಳ್ವಿಕೆಯು ಪ್ರಾರಂಭವಾಗುವ ಮೊದಲೇ ನಿರ್ಮಿಸಲಾಗಿತ್ತು ಎಂದು ಸುಳ್ಳೇ ಸುಳ್ಳು ಪ್ರತಿಪಾದಿಸುತ್ತಿದ್ದಾರೆ.

ಇದನ್ನೂ ಓದಿ: ತಾಜ್‌ಮಹಲ್ ಆವರಣದಲ್ಲಿ ಶಿವಪೂಜೆ: ಹಿಂದೂ ಮಹಾಸಭಾ ಕಾರ್ಯಕರ್ತರ ಬಂಧನ

ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾದ ಆಗ್ರಾ ಸರ್ಕಲ್ ಘಟಕದ ಅಧಿಕಾರಿಯೊಬ್ಬರು, “ವರದಿಯಲ್ಲಿ ಪ್ರಕಟವಾದ ಚಿತ್ರಗಳು ಕಳೆದ ಡಿಸೆಂಬರ್‌ ತಿಂಗಳದ್ದಾಗಿದೆ. ಅದರ ನಂತರವೂ ಅಲ್ಲಿ ಕೆಲಸಗಳು ನಡೆದಿದೆ. ಮತ್ತು ಅದರ ಚಿತ್ರಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಹೇಳಿದ್ದಾರೆ. ಅದರೆ ಸಂಸ್ಥೆಯು ತನ್ನ ಮುಂದಿನ ವರದಿಯಲ್ಲಿ ಅದನ್ನು ಪ್ರಕಟಿಸುತ್ತಾರೆಯೆ ಎಂದು ಸಂಪಾದಕೀಯ ನಿರ್ಧಾರಿಸುತ್ತದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...