Homeರಾಷ್ಟ್ರೀಯವಿವಾದದ ನಡುವೆ ತಾಜ್‌ಮಹಲ್ ಭೂಗತ ಕೋಣೆಯ ಚಿತ್ರಗಳನ್ನು ಬಿಡುಗಡೆ ಮಾಡಿದ್ದ ಪುರಾತತ್ವ ಇಲಾಖೆ

ವಿವಾದದ ನಡುವೆ ತಾಜ್‌ಮಹಲ್ ಭೂಗತ ಕೋಣೆಯ ಚಿತ್ರಗಳನ್ನು ಬಿಡುಗಡೆ ಮಾಡಿದ್ದ ಪುರಾತತ್ವ ಇಲಾಖೆ

- Advertisement -
- Advertisement -

ವಿಶ್ವವಿಖ್ಯಾತ ತಾಜ್‌ಮಹಲ್‌ನ 22 ಬೀಗ ಹಾಕಿದ ಕೊಠಡಿಗಳ ಒಳಗೆ ಹಿಂದೂ ವಿಗ್ರಹಗಳು ಅಥವಾ ಧರ್ಮಗ್ರಂಥಗಳ ಇದೆ ಎಂದು ಆರೋಪಿಸಿ ಅದನ್ನು ಪರಿಶೀಲಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯ ಮೂರು ದಿನಗಳ ಮೊದಲು, ಮೇ 9 ರಂದು ತಾಜ್ ಮಹಲ್‌ನಲ್ಲಿನ ಭೂಗತ ಕೊಠಡಿಯಲ್ಲಿನ ಚಿತ್ರಗಳನ್ನು ಭಾರತೀಯ ಪುರಾತತ್ವ ಇಲಾಖೆ ಬಿಡುಗಡೆ ಮಾಡಿತ್ತು.

ಮೇ 12 ರಂದು, ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಅಯೋಧ್ಯೆಯಲ್ಲಿನ ಬಿಜೆಪಿಯ ಮಾಧ್ಯಮ ಘಟಕದ ಉಸ್ತುವಾರಿ ರಜನೀಶ್ ಸಿಂಗ್ ಸಲ್ಲಿಸಿದ ಮನವಿಯನ್ನು ವಜಾಗೊಳಿಸಿತ್ತು. ತಾಜ್ ಮಹಲ್ ಶಿವನ ಹಳೆಯ ದೇವಾಲಯವಾಗಿದ್ದು, ಅದನ್ನು ತೇಜೋ ಮಹಾಲಯ ಎಂದು ಕರೆಯಲಾಗುತ್ತದೆ ಎಂದು ಸಿಂಗ್ ವಾದಿಸಿದ್ದರು. ಸ್ಮಾರಕದ “ನೈಜ ಇತಿಹಾಸ”ವನ್ನು ಅಧ್ಯಯನ ಮಾಡಲು ಕೊಠಡಿಗಳನ್ನು ತೆರೆದು ಸತ್ಯಶೋಧನಾ ಸಮಿತಿಯನ್ನು ರಚಿಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣೆಗೆ ನಿರ್ದೇಶನಗಳನ್ನು ನೀಡಬೇಕು ಎಂದು ಅವರು ಕೋರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ, ನ್ಯಾಯಾಲಯವು ರಜನೀಶ್ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡು, ಅಂತಹ ವಿಷಯಗಳನ್ನು ಇತಿಹಾಸಕಾರರು, ಶಿಕ್ಷಣ ತಜ್ಞರು ಮತ್ತು ವಿದ್ವಾಂಸರು ಚರ್ಚಿಸಬೇಕು ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತ್ತು.

ಇದನ್ನೂ ಓದಿ: ತಾಜ್‌ಮಹಲ್‌ನ 22 ಬಾಗಿಲುಗಳನ್ನು ತೆರೆಯಬೇಕೆಂಬ ಬಿಜೆಪಿ ಮುಖಂಡನ ಅರ್ಜಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

ಆದರೆ ಈ ವಿಚಾರಣೆಗೂ ಮೊದಲು ಮೇ 9 ರಂದು ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಟ್ವಿಟರ್‌ನಲ್ಲಿ ಜನವರಿ 2022 ರ ತನ್ನ ವರದಿಯನ್ನು ಹಂಚಿಕೊಂಡಿದೆ. ಕೊಠಡಿಗಳ ಬಗ್ಗೆ ತಪ್ಪು ಮಾಹಿತಿ ಹರಡುವುದನ್ನು ತಡೆಯಲು ಸಂಸ್ಥೆಯು ಈ ಚಿತ್ರಗಳನ್ನು ಟ್ವೀಟ್ ಮಾಡಿದೆ ಎಂದು ಪ್ರವಾಸೋದ್ಯಮ ಉದ್ಯಮದ ಅಧಿಕಾರಿಗಳು ಇಂಡಿಯಾ ಟುಡೇಗೆ ತಿಳಿಸಿದ್ದಾರೆ.

“ನದಿ ಭಾಗದ ಭೂಗತ ಕೋಣೆಗಳ ನಿರ್ವಹಣೆಯ ಕೆಲಸವನ್ನು ಮಾಡಲಾಗಿದೆ” ಎಂದು ಈ ವರದಿಯು ಎರಡು ಚಿತ್ರಗಳನ್ನು ಪ್ರಕಟಿಸಿದೆ. ಜೊತೆಗೆ ನಿರ್ವಹಣೆಗೆ ಮೊದಲು ಮತ್ತು ನಂತರ ಹೇಗಿದೆ ಎಂದು ಕೂಡಾ ಅದು ಚಿತ್ರದಲ್ಲಿ ಪ್ರಕಟಿಸಿದೆ.

“ಹಾಳಾಗಿರುವ ಸುಣ್ಣದ ಮೇಲ್ಪದರವನ್ನು ತೆಗೆದು, ಅದಕ್ಕೆ ಮತ್ತೆ ಸಾಂಪ್ರದಾಯಿಕ ಸುಣ್ಣದ ಸಂಸ್ಕರಣೆಯನ್ನು ಹಾಕುವ ಮೂಲಕ ಸುಣ್ಣವನ್ನು ಬಳಿಯಲಾಯಿತು” ಎಂದು ಅದು ಹೇಳಿದೆ.

ತಾಜ್ ಮಹಲ್‌ನ ಭೂಗತ ಕೊಠಡಿಗಳಲ್ಲಿ ಕೈಗೊಂಡಿರುವ ನಿರ್ವಹಣಾ ಕಾರ್ಯಗಳ ಚಿತ್ರಗಳು.(ನಿರ್ವಹಣೆಗೂ ಮೊದಲು ಮತ್ತು ನಂತರ)

ಮೊಘಲ್ ರಾಜ ಷಹಜಹಾನ್ 1632 ರಲ್ಲಿ ತಾಜ್ ಮಹಲ್ ನಿರ್ಮಾಣವನ್ನು ನಿಯೋಜಿಸಿದನು. ಯೋಜನೆಯು 1653 ರಲ್ಲಿ ಪೂರ್ಣಗೊಂಡಿತು. ಆದರೆ ಕೆಲವು ಹಿಂದುತ್ವದ ಹುಸಿ ಇತಿಹಾಸಕಾರರು ಸ್ಮಾರಕವು ಷಹಜಹಾನ್‌‌ಗಿಂತ ಮೊದಲೇ ಅದರಲ್ಲೂ ಭಾರತದಲ್ಲಿ ಮುಸ್ಲಿಂ ಆಳ್ವಿಕೆಯು ಪ್ರಾರಂಭವಾಗುವ ಮೊದಲೇ ನಿರ್ಮಿಸಲಾಗಿತ್ತು ಎಂದು ಸುಳ್ಳೇ ಸುಳ್ಳು ಪ್ರತಿಪಾದಿಸುತ್ತಿದ್ದಾರೆ.

ಇದನ್ನೂ ಓದಿ: ತಾಜ್‌ಮಹಲ್ ಆವರಣದಲ್ಲಿ ಶಿವಪೂಜೆ: ಹಿಂದೂ ಮಹಾಸಭಾ ಕಾರ್ಯಕರ್ತರ ಬಂಧನ

ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾದ ಆಗ್ರಾ ಸರ್ಕಲ್ ಘಟಕದ ಅಧಿಕಾರಿಯೊಬ್ಬರು, “ವರದಿಯಲ್ಲಿ ಪ್ರಕಟವಾದ ಚಿತ್ರಗಳು ಕಳೆದ ಡಿಸೆಂಬರ್‌ ತಿಂಗಳದ್ದಾಗಿದೆ. ಅದರ ನಂತರವೂ ಅಲ್ಲಿ ಕೆಲಸಗಳು ನಡೆದಿದೆ. ಮತ್ತು ಅದರ ಚಿತ್ರಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಹೇಳಿದ್ದಾರೆ. ಅದರೆ ಸಂಸ್ಥೆಯು ತನ್ನ ಮುಂದಿನ ವರದಿಯಲ್ಲಿ ಅದನ್ನು ಪ್ರಕಟಿಸುತ್ತಾರೆಯೆ ಎಂದು ಸಂಪಾದಕೀಯ ನಿರ್ಧಾರಿಸುತ್ತದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...