Homeಕರ್ನಾಟಕಭಾಷಾಪಠ್ಯದಲ್ಲಿ ಸಾಮಾಜಿಕ ನ್ಯಾಯ, ಲಿಂಗಸಮಾನತೆ ತುರುಕಬಾರದು: ರೋಹಿತ್‌ ಚಕ್ರತೀರ್ಥ ಸಮಿತಿ

ಭಾಷಾಪಠ್ಯದಲ್ಲಿ ಸಾಮಾಜಿಕ ನ್ಯಾಯ, ಲಿಂಗಸಮಾನತೆ ತುರುಕಬಾರದು: ರೋಹಿತ್‌ ಚಕ್ರತೀರ್ಥ ಸಮಿತಿ

- Advertisement -
- Advertisement -

“ಭಾಷಾ ಪಠ್ಯದಲ್ಲಿ ಸಾಮಾಜಿಕ ನ್ಯಾಯ ಹಾಗೂ ಲಿಂಗ ಸಮಾನತೆಯ ವಿಷಯಗಳನ್ನು ತುರುಕಬಾರದು” ಎಂಬ ಅಭಿಪ್ರಾಯವನ್ನು ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿ ತಾಳಿರುವುದು ಪರಿಷ್ಕೃತ ಪಠ್ಯ ಪುಸ್ತಕದ ಟಿಪ್ಪಣಿಗಳಿಂದ ತಿಳಿದುಬಂದಿದೆ.

ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರಚಿತವಾದ ಪಠ್ಯಪುಸ್ತಕಗಳ ಪರಿಶೀಲನೆಯನ್ನು ಬಲಪಂಥೀಯ ವಿಚಾರಗಳ ಪ್ರತಿಪಾದಕ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿಗೆ ವಹಿಸಲಾಗಿತ್ತು. ಈಗ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಪಠ್ಯದಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2022-23ನೇ ಸಾಲಿನ ಹತ್ತನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದಲ್ಲಿ ಆರ್‌ಎಸ್‌ಎಸ್‌ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್‌ ಭಾಷಣ, ಬಲಪಂಥೀಯ ಲೇಖಕ ಶತಾವಧಾನಿ ಗಣೇಶ್‌ ಲೇಖನ, ಬನ್ನಂಜೆ ಗೋವಿಂದಚಾರ್ಯರ ಬರಹಗಳನ್ನು ಸೇರಿಸಲಾಗಿದೆ. ಪಿ.ಲಂಕೇಶ್‌, ಸಾ.ರಾ.ಅಬುಬೂಕರ್‌, ಡಾ.ಜಿ.ರಾಮಕೃಷ್ಣ ಅವರ ಬರಹಗಳನ್ನು ಕೈಬಿಡಲಾಗಿದೆ. ಅದರಲ್ಲೂ ‘ಭಗತ್‌ಸಿಂಗ್‌’ ಕುರಿತ ಪಠ್ಯವನ್ನು ಕೈಬಿಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡದ ಸರ್ಕಾರಿ ಶಾಲೆಯಲ್ಲಿ ‘ಗಣಹೋಮ’: ಶಿಕ್ಷಣ ಇಲಾಖೆಯ ನಿರ್ದೇಶನ ಉಲ್ಲಂಘನೆ?

ಭಗತ್‌ಸಿಂಗ್ ಪಠ್ಯ ಕೈಬಿಟ್ಟಿಲ್ಲ ಎಂದು ಸರ್ಕಾರ ಹೇಳುತ್ತಿದೆಯಾದರೂ ಈಗ ಲಭ್ಯವಾಗಿರುವ ಪರಿಷ್ಕೃತ ಪಠ್ಯದ ಪಿಡಿಎಫ್‌ನಲ್ಲಿ ಭಗತ್‌ಸಿಂಗ್ ಪಾಠವನ್ನು ತೆಗೆದಿರುವುದು ಕಂಡು ಬರುತ್ತಿದೆ. ಇದೆಲ್ಲದರ ಜೊತೆಗೆ ಪಠ್ಯ ಪುನರ್‌‌ ಪರಿಶೀಲನೆಯ ಕುರಿತು ಮಾಡಿರುವ ಟಿಪ್ಪಣಿಯೂ ಸಮಿತಿಯ ಧೋರಣೆಯನ್ನು ಎತ್ತಿ ತೋರಿಸುತ್ತದೆ.

ಪುನರ್‌ ಪರಿಶೀಲನೆ ಕುರಿತು ಪುಠ್ಯಪುಸ್ತಕಗಳ ಪರಿಶೀಲನಾ ಸಮಿತಿಯ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ, ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕ ಎಂ.ಪಿ.ಮಾದೇಗೌಡ ಅವರು ಟಿಪ್ಪಣಿ ಬರೆದಿದ್ದು, “ಕನ್ನಡ ಸಾಹಿತ್ಯದಲ್ಲಿ ಹಾಸುಹೊಕ್ಕಾಗಿರುವ ಸಾಮಾಜಿಕ ನ್ಯಾಯ, ಲಿಂಗ ಸಮಾನತೆ” ಕುರಿತು ಕ್ಷುಲ್ಲಕವಾಗಿ ಮಾತನಾಡಿರುವುದು ಕಂಡುಬರುತ್ತದೆ.

”2014ರಲ್ಲಿ ಪರಿಷ್ಕರಣೆಗೆ ಒಳಗಾಗಿದ್ದ ಭಾಷಾ ಪಠ್ಯಗಳಲ್ಲಿ ನಮಗೆ ಅನೇಕ ಸಮಸ್ಯೆಗಳು ಕಂಡುಬಂದವು. ಅವುಗಳನ್ನು ಸರಿಪಡಿಸಲು ಪಠ್ಯಪುಸ್ತಕಗಳ ಪರಿಶೀಲನೆ, ಪರಿಷ್ಕರಣೆಗಳಲ್ಲಿ ನಾವು ನಮ್ಮದೇ ಆದ ಚೌಕಟ್ಟನ್ನು ನಿರ್ಮಿಸಿಕೊಂಡೆವು. ಭಾಷಾಪಠ್ಯವು ಇರುವುದು ವಿದ್ಯಾರ್ಥಿಯಲ್ಲಿ ಅಭಿವ್ಯಕ್ತಿಯ ಸಾಮರ್ಥ್ಯವನ್ನು ಉತ್ತಮಪಡಿಸುವುದಕ್ಕೆ, ಭಾಷಾಪಠ್ಯಗಳನ್ನು ಅಧ್ಯಯನ ಮಾಡಿದ ವಿದ್ಯಾರ್ಥಿಯಲ್ಲಿ ಭಾಷೆಯ ಬಗ್ಗೆ ಅಭಿಮಾನ ಮೂಡಬೇಕು; ಆತನ ಭಾಷಾಪ್ರೌಢಿಮೆ ಗಣನಾತ್ಮಕವಾಗಿ ಹೆಚ್ಚಬೇಕು. ಓದುವ, ಆಲಿಸುವ, ಮಾತಾಡುವ ಮತ್ತು ಬರೆಯುವ ಸಾಮರ್ಥ್ಯಗಳು ಸುಧಾರಿಸಬೇಕು. ಸ್ವತಂತ್ರವಾಗಿ ವಿದ್ಯಾರ್ಥಿಯು ತನ್ನ ಅಭಿಪ್ರಾಯ, ಅನಿಸಿಕೆಗಳನ್ನು ಅತ್ಯಂತ ಶಕ್ತಿಶಾಲಿಯಾಗಿ ಹೇಳುವುದಕ್ಕೆ ಸಾಧ್ಯವಾಗಬೇಕು. 2014ರಲ್ಲಿ ಪರಿಷ್ಕರಣೆಗೆ ಒಳಗಾದ ಪಠ್ಯಪುಸ್ತಕಗಳಲ್ಲಿ ಭಾಷೆಯ ಈ ಬಗೆಯ ಕಲಿಕೆಗೆ ಹಿನ್ನಡೆಯಾಗಿ ಕೇವಲ ಸಿದ್ದಾಂತಪ್ರಚಾರವೇ ಮುನ್ನೆಲೆಗೆ ಬಂದಿದ್ದುದನ್ನು ಗಮನಿಸಿದೆವು. ಆ ಪಠ್ಯಗಳ ಮರುಪರಿಷ್ಕರಣೆಯ ಹೊತ್ತಿನಲ್ಲಿ ಈ ನಿಯಮಗಳನ್ನು ಹೇರಿಕೊಂಡೆವು” ಎನ್ನುವ ಸಮಿತಿ ಆರು ಅಂಶಗಳನ್ನು ಪಟ್ಟಿ ಮಾಡಿದೆ.

ಇದನ್ನೂ ಓದಿ: ಸಾವರ್ಕರ್‌ಗೆ ಮೆಚ್ಚುಗೆ ಸೂಚಿಸಿದ ಸಿಎಂಗೆ ರಾಜ್ಯದ ಜನತೆಯಿಂದ ಇತಿಹಾಸ ಪಾಠ!

ಸಮಿತಿ ಹೇರಿಕೊಂಡ ಅಂಶಗಳು

(1) ಭಾಷಾ ಪಠ್ಯವಿರುವುದು ಅತ್ಯುತ್ತಮವಾದ ಪ್ರಾತಿನಿಧಿಕ ಪಠ್ಯವನ್ನು ಕೊಡುವುದಕ್ಕಾಗಿಯೇ ಹೊರತು ಸಾಮಾಜಿಕನ್ಯಾಯ, ಲಿಂಗಸಮಾನತೆ ಇತ್ಯಾದಿ ಅಂಶಗಳನ್ನು ತುರುಕುವುದಕ್ಕಲ್ಲ. ಹಾಗಾಗಿ ಭಾಷೆಯ ವೈವಿಧ್ಯ ಹಾಗೂ ವಿಶೇಷಗಳನ್ನು ಹೆಚ್ಚು ಕಾಣಿಸುವ ಗದ್ಯ/ಪದ್ಯ ಭಾಗಗಳನ್ನು ಆರಿಸಿಕೊಳ್ಳಬೇಕು.

(2) ಭಾಷೆಯ ಪಠ್ಯದ ಹೆಸರಿನಲ್ಲಿ ಸಿದ್ದಾಂತಪ್ರಚಾರಕ್ಕೆ ಅವಕಾಶವಾಗಬಾರದು.

(3) ಗ್ರಾಂಥಿಕ ಭಾಷೆಯಲ್ಲದೆ ಮೌಖಿಕ ಪರಂಪರೆಯ ಹಾಗೂ ಹಲವು ಪ್ರಕಾರದ ಸಾಹಿತ್ಯಗಳಿಗೆ ಅವಕಾಶ ಕೊಡಬೇಕು.

(4) ಬಳಸಿದ ಭಾಷೆ, ಭಾಷಾಸೊಗಡು, ಪ್ರತಿಪಾದಿಸಿರುವ ವಿಚಾರ, ಹೊಸ ಚಿಂತನೆಗಳನ್ನು ಹುಟ್ಟಿಸುವ ಸಾಧ್ಯತೆ, ಸಾಹಿತ್ಯ ಪ್ರಕಾರದ ವೈಶಿಷ್ಟ್ಯ ಇತ್ಯಾದಿ ಎಲ್ಲ ಬಗೆಯಲ್ಲೂ ಪಾಠಗಳ ಗುಣಮಟ್ಟ ಅತ್ಯುತ್ತಮವಾಗಿರಬೇಕು.

(5) ಕವಿ/ಲೇಖಕರ ಪುನರಾವರ್ತನೆಯನ್ನು ಕಡಿಮೆ ಮಾಡಿ ಹೊಸ ಕವಿ/ಲೇಖಕರ ಬರಹಗಳಿಗೆ ಅವಕಾಶ ಮಾಡಿಕೊಡಬೇಕು.

(6) ಭಾಷೆಯ ಸೊಬಗನ್ನು ಪರಿಚಯಿಸುವ ಭಾಗಗಳನ್ನು ಪ್ರತಿ ಅಧ್ಯಾಯದ ಜೊತೆ ಸೇರಿಸಬೇಕು.

ಈ ಹೀಗೆ ಟಿಪ್ಪಣಿ ಮಾಡಿರುವ ಸಮಿತಿಯು ತನ್ನದೇ ಮಾತುಗಳನ್ನು ಉಲ್ಲಂಘಿಸಿರುವುದು ಕಂಡು ಬರುತ್ತಿದೆ. ಉದಾಹರಣೆಗೆ ಹೆಡಗೇವಾರ್‌ ಪಾಠದಲ್ಲಿ ‘ಕೃತಿಕಾರನ ಪರಿಚಯ’ ಮಾಡಿಕೊಡುತ್ತಾ, ಆರ್‌ಎಸ್‌ಎಸ್‌ ಕುರಿತು ವೈಭವೀಕರಣ ಮಾಡಲಾಗಿದೆ.

“ಕೇಶವ ಬಲಿರಾಮ ಹೆಡಗೇವಾರರು ವಿಶ್ವದ ಅತಿದೊಡ್ಡ ಸ್ವಯಂ ಸೇವಕ ಸಂಘಟನೆಯಾದ ರಾಷ್ಟ್ರೀಯ ಸ್ವಯಂ ಸೇವಕದ ಸಂಸ್ಥಾಪಕರು” ಎಂದು ಒಂದು ಕಡೆ ಪರಿಚಯಿಸಿದರೆ, ಮತ್ತೊಂದು ಕಡೆ, “ಆರ್‌ಎಸ್‌ಎಸ್‌ ಇಂದು 60 ಲಕ್ಷ ಸದಸ್ಯರನ್ನು ಒಳಗೊಂಡಿದೆ” ಎಂದು ಬರೆಯಲಾಗಿದೆ.

ಇದನ್ನೂ ಓದಿ: ಹೆಡ್ಗೆವಾರ್‌ ಸಂಘಪರಿವಾರದವರಿಗೆ ಮಾತ್ರ ಆದರ್ಶ, ರಾಜ್ಯದ ಜನತೆ ಅಲ್ಲ: ಭಗತ್‌ ಸಿಂಗ್‌ ಪಾಠ ಕೈ ಬಿಟ್ಟ ಸರ್ಕಾರದ ವಿರುದ್ದ…

ಮತ್ತೊಂದೆಡೆ ತಮ್ಮ ಟಿಪ್ಪಣಿಯಲ್ಲಿ ಸಮಿತಿಯು, “ಇಂದಿನ ಮಕ್ಕಳೇ ಮುಂದಿನ ಜನಾಂಗವೆಂಬ ಮಾತಿದೆ. ಶಾಲೆಗಳಲ್ಲಿ ಓದುವ ಇಂದಿನ ಮಕ್ಕಳಿಗೆ ನಾವು ಎಂಥ ಪಠ್ಯಗಳನ್ನು ಬೋಧಿಸುತ್ತೇವೆಂಬುದರ ಮೇಲೆ ಸಮಾಜದ ಭವಿಷ್ಯ ನಿಂತಿದೆ. ವಿದ್ಯಾರ್ಥಿಗಳು ಓದುವ ಪಠ್ಯಗಳು ಆರೋಗ್ಯಕರ ಚಿಂತನೆಗಳನ್ನು ಒಳಗೊಂಡಿರಬೇಕು. ಸಮಾಜದ ವಿವಿಧ ವರ್ಗ-ಸಮುದಾಯಗಳಲ್ಲಿ ಪರಸ್ಪರ ಅಪನಂಬಿಕೆ, ದ್ವೇಷ, ತಾತ್ಸಾರಗಳನ್ನು ಹರಡುವಂತಿರಬಾರದು. ಅವರಲ್ಲಿ ರಾಷ್ಟ್ರೀಯತೆಯನ್ನೂ ದೇಶಪ್ರೇಮವನ್ನೂ ಉದ್ದೀಪಿಸುವಂತಿರಬೇಕು. ರಾಜ್ಯ ದೇಶಗಳಲ್ಲಿ ಆಗಿಹೋದ ಸಂಗತಿಗಳ ಬಗ್ಗೆ ನಿಖರವಾದ, ವಸ್ತುನಿಷ್ಠವಾದ ಮಾಹಿತಿ ದೊರೆಯುವಂತಿರಬೇಕು. ಅವರಿಗೆ ಸ್ಥಳೀಯ ಸಂಸ್ಕೃತಿ, ಭಾಷೆ, ಜನಪದಗಳ ಪರಿಚಯವಾಗುವಂತಿರಬೇಕು. ಒಟ್ಟಾರೆಯಾಗಿ ಪಠ್ಯಗಳು ವಿದ್ಯಾರ್ಥಿಗಳನ್ನು ಉತ್ತಮ, ಜವಾಬ್ದಾರಿಯುತ, ಪ್ರಜ್ಞಾವಂತ, ಮುಕ್ತ ಮನಸ್ಸಿನ, ಸಭ್ಯ ನಾಗರಿಕರನ್ನಾಗಿ ಮಾಡಬೇಕು. ಆ ಜವಾಬ್ದಾರಿಯನ್ನು ಗಮನದಲ್ಲಿರಿಸಿಕೊಂಡು ಪಾಠಗಳನ್ನು ಪರಿಷ್ಕರಣೆ ಮಾಡಬೇಕಾಯಿತು” ಎಂದು ಅಭಿಪ್ರಾಯ ತಾಳಲಾಗಿದೆ.

ಮುಂದುವರಿದು, “ಅತ್ಯುತ್ತಮ ಪಠ್ಯಪುಸ್ತಕ ಎಂಬುದು ಒಂದು ಆದರ್ಶಸ್ಥಿತಿ, ಅದರತ್ತ ನಡೆಯುವುದು ನಮ್ಮ ಆಶಯವೇ ಹೊರತು ನೂರಕ್ಕೆ ನೂರು ಅತ್ಯುತ್ತಮವಾದ ಪಠ್ಯಪುಸ್ತಕವನ್ನು ರಚಿಸುವುದು ಸಾಧ್ಯವಿಲ್ಲ. ಆ ವಿನಯದಿಂದಲೇ ನಾವು ಈ ಪುನರ್ ಪರಿಶೀಲನೆಯ ಕಾರ್ಯವನ್ನು ಮುಗಿಸಿ ಪಠ್ಯಗಳನ್ನು ನಿಮ್ಮ ಕೈಗಿಡುತ್ತಿದ್ದೇವೆ. ಇದು ಕೇವಲ ಮರುಪರಿಷ್ಕರಣೆಯೇ ಹೊರತು ಸಮಗ್ರ ಪುನಾರಚನೆಯಲ್ಲ. ಈಗಾಗಲೇ 2014ರಲ್ಲಿ ರಚಿತವಾಗಿದ್ದ ಪಠ್ಯಪುಸ್ತಕದ ಆಶಯ ಮತ್ತು ಸ್ವರೂಪಕ್ಕೆ ಎಲ್ಲಿಯೂ ಧಕ್ಕೆಯುಂಟುಮಾಡಿಲ್ಲ. ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಮತ್ತು ಅದನ್ನನುಸರಿಸಿ ಬಂದ ರಾಜ್ಯ ಪಠ್ಯಕ್ರಮ ಚೌಕಟ್ಟುಗಳನ್ನು ಮುಂದಿಟ್ಟುಕೊಂಡೇ ಇಡಿಯ ಮರುಪರಿಷ್ಕರಣೆಯ ಕಾರ್ಯ ನಡೆದಿದೆ. ಜೊತೆಗೆ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯಲಾಗಿದೆ. ಪರಿಷ್ಕರಣೆಯ ಕೆಲಸವನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಿರುವ ಪರಿಶೀಲನಾ ಸಮಿತಿಯ ನನ್ನ ಎಲ್ಲ ಸಹೋದ್ಯೋಗಿಗಳಿಗೆ ನಾನು ಕೃತಜ್ಞ, ಅಂತೆಯೇ ಸಮಿತಿಯ ಕೆಲಸ ಸುಗಮವಾಗಿ ನಡೆಯಲು ಸಹಕರಿಸಿದ ಪಠ್ಯಪುಸ್ತಕ ಸಂಘದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೂ ಆಭಾರಿ. ಈ ಪರಿಷ್ಕರಣೆಯು ಈಗಷ್ಟೇ ಬಂದಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯಗಳನ್ನು ಹೆಚ್ಚು ಪ್ರತಿಫಲಿಸುತ್ತ, ಮುಂದೆ ಬರಲಿರುವ ಸಮಗ್ರ ಪುನಾರಚಿತ ಪಠ್ಯಗಳಿಗೆ ಪ್ರವೇಶಿಕೆಯಾಗಲಿದೆ ಎಂಬ ಭರವಸೆ ನಮ್ಮದು” ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಸರ್ಕಾರ ಹೊರಗಿಟ್ಟಿರುವ ಕ್ರಾಂತಿಕಾರಿ ‘ಭಗತ್‌ಸಿಂಗ್‌’ ಪಾಠದಲ್ಲಿ ಇರುವುದೇನು? ಆ ಪುಟ್ಟ ಪಠ್ಯ ಇಲ್ಲಿದೆ

“ಸಾಮಾಜಿಕ ನ್ಯಾಯ, ಲಿಂಗ ಸಮಾನತೆ” ಸಂವಿಧಾನದ ಭಾಗವಲ್ಲವೇ? ಎಂಬ ಪ್ರಶ್ನೆಯನ್ನು ಸಮಿತಿ ಕೇಳಿಕೊಳ್ಳಬೇಕಾಗಿರುವುದು ಅಗತ್ಯವಾಗಿದೆ.

ಪಠ್ಯಪರಿಶೀಲನೆಯಲ್ಲಿನ ದ್ವಂದ್ವಗಳ ಕುರಿತು ಪ್ರತಿಕ್ರಿಯೆ ಪಡೆಯಲು ರೋಹಿತ್‌ ಚಕ್ರತೀರ್ಥ ಅವರನ್ನು ‘ನಾನುಗೌರಿ.ಕಾಂ’ ಪ್ರಯತ್ನಿಸಿದೆ. ಆದರೆ ಅವರು ದೂರವಾಣಿ ಕರೆಯನ್ನು ಸ್ವೀಕರಿಸಿಲ್ಲ ಎಂದು ವಿಷಾದಿಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೂರ್ಕರ ಕೈಗೆ ಅದಿಕಾರ ಕೊಟ್ಟಮೇಲೆ ಇದಕ್ಕಿಂತಲೂ ಹೆಚ್ಚಿನದನ್ನು ನಿರೀಕ್ಷಿಸುವುದು, ಬಹುಶಃ ಮೂರ್ಕತನದ ಪರಮಾವದಿ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...