Homeಕರ್ನಾಟಕತ್ರಿವರ್ಣ ಧ್ವಜ v/s ಭಗವಾಧ್ವಜ: ಹೆಡಗೇವಾರ್‌ ಮೂಲಪಠ್ಯವನ್ನೇ ತಿರುಚಿದ ಚಕ್ರತೀರ್ಥ ಸಮಿತಿ; ಇಲ್ಲಿದೆ ನೋಡಿ ಸಾಕ್ಷಿ!

ತ್ರಿವರ್ಣ ಧ್ವಜ v/s ಭಗವಾಧ್ವಜ: ಹೆಡಗೇವಾರ್‌ ಮೂಲಪಠ್ಯವನ್ನೇ ತಿರುಚಿದ ಚಕ್ರತೀರ್ಥ ಸಮಿತಿ; ಇಲ್ಲಿದೆ ನೋಡಿ ಸಾಕ್ಷಿ!

- Advertisement -
- Advertisement -

ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್‌ ಭಾಷಣವನ್ನು 2022-23ನೇ ಸಾಲಿನ ಹತ್ತನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯ ಪುಸ್ತಕದಲ್ಲಿ ಸೇರಿಸಲಾಗಿದ್ದು, ಹೆಡಗೇವಾರ್‌ ಅವರ ಮೂಲ ಪಠ್ಯವನ್ನೇ ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಶೀಲನಾ ಸಮಿತಿ ತಿರುಚಿರುವುದು ಪಠ್ಯದ ಹಾಳೆ ಹಾಗೂ ಮುದ್ರಿತ ಹಳೆಯ ಕೃತಿಗಳಿಂದ ತಿಳಿದುಬಂದಿದೆ.

‘ನಿಜವಾದ ಆದರ್ಶ ಪುರುಷ ಯಾರಾಗಬೇಕು?’ ಎಂಬ ಭಾಷಣವನ್ನು ಪಠ್ಯವಾಗಿ ಇಡಲಾಗಿದ್ದು, ಹೆಡಗೇವಾರ್‌ ಅವರು ಹೇಳಿರುವ ವಿಚಾರಗಳನ್ನು ತಿರುಚಿ ಪಠ್ಯದಲ್ಲಿ ಅಳವಡಿಸಲಾಗಿದೆ. “ತ್ರಿವರ್ಣ ಧ್ವಜವನ್ನು ಹೆಡಗೇವಾರ್‌ ಒಪ್ಪಿರಲಿಲ್ಲ. ಭಗವಾಧ್ವಜವೇ ಶ್ರೇಷ್ಠ” ಎಂದು ಹೆಡಗೇವಾರ್‌ ಪ್ರತಿಪಾದಿಸಿದ್ದನ್ನು ಆರ್‌ಎಸ್‌ಎಸ್‌ ಮೂಲದವರೇ ಬರೆದ ಜೀವನಚರಿತ್ರೆಗಳಿಂದ ಸಾಬೀತಾಗುತ್ತದೆ. ಜೊತೆಗೆ ಹೆಡಗೇವಾರ್‌ ತಮ್ಮ ಭಾಷಣದಲ್ಲೂ ‘ಭಗವಾಧ್ವಜ’ದ ಪ್ರಸ್ತಾಪವನ್ನೇ ಮಾಡುತ್ತಾರೆ. ಆದರೆ ಚಕ್ರತೀರ್ಥ ನೇತೃತ್ವದ ಸಮಿತಿಯು ಭಾಗವಾಧ್ವಜ ಎಂಬುದನ್ನು ಕೇವಲ ಧ್ವಜ ಎಂದಷ್ಟೇ ಪ್ರಕಟಿಸಿ, ವಿದ್ಯಾರ್ಥಿಗಳ ದಿಕ್ಕು ತಪ್ಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರ್‌ಎಸ್‌ಎಸ್‌ ಮುಖ್ಯ ಕಚೇರಿಯಲ್ಲಿ ಸುಮಾರು 2002ರವರೆಗೂ ತ್ರಿವರ್ಣಧ್ವಜ ಹಾರಿಸಿರಲಿಲ್ಲ ಎಂಬುದು ಚರ್ಚೆಯಲ್ಲಿದೆ. ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜವನ್ನು ಒಪ್ಪುವುದಿಲ್ಲ ಎಂಬುದು ಹೆಡಗೇವಾರ್‌ ಜೀವನಚರಿತ್ರೆಯಿಂದ ತಿಳಿದುಬರುತ್ತದೆ. ಆದರೆ ಪಠ್ಯಪುಸ್ತಕವನ್ನು ಪರಿಶೀಲಿಸಿ ಮರು ಪಠ್ಯ ಅಳವಡಿಸುವಾಗ ‘ಭಗವಾಧ್ವಜ’ ಎಂದಿರುವಲ್ಲಿ ‘ಭಗವಾ’ ಎಂಬ ಪದಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ ಎಂಬುದು ಸ್ಪಷ್ಟವಾಗಿದೆ.

‘ಪರಮ ಪೂಜನೀಯ ಡಾ.ಹೆಡ್ಗೇವಾರ್‌’ ಎಂಬ ಹಳೆಯ ಕೃತಿಯಲ್ಲಿ ಪ್ರಕಟವಾಗಿರುವ ಭಾಷಣದಲ್ಲಿ ‘ಭಗವಾಧ್ವಜ’ ಎಂದು ಸ್ಪಷ್ಟವಾಗಿ ಉಲ್ಲೇಖಿತವಾಗಿದೆ. ಪುಟ ಸಂಖ್ಯೆ 78ರಲ್ಲಿನ ಈ ಸಾಲುಗಳನ್ನೇ ಗಮನವಿಟ್ಟು ನೋಡಬಹುದು.

“….ಯಾವ ಧ್ವಜವನ್ನು ನೋಡಿದ ಮಾತ್ರದಿಂದ ನಮ್ಮ ರಾಷ್ಟ್ರದ ಸಮಸ್ತ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಗಳು ನಮ್ಮ ಕಣ್ಣ ಮುಂದೆ ನಿಲ್ಲುತ್ತವೆಯೋ, ಯಾವುದನ್ನು ಕಂಡಕೂಡಲೇ ಹೃದಯದ ಭಾವನೆಗಳು ಉಕ್ಕಿ ಬರುತ್ತವೆಯೋ, ಅಂತೆಯೇ ಹೃದಯದಲ್ಲಿ ಒಂದು ವಿಶಿಷ್ಟ ಸ್ಫೂರ್ತಿಯ ಸಂಚಾರವಾಗುತ್ತದೆಯೋ ಅಂತಹ ಭಗವಾಧ್ವಜವನ್ನು, ನಮ್ಮ ತತ್ವಗಳ ಪ್ರತೀಕವಾದ ಕಾರಣ, ನಾವು ನಮ್ಮ ಗುರುವೆಂದು ಭಾವಿಸುತ್ತೇವೆ. ಇದೇ ಕಾರಣದಿಂದಲೇ ಯಾವ ಒಬ್ಬ ವ್ಯಕ್ತಿಯನ್ನೂ ತನ್ನ ಗುರುವೆಂದು ಭಾವಿಸಲು ಸಂಘಕ್ಕೆ ಸರ್ವಥಾ ಇಚ್ಛೆಯಿಲ್ಲ” ಎಂದಿದೆ.

ಆದರೆ ಚಕ್ರತೀರ್ಥ ಸಮಿತಿಯ ಪರಿಶೀಲನೆಯಲ್ಲಿ ಮೂಲಪಠ್ಯವನ್ನು ಬದಲಿಸಲಾಗಿದೆ. ಕೆಲವು ಸಾಲುಗಳನ್ನು ಕೈಬಿಡಲಾಗಿದೆ. ಮೂಲ ಪಠ್ಯದಲ್ಲಿರುವ ಕೆಲವು ಸಾಲುಗಳನ್ನು ಕೈಬಿಡಲಾಗಿದ್ದು, ಅಲ್ಲಿ ‘ಸಂಘ’ (ಆರ್‌ಎಸ್‌ಎಸ್‌) ಎಂದಿರುವುದನ್ನು ಗಮನಿಸಬಹುದು.

ಇದನ್ನೂ ಓದಿರಿ: ಭಾಷಾಪಠ್ಯದಲ್ಲಿ ಸಾಮಾಜಿಕ ನ್ಯಾಯ, ಲಿಂಗಸಮಾನತೆ ತುರುಕಬಾರದು: ರೋಹಿತ್‌ ಚಕ್ರತೀರ್ಥ ಸಮಿತಿ

ಹತ್ತನೇ ತರಗತಿ ಪಠ್ಯದಲ್ಲೇನಿದೆ?

“ನಾವು ಧ್ವಜವನ್ನೇ ಗುರುವೆಂದು ಭಾವಿಸಿ, ಗುರುಪೂರ್ಣಿಮಾ ದಿನದಂದು ಅದನ್ನು ಪೂಜಿಸುತ್ತೇವೆ. ನಾವು ಯಾವ ವ್ಯಕ್ತಿಯನ್ನೂ ಪೂಜಿಸುವುದಿಲ್ಲ. ಯಾಕೆಂದರೆ ಯಾರೇ ಆಗಲೀ ಅವರು ತಮ್ಮ ಮಾರ್ಗದಲ್ಲಿ ಅಚಲರಾಗಿಯೇ ಇದ್ದಾರು ಎಂಬ ಭರವಸೆಯಾದರೂ ಏನು? ಕೇವಲ ತತ್ವವೊಂದೇ ಆ ಅಚಲ ಪದವಿಯಲ್ಲಿ ಇರಬಲ್ಲದು. ಅದನ್ನು ಧ್ವಜವೂ ಸಂಕೇತಿಸುವುದು. ಯಾವ ಧ್ವಜವನ್ನು ನೋಡಿದೊಡನೆ ನಮ್ಮ ರಾಷ್ಟ್ರದ ಸಮಸ್ತ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಗಳು ನಮ್ಮ ಕಣ್ಣಿಗೆ ಕಟ್ಟುತ್ತವೆಯೋ ಯಾವುದನ್ನು ಕಂಡಕೂಡಲೇ ಹೃದಯ ಭಾವೆನೆಗಳು ಉಕ್ಕಿ ಬರುತ್ತವೆಯೋ, ಹೃದಯದಲ್ಲಿ ಅಪೂರ್ವ ಸ್ಪೂರ್ತಿಯ ಸಂಚಾರವಾಗುತ್ತದೆಯೋ ಅಂತಹ ಧ್ವಜವನ್ನೇ ನಾವು ನಮ್ಮ ಗುರುವೆಂದು ಭಾವಿಸುತ್ತೇವೆ”.

ತ್ರಿವರ್ಣ ಧ್ವಜ v/s ಭಗವಾಧ್ವಜ

ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪನವರು ಭಗವಾಧ್ವಜವನ್ನು ರಾಷ್ಟ್ರಧ್ವಜ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ಭಗವಾಧ್ವಜ ಕುರಿತ ಒಲವನ್ನು ಮಕ್ಕಳ ಮೇಲೆ ಹೇರುವ ಹಿಡನ್‌ ಅಜೆಂಡಾವನ್ನು ಸರ್ಕಾರ ಮಾಡುತ್ತಿದೆಯೇ ಎಂಬ ಅನುಮಾನಗಳಿಗೆ ತಿರುಚಿದ ಪಠ್ಯ ಉಂಟು ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮುಂದಿನ ದಿನಗಳಲ್ಲಿ ಕೇಸರಿ ಧ್ವಜ ರಾಷ್ಟ್ರ ಧ್ವಜ ಆಗೋದು ಖಚಿತ ,ಭಾರತ ಹಿಂದೂರಾಷ್ಟ್ರ ಆಗೋದು ಖಚಿತ ,ಯಾವ ದೊಣ್ಣೆ ನಾಯಕನ ಅಪ್ಪಣೆ ಈ ವಿಚಾರದಲ್ಲಿ ಪಡೆಯುವ ,ಕೇಳುವ ಪ್ರಶ್ನೆಯೇ ಇಲ್ಲಾ ,ನಗರ ನಕ್ಸಲರಾಗಲಿ,ಗುಲಾಮರಾಗಲಿ,ಶಾಂತಿ ದೂತರಾಗಲಿ

  2. ಮನುವಾದಿಗಳ ಕುತಂತ್ರವನ್ನು ಬಯಲುಗೊಳಿಸಿದ ನಿಮಗೆ ಧನ್ಯವಾದಗಳು. ಮನುವಾದಿಗಳು ತಿರುಚುವುದರಲ್ಲಿ ನಿಸ್ಸೀಮರು.

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...