Homeಕರ್ನಾಟಕತ್ರಿವರ್ಣ ಧ್ವಜ v/s ಭಗವಾಧ್ವಜ: ಹೆಡಗೇವಾರ್‌ ಮೂಲಪಠ್ಯವನ್ನೇ ತಿರುಚಿದ ಚಕ್ರತೀರ್ಥ ಸಮಿತಿ; ಇಲ್ಲಿದೆ ನೋಡಿ ಸಾಕ್ಷಿ!

ತ್ರಿವರ್ಣ ಧ್ವಜ v/s ಭಗವಾಧ್ವಜ: ಹೆಡಗೇವಾರ್‌ ಮೂಲಪಠ್ಯವನ್ನೇ ತಿರುಚಿದ ಚಕ್ರತೀರ್ಥ ಸಮಿತಿ; ಇಲ್ಲಿದೆ ನೋಡಿ ಸಾಕ್ಷಿ!

- Advertisement -
- Advertisement -

ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್‌ ಭಾಷಣವನ್ನು 2022-23ನೇ ಸಾಲಿನ ಹತ್ತನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯ ಪುಸ್ತಕದಲ್ಲಿ ಸೇರಿಸಲಾಗಿದ್ದು, ಹೆಡಗೇವಾರ್‌ ಅವರ ಮೂಲ ಪಠ್ಯವನ್ನೇ ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಶೀಲನಾ ಸಮಿತಿ ತಿರುಚಿರುವುದು ಪಠ್ಯದ ಹಾಳೆ ಹಾಗೂ ಮುದ್ರಿತ ಹಳೆಯ ಕೃತಿಗಳಿಂದ ತಿಳಿದುಬಂದಿದೆ.

‘ನಿಜವಾದ ಆದರ್ಶ ಪುರುಷ ಯಾರಾಗಬೇಕು?’ ಎಂಬ ಭಾಷಣವನ್ನು ಪಠ್ಯವಾಗಿ ಇಡಲಾಗಿದ್ದು, ಹೆಡಗೇವಾರ್‌ ಅವರು ಹೇಳಿರುವ ವಿಚಾರಗಳನ್ನು ತಿರುಚಿ ಪಠ್ಯದಲ್ಲಿ ಅಳವಡಿಸಲಾಗಿದೆ. “ತ್ರಿವರ್ಣ ಧ್ವಜವನ್ನು ಹೆಡಗೇವಾರ್‌ ಒಪ್ಪಿರಲಿಲ್ಲ. ಭಗವಾಧ್ವಜವೇ ಶ್ರೇಷ್ಠ” ಎಂದು ಹೆಡಗೇವಾರ್‌ ಪ್ರತಿಪಾದಿಸಿದ್ದನ್ನು ಆರ್‌ಎಸ್‌ಎಸ್‌ ಮೂಲದವರೇ ಬರೆದ ಜೀವನಚರಿತ್ರೆಗಳಿಂದ ಸಾಬೀತಾಗುತ್ತದೆ. ಜೊತೆಗೆ ಹೆಡಗೇವಾರ್‌ ತಮ್ಮ ಭಾಷಣದಲ್ಲೂ ‘ಭಗವಾಧ್ವಜ’ದ ಪ್ರಸ್ತಾಪವನ್ನೇ ಮಾಡುತ್ತಾರೆ. ಆದರೆ ಚಕ್ರತೀರ್ಥ ನೇತೃತ್ವದ ಸಮಿತಿಯು ಭಾಗವಾಧ್ವಜ ಎಂಬುದನ್ನು ಕೇವಲ ಧ್ವಜ ಎಂದಷ್ಟೇ ಪ್ರಕಟಿಸಿ, ವಿದ್ಯಾರ್ಥಿಗಳ ದಿಕ್ಕು ತಪ್ಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರ್‌ಎಸ್‌ಎಸ್‌ ಮುಖ್ಯ ಕಚೇರಿಯಲ್ಲಿ ಸುಮಾರು 2002ರವರೆಗೂ ತ್ರಿವರ್ಣಧ್ವಜ ಹಾರಿಸಿರಲಿಲ್ಲ ಎಂಬುದು ಚರ್ಚೆಯಲ್ಲಿದೆ. ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜವನ್ನು ಒಪ್ಪುವುದಿಲ್ಲ ಎಂಬುದು ಹೆಡಗೇವಾರ್‌ ಜೀವನಚರಿತ್ರೆಯಿಂದ ತಿಳಿದುಬರುತ್ತದೆ. ಆದರೆ ಪಠ್ಯಪುಸ್ತಕವನ್ನು ಪರಿಶೀಲಿಸಿ ಮರು ಪಠ್ಯ ಅಳವಡಿಸುವಾಗ ‘ಭಗವಾಧ್ವಜ’ ಎಂದಿರುವಲ್ಲಿ ‘ಭಗವಾ’ ಎಂಬ ಪದಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ ಎಂಬುದು ಸ್ಪಷ್ಟವಾಗಿದೆ.

‘ಪರಮ ಪೂಜನೀಯ ಡಾ.ಹೆಡ್ಗೇವಾರ್‌’ ಎಂಬ ಹಳೆಯ ಕೃತಿಯಲ್ಲಿ ಪ್ರಕಟವಾಗಿರುವ ಭಾಷಣದಲ್ಲಿ ‘ಭಗವಾಧ್ವಜ’ ಎಂದು ಸ್ಪಷ್ಟವಾಗಿ ಉಲ್ಲೇಖಿತವಾಗಿದೆ. ಪುಟ ಸಂಖ್ಯೆ 78ರಲ್ಲಿನ ಈ ಸಾಲುಗಳನ್ನೇ ಗಮನವಿಟ್ಟು ನೋಡಬಹುದು.

“….ಯಾವ ಧ್ವಜವನ್ನು ನೋಡಿದ ಮಾತ್ರದಿಂದ ನಮ್ಮ ರಾಷ್ಟ್ರದ ಸಮಸ್ತ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಗಳು ನಮ್ಮ ಕಣ್ಣ ಮುಂದೆ ನಿಲ್ಲುತ್ತವೆಯೋ, ಯಾವುದನ್ನು ಕಂಡಕೂಡಲೇ ಹೃದಯದ ಭಾವನೆಗಳು ಉಕ್ಕಿ ಬರುತ್ತವೆಯೋ, ಅಂತೆಯೇ ಹೃದಯದಲ್ಲಿ ಒಂದು ವಿಶಿಷ್ಟ ಸ್ಫೂರ್ತಿಯ ಸಂಚಾರವಾಗುತ್ತದೆಯೋ ಅಂತಹ ಭಗವಾಧ್ವಜವನ್ನು, ನಮ್ಮ ತತ್ವಗಳ ಪ್ರತೀಕವಾದ ಕಾರಣ, ನಾವು ನಮ್ಮ ಗುರುವೆಂದು ಭಾವಿಸುತ್ತೇವೆ. ಇದೇ ಕಾರಣದಿಂದಲೇ ಯಾವ ಒಬ್ಬ ವ್ಯಕ್ತಿಯನ್ನೂ ತನ್ನ ಗುರುವೆಂದು ಭಾವಿಸಲು ಸಂಘಕ್ಕೆ ಸರ್ವಥಾ ಇಚ್ಛೆಯಿಲ್ಲ” ಎಂದಿದೆ.

ಆದರೆ ಚಕ್ರತೀರ್ಥ ಸಮಿತಿಯ ಪರಿಶೀಲನೆಯಲ್ಲಿ ಮೂಲಪಠ್ಯವನ್ನು ಬದಲಿಸಲಾಗಿದೆ. ಕೆಲವು ಸಾಲುಗಳನ್ನು ಕೈಬಿಡಲಾಗಿದೆ. ಮೂಲ ಪಠ್ಯದಲ್ಲಿರುವ ಕೆಲವು ಸಾಲುಗಳನ್ನು ಕೈಬಿಡಲಾಗಿದ್ದು, ಅಲ್ಲಿ ‘ಸಂಘ’ (ಆರ್‌ಎಸ್‌ಎಸ್‌) ಎಂದಿರುವುದನ್ನು ಗಮನಿಸಬಹುದು.

ಇದನ್ನೂ ಓದಿರಿ: ಭಾಷಾಪಠ್ಯದಲ್ಲಿ ಸಾಮಾಜಿಕ ನ್ಯಾಯ, ಲಿಂಗಸಮಾನತೆ ತುರುಕಬಾರದು: ರೋಹಿತ್‌ ಚಕ್ರತೀರ್ಥ ಸಮಿತಿ

ಹತ್ತನೇ ತರಗತಿ ಪಠ್ಯದಲ್ಲೇನಿದೆ?

“ನಾವು ಧ್ವಜವನ್ನೇ ಗುರುವೆಂದು ಭಾವಿಸಿ, ಗುರುಪೂರ್ಣಿಮಾ ದಿನದಂದು ಅದನ್ನು ಪೂಜಿಸುತ್ತೇವೆ. ನಾವು ಯಾವ ವ್ಯಕ್ತಿಯನ್ನೂ ಪೂಜಿಸುವುದಿಲ್ಲ. ಯಾಕೆಂದರೆ ಯಾರೇ ಆಗಲೀ ಅವರು ತಮ್ಮ ಮಾರ್ಗದಲ್ಲಿ ಅಚಲರಾಗಿಯೇ ಇದ್ದಾರು ಎಂಬ ಭರವಸೆಯಾದರೂ ಏನು? ಕೇವಲ ತತ್ವವೊಂದೇ ಆ ಅಚಲ ಪದವಿಯಲ್ಲಿ ಇರಬಲ್ಲದು. ಅದನ್ನು ಧ್ವಜವೂ ಸಂಕೇತಿಸುವುದು. ಯಾವ ಧ್ವಜವನ್ನು ನೋಡಿದೊಡನೆ ನಮ್ಮ ರಾಷ್ಟ್ರದ ಸಮಸ್ತ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಗಳು ನಮ್ಮ ಕಣ್ಣಿಗೆ ಕಟ್ಟುತ್ತವೆಯೋ ಯಾವುದನ್ನು ಕಂಡಕೂಡಲೇ ಹೃದಯ ಭಾವೆನೆಗಳು ಉಕ್ಕಿ ಬರುತ್ತವೆಯೋ, ಹೃದಯದಲ್ಲಿ ಅಪೂರ್ವ ಸ್ಪೂರ್ತಿಯ ಸಂಚಾರವಾಗುತ್ತದೆಯೋ ಅಂತಹ ಧ್ವಜವನ್ನೇ ನಾವು ನಮ್ಮ ಗುರುವೆಂದು ಭಾವಿಸುತ್ತೇವೆ”.

ತ್ರಿವರ್ಣ ಧ್ವಜ v/s ಭಗವಾಧ್ವಜ

ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪನವರು ಭಗವಾಧ್ವಜವನ್ನು ರಾಷ್ಟ್ರಧ್ವಜ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ಭಗವಾಧ್ವಜ ಕುರಿತ ಒಲವನ್ನು ಮಕ್ಕಳ ಮೇಲೆ ಹೇರುವ ಹಿಡನ್‌ ಅಜೆಂಡಾವನ್ನು ಸರ್ಕಾರ ಮಾಡುತ್ತಿದೆಯೇ ಎಂಬ ಅನುಮಾನಗಳಿಗೆ ತಿರುಚಿದ ಪಠ್ಯ ಉಂಟು ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮುಂದಿನ ದಿನಗಳಲ್ಲಿ ಕೇಸರಿ ಧ್ವಜ ರಾಷ್ಟ್ರ ಧ್ವಜ ಆಗೋದು ಖಚಿತ ,ಭಾರತ ಹಿಂದೂರಾಷ್ಟ್ರ ಆಗೋದು ಖಚಿತ ,ಯಾವ ದೊಣ್ಣೆ ನಾಯಕನ ಅಪ್ಪಣೆ ಈ ವಿಚಾರದಲ್ಲಿ ಪಡೆಯುವ ,ಕೇಳುವ ಪ್ರಶ್ನೆಯೇ ಇಲ್ಲಾ ,ನಗರ ನಕ್ಸಲರಾಗಲಿ,ಗುಲಾಮರಾಗಲಿ,ಶಾಂತಿ ದೂತರಾಗಲಿ

  2. ಮನುವಾದಿಗಳ ಕುತಂತ್ರವನ್ನು ಬಯಲುಗೊಳಿಸಿದ ನಿಮಗೆ ಧನ್ಯವಾದಗಳು. ಮನುವಾದಿಗಳು ತಿರುಚುವುದರಲ್ಲಿ ನಿಸ್ಸೀಮರು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...