Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌‌: ‘ಶಿವಲಿಂಗ ಪತ್ತೆ ಸುದ್ದಿ ಕೇಳಿ ಕಾಶಿಯ ಸಂಭ್ರಮ’ ಎಂಬ ಪ್ರತಿಪಾದನೆಯ ಈ ವಿಡಿಯೊ ಕನಿಷ್ಠ...

ಫ್ಯಾಕ್ಟ್‌‌ಚೆಕ್‌‌: ‘ಶಿವಲಿಂಗ ಪತ್ತೆ ಸುದ್ದಿ ಕೇಳಿ ಕಾಶಿಯ ಸಂಭ್ರಮ’ ಎಂಬ ಪ್ರತಿಪಾದನೆಯ ಈ ವಿಡಿಯೊ ಕನಿಷ್ಠ 3 ವರ್ಷ ಹಳೆಯದು!

- Advertisement -
- Advertisement -

‘ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾದ ನಂತರ ಕಾಶಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ’ ಎಂದು ಪ್ರತಿಪಾದಿಸಿ ಜನರು ರಸ್ತೆಯಲ್ಲಿ ತಾಳವನ್ನು ತಟ್ಟುತ್ತಾ ಕುಣಿಯುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.

ಕಾಶಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂಬ ಸುದ್ದಿ ಹಬ್ಬಿದ ನಂತರ ಈ ಸಂಭ್ರಮಾಚರಣೆ ಮಾಡಲಾಗಿದೆಯೇ? ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಪೋಸ್ಟ್‌ನಲ್ಲಿ ಮಾಡಲಾಗಿರುವ ಪ್ರತಿಪಾದನೆಯನ್ನು ಪರಿಶೀಲಿಸೋಣ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫ್ಯಾಕ್ಟ್‌ಚೆಕ್

ವೀಡಿಯೊದಲ್ಲಿನ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಇಮೇಜ್‌ ಸರ್ಚ್ ಮಾಡಿದಾಗ, ವಿಡಿಯೊಗೆ ಸಂಬಂಧಿಸಿದಂತೆ ಯಾವುದೇ ವಿಶ್ವಾಸಾರ್ಹ ಮೂಲಗಳು ನಮಗೆ ಕಂಡುಹಿಡಿಯಲಾಗಲಿಲ್ಲ. ನಂತರ ಸಂಬಂಧಿತ ಕೀವರ್ಡ್‌ಗಳೊಂದಿಗೆ ಸರ್ಚ್ ಮಾಡಿದಾಗ, YouTube ಚಾನಲ್‌ನಲ್ಲಿ ಅದೇ ವೀಡಿಯೊವನ್ನು ಕಂಡುಬಂದಿದೆ. ಈ YouTube ಬಳಕೆದಾರರು ಈ ವೀಡಿಯೊವನ್ನು 12 ಆಗಸ್ಟ್ 2019 ರಂದು “ವಾರಣಾಸಿಯಲ್ಲಿ ಮಂಜೀರ ದಮ್ರೂ ಜೂಲೂಸ್” ಎಂಬ ಶೀರ್ಷಿಕೆಯೊಂದಿಗೆ ಇದನ್ನು ಪ್ರಕಟಿಸಿದ್ದಾರೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ: ಶಿವಲಿಂಗ ಎಲ್ಲಿ ಕಂಡು ಬಂದಿದೆ ಎಂಬ ಸುಪ್ರೀಂ ಪ್ರಶ್ನೆಗೆ, ವರದಿ ನೋಡಿಲ್ಲ ಎಂದ ಯುಪಿ ಸರ್ಕಾರ!

ಜ್ಞಾನವಾಪಿ ಮಸೀದಿಯಲ್ಲಿ ಇತ್ತೀಚಿನ ನಡೆಸಲಾದ ಸಮೀಕ್ಷೆಯ ಸಮಯದಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ಸುಳ್ಳು ಸುದ್ದಿ ಹರಡಿತ್ತು. ಈ ಸಂದರ್ಭದಲ್ಲಿ ಸಂಭ್ರಮಾಚರಣೆ ಮಾಡಲಾಗಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಡಲಾಗಿರುವ ಈ ವಿಡಿಯೊ ಕನಿಷ್ಠ ಮೂರು ವರ್ಷ ಹಳೆಯದಾಗಿದೆ. ಶಿವಲಿಂಗ ಪತ್ತೆಯಾಗಿದೆ ಎಂಬ ಸುದ್ದಿ ಹಿನ್ನಲೆಯಲ್ಲಿ ಜನರು ಖುಷಿಪಟ್ಟ ವಿಡಿಯೊ ಇದಲ್ಲ. ಹಲವರು ಈ ವೀಡಿಯೊವನ್ನು 2021ರಲ್ಲಿ ಕೂಡಾ ಹಂಚಿಕೊಂಡಿದ್ದಾರೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು.

ಈ ಆಚರಣೆ ಯಾವಾಗ ನಡೆದಿದೆ ಎಂದು ನಿಖರವಾದ ದಿನಾಂಕ ಮತ್ತು ಸ್ಥಳವನ್ನು  ಖಚಿತಪಡಿಸಲು ಸಾಧ್ಯವಾಗದಿದ್ದರೂ, ಪೋಸ್ಟ್‌ನಲ್ಲಿ ಹಂಚಿಕೊಂಡ ವೀಡಿಯೊ ಹಳೆಯದು ಮತ್ತು ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎನ್ನುವ ಹಿನ್ನಲೆಯಲ್ಲಿ ಈ ಸಂಭ್ರಮಾಚರಣೆ ನಡೆದಿದೆ ಎನ್ನುವುದಕ್ಕೆ ಯಾವುದೆ ಆಧಾರ ಇಲ್ಲ. ಹಾಗಾಗಿ ಈ ವಿಡಿಯೊಗೂ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎನ್ನಲಾಗಿರುವ ಸುದ್ದಿಗೂ ಯಾವುದೇ ಸಂಬಂಧವಿಲ್ಲ ಎಂದು ಈ ಎಲ್ಲಾ ಪುರಾವೆಗಳಿಂದ ದೃಢೀಕರಿಸಬಹುದು.

ಇದನ್ನೂ ಓದಿ: ಮಾಂಸ ತಿನ್ನದವರು ಟಿವಿಗಳಲ್ಲಿ ಯಕ್ಷಗಾನ ಮಾಡುತ್ತಿದ್ದಾರೆ: ದೇವನೂರ ಮಹಾದೇವ

ಒಟ್ಟಾರೆಯಾಗಿ ಹೇಳುವುದಾದರೆ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊ ಆಗಸ್ಟ್ 2019 ರಿಂದ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದೆ. ವೀಡಿಯೊ ಹಳೆಯದಾಗಿದ್ದು, ಜ್ಞಾನವಾಪಿ ಮಸೀದಿಯಲ್ಲಿ ಇತ್ತೀಚಿನ ಸಮೀಕ್ಷೆಯ ಸಮಯದಲ್ಲಿ ಕಂಡುಬಂದಿದೆ ಎನ್ನುವ  ಶಿವಲಿಂಗಕ್ಕೂ ವಿಡಿಯೊಗೂ ಯಾವುದೇ ಸಂಬಂಧವಿಲ್ಲ. ಸಂಬಂಧವಿಲ್ಲದ ಹಳೆಯ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಸುಳ್ಳು ಸುದ್ದಿ ಹರಡಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....