Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

- Advertisement -
- Advertisement -

ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿಯಲ್ಲಿ ನಡೆದ ವಿಡಿಯೊ ಸಮೀಕ್ಷೆ ವೇಳೆ ಕಂಡು ಬಂದ ‘ಕಾರಂಜಿ’ಯನ್ನು ‘ಶಿವಲಿಂಗ’ ಎಂದು ಪ್ರತಿಪಾದಿಸಲಾಗಿತ್ತು. ಇದರ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಚಿತ್ರಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈ ಲೇಖನಗಳ ಮೂಲಕ ವೈರಲ್‌ ಚಿತ್ರಗಳ ವಾಸ್ತವ ಏನೆಂದು ತಿಳಿದುಕೊಳ್ಳೋಣ.

ಮೊದಲಿಗೆ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಯಾವ ಯಾವ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ ಎಂದು ಗಮನಿಸೋಣ.

1ನೇ ಚಿತ್ರ – ಮಾಜಿ ಸಚಿವ ಕೆ.ಎಸ್‌‌. ಈಶ್ವರಪ್ಪ ಅವರ ಹೆಸರಿನಲ್ಲಿ ಪೋಸ್ಟ್

ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಹೆಸರಿನ ಫೇಸ್‌ಬುಕ್‌ ಪೇಜ್‌ನಲ್ಲಿ ಪೋಸ್ಟ್‌ ಒಂದನ್ನು ಶೇರ್ ಮಾಡಿದ್ದು ಮಾಡಿದ್ದು ಅದರಲ್ಲಿ “ಜ್ಞಾನವಾಪಿ ಮಸೀದಿಯಲ್ಲಿ ತ್ರೈಲೋಕ್ಯಮಹಾದೇವ ನಂದಿ ಹಾಗೂ ಶಿವಲಿಂಗ ವಿಗ್ರಹ ಪತ್ತೆಯಾಗಿರುವುದು ಬಚ್ಚಿಟ್ಟ ಕ್ರೌರ್ಯದ ಇತಿಹಾಸವನ್ನ ತೆರೆದಿಟ್ಟಿದೆ. ದೇಶದಲ್ಲಿರುವ ಎಲ್ಲ ಪುರಾತನ ಮಸೀದಿಗಳನ್ನು ಹಿಂದೂ ದೇವಾಲಯಗಳನ್ನು ಧ್ವಂಸ ಮಾಡಿಯೇ ಕಟ್ಟಲಾಗಿದೆ ಹೊರತು ದೈವಭಕ್ತಿಯಿಂದ ಕಟ್ಟಿದ್ದಲ್ಲ. ದೋಷವಿರುವುದು ಮುಸಲ್ಮಾನರಲ್ಲಿ ಅಲ್ಲ ಮುಸಲ್ಮಾನರ ಧರ್ಮಗ್ರಂಥದಲ್ಲಿ” ಎಂಬ ಹೇಳಿಕೆಯೊಂದಿಗೆ ಹಂಚಿಕೊಂಡಿದ್ದಾರೆ.

2ನೇ ಚಿತ್ರ – 350 ವರ್ಷಗಳ ಕುತಂತ್ರದಾಟಕ್ಕೆ ತೆರೆ!

ಕಾಶಿ ಜ್ಞಾನವ್ಯಾಪಿ ಮಸೀದಿಯ ಕೊಳದಲ್ಲಿನ ನೀರನ್ನು ಖಾಲಿ ಮಾಡುತ್ತಿದ್ದಂತೆ.. ಸಾಕ್ಷಾತ್ ವಿಶ್ವನಾಥನ (ಶಿವಲಿಂಗ) ದರ್ಶನ! ಎಂದು ಮತ್ತೊಂದು ಫೋಟೋವನ್ನು ಫೇಸ್‌ಬುಕ್ ಬಳಕೆದಾರರೊಬ್ಬರು ಪೋಸ್ಟ್ ಮಾಡಿದ್ದು, 350 ವರ್ಷಗಳ ಕುತಂತ್ರದಾಟಕ್ಕೆ ತೆರೆ ಎಂದು ಬರೆದಿದ್ದಾರೆ.
ಮೂರನೇಯದ್ದು ವಿಡಿಯೊ
ಮತ್ತೊಬ್ಬ ಫೇಸ್‌ಬುಕ್ ಬಳಕೆದಾರರೊಬ್ಬರು ಫೊಸ್ಟ್‌ವೊಂದನ್ನು ಮಾಡಿದ್ದು, ‘‘ಇಂದು ಬಹಳ ಸಂತೋಷದ ಸೋಮವಾರ ಮತ್ತು ಹುಣ್ಣಿಮೆ ಕೂಡ, ಜ್ಞಾನವಾಪಿ ಸಮೀಕ್ಷೆಯ ವೇಳೆ ಬಾವಿಯೊಳಗಿಂದ ಶಿವಲಿಂಗ ಪತ್ತೆಯಾಗಿದೆ.. ಸುಮಾರು 12 ಅಡಿಗಳಿಗಿಂತ ದೊಡ್ಡದು. ಜ್ಞಾನವಾಪಿ ದೇವಸ್ಥಾನದಲ್ಲಿ ಶಿವಲಿಂಗ ಪತ್ತೆಯಾದ ಪ್ರದೇಶವನ್ನು ಸೀಲ್ ಮಾಡಲು ವಾರಣಾಸಿ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದೆ” ಎಂದು ಪೋಸ್ಟ್‌ ಮೂಲಕ ಫೋಟೋವನ್ನು ಶೇರ್ ಮಾಡಿದ್ದಾರೆ.

ಮಸೀದಿಯ ವಿಡಿಯೊ ಚಿತ್ರೀಕರಣ ದಾಖಲೀಕರಣದ ಸಮಯದಲ್ಲಿ ಮಸೀದಿಯ ಕೊಳದಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ಅರ್ಜಿದಾರ ವಕೀಲರೊಬ್ಬರು ನ್ಯಾಯಾಲಯದಲ್ಲಿ ಹೇಳಿದ್ದರಿಂದ, ನ್ಯಾಯಾಲಯವು ಮಸೀದಿ ಆವರಣದ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೂಬಸ್ತ್ ಮಾಡುವಂತೆ ಆದೇಶಿಸಿತ್ತು.

ಮಸೀದಿ ಸಮಿತಿ ಹೇಳುವಂತೆ ಅದು ಮಸೀದಿ ಕೊಳದಲ್ಲಿ ಇರುವ ಕಾರಂಜಿಯಾಗಿದೆ. ಅಲ್ಲದೆ ಅದು ಯಾವುದೆ ರೀತಿಯಲ್ಲೂ ಶಿವಲಿಂಗದ ಮಾದರಿಯಲ್ಲಿ ಇಲ್ಲ. ಕೆಳಗಿನ ವಿಡಿಯೊದಲ್ಲಿ ಅದರ ದೃಶ್ಯಗಳನ್ನು ಓದುಗರು ನೋಡಬಹುದಾಗಿದೆ.

ಹಾಗಾದರೆ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆಯೇ? ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಶಿವಲಿಂಗದ ಹಲವು ವಿಡಿಯೊ ಮತ್ತು ಫೋಟೋಗಳು ಜ್ಞಾನವಾಪಿ ಮಸೀದಿ ಆವರಣದ ಪತ್ತೆಯಾದ ಫೋಟೋಗಳೇ? ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳ ಪ್ರತಿಪಾದನೆಯನ್ನು ಪರಿಶೀಲಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಫ್ಯಾಕ್ಟ್‌ಚೆಕ್:

1ನೇ ಚಿತ್ರ

ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿರುವ ಕೆಎಸ್‌ ಈಶ್ವರಪ್ಪ ಹೆಸರಿನಲ್ಲಿ ಫೋಸ್ಟ್‌ ಮಾಡಿದ ದೊಡ್ಡ ಶಿವಲಿಂಗದ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಫೋಟೋವನ್ನು ರನ್ ಮಾಡಿದಾಗ, ಫೋಟೋ ಒಡಿಸ್ಸಾದಲ್ಲಿರುವ ಬಾಬಾ ಭುಸಂದೇಶ್ವರ ದೇವಾಲಯಕ್ಕೆ ಸಂಬಂಧಿಸಿದೆ ಎಂದು ಕಂಡುಬಂದಿದೆ. ಆ ದೇವಾಲಯದ ಇತರ ಫೋಟೋಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಹಾಗಾಗಿ, ಕೆಎಸ್‌ ಈಶ್ವರಪ್ಪ ಹೆಸರಿನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ಜ್ಞಾನವಾಪಿ ಮಸೀದಿಯಲ್ಲಿ ತ್ರೈಲೋಕ್ಯಮಹಾದೇವ ನಂದಿ ಹಾಗೂ ಶಿವಲಿಂಗ ವಿಗ್ರಹ ಪತ್ತೆಯಾಗಿದೆ ಎಂದು ಅವರು ಪ್ರತಿಪಾದಿಸಿರುವುದು ಸುಳ್ಳಾಗಿದೆ. ಅವರು ಪೋಸ್ಟ್‌ ಮಾಡಿರುವ ಚಿತ್ರಕ್ಕೂ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗುವ ಆಕೃತಿಗೂ ಯಾವುದೆ ಸಂಬಂಧವಿಲ್ಲ.

2ನೇ ಚಿತ್ರ

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಮತ್ತು ನಂದಿ ಫೋಟೋ ಎಂದು  ಹೇಳಿಕೊಂಡು ಹಂಚಿಕೊಳ್ಳಲಾಗಿರುವ ಫೋಟೋವನ್ನು ಗೂಗಲ್‌ನಲ್ಲಿ ಸರ್ಚ್ ಮಾಡಿದಾಗ ಅದು ಸುಮಾರು ಎರಡು ವರ್ಷದಿಂದ ಇಂಟರ್‌ನೆಟ್‌‌ನಲ್ಲಿ (ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್, ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ) ಲಭ್ಯವಿರುವುದಾಗಿ ಕಂಡು ಬಂದಿದೆ.

ಶಿವಲಿಂಗ ಮತ್ತು ನಂದಿ ಚಿತ್ರವು ಡಿಜಿಟಲ್ ಆರ್ಟ್ ಮೂಲಕ ಚಿತ್ರಿಸಲಾಗಿದೆ ಎಂದು ತಿಳಿದು ಬಂದಿದೆ. ಹಾಗಾಗಿ ಫೇಸ್‌ಬುಕ್‌ ಫೋಸ್ಟ್‌ನಲ್ಲಿ ಜ್ಞಾನವಾಪಿ ಮಸೀದಿಯ ಶಿವಲಿಂಗ ಎಂದು ಪ್ರತಿಪಾದಿಸಿದ ಫೋಸ್ಟ್ ಸುಳ್ಳಾಗಿದೆ.

 

View this post on Instagram

 

A post shared by mahadev bhakt 🙏 (@s_h_i_vsha_k_ti)

ಸುಮಾರು 2020ರಿಂದಲೂ ನಂದಿ ಮತ್ತು ಶಿವಲಿಂಗ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಹಾಗಾಗಿ ಈ ಚಿತ್ರವು  ಜ್ಞಾನವಾಪಿ ಮಸೀದಿಗೆ ಸಂಬಂಧಿಸಿಲ್ಲ ಎಂದು ಹೇಳಬಹುದು.

ಸಂಕ್ಷಿಪ್ತವಾಗಿ ಹೇಳುವುದಾದರೆ, ಜ್ಞಾನವಾಪಿ ಮಸೀದಿಯಲ್ಲಿ ಕಂಡುಬರುವ ‘ಶಿವಲಿಂಗ’ದ ದೃಶ್ಯಗಳೆಂದು ಸಂಬಂಧವಿಲ್ಲದ ಚಿತ್ರಗಳನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.

ವಿಡಿಯೊ

ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದೆ ಎಂದು ಮತ್ತೊಂದು ವಿಡಿಯೊವನ್ನು ಶೇರ್ ಮಾಡಲಾಗುತ್ತಿದೆ. ಆದರೆ ಇದೂ ಕೂಡ ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿದೆ ಎಂದು ಹೇಳುವ ಯಾವ ಪುರಾವೆಗಳು ಇಲ್ಲ. ವೀಡಿಯೊದ ನಿಖರವಾದ ಸ್ಥಳವನ್ನು ನಾವು ಕಂಡುಹಿಡಿಯಲಾಗದಿದ್ದರೂ, ವೀಡಿಯೊ ಕನಿಷ್ಠ ಒಂದು ವರ್ಷ ಹಳೆಯದು ಎಂದು ಕಂಡುಬಂದಿದೆ. ಹಾಗಾಗಿ ಇತ್ತೀಚೆಗಷ್ಟೇ ಜ್ಞಾನವಾಪಿ ಮಸೀದಿಯಲ್ಲಿ ಸಮೀಕ್ಷೆ ನಡೆದಿರುವ ಹಿನ್ನೆಲೆಯಲ್ಲಿ ಹಳೆಯ ವಿಡಿಯೋ ಮತ್ತು ಫೋಟೋ ಶೇರ್ ಆಗುತ್ತಿವೆ.

ಒಟ್ಟಾರೆಯಾಗಿ ಹೇಳುವುದಾದರೆ ಜ್ಞಾನವಾಪಿಯಲ್ಲಿ ಶಿವಲಿಂಗ ಮತ್ತು ನಂದಿ ವಿಗ್ರಹ ಪತ್ತೆಯಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಪೋಸ್ಟ್‌ಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಫೋಟೋಗಳು ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾದ ಫೋಟೋಗಳಲ್ಲ ಎಂದು ನಮ್ಮ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸದ್ಯ ಜ್ಞಾನವಾಪಿ ಮಸೀದಿಯ ವಿಚಾರಣೆಯು ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು ತೀರ್ಪು ಬಂದ ನಂತರವೇ ವಾಸ್ತವ ಏನೆಂದು ತಿಳಿಯುತ್ತದೆ. ಅಲ್ಲಿಯವರಗೆ ಸುಳ್ಳು ಸುದ್ದಿಯನ್ನು ಹರಡದಂತೆ ಎಚ್ಚರವಹಿಸಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...