Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

- Advertisement -
- Advertisement -

ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿಯಲ್ಲಿ ನಡೆದ ವಿಡಿಯೊ ಸಮೀಕ್ಷೆ ವೇಳೆ ಕಂಡು ಬಂದ ‘ಕಾರಂಜಿ’ಯನ್ನು ‘ಶಿವಲಿಂಗ’ ಎಂದು ಪ್ರತಿಪಾದಿಸಲಾಗಿತ್ತು. ಇದರ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಚಿತ್ರಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈ ಲೇಖನಗಳ ಮೂಲಕ ವೈರಲ್‌ ಚಿತ್ರಗಳ ವಾಸ್ತವ ಏನೆಂದು ತಿಳಿದುಕೊಳ್ಳೋಣ.

ಮೊದಲಿಗೆ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಯಾವ ಯಾವ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ ಎಂದು ಗಮನಿಸೋಣ.

1ನೇ ಚಿತ್ರ – ಮಾಜಿ ಸಚಿವ ಕೆ.ಎಸ್‌‌. ಈಶ್ವರಪ್ಪ ಅವರ ಹೆಸರಿನಲ್ಲಿ ಪೋಸ್ಟ್

ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಹೆಸರಿನ ಫೇಸ್‌ಬುಕ್‌ ಪೇಜ್‌ನಲ್ಲಿ ಪೋಸ್ಟ್‌ ಒಂದನ್ನು ಶೇರ್ ಮಾಡಿದ್ದು ಮಾಡಿದ್ದು ಅದರಲ್ಲಿ “ಜ್ಞಾನವಾಪಿ ಮಸೀದಿಯಲ್ಲಿ ತ್ರೈಲೋಕ್ಯಮಹಾದೇವ ನಂದಿ ಹಾಗೂ ಶಿವಲಿಂಗ ವಿಗ್ರಹ ಪತ್ತೆಯಾಗಿರುವುದು ಬಚ್ಚಿಟ್ಟ ಕ್ರೌರ್ಯದ ಇತಿಹಾಸವನ್ನ ತೆರೆದಿಟ್ಟಿದೆ. ದೇಶದಲ್ಲಿರುವ ಎಲ್ಲ ಪುರಾತನ ಮಸೀದಿಗಳನ್ನು ಹಿಂದೂ ದೇವಾಲಯಗಳನ್ನು ಧ್ವಂಸ ಮಾಡಿಯೇ ಕಟ್ಟಲಾಗಿದೆ ಹೊರತು ದೈವಭಕ್ತಿಯಿಂದ ಕಟ್ಟಿದ್ದಲ್ಲ. ದೋಷವಿರುವುದು ಮುಸಲ್ಮಾನರಲ್ಲಿ ಅಲ್ಲ ಮುಸಲ್ಮಾನರ ಧರ್ಮಗ್ರಂಥದಲ್ಲಿ” ಎಂಬ ಹೇಳಿಕೆಯೊಂದಿಗೆ ಹಂಚಿಕೊಂಡಿದ್ದಾರೆ.

2ನೇ ಚಿತ್ರ – 350 ವರ್ಷಗಳ ಕುತಂತ್ರದಾಟಕ್ಕೆ ತೆರೆ!

ಕಾಶಿ ಜ್ಞಾನವ್ಯಾಪಿ ಮಸೀದಿಯ ಕೊಳದಲ್ಲಿನ ನೀರನ್ನು ಖಾಲಿ ಮಾಡುತ್ತಿದ್ದಂತೆ.. ಸಾಕ್ಷಾತ್ ವಿಶ್ವನಾಥನ (ಶಿವಲಿಂಗ) ದರ್ಶನ! ಎಂದು ಮತ್ತೊಂದು ಫೋಟೋವನ್ನು ಫೇಸ್‌ಬುಕ್ ಬಳಕೆದಾರರೊಬ್ಬರು ಪೋಸ್ಟ್ ಮಾಡಿದ್ದು, 350 ವರ್ಷಗಳ ಕುತಂತ್ರದಾಟಕ್ಕೆ ತೆರೆ ಎಂದು ಬರೆದಿದ್ದಾರೆ.
ಮೂರನೇಯದ್ದು ವಿಡಿಯೊ
ಮತ್ತೊಬ್ಬ ಫೇಸ್‌ಬುಕ್ ಬಳಕೆದಾರರೊಬ್ಬರು ಫೊಸ್ಟ್‌ವೊಂದನ್ನು ಮಾಡಿದ್ದು, ‘‘ಇಂದು ಬಹಳ ಸಂತೋಷದ ಸೋಮವಾರ ಮತ್ತು ಹುಣ್ಣಿಮೆ ಕೂಡ, ಜ್ಞಾನವಾಪಿ ಸಮೀಕ್ಷೆಯ ವೇಳೆ ಬಾವಿಯೊಳಗಿಂದ ಶಿವಲಿಂಗ ಪತ್ತೆಯಾಗಿದೆ.. ಸುಮಾರು 12 ಅಡಿಗಳಿಗಿಂತ ದೊಡ್ಡದು. ಜ್ಞಾನವಾಪಿ ದೇವಸ್ಥಾನದಲ್ಲಿ ಶಿವಲಿಂಗ ಪತ್ತೆಯಾದ ಪ್ರದೇಶವನ್ನು ಸೀಲ್ ಮಾಡಲು ವಾರಣಾಸಿ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದೆ” ಎಂದು ಪೋಸ್ಟ್‌ ಮೂಲಕ ಫೋಟೋವನ್ನು ಶೇರ್ ಮಾಡಿದ್ದಾರೆ.

ಮಸೀದಿಯ ವಿಡಿಯೊ ಚಿತ್ರೀಕರಣ ದಾಖಲೀಕರಣದ ಸಮಯದಲ್ಲಿ ಮಸೀದಿಯ ಕೊಳದಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ಅರ್ಜಿದಾರ ವಕೀಲರೊಬ್ಬರು ನ್ಯಾಯಾಲಯದಲ್ಲಿ ಹೇಳಿದ್ದರಿಂದ, ನ್ಯಾಯಾಲಯವು ಮಸೀದಿ ಆವರಣದ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೂಬಸ್ತ್ ಮಾಡುವಂತೆ ಆದೇಶಿಸಿತ್ತು.

ಮಸೀದಿ ಸಮಿತಿ ಹೇಳುವಂತೆ ಅದು ಮಸೀದಿ ಕೊಳದಲ್ಲಿ ಇರುವ ಕಾರಂಜಿಯಾಗಿದೆ. ಅಲ್ಲದೆ ಅದು ಯಾವುದೆ ರೀತಿಯಲ್ಲೂ ಶಿವಲಿಂಗದ ಮಾದರಿಯಲ್ಲಿ ಇಲ್ಲ. ಕೆಳಗಿನ ವಿಡಿಯೊದಲ್ಲಿ ಅದರ ದೃಶ್ಯಗಳನ್ನು ಓದುಗರು ನೋಡಬಹುದಾಗಿದೆ.

ಹಾಗಾದರೆ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆಯೇ? ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಶಿವಲಿಂಗದ ಹಲವು ವಿಡಿಯೊ ಮತ್ತು ಫೋಟೋಗಳು ಜ್ಞಾನವಾಪಿ ಮಸೀದಿ ಆವರಣದ ಪತ್ತೆಯಾದ ಫೋಟೋಗಳೇ? ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳ ಪ್ರತಿಪಾದನೆಯನ್ನು ಪರಿಶೀಲಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಫ್ಯಾಕ್ಟ್‌ಚೆಕ್:

1ನೇ ಚಿತ್ರ

ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿರುವ ಕೆಎಸ್‌ ಈಶ್ವರಪ್ಪ ಹೆಸರಿನಲ್ಲಿ ಫೋಸ್ಟ್‌ ಮಾಡಿದ ದೊಡ್ಡ ಶಿವಲಿಂಗದ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಫೋಟೋವನ್ನು ರನ್ ಮಾಡಿದಾಗ, ಫೋಟೋ ಒಡಿಸ್ಸಾದಲ್ಲಿರುವ ಬಾಬಾ ಭುಸಂದೇಶ್ವರ ದೇವಾಲಯಕ್ಕೆ ಸಂಬಂಧಿಸಿದೆ ಎಂದು ಕಂಡುಬಂದಿದೆ. ಆ ದೇವಾಲಯದ ಇತರ ಫೋಟೋಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಹಾಗಾಗಿ, ಕೆಎಸ್‌ ಈಶ್ವರಪ್ಪ ಹೆಸರಿನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ಜ್ಞಾನವಾಪಿ ಮಸೀದಿಯಲ್ಲಿ ತ್ರೈಲೋಕ್ಯಮಹಾದೇವ ನಂದಿ ಹಾಗೂ ಶಿವಲಿಂಗ ವಿಗ್ರಹ ಪತ್ತೆಯಾಗಿದೆ ಎಂದು ಅವರು ಪ್ರತಿಪಾದಿಸಿರುವುದು ಸುಳ್ಳಾಗಿದೆ. ಅವರು ಪೋಸ್ಟ್‌ ಮಾಡಿರುವ ಚಿತ್ರಕ್ಕೂ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗುವ ಆಕೃತಿಗೂ ಯಾವುದೆ ಸಂಬಂಧವಿಲ್ಲ.

2ನೇ ಚಿತ್ರ

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಮತ್ತು ನಂದಿ ಫೋಟೋ ಎಂದು  ಹೇಳಿಕೊಂಡು ಹಂಚಿಕೊಳ್ಳಲಾಗಿರುವ ಫೋಟೋವನ್ನು ಗೂಗಲ್‌ನಲ್ಲಿ ಸರ್ಚ್ ಮಾಡಿದಾಗ ಅದು ಸುಮಾರು ಎರಡು ವರ್ಷದಿಂದ ಇಂಟರ್‌ನೆಟ್‌‌ನಲ್ಲಿ (ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್, ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ) ಲಭ್ಯವಿರುವುದಾಗಿ ಕಂಡು ಬಂದಿದೆ.

ಶಿವಲಿಂಗ ಮತ್ತು ನಂದಿ ಚಿತ್ರವು ಡಿಜಿಟಲ್ ಆರ್ಟ್ ಮೂಲಕ ಚಿತ್ರಿಸಲಾಗಿದೆ ಎಂದು ತಿಳಿದು ಬಂದಿದೆ. ಹಾಗಾಗಿ ಫೇಸ್‌ಬುಕ್‌ ಫೋಸ್ಟ್‌ನಲ್ಲಿ ಜ್ಞಾನವಾಪಿ ಮಸೀದಿಯ ಶಿವಲಿಂಗ ಎಂದು ಪ್ರತಿಪಾದಿಸಿದ ಫೋಸ್ಟ್ ಸುಳ್ಳಾಗಿದೆ.

 

View this post on Instagram

 

A post shared by mahadev bhakt 🙏 (@s_h_i_vsha_k_ti)

ಸುಮಾರು 2020ರಿಂದಲೂ ನಂದಿ ಮತ್ತು ಶಿವಲಿಂಗ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಹಾಗಾಗಿ ಈ ಚಿತ್ರವು  ಜ್ಞಾನವಾಪಿ ಮಸೀದಿಗೆ ಸಂಬಂಧಿಸಿಲ್ಲ ಎಂದು ಹೇಳಬಹುದು.

ಸಂಕ್ಷಿಪ್ತವಾಗಿ ಹೇಳುವುದಾದರೆ, ಜ್ಞಾನವಾಪಿ ಮಸೀದಿಯಲ್ಲಿ ಕಂಡುಬರುವ ‘ಶಿವಲಿಂಗ’ದ ದೃಶ್ಯಗಳೆಂದು ಸಂಬಂಧವಿಲ್ಲದ ಚಿತ್ರಗಳನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.

ವಿಡಿಯೊ

ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದೆ ಎಂದು ಮತ್ತೊಂದು ವಿಡಿಯೊವನ್ನು ಶೇರ್ ಮಾಡಲಾಗುತ್ತಿದೆ. ಆದರೆ ಇದೂ ಕೂಡ ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿದೆ ಎಂದು ಹೇಳುವ ಯಾವ ಪುರಾವೆಗಳು ಇಲ್ಲ. ವೀಡಿಯೊದ ನಿಖರವಾದ ಸ್ಥಳವನ್ನು ನಾವು ಕಂಡುಹಿಡಿಯಲಾಗದಿದ್ದರೂ, ವೀಡಿಯೊ ಕನಿಷ್ಠ ಒಂದು ವರ್ಷ ಹಳೆಯದು ಎಂದು ಕಂಡುಬಂದಿದೆ. ಹಾಗಾಗಿ ಇತ್ತೀಚೆಗಷ್ಟೇ ಜ್ಞಾನವಾಪಿ ಮಸೀದಿಯಲ್ಲಿ ಸಮೀಕ್ಷೆ ನಡೆದಿರುವ ಹಿನ್ನೆಲೆಯಲ್ಲಿ ಹಳೆಯ ವಿಡಿಯೋ ಮತ್ತು ಫೋಟೋ ಶೇರ್ ಆಗುತ್ತಿವೆ.

ಒಟ್ಟಾರೆಯಾಗಿ ಹೇಳುವುದಾದರೆ ಜ್ಞಾನವಾಪಿಯಲ್ಲಿ ಶಿವಲಿಂಗ ಮತ್ತು ನಂದಿ ವಿಗ್ರಹ ಪತ್ತೆಯಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಪೋಸ್ಟ್‌ಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಫೋಟೋಗಳು ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾದ ಫೋಟೋಗಳಲ್ಲ ಎಂದು ನಮ್ಮ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸದ್ಯ ಜ್ಞಾನವಾಪಿ ಮಸೀದಿಯ ವಿಚಾರಣೆಯು ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು ತೀರ್ಪು ಬಂದ ನಂತರವೇ ವಾಸ್ತವ ಏನೆಂದು ತಿಳಿಯುತ್ತದೆ. ಅಲ್ಲಿಯವರಗೆ ಸುಳ್ಳು ಸುದ್ದಿಯನ್ನು ಹರಡದಂತೆ ಎಚ್ಚರವಹಿಸಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...