Homeಅಂಕಣಗಳುಹಿಂದು-ಮುಸ್ಲಿಂ ರೈತ ಮೈತ್ರಿಯ ಚಹರೆ ಗುಲಾಮ್ ಮಹಮ್ಮದ್ ಜೌಲಾ ಇನ್ನಿಲ್ಲ

ಹಿಂದು-ಮುಸ್ಲಿಂ ರೈತ ಮೈತ್ರಿಯ ಚಹರೆ ಗುಲಾಮ್ ಮಹಮ್ಮದ್ ಜೌಲಾ ಇನ್ನಿಲ್ಲ

- Advertisement -
- Advertisement -

ಭಾರತೀಯ ಕಿಸಾನ್ ಯೂನಿಯನ್‌ನ ಸಂಸ್ಥಾಪಕ ಸದಸ್ಯ ಮತ್ತು ಹಿಂದೂ-ಮುಸ್ಲಿಂ ಏಕತೆಯ ಪ್ರತೀಕವಾಗಿದ್ದ ಗುಲಾಮ್ ಮಹಮ್ಮದ್ ಜೌಲಾ ಇನ್ನಿಲ್ಲವಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.

ಜೌಲಾ ನಿಧನದಿಂದಾಗಿ ಮಹೇಂದ್ರಸಿಂಗ್ ಟಿಕೇತ್ ಸ್ಥಾಪಿಸಿದ್ದ ಭಾರತೀಯ ಕಿಸಾನ್ ಯೂನಿಯನ್ ಕೆಲವೇ ದಿನಗಳ ಅಂತರದಲ್ಲಿ ಎರಡನೆಯ ದೊಡ್ಡ ಹಿನ್ನಡೆ ಎದುರಿಸಿದೆ. ಅವರ ಸ್ಥಾನವನ್ನು ತುಂಬುವುದು ಸದ್ಯಕ್ಕೆ ಅಸಾಧ್ಯ ಎಂಬ ಮಾತುಗಳು ಸವಕಲಾಗಿ ಧ್ವನಿಸಿದರೂ ಸತ್ಯವಚನಗಳು.

ರೈತ ನಾಯಕ ಮಹೇಂದ್ರಸಿಂಗ್ ಟಿಕೇತ್ ಅವರ ಅತಿ ಸಮೀಪವರ್ತಿಯಾಗಿದ್ದ ಜೌಲಾ ನಾಡು ಕಂಡ ಅಪ್ರತಿಮ ರೈತ ಹೋರಾಟಗಾರ ಹಾಗೂ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ ಸಮಕಾಲೀನರೂ ಆಗಿದ್ದರು.

ಪಶ್ಚಿಮೀ ಉತ್ತರಪ್ರದೇಶದ ಮುಝಫರ್‌ನಗರ ಜಿಲ್ಲೆಯ ಜೌಲಾ ಗ್ರಾಮದ ನಿವಾಸಿ. ಭಾರತೀಯ ಕಿಸಾನ್ ಯೂನಿಯನ್ ಚಿಂತನ ಚಾವಡಿಯ ಸಕ್ರಿಯ ಸದಸ್ಯರು. ಟಿಕೇತ್ ಹೂಡಿದ ಹಲವು ರೈತ ಆಂದೋಲನಗಳಲ್ಲಿ ಜೌಲಾ ವಹಿಸಿದ್ದ ಪಾತ್ರ ಮಹತ್ತರ.

ಮಹೇಂದ್ರಸಿಂಗ್ ಟಿಕೇತ್

ರೈತ ಆಂದೋಲನಗಳ ವೇದಿಕೆಯಲ್ಲಿ ಹರಹರ ಮಹಾದೇವ್- ಅಲ್ಲಾಹ್ ಹೂ ಅಕ್ಬರ್ ಘೋಷಣೆ ಕೂಗಿಸಿದ ಸಮರಸ ಭಾವದ ನಾಯಕ. 2011ರಲ್ಲಿ ಮಹೇಂದ್ರಸಿಂಗ್ ಟಿಕೇತ್ ನಿಧನದ ನಂತರವೂ ಭಾರತೀಯ ಕಿಸಾನ್ ಯೂನಿಯನ್ ಜತೆ ಅವರ ಸಂಬಂಧ ಮುಂದುವರೆದಿತ್ತು. ಆದರೆ 2013ರಲ್ಲಿ ಜರುಗಿದ ಮುಝಫರ್‌ನಗರ ಕೋಮುಗಲಭೆಗಳಿಂದ ಅವರ ದಾರಿ ಬೇರೆಯಾಯಿತು. ಮುಸಲ್ಮಾನರೇ ಬಹುಸಂಖ್ಯೆಯಲ್ಲಿದ್ದ ರಾಷ್ಟ್ರೀಯ ಕಿಸಾನ್ ಮಜ್ದೂರ್ ಸಂಘಟನೆ ಕಟ್ಟಿದರು.

ಮೋದಿಯವರು ಜಾರಿ ಮಾಡಿದ್ದ ಮೂರು ಕೃಷಿ ಕಾನೂನುಗಳ ವಿರುದ್ಧ ಸಿಡಿದ ರೈತ ಹೋರಾಟ ಜೌಲಾ ಮತ್ತು ಜಾಟ ರೈತರನ್ನು ಪುನಃ ಒಂದು ವೇದಿಕೆಗೆ ತಂದಿತ್ತು. ಭಾರತೀಯ ಕಿಸಾನ್ ಯೂನಿಯನ್‌ನ ಹಾಲಿ ಅಧ್ಯಕ್ಷ ಚೌಧರಿ ನರೇಶ್ ಟಿಕೇತ್ ಮತ್ತು ರಾಷ್ಟ್ರೀಯ ಲೋಕದಳದ ಉಪಾಧ್ಯಕ್ಷ ಜಯಂತ್ ಚೌಧರಿ ಅವರನ್ನು ಎಡಬಲಕ್ಕೆ ನಿಲ್ಲಿಸಿಕೊಂಡು ಅವರ ಹೆಗಲ ಮೇಲೆ ಕೈ ಹಾಕಿ ಜಾತಿ ಧರ್ಮಗಳಿಂದ ಮೇಲೆದ್ದು ತನ್ನ ಹಕ್ಕುಗಳಿಗಾಗಿ ಹೋರಾಟ ಮಾಡಬೇಕೆಂದು ರೈತರಿಗೆ ಶಪಥ ಬೋಧನೆ ಮಾಡಿದ್ದ ಜೀವ.

ಒಕ್ಕಲುತನ ಮತ್ತು ಹೈನುಗಾರಿಕೆಯನ್ನು ನೆಚ್ಚಿರುವ ಜಾಟ ಸಮುದಾಯ ಉತ್ತರ ಭಾರತಕ್ಕೆ ಸೀಮಿತ. ಹರಿಯಾಣ, ಪಂಜಾಬ್, ಉತ್ತರಪ್ರದೇಶ ಹಾಗೂ ರಾಜಸ್ತಾನದಲ್ಲಿ ಜಾಟ ಜನಾಂಗ ಪಸರಿಸಿದೆ. ಪಕ್ಕಾ ಪಿತೃಪ್ರಧಾನ ಸಮಾಜ. ಊಳಿಗಮಾನ್ಯ ಗುಣ ಇನ್ನೂ ಅಳಿದಿಲ್ಲ. ಹಸಿರು ಕ್ರಾಂತಿಯ ಕಸುವಿನಿಂದಾಗಿ ಧನಾಢ್ಯ ಮತ್ತು ಬಲಾಢ್ಯ. ಚೌಧರಿ ಚರಣಸಿಂಗರು ಜಾಟ ಸೀಮೆಯ ನಿರ್ವಿವಾದಿತ ನಾಯಕರಾಗಿದ್ದರು. ಮುಸಲ್ಮಾನರೂ ಅವರ ನಾಯಕತ್ವ ಒಪ್ಪಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚೌಧರಿ ಚರಣಸಿಂಗ್ ಅವರು ಮಧ್ಯಮವರ್ಗದ ರೈತಾಪಿಗಳನ್ನು ಸಂಘಟಿಸಿ ಬೆಳೆಸಿದ್ದ MAJGAR (ಮುಸ್ಲಿಮ್-ಆಹಿರ್ (ಯಾದವ್)- ಜಾಟ್- ಗುಜ್ಜರ್-ರಜಪೂತ) ಎಂಬ ಸಾಮಾಜಿಕ ಮೈತ್ರಿಕೂಟ ಚೆದುರಿಹೋಗಿತ್ತು. ಒಮ್ಮೆ ಬಿಜೆಪಿ, ಮತ್ತೊಮ್ಮೆ ಸಮಾಜವಾದಿ ಪಾರ್ಟಿ, ಕಾಂಗ್ರೆಸ್ಸಿನ ಜೊತೆಗೆ ಚರಣಸಿಂಗ್ ಮಗ ಅಜಿತ್ ಸಿಂಗ್ ಮಾಡಿಕೊಂಡ ಅವಕಾಶವಾದಿ ಚುನಾವಣಾ ಮೈತ್ರಿಗಳು MAJGAR ಮೈತ್ರಿಕೂಟದ ಅಡಿಗಲ್ಲುಗಳನ್ನು ಕದಲಿಸಿಬಿಟ್ಟಿತ್ತು. 2013ರ ಕೋಮು ಗಲಭೆಗಳ ಹಾದಿ ಸಲೀಸಾಗಿತ್ತು. 2009ರಲ್ಲಿ ಅಜಿತ್ ಸಿಂಗ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಐದು ಲೋಕಸಭಾ ಸ್ಥಾನಗಳನ್ನು ಗೆದ್ದಿದ್ದರು. ಆದರೆ ಮುಸಲ್ಮಾನರು ಅವರಿಂದ ದೂರವಾಗಿದ್ದರು. ಚರಣಸಿಂಗ್ ನಿಧನದ ನಂತರ ಮೊದಲ ಬಾರಿಗೆ ಅವರ ಸೀಮೆಯ ಜಾಟರು ಮತ್ತು ಮುಸಲ್ಮಾನರು ಪರಸ್ಪರ ವಿರುದ್ಧ ದಿಕ್ಕುಗಳಲ್ಲಿ ಮತ ಚಲಾಯಿಸಿದ್ದರು.

1988ರ ಅಕ್ಟೋಬರ್ 25. ರಾಜೀವಗಾಂಧೀ ಅಂದಿನ ಪ್ರಧಾನಿ. ಬೊಫೋರ್ಸ್ ಹಗರಣ ಭುಗಿಲೆದ್ದು ವಿ.ಪಿ.ಸಿಂಗ್ ಅವರು ಕೇಂದ್ರ ಮಂತ್ರಿಮಂಡಲದಿಂದ ಹೊರಬಿದ್ದಿದ್ದರು. ಸರ್ಕಾರದ ಹೆಸರು ಕೆಟ್ಟಿತ್ತು. 35 ಬೇಡಿಕೆಗಳನ್ನು ಮುಂದಿಟ್ಟು ಲಕ್ಷಾಂತರ ರೈತರು ಟಿಕೇತ್ ನೇತೃತ್ವದಲ್ಲಿ ಸಂಸದ್ ಭವನಕ್ಕೆ ಕೂಗಳತೆ ದೂರದ ಬೋಟ್ ಕ್ಲಬ್‌ನಲ್ಲಿ ಮುತ್ತಿಗೆ ಹಾಕಿದ್ದರು.

ಚೌಧರಿ ಚರಣಸಿಂಗ್

ರೈತರ ಆಂದೋಲನ ದೆಹಲಿಯ ಸಾರ್ವಜನಿಕರ ಸಹಾನುಭೂತಿ ಗಳಿಸಿತ್ತು. ಏಳನೆಯ ದಿನ ಸರ್ಕಾರ ರೈತರ ಬೇಡಿಕೆಗಳನ್ನು ಒಪ್ಪಿತ್ತು. ರೈತರು ಬೋಟ್ ಕ್ಲಬ್ ಖಾಲಿ ಮಾಡಿದರು. ಉತ್ತರಪ್ರದೇಶದ ಮುಖ್ಯಮಂತ್ರಿ ಎನ್.ಡಿ.ತಿವಾರಿ ರೈತರ ಬೇಡಿಕೆಗಳ ಈಡೇರಿಕೆ ಆದೇಶಕ್ಕೆ ಸಹಿ ಹಾಕಿದರು.

ಭಾರತೀಯ ಕಿಸಾನ್ ಯೂನಿಯನ್ ಮತ್ತು ಮಹೇಂದ್ರಸಿಂಗ್ ಟಿಕೇತ್ ಪಶ್ಚಿಮ ಯುಪಿಯಲ್ಲಿ ಚರಣಸಿಂಗ್ ಮತ್ತು ಅವರ ಪಕ್ಷ ಲೋಕದಳ ತೆರವು ಮಾಡಿದ್ದ ಸ್ಥಾನವನ್ನು ತುಂಬಿದ್ದರು. ಲಾಗಾಯ್ತಿನಿಂದ ಅವರ ಜೊತೆಗಿದ್ದವರು ಗುಲಾಮ್ ಮಹಮ್ಮದ್ ಜೌಲಾ.

ಮಹೇಂದ್ರಸಿಂಗ್ ಟಿಕೇತ್ ಅವರ ಕಾಲದಲ್ಲೇ ಜಾಟ್-ಮುಸ್ಲಿಮ್ ಏಕತೆಯ ಬಹುದೊಡ್ಡ ಚಹರೆಯಾಗಿದ್ದವರು. ಇತ್ತೀಚಿನ ರೈತ ಚಳವಳಿಯ ಕಾಲದಲ್ಲಿ ಜಾಟ್-ಮುಸ್ಲಿಮ್ ರೈತರ ಏಕತೆಯ ವಿಶೇಷ ಮಹತ್ವವನ್ನು ಗೆರೆ ಎಳೆದು ಪ್ರತಿಪಾದಿಸಿದ್ದರು.

ಮಹೇಂದ್ರಸಿಂಗ್ ಟಿಕೇತ್ ಅವರ ವೇದಿಕೆಗಳಲ್ಲಿ ಸಂಚಾಲನೆಯ ಪಾರುಪತ್ತೆ ಸಂಪೂರ್ಣವಾಗಿ ಜೌಲಾ ಅವರದೇ ಆಗಿತ್ತು. ಸಾವಿರಾರು ರ್‍ಯಾಲಿಗಳ ವೇದಿಕೆಗಳು ಜೌಲಾ ಅವರ ಸಂಚಾಲನಾ ಕೌಶಲ್ಯಕ್ಕೆ ಸಾಕ್ಷಿಯಾದವು.

2013ರಲ್ಲಿ ಹಠಾತ್ತನೆ ಸಿಡಿದ ಕೋಮು ಗಲಭೆಗಳು ಹಿಂದು-ಮುಸ್ಲಿಂ ಮತಗಳ ಧ್ರುವೀಕರಣಕ್ಕೆ
ಕಾರಣವಾದವು. ಮಾಯಾವತಿ ಅವರೊಂದಿಗೆ ಬಂಡೆಯಂತೆ ನಿಂತಿದ್ದ ದಲಿತ ಮತಗಳನ್ನು ಕೂಡ ಚೆದುರಿಸಿದ್ದವು. ಸಾವಿರಾರು ವರ್ಷಗಳ ಇತಿಹಾಸ ಉಳ್ಳ ಪ್ರಬಲ ಖಾಪ್ ಪಂಚಾಯಿತಿಗಳು ಖುಲ್ಲಂಖುಲ್ಲಾ ಮೋದಿ ಮಂತ್ರ ಪಠಿಸಿದ್ದವು. ಆರುನೂರು ಕಿ.ಮೀ. ಉದ್ದಗಲಕ್ಕೆ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ’ಜನಿವಾರ ಕ್ರಾಂತಿ ಸಂದೇಶ’ದ ಬೃಹತ್ತಾದ ಕೇಸರಿ ಭಿತ್ತಿಪತ್ರಗಳು ರಾರಾಜಿಸಿದ್ದವು. ಗಂಗಾ ಬಯಲಿನ ಫಲವತ್ತು ನೆಲದಲ್ಲಿ ಕೋಮುದ್ವೇಷದ ಹಾಲಾಹಲದ ಹೊಲಗಳು ಹುಲುಸಾದವು.

ನರೇಶ್ ಟಿಕೇತ್

2021ರ ಜನವರಿ 28ರಂದು ಮುಝಫರ್‌ನಗರದಲ್ಲಿ ಜರುಗಿದ ಮೊದಲನೆಯ ಕಿಸಾನ್ ಮಹಾ ಪಂಚಾಯತ್ ಐತಿಹಾಸಿಕ ಎನಿಸಿತು. ಮುಝಫರ್‌ನಗರ ಕೋಮು ಗಲಭೆಗಳ ನಂತರ ಜಾಟರು ಮತ್ತು ಮುಸಲ್ಮಾನರು ಮೊದಲ ಸಲ ಒಂದೇ ವೇದಿಕೆಯ ಮೇಲೆ ಒಟ್ಟು ಸೇರಿದ್ದರು. ಕನಿಷ್ಠ ಪಕ್ಷ ಒಂದು ಲಕ್ಷ ರೈತರು ನೆರೆದಿದ್ದ ಈ ಸಭೆಯಲ್ಲಿ 30 ಸಾವಿರಕ್ಕೂ ಹೆಚ್ಚು ಮಂದಿ ಮುಸ್ಲಿಮ್ ರೈತರು ಪಾಲ್ಗೊಂಡಿದ್ದರು. ಈ ಸೀಮೆಯಲ್ಲಿ ಹುಟ್ಟಿ ಹಾಕಲಾಗಿದ್ದ ಕೋಮುವಾದದ ಸಂಚನ್ನು ಮುರಿಯುವ ಪಣ ತೊಡಲಾಗಿತ್ತು. ಖುದ್ದು ನರೇಶ್ ಟಿಕೇತ್ ಈ ಸಮಾವೇಶದಲ್ಲಿ ಕ್ಷಮೆ ಕೋರಿದರು. ಚರಣ್ ಸಿಂಗ್ ಅವರ ಮಗ ಅಜಿತ್ ಸಿಂಗ್ ಅವರ ರಾಷ್ಟ್ರೀಯ ಲೋಕದಳದ ವಿರುದ್ಧ 2019ರ ಲೋಕಸಭಾ ಚುನಾವಣೆಗಳಲ್ಲಿ ಕೆಲಸ ಮಾಡಿದ್ದಕ್ಕೆ ಮತ್ತು 2013ರ ಕೋಮುಗಲಭೆಗಳಲ್ಲಿ ಮುಸಲ್ಮಾನ ಸೋದರರ ಕೈಬಿಟ್ಟಿದ್ದಕ್ಕೆ ತಮ್ಮನ್ನು ಕ್ಷಮಿಸಬೇಕೆಂದು ವಿನಂತಿಸಿದರು. ನಾಯಕರು ರೈತರಲ್ಲಿ ಹಿಂದು-ಮುಸ್ಲಿಮ್ ಏಕತೆಯನ್ನು ಸಾರಿದರು. ಮಹೇಂದ್ರ ಸಿಂಗ್ ಟಿಕೇತ್ ಅವರ ಬಲಗೈಯಂತೆ ಕೆಲಸ ಮಾಡಿದ್ದ ರೈತ ನಾಯಕ ಗುಲಾಮ್ ಮಹಮ್ಮದ್ ಜೋಲಾಗೆ ಈಗ 85ರ ವಯಸ್ಸು. ಅವರೂ ಈ ಮಹಾಪಂಚಾಯತಿನಲ್ಲಿ ಭಾಗವಹಿಸಿ ವೇದಿಕೆ ಮೇಲಿದ್ದರು. 2013ರ ಕೋಮು ಗಲಭೆಗಳ ನಂತರ ಅವರು ಭಾರತೀಯ ಕಿಸಾನ್ ಯೂನಿಯನ್‌ನಿಂದ ದೂರವಾಗಿ ಭಾರತೀಯ ಕಿಸಾನ್ ಮಜ್ದೂರ್ ಮಂಚ್ ಕಟ್ಟಿಕೊಂಡಿದ್ದರು. ನರೇಶ್ ಕ್ಷಮೆ ಕೋರಿದ
ನಂತರ ಅಜಿತ್ ಸಿಂಗ್ ಅವರ ಮಗ ಜಯಂತ್ ಚೌಧರಿ ಮಹಮ್ಮದ್ ಜೌಲಾ ಅವರ ಕಾಲುಮುಟ್ಟಿ ನಮಸ್ಕರಿಸಿದರು. 60 ಮಂದಿಯನ್ನು ಬಲಿತೆಗೆದುಕೊಂಡು 65 ಸಾವಿರ ಮಂದಿ ಮುಸಲ್ಮಾನರನ್ನು ನಿರಾಶ್ರಿತರನ್ನಾಗಿ ಮಾಡಿದ ಕೋಮುಗಲಭೆಗಳ ಗಾಯಗಳು ಇನ್ನು ಮಾಯುತ್ತವೆ ಎಂಬ ವಿಶ್ವಾಸವನ್ನು ಜೌಲಾ ವ್ಯಕ್ತಪಡಿಸಿದರು. ಮುಸಲ್ಮಾನರಿಗೆ ಘನತೆಯ ಪ್ರಾತಿನಿಧ್ಯ ನೀಡಿದರೆ ತಮ್ಮ ಸಂಘಟನೆಯನ್ನು ಭಾರತೀಯ ಕಿಸಾನ್ ಯೂನಿಯನ್‌ನಲ್ಲಿ ವಿಲೀನಗೊಳಿಸಲೂ ಸಿದ್ಧವೆಂದು ಸಾರಿದ್ದರು.

ತಮ್ಮ ಮಾತಿನ ಸರದಿ ಬಂದಾಗ ಮುಲಾಜಿಲ್ಲದೆ ನೆರೆದಿದ್ದವರ ಮುಖಕ್ಕೆ ಹೊಡೆದಂತೆ ಜೌಲಾ ಹೇಳಿದ್ದರು- ’ಈವರೆಗೆ ನೀವು ಎರಡು ಬಹುದೊಡ್ಡ ತಪ್ಪುಗಳ ಮಾಡಿದ್ದೀರಿ. ಒಂದನೆಯದು ನೀವು ಅಜಿತ್ ಸಿಂಗ್ ಅವರನ್ನು ಸೋಲಿಸಿದಿರಿ. ಎರಡನೆಯದಾಗಿ 2013ರ ಕೋಮುಗಲಭೆಗಳಲ್ಲಿ ಮುಸಲ್ಮಾನರನ್ನು ಕೊಂದಿರಿ’. ಜೋಲಾ ಮಾತನ್ನು ಸಭೆ ತಿರಸ್ಕರಿಸಲಿಲ್ಲ, ಅಣಕಿಸಲಿಲ್ಲ. ಬದಲಾಗಿ ಆತ್ಮನಿರೀಕ್ಷೆ ಮಾಡಿಕೊಳ್ಳುತ್ತಿದೆ ಎಂಬಂತೆ ಸದ್ದಿಲ್ಲದೆ ಆಲಿಸಿತು.

2013ರಲ್ಲಿ ಹುಟ್ಟಿಹಾಕಲಾಗಿದ್ದ ಸಾಮಾಜಿಕ ಬಿಗುವು ಇದೀಗ ಸಡಿಲಾಗತೊಡಗಿದೆ. ನಾವು ಅವರನ್ನು ಕ್ಷಮಿಸಿದ್ದೇವೆ. ರಾಕೇಶ್ ಭಾವುಕರಾಗಿ ಕಣ್ಣೀರು ಹಾಕಿದ ನಂತರ ಮೇಲ್ವರ್ಗದ ಮುಸಲ್ಮಾನರು ಮಾತ್ರವೇ ಅಲ್ಲ, ಕೆಳಸ್ತರದ ಮುಸ್ಲಿಮರು ಕೂಡ ತಾವು ಮೊದಲು ರೈತರು, ಆನಂತರವೇ ಮುಸ್ಲಿಮರು ಎಂಬ ಭಾವನೆಯನ್ನು ವ್ಯಕ್ತಪಡಿಸಿದ್ದಾರೆಂದು ಜೌಲಾ ಘೋಷಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಮತ್ತೇ ಹೋರಾಟ: ಪಂಜಾಬ್‌ ರಾಜಧಾನಿ ಗಡಿಯಲ್ಲಿ ಬೀಡು ಬಿಟ್ಟ ಅನ್ನದಾತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...