Homeಮುಖಪುಟಹೈದರಾಬಾದ್‌‌ ದಿಶಾ ಪ್ರಕರಣ; ಆರೋಪಿಗಳ ಕೊಲೆ ಮಾಡಲೆಂದೇ ಪೊಲೀಸರಿಂದ ‘ನಕಲಿ ಎನ್‌ಕೌಂಟರ್‌‌’: ತನಿಖಾ ಆಯೋಗ ವರದಿ

ಹೈದರಾಬಾದ್‌‌ ದಿಶಾ ಪ್ರಕರಣ; ಆರೋಪಿಗಳ ಕೊಲೆ ಮಾಡಲೆಂದೇ ಪೊಲೀಸರಿಂದ ‘ನಕಲಿ ಎನ್‌ಕೌಂಟರ್‌‌’: ತನಿಖಾ ಆಯೋಗ ವರದಿ

ಆರೋಪಿಗಳು ಪೊಲೀಸರ ಶಸ್ತ್ರಾಸ್ತ್ರಗಳನ್ನು ಕಸಿದು ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂಬ ಆರೋಪಗಳು ಸುಳ್ಳಾಗಿದ್ದು, 10 ಕ್ಕೂ ಹೆಚ್ಚು ಪೊಲೀಸರ ವಿರುದ್ಧ ಕೊಲೆ ಪ್ರಕರಣ ಹೊರಿಸಲು ಆಯೋಗ ಶಿಫಾರಸು ಮಾಡಿದೆ

- Advertisement -
- Advertisement -

ತೆಲಂಗಾಣದ ಹೈದರಾಬಾದ್‌ ಪಶುವೈದ್ಯೆಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಯ ಆರೋಪಿಗಳ ಎನ್‌ಕೌಂಟರ್ ಬಗ್ಗೆ ತನಿಖೆ ನಡೆಸುತ್ತಿರುವ ಸುಪ್ರೀಂಕೋರ್ಟ್ ನೇಮಿಸಿದ ತನಿಖಾ ಆಯೋಗ, ತನ್ನ ವರದಿಯಲ್ಲಿ ಎನ್‌ಕೌಂಟರ್ ಅನ್ನು ‘ನಕಲಿ’ ಎಂದು ಎಂದು ಶುಕ್ರವಾರ ಹೇಳಿದೆ. ಆರೋಪಿಗಳನ್ನು “ಉದ್ದೇಶಪೂರ್ವಕವಾಗಿ ಅವರ ಸಾವಿಗೆ ಕಾರಣವಾಗುವ ಉದ್ದೇಶದಿಂದ ಗುಂಡು ಹಾರಿಸಲಾಗಿದೆ” ಎಂದು ಸಮಿತಿ ವರದಿಯಲ್ಲಿ ಉಲ್ಲೇಖಿಸಿದೆ.

ಎನ್‌ಕೌಂಟರ್‌ ಬಗ್ಗೆ ತನಿಖೆಗೆ ರಚಿಸಲಾಗಿರುವ ಸಿರ್ಪುರ್ಕರ್ ಆಯೋಗದ ವರದಿಯು, “ನಾವು ಪರಿಗಣಿಸಿದ ಅಭಿಪ್ರಾಯದಲ್ಲಿ, ಆರೋಪಿಗಳ ಮೇಲೆ ಉದ್ದೇಶಪೂರ್ವಕವಾಗಿ ಅವರ ಸಾವಿಗೆ ಕಾರಣವಾಗುವ ಉದ್ದೇಶದಿಂದ ಗುಂಡು ಹಾರಿಸಿದ್ದಾರೆ. ಜೊತೆಗೆ ಗುಂಡಿನ ದಾಳಿಯಿಂದ ಅವರು ಸಾವಿಗೀಡಾಗುತ್ತಾರೆ ಎಂದು ತಿಳಿದೆ ಇದು ನಡೆದಿದೆ” ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವರದಿ ಸಲ್ಲಿಕೆಯಾದ ನಂತರ, ಆಯೋಗದ ವರದಿಯ ಮೇಲೆ ಕ್ರಮ ಕೈಗೊಳ್ಳುವಂತೆ ತೆಲಂಗಾಣ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನೂ ಓದಿ: ತಪ್ಪು ಮಾಡಿದವರನ್ನು ಎನ್‌ಕೌಂಟರ್‌ ಮಾಡುತ್ತೇವೆ: ತೆಲಂಗಾಣ ಸಚಿವರ ಎಚ್ಚರಿಕೆ

26 ವರ್ಷದ ಪಶುವೈದ್ಯೆಯೊಬ್ಬರು ಕ್ಲಿನಿಕ್‌ಗೆ ಭೇಟಿ ನೀಡಿ ಮನೆಗೆ ತೆರಳುತ್ತಿದ್ದಾಗ ಶಾದ್‌ನಗರದಲ್ಲಿ ಅತ್ಯಾಚಾರ ನಡೆಸಿ ಅವರನ್ನು ಸಜೀವ ದಹನ ಮಾಡಲಾಗಿದೆ ಎಂದು ವರದಿಯಾಗಿತ್ತು. ವೈದ್ಯೆಯ ಶವ ಹೆದ್ದಾರಿಯ ಅಂಡರ್‌ಪಾಸ್‌ನಲ್ಲಿ ಪತ್ತೆಯಾಗಿತ್ತು.

ಇದರ ನಂತರ ಬಂಧನಕ್ಕೆ ಒಳಗಾಗಿದ್ದ ನಾಲ್ವರು ಆರೋಪಿಗಳಾದ ಜೊಲ್ಲು ಶಿವ, ಮೊಹಮ್ಮದ್ ಆರಿಫ್, ಜೊಲ್ಲು ನವೀನ್ ಮತ್ತು ಚೆನ್ನಕೇಶವುಲು ಅವರು 2019 ರಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟಿದ್ದರು. ಆಪಾದಿತ ಎನ್‌ಕೌಂಟರ್ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಮೂರು ಸದಸ್ಯರ ಆಯೋಗವನ್ನು ನೇಮಿಸಿತ್ತು. ಆಯೋಗವು ತನ್ನ ವರದಿಯಲ್ಲಿ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿದೆ.

ಆರೋಪಿಗಳು ಪೊಲೀಸರ ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡು ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂಬ ಆರೋಪಗಳು ಸುಳ್ಳು ಎಂದು ಆಯೋಗವು ಹೇಳಿದ್ದು, 10 ಕ್ಕೂ ಹೆಚ್ಚು ಪೊಲೀಸರ ವಿರುದ್ಧ ಕೊಲೆ ಆರೋಪಗಳನ್ನು ಹೊರಿಸಲು ಶಿಫಾರಸು ಮಾಡಿದೆ.

ಇದನ್ನೂ ಓದಿ: ತೆಲಂಗಾಣ ಎನ್‌ಕೌಂಟರ್‌: ಶವಗಳನ್ನು ರಕ್ಷಿಸಲು ಶೀತಲ ಪೆಟ್ಟಿಗೆಗಳ ಕೊರತೆ – ವೈದ್ಯರ ಪರದಾಟ

“ದಾಖಲೆಯಲ್ಲಿರುವ ಸಂಪೂರ್ಣ ವಿಷಯವನ್ನು ಪರಿಗಣಿಸಿದ ನಂತರ, ಮೃತರು 06.12.2019 ರ ಘಟನೆಗೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರಗಳನ್ನು ಕಸಿದುಕೊಳ್ಳುವುದು, ಬಂಧನದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವುದು, ಪೊಲೀಸರ ಮೇಲೆ ಹಲ್ಲೆ ಮತ್ತು ಗುಂಡು ಹಾರಿಸುವುದು ಮುಂತಾದ ಯಾವುದೇ ಅಪರಾಧವನ್ನು ಮಾಡಿಲ್ಲ ಎಂದು ನಾವು ತೀರ್ಮಾನಿಸುತ್ತೇವೆ” ಎಂದು ತನಿಖಾ ಆಯೋಗದ ವರದಿ ಹೇಳಿದೆ.

ನ್ಯಾಯಮೂರ್ತಿ ಸಿರ್ಪುರ್ಕರ್ ನೇತೃತ್ವದ ಆಯೋಗವು ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ‘ಸುಗಮಗೊಳಿಸಲು’ ಕೂಡಾ ಶಿಫಾರಸುಗಳನ್ನು ಮಾಡಿದೆ. ಎಫ್‌ಐಆರ್ ನೋಂದಣಿ, ಬಂಧನ ಪ್ರಕ್ರಿಯೆಗಳಿಗೆ ಸಂಬಂಧಿಸಿದ ಕಾನೂನುಗಳ ಕಡ್ಡಾಯ ಅನುಸರಣೆ, ಬಾಡಿ ಕ್ಯಾಮೆರಾಗಳ ಬಳಕೆ ಮತ್ತು ಎಲ್ಲಾ ತನಿಖಾ ಪ್ರಕ್ರಿಯೆಗಳ ಕಡ್ಡಾಯ ವೀಡಿಯೊಗ್ರಫಿಗೆ ಸಂಬಂಧಿಸಿದಂತೆ ಶಿಫಾರಸುಗಳನ್ನು ಮಾಡಲಾಗಿದೆ.

ತನಿಖೆ ಪೂರ್ಣಗೊಂಡು ಅಂತಿಮ ವರದಿಯನ್ನು ಸಂಬಂಧಪಟ್ಟ ನ್ಯಾಯಾಲಯಕ್ಕೆ ಸಲ್ಲಿಸುವವರೆಗೆ ಯಾವುದೇ ಪೊಲೀಸ್ ಅಧಿಕಾರಿಯು ತನಿಖೆಯಲ್ಲಿರುವ ಅಪರಾಧಕ್ಕೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿ ನಡೆಸಬಾರದು ಎಂದು ಅದು ಸೂಚಿಸಿದೆ.

ಇದನ್ನೂ ಓದಿ: ತೆಲಂಗಾಣ ಎನ್‌ಕೌಂಟರ್‌ನಲ್ಲಿ ಭಾಗಿಯಾದ ಪೊಲೀಸರ ವಿರುದ್ಧ ಸುಪ್ರೀಂನಲ್ಲಿ ದೂರು ದಾಖಲು

ಪೊಲೀಸ್ ಠಾಣೆಯು ತನಿಖೆಯ ಕುರಿತು ಅಪ್‌ಡೇಟ್‌ಗಳನ್ನು ಪತ್ರಿಕಾ ಟಿಪ್ಪಣಿಯನ್ನು ನೀಡಬಹುದು, ಆದರೆ ತನಿಖೆಯ ಸಮಯದಲ್ಲಿ ಸಂಗ್ರಹಿಸಿದ ಮಾಹಿತಿಯನ್ನು ಬಹಿರಂಗಪಡಿಸಬಾರದು ಎಂದು ಅದು ಹೇಳಿದೆ. ಜೊತೆಗೆ ಸುಳ್ಳು ಸಾಕ್ಷಿ – ಸುಳ್ಳು ಸಾಕ್ಷ್ಯ ನೀಡಿದವರಿಗೆ ಶಿಕ್ಷಿಸಲು ಪರಿಣಾಮಕಾರಿ ಕ್ರಮವನ್ನು ರಚಿಸಲು ಆಯೋಗವು ಶಿಫಾರಸು ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...