Homeಕರ್ನಾಟಕ‘ಪಠ್ಯಪುಸ್ತಕಗಳ ಬ್ರಾಹ್ಮಣೀಕರಣ’ ವಿರುದ್ಧ ‘ಮುಂದಿನ ನಡೆ ಬಗ್ಗೆ’ ಶನಿವಾರ ಬೆಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಭೆ

‘ಪಠ್ಯಪುಸ್ತಕಗಳ ಬ್ರಾಹ್ಮಣೀಕರಣ’ ವಿರುದ್ಧ ‘ಮುಂದಿನ ನಡೆ ಬಗ್ಗೆ’ ಶನಿವಾರ ಬೆಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಭೆ

ಸಾಮಾಜಿಕ ಮಾಧ್ಯಮಗಳಲ್ಲಿ ಈಗಾಗಲೇ ಪಠ್ಯಪುಸ್ತಕಗಳ ಬ್ರಾಹ್ಮಣೀಕರದ ವಿರುದ್ಧ ಅಭಿಯಾನ ಪ್ರಾರಂಭವಾಗಿದ್ದು ಹಲವಾರು ಪೋಸ್ಟರ್‌ಗಳು ಹರಿದಾಡುತ್ತಿದೆ. ಅವುಗಳಲ್ಲಿ ಆಯ್ದ ಕೆಲವು ಇಲ್ಲಿವೆ.

- Advertisement -
- Advertisement -

ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರವು, ನಾಡಿನ ಹಲವು ಚಿಂತಕರು ಮತ್ತು ಮಹಾತ್ಮರ ಪಾಠಗಳನ್ನು ಶಾಲಾ ಪಠ್ಯದಿಂದ ಕೈಬಿಟ್ಟಿರುವುದನ್ನು ವಿರೋಧಿಸಿ, ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಣ ತಜ್ಞರು ಹಾಗೂ ಸಮಾನ ಮನಸ್ಕರು ಬೆಂಗಳೂರಿನ ಗಾಂಧಿಭವನದಲ್ಲಿ ಶನಿವಾರದಂದು ಸಭೆಯೊಂದನ್ನು ಆಯೋಜಿಸಿದ್ದು, ‘ಪಠ್ಯಪುಸ್ತಕಗಳ ಬ್ರಾಹ್ಮಣೀಕರಣ’ ವಿಷಯದಲ್ಲಿ ‘ನಮ್ಮ ಮುಂದಿನ ನಡೆ ಏನಾಗಿರಬೇಕು?’ ಎಂಬ ವಿಚಾರದಲ್ಲಿ ಚರ್ಚೆ ನಡೆಸಲಿದ್ದಾರೆ.

ರಾಜ್ಯ ಸರ್ಕಾರ 2022-23ರ ಸಾಲಿನ ಶಾಲಾ ಪಠ್ಯಪುಸ್ತಕವನ್ನು ಆರೆಸ್ಸೆಸ್‌ ಮತ್ತು ಬಿಜೆಪಿ ಪರ ಒಲವಿರುವ ಬಲಪಂಥೀಯ ಲೇಖಕ ರೋಹಿತ್‌ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ಪರಿಷ್ಕರಿಸಿದೆ. ಈ ವೇಳೆ ಸಮಿತಿಯು ನಾಡಿನ ಖ್ಯಾತ ಸಾಹಿತಿಗಳಾದ ಪಿ.ಲಂಕೇಶ್‌, ಸಾರಾ ಅಬೂಬಕ್ಕರ್‌, ಡಾ.ಜಿ.ರಾಮಕೃಷ್ಣ ಅವರ ಬರಹಗಳು ಸೇರಿದಂತೆ, ಸಮಾಜ ಸುಧಾರಕ ನಾರಾಯಣ ಗುರು, ಕ್ರಾಂತಿಕಾರಿ ನಾಯಕ ಭಗತ್‌‌ಸಿಂಗ್‌, ಸಾಮಾಜಿಕ ನ್ಯಾಯದ ಹರಿಕಾರ ಪೆರಿಯಾರ್‌‌ ಸೇರಿದಂತೆ ಹಲವಾರು ಮಹಾತ್ಮರ ಪರಿಚಯಿಸುವ ಪಠ್ಯಗಳನ್ನು ಕೈಬಿಟ್ಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಎಲ್ಲಾ ಬೆಳವಣಿಗೆಯ ಹಿನ್ನಲೆಯಲ್ಲಿ ರಾಜ್ಯದ ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಣ ತಜ್ಞರು ಹಾಗೂ ಸಮಾನ ಮನಸ್ಕರು ಬೆಂಗಳೂರಿನ ಗಾಂಧಿ ಭವನದಲ್ಲಿ ಸೇರಿ, ‘ಪಠ್ಯಪುಸ್ತಕಗಳ ಬ್ರಾಹ್ಮಣೀಕರಣ’ದ ವಿರುದ್ಧ, ‘‘ನಮ್ಮ ಮುಂದಿನ ನಡೆ ಏನಾಗಿರ ಬೇಕು” ಎಂಬ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ: ‘ಕೆಟ್ಟ ನಡತೆಯ ಇಂಥ ಸಿರಿಯೆಂಬ ಹೆಣ್ಣು’: ನೂತನ ಪಠ್ಯದಲ್ಲಿ ಹೆಣ್ಣನ್ನು ಕೀಳಾಗಿ ಬಿಂಬಿಸಿರುವ ಬನ್ನಂಜೆ ಗೋವಿಂದಾಚಾರ್ಯ

ಸಭೆಯು ಮೇ 21ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯಲಿದೆ. ರಾಜ್ಯದ ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಣ ತಜ್ಞರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸರ್ಕಾರವು ಕೈ ಬಿಟ್ಟಿರುವ ಪಾಠಗಳ ಜಾಗಕ್ಕೆ ಆರೆಸ್ಸೆಸ್‌ ನಾಯಕ ಹೆಡಗೆವಾರ್‌ ಅವರು ‘ಭಗವಾಧ್ವಜ ನಮ್ಮ ಆದರ್ಶವಾಗಬೇಕು’ ಎಂಬ ಭಾಷಣ ಹಾಗೂ ಬನ್ನಂಜೆ ಗೋವಿಂದಾಚಾರ್ಯ ಮತ್ತು ಆರ್‌.ಗಣೇಶ್‌ ಅವರ ವೈದಿಕ ಸಂಸ್ಕೃತಿಯ ವೈಭವೀಕರಣ, ಸ್ತ್ರೀದ್ವೇಷಿ ಬರಹಗಳನ್ನು ಶಾಲಾ ಪಠ್ಯದಲ್ಲಿ ಸೇರಿಸಲಾಗಿದೆ.

ಸರ್ಕಾರವು ಶಾಲಾ ಪಠ್ಯಗಳನ್ನು ರಾಜಕೀಯ ಪಕ್ಷಗಳ ಪುಸ್ತಕವನ್ನಾಗಿ ಮಾಡುತ್ತಿರುವುದರ ವಿರುದ್ದ ರಾಜ್ಯದಾದ್ಯಂತ ಈಗಾಗಲೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಹಲವಾರು ಶಿಕ್ಷಣ ತಜ್ಞರು, ಅಧ್ಯಾಪಕರು, ಪಠ್ಯಗಳನ್ನು ಪರಿಷ್ಕರಣೆ ಮಾಡಿರುವ ರೋಹಿತ್ ಚಕ್ರತೀರ್ಥ ಅವರ ಅರ್ಹತೆಗಳ ಬಗ್ಗೆ ಕೂಡಾ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಜಿ.ರಾಮಕೃಷ್ಣ, ಲಂಕೇಶ್‌ರವರ ಜಾತಿ ಗೊತ್ತಿಲ್ಲ: ರೋಹಿತ್ ಚಕ್ರತೀರ್ಥ ಸಂದರ್ಶನ

ಸಾಮಾಜಿಕ ಮಾಧ್ಯಮಗಳಲ್ಲಿ ಈಗಾಗಲೇ ಪಠ್ಯಪುಸ್ತಕಗಳ ಬ್ರಾಹ್ಮಣೀಕರದ ವಿರುದ್ಧ ಅಭಿಯಾನ ಪ್ರಾರಂಭವಾಗಿದ್ದು ಹಲವಾರು ಪೋಸ್ಟರ್‌ಗಳು ಹರಿದಾಡುತ್ತಿದೆ. ಅವುಗಳಲ್ಲಿ ಆಯ್ದ ಕೆಲವು ಇಲ್ಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮುಗ್ಧ ಮಕ್ಕಳ ಕಲಿಕೆಯ ಪಠ್ಯ ಪುಸ್ತಕಗಳ ಕೇಸರಿಕರಣ, ಕ್ಷುದ್ರ ಮತ್ತು ಕ್ಷುಲ್ಲಕ! ಅಂಧಭಕ್ತರ ಆರ್ಭಟ ಈ ಮಟ್ಟದ ದುರ್ಗತಿಗೆ ಇಳಿದಿದೆ! ನಾಡಿನ ಸಮಸ್ತರೂ ಇದರ ವಿರುದ್ಧ ಧ್ವನಿ ಎತ್ತಬೇಕು.

LEAVE A REPLY

Please enter your comment!
Please enter your name here

- Advertisment -

ಪ್ರಯಾಣಿಕರಿಗೆ 200, 500 ರೂಪಾಯಿ ಮುಖಬೆಲೆಯ ಭಾರತೀಯ ನೋಟು ಕೊಂಡೊಯ್ಯಲು ಅನುಮತಿಸಿದ ನೇಪಾಳ

ಗಡಿಯಾಚೆಗಿನ ಪ್ರಯಾಣ ಮತ್ತು ವ್ಯಾಪಾರವನ್ನು ಸರಾಗಗೊಳಿಸುವ ಸಲುವಾಗಿ, ನೇಪಾಳ ಸರ್ಕಾರವು ರೂ.200 ಮತ್ತು ರೂ.500 ಮೌಲ್ಯದ ಭಾರತೀಯ ಕರೆನ್ಸಿ ನೋಟುಗಳನ್ನು ಹೊಂದುವ ಮೇಲಿದ್ದ ನಿರ್ಬಂಧಗಳನ್ನು ತೆಗೆದುಹಾಕಿದೆ. ಸೋಮವಾರ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರವು,...

ಮತದಾರರ ತೀರ್ಪಿನೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ಬರಲು ಬಿಡುತ್ತೇವೆ; ಕಾಂಗ್ರೆಸ್‌ ಜೊತೆಗೆ ಮೈತ್ರಿ ಇಲ್ಲ: ಕೇರಳ ಸಿಪಿಐ(ಎಂ) ಮುಖ್ಯಸ್ಥ

ಕೇರಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಂದು ಕಾರ್ಪೊರೇಷನ್ ಮತ್ತು ಪುರಸಭೆಯಲ್ಲಿ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ, ಎರಡು ಪ್ರತಿಸ್ಪರ್ಧಿ ರಂಗಗಳಾದ ಯುಡಿಎಫ್ ಮತ್ತು ಎಲ್‌ಡಿಎಫ್ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು...

ಕೊಂದವರು ಯಾರು: ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು: ಮಲ್ಲಿಗೆ ಸಿರಿಮನೆ

“ನಾವು ಕೊಂದವರು ಯಾರು’ ಆಂದೋಲನದಿಂದ ‘ಮಹಿಳಾ ನ್ಯಾಯ ಸಮಾವೇಶ’ವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಬೇಕು ಎಂದುಕೊಂಡಾಗ ನೂರಾರು ಪ್ರಶ್ನೆಗಳು, ನೂರಾರು ಆಪಾದನೆಗಳು, ಆರೋಪಗಳು ಬಂದವು. ಯಾಕೆ ಇಲ್ಲಿಗೆ ಬರುತ್ತಿದ್ದಾರೆ, ಇಲ್ಲಿಗೇ ಬಂದು ಏನು ಮಾಡುತ್ತಾರೆ ಅನ್ನುವ...

ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸೋಮವಾರ (ಡಿ.15) ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇಮಕಾತಿ ಪತ್ರಗಳನ್ನು ಹಸ್ತಾಂತರಿದ್ದು, ಇದೇ ಸಂದರ್ಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆದಿರುವ ವಿಡಿಯೋವೊಂದು ವೈರಲ್...

ಎಸ್‌ಐಆರ್ ಬಳಿಕ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟ : 58 ಲಕ್ಷ ಹೆಸರು ಡಿಲೀಟ್!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ಮಂಗಳವಾರ (ಡಿಸೆಂಬರ್ 16) ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಸಾವು, ವಲಸೆ ಮತ್ತು ಎಣಿಕೆ ನಮೂನೆಗಳನ್ನು ಸಲ್ಲಿಸದಿರುವುದು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ಇಡಿ ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಹಣ ಅಕ್ರಮ ವರ್ಗಾವಣೆ ದೂರನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

ಕಾನೂನುಗಳಿಗೆ ಹಿಂದಿ ಬಳಸುವುದರಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ಪಿ.ಚಿದಂಬರಂ

ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಗಳ ಶೀರ್ಷಿಕೆಗಳಲ್ಲಿ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಅಭ್ಯಾಸ ಹೆಚ್ಚುತ್ತಿದೆ. ಈ ಪ್ರವೃತ್ತಿಯಿಂದ ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯವಾಗಿದೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದರು. ಈ...

ಸಿಡ್ನಿ ಶೂಟೌಟ್‌: ಭಾರತೀಯ ಪಾಸ್‌ಪೋರ್ಟ್‌ ಬಳಸಿ ಫಿಲಿಪೈನ್ಸ್‌ಗೆ ಪ್ರಯಾಣಿಸಿದ್ದ ತಂದೆ-ಮಗ?

ಸಿಡ್ನಿಯಲ್ಲಿ ಹದಿನೈದು ಜನರನ್ನು ಗುಂಡಿಕ್ಕಿ ಕೊಂದ ತಂದೆ ಮತ್ತು ಮಗನನ್ನು ಪಾಕಿಸ್ತಾನಿ ಪ್ರಜೆಗಳು ಎಂದು ಈಗಾಗಲೇ ಗುರುತಿಸಲಾಗಿದೆ ಎಂಬ ಹಿಂದಿನ ವರದಿಗಳಿಗೆ ವಿರುದ್ಧವಾಗಿ, ಇಬ್ಬರೂ ಕಳೆದ ತಿಂಗಳು ನವೆಂಬರ್‌ನಲ್ಲಿ ಭಾರತೀಯ ಪಾಸ್‌ಪೋರ್ಟ್‌ಗಳನ್ನು ಬಳಸಿ...

ವರದಕ್ಷಿಣೆ ನಿರ್ಮೂಲನೆ ತುರ್ತು ಸಾಂವಿಧಾನಿಕ, ಸಾಮಾಜಿಕ ಅಗತ್ಯ: ಸುಪ್ರೀಂ ಕೋರ್ಟ್

ನವದೆಹಲಿ: ವರದಕ್ಷಿಣೆ ನಿರ್ಮೂಲನೆ ತುರ್ತು ಸಾಂವಿಧಾನಿಕ ಮತ್ತು ಸಾಮಾಜಿಕ ಅಗತ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಸ್ತಿತ್ವದಲ್ಲಿರುವ ಕಾನೂನುಗಳು "ನಿಷ್ಪರಿಣಾಮಕಾರಿತ್ವ" ಮತ್ತು "ದುರುಪಯೋಗ" ಎರಡರಿಂದಲೂ ಬಳಲುತ್ತಿವೆ ಮತ್ತು ದುಷ್ಟ ಪದ್ಧತಿ ಇನ್ನೂ ವ್ಯಾಪಕವಾಗಿ...

ಕೇರಳ ಚಲನಚಿತ್ರೋತ್ಸವ : ಪ್ಯಾಲೆಸ್ತೀನ್ ಕುರಿತ 4 ಸಿನಿಮಾಗಳು ಸೇರಿ 19 ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ ಕೇಂದ್ರ

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ 2025ರ ಕೇರಳ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 19 ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದೆ ಎಂದು ರಾಜ್ಯದ ಆಡಳಿತಾರೂಢ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಮರಿಯನ್...