Homeರಾಷ್ಟ್ರೀಯರಸ್ತೆ ಗಲಾಟೆಯಲ್ಲಿ ಕೊಲೆ: 1 ವರ್ಷ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂಕೋರ್ಟ್; ನವಜೋತ್‌ ಸಿಂಗ್‌...

ರಸ್ತೆ ಗಲಾಟೆಯಲ್ಲಿ ಕೊಲೆ: 1 ವರ್ಷ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂಕೋರ್ಟ್; ನವಜೋತ್‌ ಸಿಂಗ್‌ ಸಿಧು ಶರಣು

- Advertisement -
- Advertisement -

34 ವರ್ಷಗಳ ಹಿಂದೆ ರಸ್ತೆಯಲ್ಲಿ ವ್ಯಕ್ತಿಯೊಬ್ಬನನ್ನು ಥಳಿಸಿ ಕೊಂದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದ ಒಂದು ದಿನದ ನಂತರ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಶುಕ್ರವಾರ ಪಂಜಾಬ್‌ನ ಪಟಿಯಾಲಾ ನ್ಯಾಯಾಲಯದಲ್ಲಿ ಶರಣಾಗಿದ್ದಾರೆ. ಅನಾರೋಗ್ಯದ ಕಾರಣ ನೀಡಿದ ಅವರು ಶರಣಾಗಲು ಇನ್ನೂ ಕೆಲವು ವಾರಗಳ ಕಾಲಾವಕಾಶ ಕೋರಿದ್ದರು.

ಸಮಯಾವಕಾಶಕ್ಕಾಗಿ ಸುಪ್ರೀಂ ಕೋರ್ಟ್‌ನಲ್ಲಿ ನವಜೋತ್ ಸಿಧು ಪರ ಹಾಜರಾದ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರಿಗೆ ನ್ಯಾಯಮೂರ್ತಿ ಎಎಂ ಖಾನ್ವಿಲ್ಕರ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರನ್ನು ಸಂಪರ್ಕಿಸಲು ಹೇಳಿದರು. ಆದರೆ ಇದನ್ನು ಮುಖ್ಯ ನ್ಯಾಯಮೂರ್ತಿಯ ಮುಂದೆ ಪ್ರಸ್ತಾಪಿಸಲು ಸಾಧ್ಯವಿಲ್ಲ ಎಂದು ಸಿದ್ದು ಅವರ ತಂಡ ಹೇಳಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸುಪ್ರೀಂ ಆದೇಶದ ನಂತರ ಸಿಧು ಅವರು, ‘ಕಾನೂನಿಗೆ ತಲೆ ಬಾಗುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ. ಪ್ರಕರಣದಲ್ಲಿ ಗುರುವಾರದಂದು ಸುಪ್ರೀಂ ಕೋರ್ಟ್ ಅವರಿಗೆ ಒಂದು ವರ್ಷದ ‘ಕಠಿಣ ಜೈಲು ಶಿಕ್ಷೆ’ ವಿಧಿಸಿದೆ.

ಸಿಧು ಅವರ ಸಮಯ ಕೋರಿಕೆಯನ್ನು ಪಂಜಾಬ್‌ ಸರ್ಕಾರವನ್ನು ಪ್ರತಿನಿಧಿಸುವ ವಕೀಲರು ವಿರೋಧಿಸಿದ್ದರೆ. ಇದಕ್ಕೆ ಪ್ರತಿಕ್ರಿಯಿಸಿದ ಸಿಧು ಪರ ವಕೀಲ ಅಭಿಷೇಕ್‌ ಸಿಂಘ್ವಿ, “ನಾನು ಶರಣಾಗುತ್ತೇನೆ ಎಂದು ಹೇಳುತ್ತಿದ್ದೇನೆ. ಸಮಯಾವಕಾಶ ನೀಡುವ ಮನವಿಯನ್ನು ಪರಿಗಣಿಸುವುದು ನಿಮ್ಮ ವಿವೇಚನೆಗೆ ಬಿಟ್ಟ ವಿಷಯವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತ್ರಿಶೂಲವನ್ನು ನೀಡುತ್ತೇವೆ, ಪಡೆಯುತ್ತೇವೆ, ಬಳಸುತ್ತೇವೆ: ಪೊಲೀಸರ ಎದುರೇ ಬಜರಂಗದಳ ಕಾರ್ಯಕರ್ತರ ಘೋಷಣೆ 

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಖಾನ್ವಿಲ್ಕರ್, “ಔಪಚಾರಿಕ ಅರ್ಜಿಯನ್ನು ಇರಿಸಿ. ಈ ಬಗ್ಗೆ ನಾವು ನೋಡುತ್ತೇವೆ. ಅರ್ಜಿಯನ್ನು ಸಲ್ಲಿಸಿ ಮುಖ್ಯ ನ್ಯಾಯಮೂರ್ತಿಯ ಮುಂದೆ ಅದನ್ನು ನಮೂದಿಸಿ, ನಂತರ ನಾವು ನೋಡೋಣ” ಎಂದು ಹೇಳಿದ್ದಾರೆ.

ಪ್ರಕರಣದ ಹಿನ್ನೆಲೆ

1988ರಲ್ಲಿ ನಡೆದ ರಸ್ತೆ ಗಲಾಟೆಯೊಂದರಲ್ಲಿ ಗುರುನಾಮ್ ಸಿಂಗ್ ಅವರನ್ನು ಮಾಜಿ ಕ್ರಿಕೆಟಿಗ ಸಿಧು ಮತ್ತು ಅವರ ಸ್ನೇಹಿತ ರೂಪಿಂದರ್ ಸಿಂಗ್ ಸಂಧು ಥಳಿಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಗುರುನಾಮ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಸಾವಿಗೀಡಾಗಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್, ಸಿಧು ಅವರನ್ನು ಅಪರಾಧಿ ಎಂದು ತೀರ್ಪು ನೀಡಿ, 3 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆಯ ಪ್ರಮಾಣ ಮರು ಪರಿಶೀಲಿಸುವಂತೆ ಕೋರಿ ಸಿಧು ಅವರು ಸುಪ್ರೀಂ ಮೆಟ್ಟಿಲೇರಿದ್ದರು.

ಸಿಧು ಅವರ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಸ್ವಯಂ ಪ್ರೇರಣೆಯಿಂದ ನೋವುಂಟು ಮಾಡಿದ ಪ್ರಕರಣ ಎಂದು ಪರಿಗಣಿಸಿ ಸಿಧು ಅವರಿಗೆ 3 ವರ್ಷಗಳ ಜೈಲು ಶಿಕ್ಷೆಯ ಬದಲಾಗಿ 1000 ರೂ. ದಂಡ ವಿಧಿಸಿ ಮೇ 2018ರಲ್ಲಿ ತೀರ್ಪು ನೀಡಿತ್ತು.

ಇದನ್ನೂ ಓದಿ: ‘ಕರ್ನಾಟಕ ಹೈಕೋರ್ಟ್‌ನಲ್ಲೇ ನಮಾಜ್’ ಎಂಬ ದ್ವೇಷ ಹರಡುವ ವಿಡಿಯೋ ಪ್ರಸಾರ: ಬಲಪಂಥೀಯ ಸಂವಾದ ಯೂಟ್ಯೂಬ್ ಚಾನೆಲ್‌ ಮೇಲೆ FIR

ಸುಪ್ರೀಂ ಕೋರ್ಟ್‌ನ ಈ ತೀರ್ಪಿನ ವಿರುದ್ಧ ಮೃತ ಗುರುನಾಮ್ ಸಿಂಗ್ ಅವರ ಪುತ್ರ ಸೆಪ್ಟೆಂಬರ್ 2018ರಲ್ಲಿ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಮರುಪರಿಶೀಲೀಸಿದ ಸುಪ್ರೀಂ ಕೋರ್ಟ್‌, 1 ವರ್ಷದ ಜೈಲು ಶಿಕ್ಷೆ ವಿಧಿಸಿ ಗುರುವಾರು ತೀರ್ಪು ನೀಡಿದೆ.

ಪಂಜಾಬ್‌ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನುಭವಿಸಿದ ನಂತರ ಸಿಧು ಅವರು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...