Homeರಾಷ್ಟ್ರೀಯಶಾರುಖ್, ಅಮಿತಾಬ್, ರಣವೀರ್ & ಅಜಯ್ ದೇವಗನ್‌ ವಿರುದ್ಧ ಬಿಹಾರ ಕೋರ್ಟ್‌ಗೆ ದೂರು!

ಶಾರುಖ್, ಅಮಿತಾಬ್, ರಣವೀರ್ & ಅಜಯ್ ದೇವಗನ್‌ ವಿರುದ್ಧ ಬಿಹಾರ ಕೋರ್ಟ್‌ಗೆ ದೂರು!

- Advertisement -
- Advertisement -

ಹಿಂದಿ ನಟರಾದ ಅಮಿತಾಬ್ ಬಚ್ಚನ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರ ವಿರುದ್ದ “ಗುಟ್ಕಾ ಮತ್ತು ತಂಬಾಕು ಸೇವನೆಯನ್ನು ಉತ್ತೇಜಿಸುತ್ತಿದ್ದಾರೆ” ಎಂದು ಆರೋಪಿಸಿ ಬಿಹಾರದ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ.

ಅಜಯ್ ದೇವಗನ್ ಕೆಲವು ವರ್ಷಗಳಿಂದ ತಂಬಾಕು ಬ್ರಾಂಡ್ ವಿಮಲ್‌ನ ರಾಯಭಾರಿಯಾಗಿದ್ದಾರೆ. ಈ ಬ್ರಾಂಡ್‌ಗೆ ಕಳೆದ ವರ್ಷ ಶಾರುಖ್ ಖಾನ್ ಕೂಡ ಬಂದಿದ್ದರು. ಅಮಿತಾಭ್ ಬಚ್ಚನ್ ಅವರು ಕಮಲ ಪಸಂದ್‌ ತಂಬಾಕು ಉತ್ಪನ್ನದ ಬ್ರಾಂಡ್‌‌ ಅಂಬಾಸಿಡರ್ ಆಗಿ ಸಹಿ ಹಾಕಿದ್ದರು, ಆದರೆ ನಂತರ ಅವರು ಒಪ್ಪಂದವನ್ನು ಕೊನೆಗೊಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾಮಾಜಿಕ ಕಾರ್ಯಕರ್ತೆ ತಮನ್ನಾ ಹಶ್ಮಿ ಅವರು ಮುಜಾಫರ್‌ಪುರದ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಈ ಬಗ್ಗೆ ಅರ್ಜಿ ಸಲ್ಲಿಸಿದ್ದು, ಈ ನಟರನ್ನು ಒಳಗೊಂಡ ಜಾಹೀರಾತುಗಳು, ಜಾಹೀರಾತು ಮಾಡಲಾದ ವಸ್ತುಗಳನ್ನು ಸೇವಿಸಲು ಜನರನ್ನು ಉತ್ತೇಜಿಸುತ್ತವೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಸಕ್ಕರೆಯೆಂಬ ಹೊಸ ತಂಬಾಕು: ದಿನಕ್ಕೆ 25 ಗ್ರಾಂ ಗಿಂತ ಹೆಚ್ಚು ಸಕ್ಕರೆ ಬಳಸಿದರೆ ಅನಾರೋಗ್ಯಕ್ಕೆ ಆಹ್ವಾನ ಕೊಟ್ಟಂತೆ

ಗುಟ್ಕಾ ಮತ್ತು ಪಾನ್ ಮಸಾಲಾ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳಲು ಒಪ್ಪಿಕೊಳ್ಳುವ ಮೂಲಕ ‘ತಮ್ಮ ಸೆಲೆಬ್ರಿಟಿ ಸ್ಥಾನಮಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ’ವರಲ್ಲಿ ನಟ ರಣವೀರ್ ಸಿಂಗ್ ಅವರನ್ನು ಸಹ ತಮನ್ನಾ ಹೆಸರಿಸಿದ್ದಾರೆ.

ನಟರ ವಿರುದ್ಧ ಐಪಿಸಿ ಸೆಕ್ಷನ್ 311 (ದರೋಡೆಕೋರನಿಗೆ ಶಿಕ್ಷೆ), 420 (ವಂಚನೆ) ಮತ್ತು 467 ಮತ್ತು 468 (ನಕಲಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡುವಂತೆ ಅರ್ಜಿಯು ನ್ಯಾಯಾಲಯದಲ್ಲಿ ಕೋರಿದೆ. ಅರ್ಜಿಯನ್ನು ಮುಂದಿನ ದಿನಗಳಲ್ಲಿ ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.

ಕಳೆದ ತಿಂಗಳು, ವಿಮಲ್ ಪಾನ್‌ ಮಸಾಲ ಜಾಹೀರಾತಿನಲ್ಲಿ ಕಾಣಿಸಿಕೊಂಡ ನಟ ಅಕ್ಷಯ್ ಕುಮಾರ್ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸಿದ ನಂತರ ಕಂಪನಿಯಿಂದ ತನ್ನ ಸಂಬಂಧವನ್ನು ಕಡಿತಗೊಳಿಸಿದ್ದರು. ವಿಮಲ್ ಪಾನ್‌ ಮಸಾಲ ಜಾಹೀರಾತಿನಲ್ಲಿ ನಟರಾದ ಅಜಯ್ ದೇವಗನ್ ಮತ್ತು ಶಾರುಖ್ ಖಾನ್ ಕೂಡ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಭೂಖಂಡಗಳನ್ನು ಭೇದಿಸಿದ ಕಾಲುವೆ; ಅಸಮಾನ ಆರ್ಥಿಕತೆ ಮತ್ತು ಲಾಭಕೋರತನದಿಂದಾಗಿ ಸ್ಥಗಿತ

ಅಕ್ಟೋಬರ್ 2021 ರಲ್ಲಿ, ಅಮಿತಾಬ್ ಬಚ್ಚನ್ ಅವರು ತಂಬಾಕು ಬ್ರ್ಯಾಂಡ್‌ ಕಮಲಾ ಪಸಂದ್ ಅವರೊಂದಿಗಿನ ಒಪ್ಪಂದವನ್ನು ಕೊನೆಗೊಳಿಸಿದ್ದರು. ಬ್ರಾಂಡ್‌ ಬಗ್ಗೆಗಿನ ಕೆಲವು ವಿವರಗಳು ಅಮಿತಾಬ್ ಅವರಿಗೆ ತಿಳಿದಿರಲಿಲ್ಲ ಎಂದು ಅವರ ಕಚೇರಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಅಮಿತಾಬ್‌ ಅವರು ಬ್ರ್ಯಾಂಡ್‌ನೊಂದಿಗಿನ ಒಪ್ಪಂದವನ್ನು ಕೊನೆಗೊಳಿಸಿದ್ದು, ಅದರ ಬಗ್ಗೆ ಕಂಪೆನಿಗೆ ಪತ್ರ ಬರೆದಿದ್ದಾರೆ. ಜೊತೆಗೆ ಪ್ರಚಾರಕ್ಕಾಗಿ ಸ್ವೀಕರಿಸಿದ ಹಣವನ್ನು ಹಿಂದಿರುಗಿಸಿದ್ದಾರೆ ಎಂದು ಅವರ ಕಚೇರಿ ಬಿಡುಗಡೆ ಮಾಡಲಾಗಿರುವ ಹೇಳಿಕೆ ತಿಳಿಸಿದೆ. ಒಪ್ಪಂದ ಕೊನೆಗೊಳಿಸಿದ ನಂತರ ಕೂಡಾ ಅವರನ್ನು ಒಳಗೊಂಡ ಜಾಹಿರಾತುಗಳ ಪ್ರಸಾರ ಮಾಡುವುದನ್ನು ಮುಂದುವರೆಸಿದ ಕಂಪನಿಗೆ ಕಾನೂನು ನೋಟಿಸ್ ಕೂಡಾ ಕಳುಹಿಸಿದ್ದರು ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಖಾಸಗೀಕರಣವನ್ನು ಉತ್ತೇಜಿಸುವ ಸರ್ಕಾರಿ ಶಾಲೆಗಳ ಬಗೆಗೆ ಕಾಳಜಿ ಇಲ್ಲದೆ ಬೈಜೂಸ್ ಮತ್ತಿತರ ಟ್ಯೂಷನ್ ಕೋಚಿಂಗ್ ವಿಷಯಗಳ ಬಗ್ಗೆ ಮಾತನಾಡುವವರ ಮೇಲೆಯೂ ಕೇಸು ದಾಖಲಿಸಬೇಕು

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...