Homeರಾಷ್ಟ್ರೀಯಶಾರುಖ್, ಅಮಿತಾಬ್, ರಣವೀರ್ & ಅಜಯ್ ದೇವಗನ್‌ ವಿರುದ್ಧ ಬಿಹಾರ ಕೋರ್ಟ್‌ಗೆ ದೂರು!

ಶಾರುಖ್, ಅಮಿತಾಬ್, ರಣವೀರ್ & ಅಜಯ್ ದೇವಗನ್‌ ವಿರುದ್ಧ ಬಿಹಾರ ಕೋರ್ಟ್‌ಗೆ ದೂರು!

- Advertisement -
- Advertisement -

ಹಿಂದಿ ನಟರಾದ ಅಮಿತಾಬ್ ಬಚ್ಚನ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರ ವಿರುದ್ದ “ಗುಟ್ಕಾ ಮತ್ತು ತಂಬಾಕು ಸೇವನೆಯನ್ನು ಉತ್ತೇಜಿಸುತ್ತಿದ್ದಾರೆ” ಎಂದು ಆರೋಪಿಸಿ ಬಿಹಾರದ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ.

ಅಜಯ್ ದೇವಗನ್ ಕೆಲವು ವರ್ಷಗಳಿಂದ ತಂಬಾಕು ಬ್ರಾಂಡ್ ವಿಮಲ್‌ನ ರಾಯಭಾರಿಯಾಗಿದ್ದಾರೆ. ಈ ಬ್ರಾಂಡ್‌ಗೆ ಕಳೆದ ವರ್ಷ ಶಾರುಖ್ ಖಾನ್ ಕೂಡ ಬಂದಿದ್ದರು. ಅಮಿತಾಭ್ ಬಚ್ಚನ್ ಅವರು ಕಮಲ ಪಸಂದ್‌ ತಂಬಾಕು ಉತ್ಪನ್ನದ ಬ್ರಾಂಡ್‌‌ ಅಂಬಾಸಿಡರ್ ಆಗಿ ಸಹಿ ಹಾಕಿದ್ದರು, ಆದರೆ ನಂತರ ಅವರು ಒಪ್ಪಂದವನ್ನು ಕೊನೆಗೊಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾಮಾಜಿಕ ಕಾರ್ಯಕರ್ತೆ ತಮನ್ನಾ ಹಶ್ಮಿ ಅವರು ಮುಜಾಫರ್‌ಪುರದ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಈ ಬಗ್ಗೆ ಅರ್ಜಿ ಸಲ್ಲಿಸಿದ್ದು, ಈ ನಟರನ್ನು ಒಳಗೊಂಡ ಜಾಹೀರಾತುಗಳು, ಜಾಹೀರಾತು ಮಾಡಲಾದ ವಸ್ತುಗಳನ್ನು ಸೇವಿಸಲು ಜನರನ್ನು ಉತ್ತೇಜಿಸುತ್ತವೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಸಕ್ಕರೆಯೆಂಬ ಹೊಸ ತಂಬಾಕು: ದಿನಕ್ಕೆ 25 ಗ್ರಾಂ ಗಿಂತ ಹೆಚ್ಚು ಸಕ್ಕರೆ ಬಳಸಿದರೆ ಅನಾರೋಗ್ಯಕ್ಕೆ ಆಹ್ವಾನ ಕೊಟ್ಟಂತೆ

ಗುಟ್ಕಾ ಮತ್ತು ಪಾನ್ ಮಸಾಲಾ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳಲು ಒಪ್ಪಿಕೊಳ್ಳುವ ಮೂಲಕ ‘ತಮ್ಮ ಸೆಲೆಬ್ರಿಟಿ ಸ್ಥಾನಮಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ’ವರಲ್ಲಿ ನಟ ರಣವೀರ್ ಸಿಂಗ್ ಅವರನ್ನು ಸಹ ತಮನ್ನಾ ಹೆಸರಿಸಿದ್ದಾರೆ.

ನಟರ ವಿರುದ್ಧ ಐಪಿಸಿ ಸೆಕ್ಷನ್ 311 (ದರೋಡೆಕೋರನಿಗೆ ಶಿಕ್ಷೆ), 420 (ವಂಚನೆ) ಮತ್ತು 467 ಮತ್ತು 468 (ನಕಲಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡುವಂತೆ ಅರ್ಜಿಯು ನ್ಯಾಯಾಲಯದಲ್ಲಿ ಕೋರಿದೆ. ಅರ್ಜಿಯನ್ನು ಮುಂದಿನ ದಿನಗಳಲ್ಲಿ ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.

ಕಳೆದ ತಿಂಗಳು, ವಿಮಲ್ ಪಾನ್‌ ಮಸಾಲ ಜಾಹೀರಾತಿನಲ್ಲಿ ಕಾಣಿಸಿಕೊಂಡ ನಟ ಅಕ್ಷಯ್ ಕುಮಾರ್ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸಿದ ನಂತರ ಕಂಪನಿಯಿಂದ ತನ್ನ ಸಂಬಂಧವನ್ನು ಕಡಿತಗೊಳಿಸಿದ್ದರು. ವಿಮಲ್ ಪಾನ್‌ ಮಸಾಲ ಜಾಹೀರಾತಿನಲ್ಲಿ ನಟರಾದ ಅಜಯ್ ದೇವಗನ್ ಮತ್ತು ಶಾರುಖ್ ಖಾನ್ ಕೂಡ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಭೂಖಂಡಗಳನ್ನು ಭೇದಿಸಿದ ಕಾಲುವೆ; ಅಸಮಾನ ಆರ್ಥಿಕತೆ ಮತ್ತು ಲಾಭಕೋರತನದಿಂದಾಗಿ ಸ್ಥಗಿತ

ಅಕ್ಟೋಬರ್ 2021 ರಲ್ಲಿ, ಅಮಿತಾಬ್ ಬಚ್ಚನ್ ಅವರು ತಂಬಾಕು ಬ್ರ್ಯಾಂಡ್‌ ಕಮಲಾ ಪಸಂದ್ ಅವರೊಂದಿಗಿನ ಒಪ್ಪಂದವನ್ನು ಕೊನೆಗೊಳಿಸಿದ್ದರು. ಬ್ರಾಂಡ್‌ ಬಗ್ಗೆಗಿನ ಕೆಲವು ವಿವರಗಳು ಅಮಿತಾಬ್ ಅವರಿಗೆ ತಿಳಿದಿರಲಿಲ್ಲ ಎಂದು ಅವರ ಕಚೇರಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಅಮಿತಾಬ್‌ ಅವರು ಬ್ರ್ಯಾಂಡ್‌ನೊಂದಿಗಿನ ಒಪ್ಪಂದವನ್ನು ಕೊನೆಗೊಳಿಸಿದ್ದು, ಅದರ ಬಗ್ಗೆ ಕಂಪೆನಿಗೆ ಪತ್ರ ಬರೆದಿದ್ದಾರೆ. ಜೊತೆಗೆ ಪ್ರಚಾರಕ್ಕಾಗಿ ಸ್ವೀಕರಿಸಿದ ಹಣವನ್ನು ಹಿಂದಿರುಗಿಸಿದ್ದಾರೆ ಎಂದು ಅವರ ಕಚೇರಿ ಬಿಡುಗಡೆ ಮಾಡಲಾಗಿರುವ ಹೇಳಿಕೆ ತಿಳಿಸಿದೆ. ಒಪ್ಪಂದ ಕೊನೆಗೊಳಿಸಿದ ನಂತರ ಕೂಡಾ ಅವರನ್ನು ಒಳಗೊಂಡ ಜಾಹಿರಾತುಗಳ ಪ್ರಸಾರ ಮಾಡುವುದನ್ನು ಮುಂದುವರೆಸಿದ ಕಂಪನಿಗೆ ಕಾನೂನು ನೋಟಿಸ್ ಕೂಡಾ ಕಳುಹಿಸಿದ್ದರು ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಖಾಸಗೀಕರಣವನ್ನು ಉತ್ತೇಜಿಸುವ ಸರ್ಕಾರಿ ಶಾಲೆಗಳ ಬಗೆಗೆ ಕಾಳಜಿ ಇಲ್ಲದೆ ಬೈಜೂಸ್ ಮತ್ತಿತರ ಟ್ಯೂಷನ್ ಕೋಚಿಂಗ್ ವಿಷಯಗಳ ಬಗ್ಗೆ ಮಾತನಾಡುವವರ ಮೇಲೆಯೂ ಕೇಸು ದಾಖಲಿಸಬೇಕು

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...