Homeಕರ್ನಾಟಕಭಾಷಾ ವೈವಿಧ್ಯತೆ: ಪ್ರಧಾನಿ ಮೋದಿ ಹೇಳಿಕೆ ಸ್ವಾಗತಿಸಿದ ಕಿಚ್ಚ ಸುದೀಪ್‌

ಭಾಷಾ ವೈವಿಧ್ಯತೆ: ಪ್ರಧಾನಿ ಮೋದಿ ಹೇಳಿಕೆ ಸ್ವಾಗತಿಸಿದ ಕಿಚ್ಚ ಸುದೀಪ್‌

- Advertisement -
- Advertisement -

“ಭಾಷಾ ವೈವಿಧ್ಯತೆಯು ದೇಶದ ಹೆಮ್ಮೆ, ಆದರೆ ಅದರ ಬಗ್ಗೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ” ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿಕೆ ನೀಡಿರುವುದನ್ನು ನಟ ಕಿಚ್ಚ ಸುದೀಪ್‌ ಸ್ವಾಗತಿಸಿದ್ದಾರೆ.

“ಹಿಂದಿ ರಾಷ್ಟ್ರೀಯ ಭಾಷೆಯಾಗಿ ಉಳಿದಿಲ್ಲ” ಎಂದು ಇತ್ತೀಚೆಗೆ ಸುದೀಪ್‌ ಹೇಳಿಕೆ ನೀಡಿದ್ದು ಚರ್ಚೆಗೆ ಕಾರಣವಾಗಿತ್ತು. ಸುದೀಪ್‌ ಅವರ ಬೆಂಬಲಕ್ಕೆ ಕನ್ನಡಿಗರು ಹಾಗೂ ಹಲವಾರು ಸಿನಿಮಾ ನಟ-ನಟಿಯವರು ನಿಂತಿದ್ದರು. ಸಂವಿಧಾನವನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿದ್ದ ಕನ್ನಡಿಗರು ‘ರಾಷ್ಟ್ರಭಾಷೆ ಎಂಬುದಿಲ್ಲ’ ಎಂದು ನೆನಪಿಸಿದರು. ಕಿಚ್ಚ ಸುದೀಪ್‌ ಹೇಳಿಕೆಯನ್ನು ವಿರೋಧಿಸಿದ್ದ ಬಾಲಿವುಡ್‌ ನಟ ಅಜಯ್‌ ದೇವಗನ್‌, ‘ಹಿಂದಿ ರಾಷ್ಟ್ರ ಭಾಷೆ’ ಎಂದದ್ದು ತೀವ್ರ ವಿರೋಧಕ್ಕೆ ಕಾರಣವಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದೆ ಹೇರಿಕೆ ಸಂಬಂಧ ಎದ್ದಿರುವ ಕಿಡಿಯ ನಡುವೆ ಪ್ರಧಾನಿ ಹೇಳಿಕೆ ಹೊರಬಿದ್ದಿದ್ದು, ಕಿಚ್ಚ ಸುದೀಪ್‌ ಪ್ರಧಾನಿಯವರ ಮಾತನ್ನು ಸ್ವಾಗತಿಸಿದ್ದಾರೆ. ಎನ್‌ಡಿಟಿವಿಯೊಂದಿಗೆ ಮಾತನಾಡಿರುವ ಸುದೀಪ್‌ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

“ನಾನು ಯಾವುದೇ ಗಲಭೆ ಅಥವಾ ಯಾವುದೇ ರೀತಿಯ ಚರ್ಚೆಯನ್ನು ಪ್ರಾರಂಭಿಸಲು ಉದ್ದೇಶಿಸಿರಲಿಲ್ಲ. ಇದು ಅಜೆಂಡಾ ಇಲ್ಲದೆ ನಡೆದಿದೆ. ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೇನಷ್ಟೇ. ಪ್ರಧಾನಿಯವರೇ ಗೌರವಯುತ ಹಾಗೂ ಸೌಭಾಗ್ಯಯುತವಾದ ಮಾತುಗಳನ್ನು ಆಡಿದ್ದಾರೆ” ಅಭಿಪ್ರಾಯಪಟ್ಟಿದ್ದಾರೆ.

ಪ್ರಧಾನಿಯವರು ಈ ರೀತಿಯಲ್ಲಿ ಹೇಳಿರುವುದು ತಮ್ಮ ತಮ್ಮ ಭಾಷೆಯನ್ನು ಗೌರವಿಸುವ ಪ್ರತಿಯೊಬ್ಬರಿಗೂ ಅಗಾಧವಾದ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.

“ಎಲ್ಲಾ ಭಾಷೆಗಳಿಗೂ ಆತ್ಮೀಯ ಸ್ವಾಗತ. ನಾನು ಕೇವಲ ಕನ್ನಡವನ್ನು ಮಾತ್ರ ಪ್ರತಿನಿಧಿಸಿ ಹೇಳುತ್ತಿಲ್ಲ, ಎಲ್ಲರ ಮಾತೃಭಾಷೆಗಳ ಕುರಿತು ಮಾತನಾಡುತ್ತಿದ್ದೇನೆ. ಪ್ರಧಾನಿಯವರು ಇಂದು ಪ್ರತಿಯೊಬ್ಬರ ಮಾತೃಭಾಷೆಯನ್ನು ಗೌರವಿಸಿದ್ದಾರೆ. ನಾವು ನರೇಂದ್ರ ಮೋದಿ ಅವರನ್ನು ಕೇವಲ ರಾಜಕಾರಣಿಯಾಗಿ ನೋಡುವುದಿಲ್ಲ, ನಾಯಕರನ್ನಾಗಿ ನೋಡುತ್ತೇವೆ” ಎಂದು ತಿಳಿಸಿದ್ದಾರೆ.

“ನಾನು ಯಾರನ್ನೂ ದೂಷಿಸಲು ಬಯಸುವುದಿಲ್ಲ, ಕೆಲವು ವಿಷಯಗಳು ಬಂದಾಗ ನನ್ನ ಅಭಿಪ್ರಾಯಗಳನ್ನು ಹೇಳುವ ಹಕ್ಕು ನನಗಿದೆ” ಎಂದು ಸುದೀಪ್‌ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ಭಗತ್ ಸಿಂಗ್ ಬದಲು ಹೆಡಗೇವಾರ್ ಪಾಠ; ಮಕ್ಕಳ ಮೇಲೆ ಹಿಂದುತ್ವದ ಪ್ರಯೋಗ

ಬಾಲಿವುಡ್ ಹಾಗೂ  ದಕ್ಷಿಣ ಸಿನಿಮಾಗಳ ನಡುವೆ ಇತ್ತೀಚೆಗೆ ನಡೆದ ಕಿರು ತಿಕ್ಕಾಟದತ್ತ ಗಮನ ಸೆಳೆದ ಸುದೀಪ್‌, “ಪ್ಯಾನ್‌ ಇಂಡಿಯಾ ಸಿನಿಮಾ ಎಂಬುದು ಯಾವುದೋ ಒಂದು ಭಾಷೆಗೆ ಸೀಮಿತವಾಗಿಲ್ಲ. ಸಿನಿಮಾ ಚೆನ್ನಾಗಿದ್ದರೆ ಎಲ್ಲಾ ಭಾಷೆಯ ಜನರು ದೇಶದಾದ್ಯಂತ ನೋಡುತ್ತಾರೆ. ಅದು ದಕ್ಷಿಣ ಭಾರತದ ಸಿನಿಮಾವಾಗಿರಲಿ, ಹಿಂದಿ ಸಿನಿಮಾವಾಗಿರಲಿ, ಡಬ್ಬಿಂಗ್‌ ಆಗಿರಲಿ ಎಲ್ಲರೂ ನೋಡುತ್ತಾರೆ” ಎಂದಿದ್ದಾರೆ.

ಪ್ರಧಾನಿ ಮೋದಿಯವರು ಭಾಷೆಗಳ ಕುರಿತು ಮಾತನಾಡುತ್ತಾ, “ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಿರುವುದು ಎಲ್ಲಾ ಪ್ರಾದೇಶಿಕ ಭಾಷೆಗಳಿಗೆ ನಾವು ವ್ಯಕ್ತಪಡಿಸಿರುವ ಬದ್ಧತೆಯನ್ನು ತೋರಿಸುತ್ತದೆ. ಬಿಜೆಪಿಯು ಭಾರತೀಯ ಭಾಷೆಗಳನ್ನು ದೇಶದ ಆತ್ಮ ಮತ್ತು ದೇಶಕ್ಕೆ ಉತ್ತಮ ಭವಿಷ್ಯದ ಲಿಂಕ್ ಎಂದು ಪರಿಗಣಿಸುತ್ತದೆ” ಎಂದು ಹೇಳಿದ್ದಾರೆ.

“ನಾನು ಇದನ್ನು ವಿಶೇಷವಾಗಿ ಪ್ರಸ್ತಾಪಿಸಲು ಬಯಸುತ್ತೇನೆ. ಏಕೆಂದರೆ ಇತ್ತೀಚಿನ ದಿನಗಳಲ್ಲಿ ಭಾಷೆಯ ಆಧಾರದ ಮೇಲೆ ಹೊಸ ವಿವಾದಗಳನ್ನು ಸೃಷ್ಟಿಸುವ ಪ್ರಯತ್ನಗಳು ನಡೆದಿವೆ. ನಾವು ಈ ಬಗ್ಗೆ ದೇಶದ ಜನರನ್ನು ನಿರಂತರವಾಗಿ ಎಚ್ಚರಿಸಬೇಕು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...