Homeಅಂಕಣಗಳುದಶಕದ ನಂತರ ಗೆದ್ದ ಅಗ್ರಹಾರದ ಜಟ್ಟಿ!

ದಶಕದ ನಂತರ ಗೆದ್ದ ಅಗ್ರಹಾರದ ಜಟ್ಟಿ!

- Advertisement -
- Advertisement -

ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದ ಅಗ್ರಹಾರ ಕೃಷ್ಣಮೂರ್ತಿ ಅಮಾನತುರದ್ದಾಗಿದೆ. ಬರೋಬ್ಬರಿ ಒಂದು ದಶಕ ನಡೆದ ಕುಸ್ತಿಯಲ್ಲಿ ಈ ಜಟ್ಟಿ ಜಯಗಳಿಸಿದ್ದಾರಲ್ಲಾ.

ಅಗ್ರಹಾರದಿಂದ ಬಂದವನಿರಬೇಕು; ಗೋದಿ ಮುದ್ದೆಯಂತಿದ್ದ ಆಕಾರ ಬೇರೆ; ಕೃಷ್ಣಮೂರ್ತಿ ಹೆಸರು, ಈತ ಭೂಸುರೋತ್ತಮನಾದ ವಿಪ್ರನೇ ಇರಬೇಕು ಎಂದು ನಮ್ಮ ಜಾತಿ ಮನಸ್ಸುಗಳಿಗೆ ಸಾಕ್ಷಿಯೊದಗಿಸಿತ್ತು. ಆಗ ನಮಗೆ ಅಗ್ರಹಾರಗಳನ್ನ ಕಂಡರೆ ಆಗುತ್ತಿರಲಿಲ್ಲ. ನಮಗೇ ಏನು, ನಾಯಿ ಹಂದಿಗಳಿಗೂ ಹಿಡಿಸುತ್ತಿರಲಿಲ್ಲ. ಕಾರಣ ಅಲ್ಲಿನ ಅಂಗಳದಲ್ಲಿ ಯಾವ ಮೂಳೆಯೂ ಸಿಗುತ್ತಿರಲಿಲ್ಲ. ಇನ್ನ ಹಂದಿಗಳಿಗಂತೂ ತೊಳೆದು ಎಸೆದಂತಹ ಇಸ್ತ್ರಿ ಎಲೆಯಿಂದ ಏನೂ ಪ್ರಯೋಜನವಾಗದೆ ವಾಪಸ್ಸು ಬರುತ್ತಿದ್ದವು. ಇಂತಹ ನಮ್ಮ ಪೂರ್ವಾಗ್ರಹದ ಕಾಲದಲ್ಲಿ ಲಂಕೇಶರ ಎದುರು ಪ್ರಕಾಶ್ ಬೆಳವಾಡಿಯಿಂದ ಹಿಡಿದು ಮಹಾಬಲ, ಸತ್ಯ, ಸದಾಶಿವ ಇವರೆಲ್ಲ ಕುಳಿತು ಬ್ರಾಹ್ಮಣದ ಟೀಕೆಯನ್ನು ಅನುಮಾನ ಬರದಂತೆ ಸಹಿಸಿಕೊಳ್ಳುತ್ತಿದ್ದರು. ಅಂತವರ ಪೈಕಿ ಅಗ್ರಹಾರದ ಕೃಷ್ಣಮೂರ್ತಿಯೂ ಎಂದು ನಂಬಿದ್ದೆವು. ಲಂಕೇಶರ ವಿಶೇಷ ಪ್ರೀತಿಗೆ ಪಾತ್ರವಾಗಿ ನಮ್ಮಲ್ಲೊಂದಿಷ್ಟು ಅಸಹನೆ ಮೂಡುತ್ತಿರುವಾಗಲೆ ಕೃಷ್ಣಮೂರ್ತಿ ಅಗ್ರಹಾರದಿಂದ ಬಂದ ಅಸಾಮಿಯಲ್ಲ, ಅರಮನೆ ಎದುರು ಮಹಾರಾಜರ ಸಮ್ಮುಖದಲ್ಲಿ ಮುಷ್ಠಿಯಿಂದ ಎದುರಾಳಿಯ ವಿರುದ್ಧ ಹೋರಾಡುವವರೆಂದು ಗೊತ್ತಾಗಿ ಹೋಯ್ತಲ್ಲಾ, ಥೂತ್ತೇರಿ.

*****

ಉನ್ನತ ಸ್ಥಾನಕ್ಕೆ ಹೋದಮೇಲೂ ವಿಪ್ರೋತ್ತಮರು ತಾವು ತಯಾರಾದ ಅಗ್ರಹಾರಕ್ಕೆ ಬಂದು ಹೋಗುವಂತೆ ಕೃಷ್ಣಮೂರ್ತಿ ಲಂಕೇಶರ ವಟಾರಕ್ಕೆ ಬಂದು ಹೋಗುತ್ತಿದ್ದರು. ಆಗ ಚೆನೈನಲ್ಲಿದ್ದ ಪ್ರಾದೇಶಿಕ ಕೇಂದ್ರ ಸಾಹಿತ್ಯ ಅಕಾಡೆಮಿ ಕಚೇರಿಯನ್ನ ಬೆಂಗಳೂರಿಗೆ ತಂದರು. ಸಾಹಿತ್ಯ ಪರಿಷತ್ ಕಾರ್ಯಕ್ರಮಗಳಿಗೆ ಹಣ ಕೊಟ್ಟರು, ಪುಸ್ತಕ ಕೊಟ್ಟರು. ಜರಗನಹಳ್ಳಿ ಶಿವಶಂಕರ್, ಲಂಕೇಶ್ ಶಿಷ್ಯ ದಳವಾಯಿಗೆ ಅಕಾಡೆಮಿ ಪುಸ್ತಕ ಕೊಟ್ಟರು. ದಳವಾಯಿಯಂತೂ ಹೋದವನು ಮತ್ತೆ ಬರಲೇ ಇಲ್ಲ. ತಮ್ಮ ಭಾಷೆ ಮತ್ತು ಪ್ರಾದೇಶಿಕ ಕಾಳಜಿಯ ಬಗ್ಗೆ ಪಕ್ಷಪಾತದ ಆಪಾದನೆ ಬಂದು ಅಗ್ರಹಾರ ತನಿಖೆ ಎದುರಿಸುವ ಸಮಯದಲ್ಲಿ ಫಲಾನುಭವಿಗಳ್ಯಾರೂ ಸಹಾಯಕ್ಕೆ ಬರಲಿಲ್ಲ. ತನಿಖಾಧಿಕಾರಿಗಳಿಗೆ ಒಂದು ಮನವಿಯನ್ನೂ ಕೊಡಲಿಲ್ಲ. ಇಂತಹ ಸಮಯದಲ್ಲಿ ಕವಿ ಸಿ.ಪ.ಶೆಟ್ಟಿಯ ಹಠದಿಂದಾಗಿ ಅಗ್ರಹಾರ ಅಮಾನತುಗೊಂಡರಂತಲ್ಲಾ, ಥೂತ್ತೇರಿ.

*****

ಕನ್ನಡದ ಕೆಲಸಕ್ಕಾಗಿ ಕನ್ನಡಿಗನಿಂದಲೇ ತೊಂದರೆಗೆ ಸಿಕ್ಕಿಕೊಂಡ ಅಗ್ರಹಾರ ಈ ಒಂದು ದಶಕದಲ್ಲಿ ಅರಾಮವಾಗಿಯೇ ಇದ್ದರು. ಪ್ರೆಸ್‌ಕ್ಲಬ್ಬಿನ ಗೆಳೆಯರ ಪಾರ್ಟಿಯ ಬಿಲ್ಲನ್ನು ತಾವೇ ಕೊಡುತ್ತಿದ್ದರು. ನಿವೃತ್ತಿಯ ಸವಲತ್ತುಗಳು ಸಿಗದಿದ್ದರೂ ಬೇಸರ ಮಾಡಿಕೊಳ್ಳದೆ ನಾನೊಬ್ಬ ಕಳಂಕ ಹೊತ್ತವನೆಂದು ಅರಾಮವಾಗಿಯೇ ಹೇಳುತ್ತಿದ್ದರು. ಈ ಜಟ್ಟಿಯ ವಿರುದ್ಧ ಹಠ ಸಾಧಿಸಿದ ಸಿ.ಪ.ಶೆಟ್ಟಿಯ ಒಂದು ಪ್ರಸಂಗ ಹೇಳುವುದಾದರೆ ನಮ್ಮ ಸಂಸ್ಕೃತಿ ಮತ್ತು ರಾಜಕಾರಣದ ನಡುವಿನ ಸೇತುವೆಯಂತಿದ್ದ ಎಂ.ಪಿ. ಪ್ರಕಾಶ್ ಅವರು ಸಿ.ಪ.ಶೆಟ್ಟರ ಕವಿತ್ವಕ್ಕೆ ಮಾರುಹೋಗಿ ಹೂವಿನಡಗಲಿಗೆ ಕರೆದು ಸನ್ಮಾನ ಮಾಡಿದರು. ಜರಿಪೇಟ ಜಗಮಗಿಸುವ ಶಾಲು ಪರಿಮಳ ಭರಿತ ಹಾರ ಹಾಕಿಸಿಕೊಂಡ ಸಿ.ಪ.ಶೆಟ್ಟಿ ’ಈ ಸನ್ಮಾನದ ಗೌರವ ಏನದಾವಲ್ಲ ಇವು ಭಾಳ ವೆಚ್ಚದವು, ಅದಕ ನಾನು ಈ ಸಭೆ ಮುಗಿಯೂ ಮಟ್ಟ ಇವನ್ನ ತೆಗೆಯೂದಿಲ್ಲ, ಹಾಗೇ ಕುಂದರತೀನಿ’ ಎಂದು ಹಾಗೇ ಕುಂತರು. ಆದರೆ ಅವರ ಅಕ್ಕಪಕ್ಕದಲ್ಲಿದ್ದ ಗೌರವಾನ್ವಿತರು ಹಾಗೆ ಮಾಡದೆ ಸನ್ಮಾನಕ್ಕೆ ಗೌರವ ತೋರಿದರು. ಸಭೆ ಗಂಟೆಗಟ್ಟಲೆ ಮುಂದುವರಿದಾಗ ಸಿ.ಪ.ಶೆಟ್ಟರು ಹಾಸ್ಯಸ್ಪದ ವ್ಯಕ್ತಿಯಂತೆ ಕಂಡರಂತಲ್ಲಾ, ಥೂತ್ತೇರಿ.

*****

ಈಗ ಕಾಲ ಬದಲಾಗಿದೆ. ಮುಂದೆ ಅಗ್ರಹಾರನಂತಹ ಕಾರ್ಯದರ್ಶಿ ಸಿ.ಪ.ಶೆಟ್ಟಿಯಂತಹ ಕವಿ ಎಲ್ಲವೂ ಅಪ್ರಸ್ತುತವಾಗಿರುವಂತಹ ಪ್ರಳಯ ಅರಂಭಗೊಂಡಿದೆಯಂತಲ್ಲಾ. ಈವರೆಗಿನ ಕನ್ನಡ ಸಾಹಿತ್ಯಕ್ಕೆ ಬದಲು ರಾಷ್ಟ್ರೋತ್ಥಾನ ಸಾಹಿತ್ಯ ಕನ್ನಡಿಗರ ಮೇಲೆ ಹೇರುವ ಸೂಚನೆಯಾಗಿ, ನಮ್ಮ ಮಕ್ಕಳು ಓದುವ ಪಠ್ಯ ಪುಸ್ತಕದೊಳಕ್ಕೆ ಹೆಡಗೇವಾರ್, ಗೋಳವಲ್‌ಕರ್, ದೀನದಯಾಳು, ಹೊ.ವೆ. ಶೇಷಾದ್ರಿ, ಸಾವರ್ಕರ್ ಸೇರಲಿದ್ದಾರಂತಲ್ಲಾ. ಇದು ಹಾಳುಬಿದ್ದು ಹೋಗಲಿ, ಲಂಕೇಶ್ ನಮ್ಮವರು ಎಂದು ಜಗಳ ಮಾಡುತ್ತಿದ್ದ ಅವರ ಒಂದು ಬಳಗ ಲಂಕೇಶರ ಪಾಠವನ್ನೆ ಕೈಬಿಟ್ಟ ಲಾಟಿ ವೀರರ ಬಗ್ಗೆ ಚಕಾರವೆತ್ತಿಲ್ಲವಂತಲ್ಲಾ. ಇದಕ್ಕೂ ಕಾರಣವಿದೆ. ಲಂಕೇಶ್ ಎಂದೂ ತನ್ನ ಜಾತಿ ಬಗ್ಗೆ ಹೇಳಿಕೊಳ್ಳಲಿಲ್ಲ, ಸ್ವಜಾತಿಯವರಿಗೆ ಸಹಾಯ ಮಾಡಲಿಲ್ಲ, ಹತ್ತಿರವೂ ಸೇರಿಸಲಿಲ್ಲ. ಅದ್ದರಿಂದ ಇವರ ಮೌನ ಸಹಜವಾದುದೆ. ಆದರೆ ಲಂಕೇಶ್ ಸೃಷ್ಟಿಸಿ ಹೋಗಿದ್ದ ಜನ ಈಗ ಮೌನಿಗಳಾಗಿರುವ ಬಗ್ಗೆ ಕೇಳಿದಾಗ “ನೋಡ್ರಿ ಹೆಡಗೆವಾರಲ್ಲ, ಪೆಟ್ಟಿಗೆವಾರನ್ನ ಪಠ್ಯಕ್ಕೆ ಸೇರಿಸಿದರೂ ಏನೂ ಆಗಲ್ಲ. 1969-70ನೇ ಇಸವಿಲಿ ಸರ್ ಎಂ. ವಿಶ್ವೇಶ್ವರಯ್ಯನವರ ಬಗ್ಗೆ ಎರಡೂ ವರ್ಷ ಪಠ್ಯ ಪುಸ್ತಕ ಮಾಡಿದ್ರು, ಏನಾಯ್ತು ಯಾವನಾದ್ರು ಒಬ್ಬ ಇಂಜಿನಿಯರ್ ಬಂದನೇ? ವಿಶ್ವೇಶ್ವರಯ್ಯನವರ ವಿಷಯ ಹೇಳುನೂ, ಅಂಗೆ ಈ ಹೆಡಗೆವಾರ್ ಲಾಟಿ ಲಡ್ಡಿದದು ಹೋಗುತ್ತೆ” ಎಂದರಲ್ಲಾ ಥೂತ್ತೇರಿ.


ಇದನ್ನೂ ಓದಿ:  ಎರಡೂವರೆ ಸಾವಿರ ಕೋಟಿ ಹುಣಸಿ ಪಿಕ್ಕ ಅನಕೊಂಡಿರೇನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...