Homeಸಿನಿಮಾಕ್ರೀಡೆ‘ಭಾರತವೇ, ಇದು ನಿನಗಾಗಿ!’ - ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಬಾಕ್ಸರ್‌‌‌‌ ‘ನಿಖತ್‌ ಜರೀನ್‌‌’

‘ಭಾರತವೇ, ಇದು ನಿನಗಾಗಿ!’ – ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಬಾಕ್ಸರ್‌‌‌‌ ‘ನಿಖತ್‌ ಜರೀನ್‌‌’

ಭಾರತದ ಬಾಕ್ಸಿಂಗ್ ದಂತ ಕತೆ ಮೇರಿ ಕೋಮ್‌ ಅವರು, ‘ನಿಖತ್ ಜರೀನ್ ಯಾರು?’ ಎಂದು ಪ್ರಶ್ನಿಸಿದ್ದರು. ಅದಾಗಿ ಮೂರು ವರ್ಷಗಳ ನಂತರ, ಜರೀನ್ ವಿಶ್ವ ಚಾಂಪಿಯನ್ ಆಗಿದ್ದಾರೆ.

- Advertisement -
- Advertisement -

ತೆಲಂಗಾಣದ 25 ವರ್ಷದ ‘ಬಾಕ್ಸರ್‌‌‌‌ ನಿಖತ್‌ ಜರೀನ್’ ಅವರು ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಐದನೇ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗುರುವಾರದಂದು ಟರ್ಕಿಯ ಇಸ್ತಾನ್‌ಬುಲ್‌ನಲ್ಲಿ ನಡೆದ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ ಶಿಪ್‌ನಲ್ಲಿ ನಿಖತ್ ಜರೀನ್ ಅವರು 52 ಕೆಜಿ ಫ್ಲೈವೇಟ್ ವಿಭಾಗದಲ್ಲಿ ಥಾಯ್ಲೆಂಡ್‌ನ ಜಿಟ್‌ಪಾಂಗ್ ಜುಟಾಮಾಸ್ ಅವರನ್ನು ಸೋಲಿಸಿ, ಈ ಸಾಧನೆ ಮಾಡಿದ್ದಾರೆ.

ಪಂದ್ಯದ ನಂತರ ಹೊಸ ವಿಶ್ವ ಫ್ಲೈವೇಟ್ ಚಾಂಪಿಯನ್‌ನ ಹೆಸರನ್ನು ಘೋಷಣೆ ಮಾಡುತ್ತಿದ್ದಂತೆ, ಜರೀನ್ ಅವರು ತನ್ನ ಕೈಯನ್ನು ಗಾಳಿಯಲ್ಲಿ ಗುದ್ದಿ, ತನ್ನ ಎದುರಾಳಿಯನ್ನು ತಬ್ಬಿಕೊಂಡು ಕಣ್ಣೀರು ಹಾಕಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಭಾವನಾತ್ಮಕವಾಗಿ ಟ್ವೀಟ್ ಮಾಡಿರುವ ಜರೀನ್‌, ಅಂತಿಮವಾಗಿ ಇಲ್ಲಿ ತಲುಪಿದೆ. ಹಲವು ವರ್ಷಗಳ ಕಠಿಣ ಪರಿಶ್ರಮ ಮತ್ತು ಪರಿಶ್ರಮದ ತುತ್ತತುದಿ ಇದು ಎಂದು ಹೇಳಿದ್ದು, “ಭಾರತವೇ, ಇದು ನಿನಗಾಗಿ. ನಾವಿಬ್ಬರೂ ಇದನ್ನು ಒಟ್ಟಿಗೆ ಸಾಧಿಸಿದ್ದೇವೆ” ಎಂದು ಅವರು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಮಾಜಿ ಜೂನಿಯರ್ ವಿಶ್ವ ಚಾಂಪಿಯನ್, ಎಂ.ಸಿ. ಮೇರಿ ಕೋಮ್, ಸರಿತಾ ದೇವಿ, ಜೆನ್ನಿ ಆರ್‌‌ಎಲ್ ಮತ್ತು ಲೇಖಾ ಕೆಸಿ ನಂತರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಐದನೇ ಭಾರತೀಯ ಮಹಿಳಾ ಬಾಕ್ಸರ್ ಎಂಬ ಗೌರವಕ್ಕೆ ನಿಖತ್‌ ಜರೀನ್ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಕೆಲವು ಕ್ರೀಡೆಗಳು ಸೃಷ್ಟಿಸುವ ಹೈಪರ್ ನ್ಯಾಷನಲಿಸಂ ಮತ್ತು ಕ್ರೀಡಾಪಟುಗಳ ಜಾತಿನಿಂದನೆ – ಇವುಗಳ ನಡುವೆ ಸಂಭ್ರಮಿಸುವುದಾದರೂ ಹೇಗೆ?

2019 ರಲ್ಲಿ, ಟೋಕಿಯೊ ಒಲಿಂಪಿಕ್ಸ್‌ನ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ಅವಕಾಶ ನಿರಾಕರಿಸಿದ ನಂತರ ಭಾರತದ ದಂತಕಥೆ ಬಾಕ್ಸರ್ ಮೇರಿ ಕೋಮ್ ವಿರುದ್ಧ ನ್ಯಾಯಯುತ ವಿಚಾರಣೆಗೆ ಜರೀನ್ ಕೇಳಿದ್ದರು. ಆಗ ಅವರು “ನಿಖತ್ ಜರೀನ್ ಯಾರು?” ಎಂದು ಪ್ರಶ್ನಿಸಿದ್ದರು. ಇದಾಗಿ ಮೂರು ವರ್ಷಗಳ ನಂತರ, ಜರೀನ್ ವಿಶ್ವ ಚಾಂಪಿಯನ್ ಆಗಿದ್ದಾರೆ.

ಇದಕ್ಕೂ ಮೊದಲು 2018 ರಲ್ಲಿ ಮೇರಿ ಕೋಮ್‌ ಭಾರತದ ಮೊದಲ ಚಿನ್ನವನ್ನು ಗೆದಿದ್ದರು.

ಗುರುವಾರ ತನ್ನ ಗೆಲುವಿನ ನಂತರ, ತನ್ನ ವೃತ್ತಿಜೀವನದುದ್ದಕ್ಕೂ ತನ್ನನ್ನು ಬೆಂಬಲಿಸಿದ ಎಲ್ಲಾ ದೇಶವಾಸಿಗಳಿಗೆ ಪದಕವನ್ನು ಅರ್ಪಿಸುವುದಾಗಿ ಜರೀನ್‌‌ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಟ್ವಿಟರ್‌ನಲ್ಲಿ ಟ್ರೆಂಡ್ ಆಗುವುದು ತನ್ನ ಕನಸು ಎಂದು ಹೇಳಿದ ನಿಖತ್‌‌ ಜರೀನ್

“ನಾನು ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಆಗಿದ್ದೇನೆಯೇ? ಹಿಂದಿನಿಂದಲೇ ಟ್ವಿಟರ್‌ನಲ್ಲಿ ಟ್ರೆಂಡ್ ಆಗುವುದು ನನ್ನ ಕನಸಾಗಿತ್ತು. ವಿಶ್ವ ಮಟ್ಟದಲ್ಲಿ ನನ್ನ ದೇಶಕ್ಕಾಗಿ ಏನನ್ನಾದರೂ ಸಾಧಿಸುವುದು ದೊಡ್ಡ ಕನಸಾಗಿದೆ” ಎಂದು ಅವರು ಹೇಳಿದ್ದಾರೆ.

ತೆಲಂಗಾಣದ ನಿಜಾಮಾಬಾದ್ ಪಟ್ಟಣದ ಮಧ್ಯಮ ವರ್ಗದ ಕುಟುಂಬದಿಂದ ಬಂದಿರುವ ಮುಸ್ಲಿಂ ಬಾಕ್ಸರ್ ನಿಖತ್ ಜರೀನ್‌ ಅವರು ಬಾಕ್ಸಿಂಗ್‌‌ಗೆ ಬರಲು ಹಲವಾರು ಅಡೆತಡೆಗಳನ್ನು ಎದುರಿಸಬೇಕಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: Private: ಲಿವಾಕ್ ಎಂಬ ಕೊಡಗಿನ ಅತಿರೇಕವಾದಿ ಸಂಘಟನೆ ಮತ್ತು ಟಿಪ್ಪುಸುಲ್ತಾನ್ ಬಗ್ಗೆ ಸುಳ್ಳು ಇತಿಹಾಸ ಸೃಷ್ಟಿ

“ನಾನು ಕಷ್ಟಪಟ್ಟು ಕೆಲಸ ಮಾಡಬೇಕಾಗಿತ್ತು. ಬಾಕ್ಸಿಂಗ್ ಮಹಿಳೆಯರಿಗಾಗಿ ಅಲ್ಲ ಎಂಬ ಮಾತು ಸೇರಿದಂತೆ ಹಲವು ಅಡೆತಡೆಗಳನ್ನು ನಿವಾರಿಸಬೇಕಾಗಿತ್ತು. ನನ್ನ ಮುಖಕ್ಕೆ ಏನೂ ಆಗುವುದಿಲ್ಲ ಮತ್ತು ನನ್ನ ಸೌಂದರ್ಯವು ಹಾಗೇ ಇರುತ್ತದೆ ಎಂದು ನಾನು ಜನರಿಗೆ ಹೇಳಬೇಕಾಗಿತ್ತು” ಎಂದು ಅವರು ಕಳೆದ ವರ್ಷ ಕ್ರೀಡಾ ವಸ್ತುಗಳ ಬ್ರಾಂಡ್‌‌ ಅಡಿಡಾಸ್‌ನ ಅಭಿಯಾನವನ್ನು ಪ್ರಾರಂಭಿಸುವ ಸಂದರ್ಭದಲ್ಲಿ ಹೇಳಿದ್ದರು.

“ಈ ಮಾತುಗಳು ನನಗೆ ಸವಾಲಾಗಿದೆ. ನಾನು ಅಲ್ಲಿಗೆ ಹೋಗಿ, ಬಾಕ್ಸಿಂಗ್‌‌ ಎಂಬ ಆಟವು ನೀವು ಪುರುಷನೊ ಅಥವಾ ಮಹಿಳೆಯೊ ಎಂಬುದನ್ನು ಲೆಕ್ಕಿಸುವುದಿಲ್ಲ ಎಂದು ಸಾಬೀತುಪಡಿಸಲು ಬಯಸುತ್ತೇನೆ” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ತಮಿಳು ಸಿನಿಮಾಗಳು ಐತಿಹಾಸಿಕ ಪ್ರತಿರೋಧ ತೋರಿವೆ: ಕೋಟಗಾನಹಳ್ಳಿ ರಾಮಯ್ಯ

ಜರೀನ್ 2010 ರಲ್ಲಿ 13 ನೇ ವಯಸ್ಸಿನಲ್ಲಿ ಬಾಕ್ಸಿಂಗ್ ಸೇರಿದರು. ಆರು ತಿಂಗಳೊಳಗೆ ಅವರು ರಾಜ್ಯ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದರು. ಅದಾಗಿ ಕೇವಲ ಒಂದು ವರ್ಷದ ನಂತರ, ಅವರು ಟರ್ಕಿಯ ಅಂಟಲ್ಯದಲ್ಲಿ ಬಾಲಕಿಯರಿಗಾಗಿ 2011 ರ ವಿಶ್ವ ಜೂನಿಯರ್ ಮತ್ತು ಯೂತ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನವನ್ನು ಗೆದ್ದರು.

ಗುರುವಾರ ಮತ್ತೊಮ್ಮೆ ಟರ್ಕಿಯಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನ ಐತಿಹಾಸಿಕ ಗೆಲುವಿನಿಂದ ಜರೀನ್ ಅವರ ಕುಟುಂಬ ಹರ್ಷಗೊಂಡಿದೆ.

“ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆಲ್ಲುವುದು ಮುಸ್ಲಿಂ ಹುಡುಗಿಯರಿಗೆ ಮತ್ತು ದೇಶದ ಪ್ರತಿಯೊಬ್ಬ ಹುಡುಗಿಯರಿಗೂ ಜೀವನದಲ್ಲಿ ದೊಡ್ಡ ಸಾಧನೆ ಮಾಡುವ ಸ್ಫೂರ್ತಿಯನ್ನು ನೀಡುತ್ತದೆ. ಒಂದು ಮಗು, ಅದು ಹುಡುಗನಾಗಿರಲಿ ಅಥವಾ ಹುಡುಗಿಯಾಗಿರಲಿ, ತನ್ನದೇ ಆದ ದಾರಿಯನ್ನು ಆರಿಸಿಕೊಳ್ಳಬೇಕು. ನಿಖತ್ ಕೂಡಾ ತನ್ನದೇ ಆದ ದಾರಿಯನ್ನು ಆರಿಸಿಕೊಂಡಿದ್ದಾರೆ” ಎಂದು ಜರೀನ್ ಅವರ ತಂದೆ ಜಮೀಲ್ ಅಹ್ಮದ್ ಹೇಳಿದ್ದಾರೆಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಪ್ರಧಾನಿ ಮೋದಿ ಕೂಡಾ ಟ್ವೀಟ್‌ನಲ್ಲಿ ಜರೀನ್ ಅವರನ್ನು ಶ್ಲಾಘಿಸಿದ್ದಾರೆ. “ನಮ್ಮ ಬಾಕ್ಸರ್‌ಗಳು ನಮಗೆ ಹೆಮ್ಮೆ ತಂದಿದ್ದಾರೆ! ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಅದ್ಭುತವಾದ ಚಿನ್ನದ ಪದಕ ಗೆದ್ದಿದ್ದಕ್ಕಾಗಿ ನಿಖತ್ ಜರೀನ್‌ಗೆ ಅಭಿನಂದನೆಗಳು” ಎಂದು ಮೋದಿ ಟ್ವಿಟರ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರ

“ಇದೇ ಸ್ಪರ್ಧೆಯಲ್ಲಿ ಕಂಚಿನ ಪದಕಕ್ಕಾಗಿ ಮನೀಶಾ ಮೌನ್ ಮತ್ತು ಪರ್ವೀನ್ ಹೂಡಾ ಅವರನ್ನು ನಾನು ಅಭಿನಂದಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

“ಇತಿಹಾಸ ಪುಸ್ತಕಗಳಿಗೆ ಇದು ಒಂದು” ಎಂದು ಭಾರತೀಯ ಬಾಕ್ಸಿಂಗ್ ಫೆಡರೇಶನ್ ಟ್ವೀಟ್ ಮಾಡಿದ್ದು, ನಿಖತ್ ಜರೀನ್ ತನ್ನ ಚಿನ್ನದ ಸರಣಿಯನ್ನು ಮುಂದುವರೆಸಿದ್ದಾಳೆ…ವೆಲ್‌ಡನ್‌ ವಿಶ್ವ ಚಾಂಪಿಯನ್” ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...