Homeಸಿನಿಮಾಕ್ರೀಡೆ‘ಭಾರತವೇ, ಇದು ನಿನಗಾಗಿ!’ - ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಬಾಕ್ಸರ್‌‌‌‌ ‘ನಿಖತ್‌ ಜರೀನ್‌‌’

‘ಭಾರತವೇ, ಇದು ನಿನಗಾಗಿ!’ – ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಬಾಕ್ಸರ್‌‌‌‌ ‘ನಿಖತ್‌ ಜರೀನ್‌‌’

ಭಾರತದ ಬಾಕ್ಸಿಂಗ್ ದಂತ ಕತೆ ಮೇರಿ ಕೋಮ್‌ ಅವರು, ‘ನಿಖತ್ ಜರೀನ್ ಯಾರು?’ ಎಂದು ಪ್ರಶ್ನಿಸಿದ್ದರು. ಅದಾಗಿ ಮೂರು ವರ್ಷಗಳ ನಂತರ, ಜರೀನ್ ವಿಶ್ವ ಚಾಂಪಿಯನ್ ಆಗಿದ್ದಾರೆ.

- Advertisement -
- Advertisement -

ತೆಲಂಗಾಣದ 25 ವರ್ಷದ ‘ಬಾಕ್ಸರ್‌‌‌‌ ನಿಖತ್‌ ಜರೀನ್’ ಅವರು ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಐದನೇ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗುರುವಾರದಂದು ಟರ್ಕಿಯ ಇಸ್ತಾನ್‌ಬುಲ್‌ನಲ್ಲಿ ನಡೆದ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ ಶಿಪ್‌ನಲ್ಲಿ ನಿಖತ್ ಜರೀನ್ ಅವರು 52 ಕೆಜಿ ಫ್ಲೈವೇಟ್ ವಿಭಾಗದಲ್ಲಿ ಥಾಯ್ಲೆಂಡ್‌ನ ಜಿಟ್‌ಪಾಂಗ್ ಜುಟಾಮಾಸ್ ಅವರನ್ನು ಸೋಲಿಸಿ, ಈ ಸಾಧನೆ ಮಾಡಿದ್ದಾರೆ.

ಪಂದ್ಯದ ನಂತರ ಹೊಸ ವಿಶ್ವ ಫ್ಲೈವೇಟ್ ಚಾಂಪಿಯನ್‌ನ ಹೆಸರನ್ನು ಘೋಷಣೆ ಮಾಡುತ್ತಿದ್ದಂತೆ, ಜರೀನ್ ಅವರು ತನ್ನ ಕೈಯನ್ನು ಗಾಳಿಯಲ್ಲಿ ಗುದ್ದಿ, ತನ್ನ ಎದುರಾಳಿಯನ್ನು ತಬ್ಬಿಕೊಂಡು ಕಣ್ಣೀರು ಹಾಕಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಭಾವನಾತ್ಮಕವಾಗಿ ಟ್ವೀಟ್ ಮಾಡಿರುವ ಜರೀನ್‌, ಅಂತಿಮವಾಗಿ ಇಲ್ಲಿ ತಲುಪಿದೆ. ಹಲವು ವರ್ಷಗಳ ಕಠಿಣ ಪರಿಶ್ರಮ ಮತ್ತು ಪರಿಶ್ರಮದ ತುತ್ತತುದಿ ಇದು ಎಂದು ಹೇಳಿದ್ದು, “ಭಾರತವೇ, ಇದು ನಿನಗಾಗಿ. ನಾವಿಬ್ಬರೂ ಇದನ್ನು ಒಟ್ಟಿಗೆ ಸಾಧಿಸಿದ್ದೇವೆ” ಎಂದು ಅವರು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಮಾಜಿ ಜೂನಿಯರ್ ವಿಶ್ವ ಚಾಂಪಿಯನ್, ಎಂ.ಸಿ. ಮೇರಿ ಕೋಮ್, ಸರಿತಾ ದೇವಿ, ಜೆನ್ನಿ ಆರ್‌‌ಎಲ್ ಮತ್ತು ಲೇಖಾ ಕೆಸಿ ನಂತರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಐದನೇ ಭಾರತೀಯ ಮಹಿಳಾ ಬಾಕ್ಸರ್ ಎಂಬ ಗೌರವಕ್ಕೆ ನಿಖತ್‌ ಜರೀನ್ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಕೆಲವು ಕ್ರೀಡೆಗಳು ಸೃಷ್ಟಿಸುವ ಹೈಪರ್ ನ್ಯಾಷನಲಿಸಂ ಮತ್ತು ಕ್ರೀಡಾಪಟುಗಳ ಜಾತಿನಿಂದನೆ – ಇವುಗಳ ನಡುವೆ ಸಂಭ್ರಮಿಸುವುದಾದರೂ ಹೇಗೆ?

2019 ರಲ್ಲಿ, ಟೋಕಿಯೊ ಒಲಿಂಪಿಕ್ಸ್‌ನ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ಅವಕಾಶ ನಿರಾಕರಿಸಿದ ನಂತರ ಭಾರತದ ದಂತಕಥೆ ಬಾಕ್ಸರ್ ಮೇರಿ ಕೋಮ್ ವಿರುದ್ಧ ನ್ಯಾಯಯುತ ವಿಚಾರಣೆಗೆ ಜರೀನ್ ಕೇಳಿದ್ದರು. ಆಗ ಅವರು “ನಿಖತ್ ಜರೀನ್ ಯಾರು?” ಎಂದು ಪ್ರಶ್ನಿಸಿದ್ದರು. ಇದಾಗಿ ಮೂರು ವರ್ಷಗಳ ನಂತರ, ಜರೀನ್ ವಿಶ್ವ ಚಾಂಪಿಯನ್ ಆಗಿದ್ದಾರೆ.

ಇದಕ್ಕೂ ಮೊದಲು 2018 ರಲ್ಲಿ ಮೇರಿ ಕೋಮ್‌ ಭಾರತದ ಮೊದಲ ಚಿನ್ನವನ್ನು ಗೆದಿದ್ದರು.

ಗುರುವಾರ ತನ್ನ ಗೆಲುವಿನ ನಂತರ, ತನ್ನ ವೃತ್ತಿಜೀವನದುದ್ದಕ್ಕೂ ತನ್ನನ್ನು ಬೆಂಬಲಿಸಿದ ಎಲ್ಲಾ ದೇಶವಾಸಿಗಳಿಗೆ ಪದಕವನ್ನು ಅರ್ಪಿಸುವುದಾಗಿ ಜರೀನ್‌‌ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಟ್ವಿಟರ್‌ನಲ್ಲಿ ಟ್ರೆಂಡ್ ಆಗುವುದು ತನ್ನ ಕನಸು ಎಂದು ಹೇಳಿದ ನಿಖತ್‌‌ ಜರೀನ್

“ನಾನು ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಆಗಿದ್ದೇನೆಯೇ? ಹಿಂದಿನಿಂದಲೇ ಟ್ವಿಟರ್‌ನಲ್ಲಿ ಟ್ರೆಂಡ್ ಆಗುವುದು ನನ್ನ ಕನಸಾಗಿತ್ತು. ವಿಶ್ವ ಮಟ್ಟದಲ್ಲಿ ನನ್ನ ದೇಶಕ್ಕಾಗಿ ಏನನ್ನಾದರೂ ಸಾಧಿಸುವುದು ದೊಡ್ಡ ಕನಸಾಗಿದೆ” ಎಂದು ಅವರು ಹೇಳಿದ್ದಾರೆ.

ತೆಲಂಗಾಣದ ನಿಜಾಮಾಬಾದ್ ಪಟ್ಟಣದ ಮಧ್ಯಮ ವರ್ಗದ ಕುಟುಂಬದಿಂದ ಬಂದಿರುವ ಮುಸ್ಲಿಂ ಬಾಕ್ಸರ್ ನಿಖತ್ ಜರೀನ್‌ ಅವರು ಬಾಕ್ಸಿಂಗ್‌‌ಗೆ ಬರಲು ಹಲವಾರು ಅಡೆತಡೆಗಳನ್ನು ಎದುರಿಸಬೇಕಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: Private: ಲಿವಾಕ್ ಎಂಬ ಕೊಡಗಿನ ಅತಿರೇಕವಾದಿ ಸಂಘಟನೆ ಮತ್ತು ಟಿಪ್ಪುಸುಲ್ತಾನ್ ಬಗ್ಗೆ ಸುಳ್ಳು ಇತಿಹಾಸ ಸೃಷ್ಟಿ

“ನಾನು ಕಷ್ಟಪಟ್ಟು ಕೆಲಸ ಮಾಡಬೇಕಾಗಿತ್ತು. ಬಾಕ್ಸಿಂಗ್ ಮಹಿಳೆಯರಿಗಾಗಿ ಅಲ್ಲ ಎಂಬ ಮಾತು ಸೇರಿದಂತೆ ಹಲವು ಅಡೆತಡೆಗಳನ್ನು ನಿವಾರಿಸಬೇಕಾಗಿತ್ತು. ನನ್ನ ಮುಖಕ್ಕೆ ಏನೂ ಆಗುವುದಿಲ್ಲ ಮತ್ತು ನನ್ನ ಸೌಂದರ್ಯವು ಹಾಗೇ ಇರುತ್ತದೆ ಎಂದು ನಾನು ಜನರಿಗೆ ಹೇಳಬೇಕಾಗಿತ್ತು” ಎಂದು ಅವರು ಕಳೆದ ವರ್ಷ ಕ್ರೀಡಾ ವಸ್ತುಗಳ ಬ್ರಾಂಡ್‌‌ ಅಡಿಡಾಸ್‌ನ ಅಭಿಯಾನವನ್ನು ಪ್ರಾರಂಭಿಸುವ ಸಂದರ್ಭದಲ್ಲಿ ಹೇಳಿದ್ದರು.

“ಈ ಮಾತುಗಳು ನನಗೆ ಸವಾಲಾಗಿದೆ. ನಾನು ಅಲ್ಲಿಗೆ ಹೋಗಿ, ಬಾಕ್ಸಿಂಗ್‌‌ ಎಂಬ ಆಟವು ನೀವು ಪುರುಷನೊ ಅಥವಾ ಮಹಿಳೆಯೊ ಎಂಬುದನ್ನು ಲೆಕ್ಕಿಸುವುದಿಲ್ಲ ಎಂದು ಸಾಬೀತುಪಡಿಸಲು ಬಯಸುತ್ತೇನೆ” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ತಮಿಳು ಸಿನಿಮಾಗಳು ಐತಿಹಾಸಿಕ ಪ್ರತಿರೋಧ ತೋರಿವೆ: ಕೋಟಗಾನಹಳ್ಳಿ ರಾಮಯ್ಯ

ಜರೀನ್ 2010 ರಲ್ಲಿ 13 ನೇ ವಯಸ್ಸಿನಲ್ಲಿ ಬಾಕ್ಸಿಂಗ್ ಸೇರಿದರು. ಆರು ತಿಂಗಳೊಳಗೆ ಅವರು ರಾಜ್ಯ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದರು. ಅದಾಗಿ ಕೇವಲ ಒಂದು ವರ್ಷದ ನಂತರ, ಅವರು ಟರ್ಕಿಯ ಅಂಟಲ್ಯದಲ್ಲಿ ಬಾಲಕಿಯರಿಗಾಗಿ 2011 ರ ವಿಶ್ವ ಜೂನಿಯರ್ ಮತ್ತು ಯೂತ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನವನ್ನು ಗೆದ್ದರು.

ಗುರುವಾರ ಮತ್ತೊಮ್ಮೆ ಟರ್ಕಿಯಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನ ಐತಿಹಾಸಿಕ ಗೆಲುವಿನಿಂದ ಜರೀನ್ ಅವರ ಕುಟುಂಬ ಹರ್ಷಗೊಂಡಿದೆ.

“ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆಲ್ಲುವುದು ಮುಸ್ಲಿಂ ಹುಡುಗಿಯರಿಗೆ ಮತ್ತು ದೇಶದ ಪ್ರತಿಯೊಬ್ಬ ಹುಡುಗಿಯರಿಗೂ ಜೀವನದಲ್ಲಿ ದೊಡ್ಡ ಸಾಧನೆ ಮಾಡುವ ಸ್ಫೂರ್ತಿಯನ್ನು ನೀಡುತ್ತದೆ. ಒಂದು ಮಗು, ಅದು ಹುಡುಗನಾಗಿರಲಿ ಅಥವಾ ಹುಡುಗಿಯಾಗಿರಲಿ, ತನ್ನದೇ ಆದ ದಾರಿಯನ್ನು ಆರಿಸಿಕೊಳ್ಳಬೇಕು. ನಿಖತ್ ಕೂಡಾ ತನ್ನದೇ ಆದ ದಾರಿಯನ್ನು ಆರಿಸಿಕೊಂಡಿದ್ದಾರೆ” ಎಂದು ಜರೀನ್ ಅವರ ತಂದೆ ಜಮೀಲ್ ಅಹ್ಮದ್ ಹೇಳಿದ್ದಾರೆಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಪ್ರಧಾನಿ ಮೋದಿ ಕೂಡಾ ಟ್ವೀಟ್‌ನಲ್ಲಿ ಜರೀನ್ ಅವರನ್ನು ಶ್ಲಾಘಿಸಿದ್ದಾರೆ. “ನಮ್ಮ ಬಾಕ್ಸರ್‌ಗಳು ನಮಗೆ ಹೆಮ್ಮೆ ತಂದಿದ್ದಾರೆ! ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಅದ್ಭುತವಾದ ಚಿನ್ನದ ಪದಕ ಗೆದ್ದಿದ್ದಕ್ಕಾಗಿ ನಿಖತ್ ಜರೀನ್‌ಗೆ ಅಭಿನಂದನೆಗಳು” ಎಂದು ಮೋದಿ ಟ್ವಿಟರ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರ

“ಇದೇ ಸ್ಪರ್ಧೆಯಲ್ಲಿ ಕಂಚಿನ ಪದಕಕ್ಕಾಗಿ ಮನೀಶಾ ಮೌನ್ ಮತ್ತು ಪರ್ವೀನ್ ಹೂಡಾ ಅವರನ್ನು ನಾನು ಅಭಿನಂದಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

“ಇತಿಹಾಸ ಪುಸ್ತಕಗಳಿಗೆ ಇದು ಒಂದು” ಎಂದು ಭಾರತೀಯ ಬಾಕ್ಸಿಂಗ್ ಫೆಡರೇಶನ್ ಟ್ವೀಟ್ ಮಾಡಿದ್ದು, ನಿಖತ್ ಜರೀನ್ ತನ್ನ ಚಿನ್ನದ ಸರಣಿಯನ್ನು ಮುಂದುವರೆಸಿದ್ದಾಳೆ…ವೆಲ್‌ಡನ್‌ ವಿಶ್ವ ಚಾಂಪಿಯನ್” ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...