Homeಮುಖಪುಟಪ್ರತಿಕ್ರಿಯೆ; ಅಳದ ಕಂದನಿಗೆ ಯಾವ ತಾಯಿಯೂ ಹಾಲೂಡಳು!

ಪ್ರತಿಕ್ರಿಯೆ; ಅಳದ ಕಂದನಿಗೆ ಯಾವ ತಾಯಿಯೂ ಹಾಲೂಡಳು!

- Advertisement -
- Advertisement -

’ನ್ಯಾಯಪಥ’ 18 ಮೇ 2022ರ ಸಂಚಿಕೆಯಲ್ಲಿ ಡಾ. ರಮೇಶ.ವಿ ರವರ ’ರಾಷ್ಟ್ರೀಯತೆ ಮತ್ತು ಕನ್ನಡದ ಅಸ್ಮಿತೆ’ (ಇಲ್ಲಿ ಓದಿ) ಎಂಬ ಲೇಖನ ಭಾಷಾ ವಿಜ್ಞಾನದ ನೆಲೆಯಲ್ಲಿ ಒಳ್ಳೆಯ ಬರಹವಾಗಿದೆ. ಇಂಡೋ ಆರ್ಯನ್ ಭಾಷೆಗಳು ಹಾಗು ದ್ರಾವಿಡ ಭಾಷೆಗಳು ಕಾಲಕ್ರಮದಲ್ಲಿ ಹೇಗೆ ಕವಲೊಡೆದು ಬೆಳೆದವು ಎಂಬುದನ್ನು ಸುಪ್ರೀಂಕೋರ್ಟು ಒಳಗೊಂಡಂತೆ ಸದ್ಯ ನಮ್ಮ ರಾಷ್ಟ್ರದ ಹಿಂದಿ ರಾಜಕಾರಣ ದ್ರಾವಿಡ ಭಾಷೆಗಳ ಬುಡಕ್ಕೆ ಬಿಸಿನೀರು ಚೆಲ್ಲುತ್ತಿರುವ ಹಿನ್ನೆಲೆಯಲ್ಲಿ ಅತ್ಯಂತ ಸೂಕ್ಷ್ಮವಾಗಿ, ಸೌಮ್ಯವಾಗಿ ವಿಸ್ತರಿಸಿ, ಬಿಡಿಸಿ ಹೇಳಿದ್ದಾರೆ.

ನಾನೀಗ ರಮೇಶ ಅವರೊಂದಿಗೆ ಕೂಡಿಕೊಂಡು ಕೊಂಚ ಗಟ್ಟಿಯಾಗಿ ಹೇಳಬೇಕಾದ ಮಾತೊಂದಿದೆ. ಅದೇನೆಂದರೆ ಕೂಸು ಅಳದಿದ್ದರೆ ಯಾವ ತಾಯಿಯೂ ಹಾಲೂಡಿಸುವುದಿಲ್ಲವಷ್ಟೆ? ಹಾಗೆ ಯಾವುದೇ ಭಾಷಾ ಸಮುದಾಯವು ಸಹ ಕೂಡುರಾಷ್ಟ್ರದ ರಾಜ್ಯಾಂಗಬದ್ಧ ತನ್ನ ಹಕ್ಕನ್ನು ಚಲಾಯಿಸದಿದ್ದರೆ, ಪಾರ್ಲಿಮೆಂಟಿನಲ್ಲಿ ನಿಂತು ಗಟ್ಟಿಯಾಗಿ ಮಾತನಾಡಿ ಪ್ರಶ್ನಿಸದಿದ್ದರೆ ಇದು ಪ್ರಜಾತಂತ್ರ ಅನ್ನಿಸಿಕೊಳ್ಳುವುದೆ? ಇಲ್ಲ. ಈ ನಿಟ್ಟಿನಲ್ಲಿ ರಾಷ್ಟ್ರಕವಿ ಕುವೆಂಪು ಕಳೆದ ಶತಮಾನದ ಮೂರನೆ ದಶಕದಿಂದ ಬಿಟ್ಟೂಬಿಡದಂತೆ ಒಂದೇಸಮನೆ ’ಕನ್ನಡ ಅಸ್ಮಿತೆ’ಯ ಬಗ್ಗೆ ಕವನ ಬರೆದಿದ್ದಾರೆ; ಭಾಷಣ ಮಾಡಿದ್ದಾರೆ, ಸಂದರ್ಶನದಲ್ಲಿ ಹೇಳಿದ್ದಾರೆ. ಕುವೆಂಪು ಅವರ ವೈಜ್ಞಾನಿಕ ದೃಷ್ಟಿ, ವೈಚಾರಿಕ ತಿಳಿವು, ಒಕ್ಕೂಟರಾಷ್ಟ್ರದ ನಿಲುವು ಅಖಂಡ ಎಂಬುದನ್ನು ಹೆಚ್ಚು ವಿಸ್ತರಿಸಬೇಕಾಗಿಲ್ಲ. 1928ರಲ್ಲಿ ಅವರು ಇನ್ನೂ 24ರ ಹರೆಯದ ಕಾಲೇಜು ವಿದ್ಯಾರ್ಥಿ. ಕನ್ನಡದ ಅಸ್ಮಿತೆಯನ್ನು ಕುರಿತು ಆಗಲೇ ಚಿಂತನಮಂಥನ ನಡೆಸಿದ್ದಾರೆ. ಆಗ ಬರೆದದ್ದು ’ಭಾರತ ಜನನಿಗೆ’ ಎಂಬ ಕವನ. ಅಲ್ಲಿಂದ ಮೊದಲುಗೊಂಡು ’ಜಯಹೇ ಕರ್ನಾಟಕ ಮಾತೆ (1928), ಸಾಯುತಿದೆ ನಿಮ್ಮ ನುಡಿ ಓ ಕನ್ನಡದ ಕಂದರಿರ (1935), ಕಂದ ಕನ್ನಡನಿವನು ಕೈಬಿಡದಿರಮ್ಮಾ (1938), ಮೆಟ್ಟುವ ನೆಲ ಅದು ಕರ್ನಾಟಕ (1949), ಕರ್ನಾಟಕ ಮಂತ್ರದೀಕ್ಷೆ (1949), ಕನ್ನಡ ಡಿಂಡಿಮ(1960), ಸಾಕು ಈ ಬಲಾತ್ಕಾರ(1963), ಬಲಾತ್ಕಾರದ ಭಾಷಾ ತ್ರಿಶೂಲ(1963)’ ಹೀಗೆ ಕುವೆಂಪು ಕನ್ನಡ ತಾಯಿಯ ಸೇವೆಯ ಮಾಡಲು ಜೀವಮಾನ ಪರ್ಯಂತ ಹಾತೊರೆದರು; ಬರೆದರು, ಮಾತಾಡಿ ಕನ್ನಡದ ಅಸ್ಮಿತೆಯನ್ನು ಎತ್ತಿಹಿಡಿದರು. ಸಂಸ್ಕೃತ, ಹಿಂದಿ, ಇಂಗ್ಲಿಷ್ ಯಜಮಾನ್ಯದ ’ಕೊಲ್ವಮುನ್ನ ಸೊಲ್ಲಡಗಿಸುವ ಹುನ್ನಾರ’ವನ್ನು ಕಂಡು ಮರುಗಿದರು;

ಸಾಯುತಿದೆ ನಿಮ್ಮನುಡಿ, ಓ ಕನ್ನಡದ ಕಂದರಿರ
ಹೊರನುಡಿಯ ಹೊರೆಯಿಂದ ಕುಸಿದು ಕುಗ್ಗಿ!
ರಾಜನುಡಿಯೆಂದೊಂದು, ರಾಷ್ಟ್ರನುಡಿಯೆಂದೊಂದು,
ದೇವನುಡಿಯೆಂದೊಂದು ಹತ್ತಿ ಜಗ್ಗಿ

ಎಂದು ಎಚ್ಚರಿಸಿದರು. ಆದರೆ ಇವತ್ತಿಗೂ ಕನ್ನಡಿಗರು ಎಚ್ಚರಗೊಳ್ಳಲಾಗಿಲ್ಲ. ಇಂಗ್ಲಿಷ್, ಹಿಂದಿ, ಸಂಸ್ಕೃತದ ಹೊರೆ ಕನ್ನಡದ ಮಕ್ಕಳಿಗೆ ತಪ್ಪಿಲ್ಲ. ’ಕರ್ನಾಟಕ ಎಂಬುದು ಬರಿಯ ಹೆಸರೆ ಮಣ್ಣಿಗೆ?’ ಎಂದು ಕೇಳಲಾಗಿಲ್ಲ! ಸ್ವಾತಂತ್ರ್ಯವೂ ಬಂತು; ಸ್ವರಾಜ್ಯವೂ ಆಯಿತು; ಭಾಷಾವಾರು ಪ್ರಾಂತ್ಯಗಳೂ ಉದಯವಾದವು; ’ಉದಯವಾಯಿತು ನಮ್ಮ ಚೆಲುವ ಕನ್ನಡ ನಾಡು’ ಎಂದು ಕವಿಗಳು, ಗಮಕಿಗಳು ಹಾಡಿ ದಣಿದರು. ಆದರೆ ಚೆಲುವ ಕನ್ನಡ ನಾಡು ಎಲ್ಲಿ? ಎಲ್ಲವೂ ಜಾತಿಯಲ್ಲಿ, ಸ್ವಜನಪಕ್ಷಪಾತದಲ್ಲಿ, ಭ್ರಷ್ಟಾಚಾರದಲ್ಲಿ, ಮಂತ್ರಿ ಮಹೋದಯರ ಕುರ್ಚಿ ಹರಾಜಿನಲ್ಲಿ, ಹೈಕಮಾಂಡ್ ಎದುರು ಡೊಗ್ಗು ಸಲಾಮು ಹೊಡೆಯುವಲ್ಲಿ ಕನ್ನಡ, ಕರ್ನಾಟಕ, ಕನ್ನಡಿಗರ ಅಸ್ಮಿತೆಯೇ ಮರೆತು ಹೋಗುತ್ತಿದೆ. ’ಮಾತು ಮರೆತ’ ಜನಾಂಗ ಬದುಕಿದ್ದರೂ ಸತ್ತಂತೆ ತಾನೆ? ’ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯಶಿವ’ ಎಂದು ಸತ್ತಂತಿರುವ ಕನ್ನಡಿಗರನ್ನು ಬಡಿದೆಬ್ಬಿಸುವ ದಾತಾರರೇ ಈಗ ಇಲ್ಲ. ನೆರೆಯ ತಮಿಳರು ನಾಡು-ನುಡಿಯ ’ಅಸ್ಮಿತೆ’ಗೆ ಕುಂದು ಬಂದಾಗಲೆಲ್ಲಾ ದಂಗೆಯೆದ್ದು ದ್ರಾವಿಡತನವನ್ನು ಮೆರೆದಿದ್ದಾರೆ. ಕನ್ನಡಿಗರರಿಗೆ ಆ ಭಾಷಾಭಿಮಾನವಾಗಲೀ, ಸ್ವಾಭಿಮಾನವಾಗಲೀ ಇಲ್ಲ. ಲಾಗಾಯ್ತಿನಿಂದ ಒಬ್ಬ ಮಂತ್ರಿಯನ್ನು ಕೈಬಿಡುವುದಕ್ಕೂ ಇನ್ನೊಬ್ಬರನ್ನು
ಸೇರಿಸಿಕೊಳ್ಳುವುದಕ್ಕೂ ಸಹ ಮುಖ್ಯಮಂತ್ರಿಯವರು ದೆಹಲಿ ದರ್ಬಾರ್‌ಗೆ ಹೋಗಿ ಹೈಕಮಾಂಡಿನ ಬಾಗಿಲು ಕಾಯುವ ಪರಿಸ್ಥಿತಿ ಉದ್ಭವಿಸಿದೆ. ಇದಕ್ಕೆಲ್ಲಾ ಕಾರಣ ಕರ್ನಾಟಕದ ಶಾಸಕರು, ಸಂಸದರು ಮತ್ತು ರಾಜ್ಯಸರ್ಕಾರದ ದೌರ್ಬಲ್ಯ. ಬಗ್ಗಿದಷ್ಟೂ ಉತ್ತರದವರ ಪಾರುಪತ್ಯ ಎದ್ದು ಕಾಣುತ್ತದೆ. ಹಾಗಾದರೆ ಏನು ಮಾಡಬೇಕು?

ಏನು ಮಾಡಬೇಕು ಎಂಬುದನ್ನು ಕುವೆಂಪು 1965ರಲ್ಲೇ ’ರಾಷ್ಟ್ರಕವಿ ಪ್ರಶಸ್ತಿ’ ಸ್ವೀಕಾರ ಮಾಡಿದ ಸಂದರ್ಭದಲ್ಲಿ ಹೀಗೆ ಹೇಳಿದ್ದಾರೆ: “ಮಹನೀಯರೆ, ಕೊನೆಯದಾಗಿ ಅಧಿಕೃತ ಶಾಸನಕರ್ತರಾದ ನಿಮ್ಮಲ್ಲಿ ಅನಧಿಕೃತ ಶಾಸನಕರ್ತನಾದ ನನ್ನ ಒಂದು ಅಹವಾಲು; ಅದು ಇಂಗ್ಲಿಷ್ ಭಾಷೆಗೂ ಶಿಕ್ಷಣ ಮಾಧ್ಯಮಕ್ಕೂ ಸಂಬಂಧಪಟ್ಟಿದ್ದು. ವಿವರಕ್ಕಾಗಲಿ ವಾದಕ್ಕಾಗಲಿ ಜಿಜ್ಞಾಸೆಗಾಗಲಿ ನಾನೀಗ ಕೈ ಹಾಕುವುದಿಲ್ಲ. ಅದು ತತ್ಸಮಯ ಸಾಧ್ಯವು ಅಲ್ಲ; ಅದಕ್ಕಿಲ್ಲಿ ಕಾಲಾವಕಾಶವೂ ಇಲ್ಲ. ತಮ್ಮ ಗಮನವನ್ನು ಅತ್ತಕಡೆ ಎಳೆದು, ಅದು ತಮ್ಮ ಶೀಘ್ರ ಪರಿಶೀಲನೆಗೂ ಇತ್ಯರ್ಥಕ್ಕೂ ಒಳಗಾಗುವಂತೆ ಮಾಡುವುದೆ ನನ್ನ ಸದ್ಯ ಪ್ರಯತ್ನದ ಮುಖ್ಯ ಉದ್ದೇಶ. ಆ ವಿಚಾರವಾಗಿ ನಮ್ಮ ರಾಷ್ಟ್ರಪಿತನಾದಿಯಾಗಿ ಸಾವಿರಾರು ದೇಶಭಕ್ತರೂ ನೂರಾರು ಸ್ವದೇಶೀಯ ಮತ್ತು ವಿದೇಶೀಯ ವಿದ್ಯಾತಜ್ಞರೂ ಹೇಳಿದ್ದಾರೆ, ಮಾತನಾಡಿದ್ದಾರೆ, ಬರೆದಿದ್ದಾರೆ. ಹೊತ್ತಗೆಗಳನ್ನೆ ಪ್ರಕಟಿಸಿಯೂ ಇದ್ದಾರೆ. ಆದರೆ ನಮ್ಮ ದೇಶದ ಪ್ರಚ್ಛನ್ನ ಶತ್ರುಗಳಾದ ಸ್ವಾರ್ಥಸಾಧಕ ಪಟ್ಟಭದ್ರ ಹಿತಾಸಕ್ತ ಪ್ರತಿಗಾಮಿ ಶಕ್ತಿಗಳು, ಮಕ್ಕಳಿಗೆ ಹಾಲುಣಿಸುವ ನೆವದಿಂದ ಅವರನ್ನು ಕೊಲ್ಲುತ್ತಿದ್ದ ಭಾಗವತ ಪುರಾಣದ ಪೂತನಿಯಂತೆ, ಬಲಾತ್ಕಾರದ ಇಂಗ್ಲಿಷ್ ಭಾಷೆಯಿಂದಲೂ ಇಂಗ್ಲಿಷ್ ಮಾಧ್ಯಮದಿಂದಲೂ ವರ್ಷವರ್ಷವೂ ಪರೀಕ್ಷೆಯ ಜಿಲೊಟಿನ್ನಿಗೆ ಕೋಟ್ಯಾಂತರ ಬಾಲಕರ ಮತ್ತು ತರುಣರ ತಲೆಗಳನ್ನು ಬಲಿಕೊಡುತ್ತಿದ್ದಾರೆ. ಆ ನಷ್ಟದ ಪರಿಮಾಣವನ್ನು ಊಹಿಸಲೂ ಸಾಧ್ಯವಿಲ್ಲ. ಬಹುಶಃ ಸರಿಯಾಗಿ ಲೆಕ್ಕ ಹಾಕಿದರೆ, ನಾಲ್ಕಾರು ಪಂಚವಾರ್ಷಿಕ ಯೋಜನೆಗಳ ಮೊತ್ತವೆ ಆದರೂ ಆಗಬಹುದೇನೊ!”

“ಇಂಗ್ಲಿಷ್ ಭಾಷೆ ಬಲಾತ್ಕಾರದ ಸ್ಥಾನದಿಂದ ಐಚ್ಛಿಕ ಸ್ಥಾನಕ್ಕೆ ನಿಯಂತ್ರಣಗೊಳ್ಳದಿದ್ದರೆ, ಇಂಗ್ಲಿಷ್ ಶಿಕ್ಷಣ ಮಾಧ್ಯಮ ತೊಲಗಿ ಪ್ರಾದೇಶಿಕ ಭಾಷೆಗೆ ಆ ಸ್ಥಾನ ಲಭಿಸದಿದ್ದರೆ, ನಮ್ಮ ದೇಶ ಹತ್ತೇ ವರ್ಷಗಳಲ್ಲಿ ಸಾಧಿಸಬೇಕಾದುದನ್ನು ಇನ್ನೊಂದು ನೂರು ವರ್ಷಗಳಲ್ಲಿಯೂ ಸಾಧಿಸಲಾರದೆ ನಿತ್ಯ ರೋಗಿಯಂತಿರಬೇಕಾಗುತ್ತದೆ.”

ಇಂದಿಗೂ ಪರಿಸ್ಥಿತಿ ಕುವೆಂಪು ಅಂದು ಹೇಳಿದ ಹಾಗೇ ಇದೆ. ಬದಲಾಗಿರುವುದೇನೆಂದರೆ ಇಂಗ್ಲಿಷಿನ ಸ್ಥಾನಕ್ಕೆ ಹಿಂದಿಯನ್ನು ತರಲಾಗುತ್ತಿದೆ ಅಷ್ಟೇ! ಇದು ವಿದ್ಯಾರ್ಥಿಗಳ, ರೈತರ, ದಲಿತರ ಮಕ್ಕಳ ದನಿಯನ್ನು ಹತ್ತಿಕ್ಕುತ್ತದೆ. ಅಳದ ಕಂದನಿಗೆ ಯಾವ ತಾಯಿಯೂ ಹಾಲೂಡುವುದಿಲ್ಲ! ಮುಖ್ಯ ನಮ್ಮ ಜನಪ್ರತಿನಿಧಿಗಳು ಹೈಕಮಾಂಡ್ ಹೇಳಿದ ಮಾತಿಗೆಲ್ಲಾ ’ಕೌಲೆ ಬಸವಣ್ಣನಂತೆ ತಲೆ ಹಾಕದೆ’ ಲೋಕಸಭೆಯಲ್ಲಿ ವಿಧಾನಸಭೆಯಲ್ಲಿ ಎದ್ದುನಿಂತು ಪ್ರಾದೇಶಿಕ ಭಾಷೆಗಳ ಪರವಾಗಿ ದನಿ ಎತ್ತಬೇಕು. ಬಂಗಾಳಿ, ತಮಿಳು ಮುಂತಾದ ಭಾಷೆಗಳಂತೆ ಕನ್ನಡದ ’ಅಸ್ಮಿತೆ’ಯನ್ನು ನಾವು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯತತ್ಪರರಾಗಬೇಕು. ಇಲ್ಲವಾದರೆ ಕನ್ನಡ ಭಾಷೆಯೊಂದಿಗೆ ಕನ್ನಡ ಜನಾಂಗವೂ ಕಣ್ಮರೆಯಾಗುವ ಕಾಲ ದೂರವಿಲ್ಲ! ಈ ನಿಟ್ಟಿನಲ್ಲಿ ನಮ್ಮ ಮಾಧ್ಯಮಗಳ ಜವಾಬ್ದಾರಿ ಎಷ್ಟಿದೆಯೆಂಬುದನ್ನು ಒತ್ತಿ ಹೇಳಬೇಕಾಗಿಲ್ಲ.

ಪ್ರೊ. ಶಿವರಾಮಯ್ಯ

ಪ್ರೊ. ಶಿವರಾಮಯ್ಯ
ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತರಾಗಿರುವ ಶಿವರಾಮಯ್ಯನವರು ತಮ್ಮ ಅಧ್ಯಾಪನ ಮತ್ತು ಸಂಶೋಧನಾ ಕಾರ್ಯಗಳ ಜೊತೆಗೆ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡವರು. ಸ್ವಪ್ನ ಸಂಚಯ (ಕವನ ಸಂಕಲನ), ಉರಿಯ ಉಯಾಲೆ (ವಿಮರ್ಶಾ ಬರಹಗಳ ಸಂಕಲನ), ದನಿ ಇಲ್ಲದವರ ದನಿ, ಪಂಪಭಾರತ ಭಾಗ-1 &2 (ಸಂಪಾದನೆ ಮತ್ತು ಗದ್ಯಾನುವಾದ) ಅವರ ಪುಸ್ತಕಗಳಲ್ಲಿ ಕೆಲವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ರಾಷ್ಟ್ರೀಯ ಭಾಷೆಯ ಕಲ್ಪನೆ ಮತ್ತು ಕನ್ನಡದ ಅಸ್ಮಿತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...