Homeಮುಖಪುಟಪ್ರತಿಕ್ರಿಯೆ; ಅಳದ ಕಂದನಿಗೆ ಯಾವ ತಾಯಿಯೂ ಹಾಲೂಡಳು!

ಪ್ರತಿಕ್ರಿಯೆ; ಅಳದ ಕಂದನಿಗೆ ಯಾವ ತಾಯಿಯೂ ಹಾಲೂಡಳು!

- Advertisement -
- Advertisement -

’ನ್ಯಾಯಪಥ’ 18 ಮೇ 2022ರ ಸಂಚಿಕೆಯಲ್ಲಿ ಡಾ. ರಮೇಶ.ವಿ ರವರ ’ರಾಷ್ಟ್ರೀಯತೆ ಮತ್ತು ಕನ್ನಡದ ಅಸ್ಮಿತೆ’ (ಇಲ್ಲಿ ಓದಿ) ಎಂಬ ಲೇಖನ ಭಾಷಾ ವಿಜ್ಞಾನದ ನೆಲೆಯಲ್ಲಿ ಒಳ್ಳೆಯ ಬರಹವಾಗಿದೆ. ಇಂಡೋ ಆರ್ಯನ್ ಭಾಷೆಗಳು ಹಾಗು ದ್ರಾವಿಡ ಭಾಷೆಗಳು ಕಾಲಕ್ರಮದಲ್ಲಿ ಹೇಗೆ ಕವಲೊಡೆದು ಬೆಳೆದವು ಎಂಬುದನ್ನು ಸುಪ್ರೀಂಕೋರ್ಟು ಒಳಗೊಂಡಂತೆ ಸದ್ಯ ನಮ್ಮ ರಾಷ್ಟ್ರದ ಹಿಂದಿ ರಾಜಕಾರಣ ದ್ರಾವಿಡ ಭಾಷೆಗಳ ಬುಡಕ್ಕೆ ಬಿಸಿನೀರು ಚೆಲ್ಲುತ್ತಿರುವ ಹಿನ್ನೆಲೆಯಲ್ಲಿ ಅತ್ಯಂತ ಸೂಕ್ಷ್ಮವಾಗಿ, ಸೌಮ್ಯವಾಗಿ ವಿಸ್ತರಿಸಿ, ಬಿಡಿಸಿ ಹೇಳಿದ್ದಾರೆ.

ನಾನೀಗ ರಮೇಶ ಅವರೊಂದಿಗೆ ಕೂಡಿಕೊಂಡು ಕೊಂಚ ಗಟ್ಟಿಯಾಗಿ ಹೇಳಬೇಕಾದ ಮಾತೊಂದಿದೆ. ಅದೇನೆಂದರೆ ಕೂಸು ಅಳದಿದ್ದರೆ ಯಾವ ತಾಯಿಯೂ ಹಾಲೂಡಿಸುವುದಿಲ್ಲವಷ್ಟೆ? ಹಾಗೆ ಯಾವುದೇ ಭಾಷಾ ಸಮುದಾಯವು ಸಹ ಕೂಡುರಾಷ್ಟ್ರದ ರಾಜ್ಯಾಂಗಬದ್ಧ ತನ್ನ ಹಕ್ಕನ್ನು ಚಲಾಯಿಸದಿದ್ದರೆ, ಪಾರ್ಲಿಮೆಂಟಿನಲ್ಲಿ ನಿಂತು ಗಟ್ಟಿಯಾಗಿ ಮಾತನಾಡಿ ಪ್ರಶ್ನಿಸದಿದ್ದರೆ ಇದು ಪ್ರಜಾತಂತ್ರ ಅನ್ನಿಸಿಕೊಳ್ಳುವುದೆ? ಇಲ್ಲ. ಈ ನಿಟ್ಟಿನಲ್ಲಿ ರಾಷ್ಟ್ರಕವಿ ಕುವೆಂಪು ಕಳೆದ ಶತಮಾನದ ಮೂರನೆ ದಶಕದಿಂದ ಬಿಟ್ಟೂಬಿಡದಂತೆ ಒಂದೇಸಮನೆ ’ಕನ್ನಡ ಅಸ್ಮಿತೆ’ಯ ಬಗ್ಗೆ ಕವನ ಬರೆದಿದ್ದಾರೆ; ಭಾಷಣ ಮಾಡಿದ್ದಾರೆ, ಸಂದರ್ಶನದಲ್ಲಿ ಹೇಳಿದ್ದಾರೆ. ಕುವೆಂಪು ಅವರ ವೈಜ್ಞಾನಿಕ ದೃಷ್ಟಿ, ವೈಚಾರಿಕ ತಿಳಿವು, ಒಕ್ಕೂಟರಾಷ್ಟ್ರದ ನಿಲುವು ಅಖಂಡ ಎಂಬುದನ್ನು ಹೆಚ್ಚು ವಿಸ್ತರಿಸಬೇಕಾಗಿಲ್ಲ. 1928ರಲ್ಲಿ ಅವರು ಇನ್ನೂ 24ರ ಹರೆಯದ ಕಾಲೇಜು ವಿದ್ಯಾರ್ಥಿ. ಕನ್ನಡದ ಅಸ್ಮಿತೆಯನ್ನು ಕುರಿತು ಆಗಲೇ ಚಿಂತನಮಂಥನ ನಡೆಸಿದ್ದಾರೆ. ಆಗ ಬರೆದದ್ದು ’ಭಾರತ ಜನನಿಗೆ’ ಎಂಬ ಕವನ. ಅಲ್ಲಿಂದ ಮೊದಲುಗೊಂಡು ’ಜಯಹೇ ಕರ್ನಾಟಕ ಮಾತೆ (1928), ಸಾಯುತಿದೆ ನಿಮ್ಮ ನುಡಿ ಓ ಕನ್ನಡದ ಕಂದರಿರ (1935), ಕಂದ ಕನ್ನಡನಿವನು ಕೈಬಿಡದಿರಮ್ಮಾ (1938), ಮೆಟ್ಟುವ ನೆಲ ಅದು ಕರ್ನಾಟಕ (1949), ಕರ್ನಾಟಕ ಮಂತ್ರದೀಕ್ಷೆ (1949), ಕನ್ನಡ ಡಿಂಡಿಮ(1960), ಸಾಕು ಈ ಬಲಾತ್ಕಾರ(1963), ಬಲಾತ್ಕಾರದ ಭಾಷಾ ತ್ರಿಶೂಲ(1963)’ ಹೀಗೆ ಕುವೆಂಪು ಕನ್ನಡ ತಾಯಿಯ ಸೇವೆಯ ಮಾಡಲು ಜೀವಮಾನ ಪರ್ಯಂತ ಹಾತೊರೆದರು; ಬರೆದರು, ಮಾತಾಡಿ ಕನ್ನಡದ ಅಸ್ಮಿತೆಯನ್ನು ಎತ್ತಿಹಿಡಿದರು. ಸಂಸ್ಕೃತ, ಹಿಂದಿ, ಇಂಗ್ಲಿಷ್ ಯಜಮಾನ್ಯದ ’ಕೊಲ್ವಮುನ್ನ ಸೊಲ್ಲಡಗಿಸುವ ಹುನ್ನಾರ’ವನ್ನು ಕಂಡು ಮರುಗಿದರು;

ಸಾಯುತಿದೆ ನಿಮ್ಮನುಡಿ, ಓ ಕನ್ನಡದ ಕಂದರಿರ
ಹೊರನುಡಿಯ ಹೊರೆಯಿಂದ ಕುಸಿದು ಕುಗ್ಗಿ!
ರಾಜನುಡಿಯೆಂದೊಂದು, ರಾಷ್ಟ್ರನುಡಿಯೆಂದೊಂದು,
ದೇವನುಡಿಯೆಂದೊಂದು ಹತ್ತಿ ಜಗ್ಗಿ

ಎಂದು ಎಚ್ಚರಿಸಿದರು. ಆದರೆ ಇವತ್ತಿಗೂ ಕನ್ನಡಿಗರು ಎಚ್ಚರಗೊಳ್ಳಲಾಗಿಲ್ಲ. ಇಂಗ್ಲಿಷ್, ಹಿಂದಿ, ಸಂಸ್ಕೃತದ ಹೊರೆ ಕನ್ನಡದ ಮಕ್ಕಳಿಗೆ ತಪ್ಪಿಲ್ಲ. ’ಕರ್ನಾಟಕ ಎಂಬುದು ಬರಿಯ ಹೆಸರೆ ಮಣ್ಣಿಗೆ?’ ಎಂದು ಕೇಳಲಾಗಿಲ್ಲ! ಸ್ವಾತಂತ್ರ್ಯವೂ ಬಂತು; ಸ್ವರಾಜ್ಯವೂ ಆಯಿತು; ಭಾಷಾವಾರು ಪ್ರಾಂತ್ಯಗಳೂ ಉದಯವಾದವು; ’ಉದಯವಾಯಿತು ನಮ್ಮ ಚೆಲುವ ಕನ್ನಡ ನಾಡು’ ಎಂದು ಕವಿಗಳು, ಗಮಕಿಗಳು ಹಾಡಿ ದಣಿದರು. ಆದರೆ ಚೆಲುವ ಕನ್ನಡ ನಾಡು ಎಲ್ಲಿ? ಎಲ್ಲವೂ ಜಾತಿಯಲ್ಲಿ, ಸ್ವಜನಪಕ್ಷಪಾತದಲ್ಲಿ, ಭ್ರಷ್ಟಾಚಾರದಲ್ಲಿ, ಮಂತ್ರಿ ಮಹೋದಯರ ಕುರ್ಚಿ ಹರಾಜಿನಲ್ಲಿ, ಹೈಕಮಾಂಡ್ ಎದುರು ಡೊಗ್ಗು ಸಲಾಮು ಹೊಡೆಯುವಲ್ಲಿ ಕನ್ನಡ, ಕರ್ನಾಟಕ, ಕನ್ನಡಿಗರ ಅಸ್ಮಿತೆಯೇ ಮರೆತು ಹೋಗುತ್ತಿದೆ. ’ಮಾತು ಮರೆತ’ ಜನಾಂಗ ಬದುಕಿದ್ದರೂ ಸತ್ತಂತೆ ತಾನೆ? ’ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯಶಿವ’ ಎಂದು ಸತ್ತಂತಿರುವ ಕನ್ನಡಿಗರನ್ನು ಬಡಿದೆಬ್ಬಿಸುವ ದಾತಾರರೇ ಈಗ ಇಲ್ಲ. ನೆರೆಯ ತಮಿಳರು ನಾಡು-ನುಡಿಯ ’ಅಸ್ಮಿತೆ’ಗೆ ಕುಂದು ಬಂದಾಗಲೆಲ್ಲಾ ದಂಗೆಯೆದ್ದು ದ್ರಾವಿಡತನವನ್ನು ಮೆರೆದಿದ್ದಾರೆ. ಕನ್ನಡಿಗರರಿಗೆ ಆ ಭಾಷಾಭಿಮಾನವಾಗಲೀ, ಸ್ವಾಭಿಮಾನವಾಗಲೀ ಇಲ್ಲ. ಲಾಗಾಯ್ತಿನಿಂದ ಒಬ್ಬ ಮಂತ್ರಿಯನ್ನು ಕೈಬಿಡುವುದಕ್ಕೂ ಇನ್ನೊಬ್ಬರನ್ನು
ಸೇರಿಸಿಕೊಳ್ಳುವುದಕ್ಕೂ ಸಹ ಮುಖ್ಯಮಂತ್ರಿಯವರು ದೆಹಲಿ ದರ್ಬಾರ್‌ಗೆ ಹೋಗಿ ಹೈಕಮಾಂಡಿನ ಬಾಗಿಲು ಕಾಯುವ ಪರಿಸ್ಥಿತಿ ಉದ್ಭವಿಸಿದೆ. ಇದಕ್ಕೆಲ್ಲಾ ಕಾರಣ ಕರ್ನಾಟಕದ ಶಾಸಕರು, ಸಂಸದರು ಮತ್ತು ರಾಜ್ಯಸರ್ಕಾರದ ದೌರ್ಬಲ್ಯ. ಬಗ್ಗಿದಷ್ಟೂ ಉತ್ತರದವರ ಪಾರುಪತ್ಯ ಎದ್ದು ಕಾಣುತ್ತದೆ. ಹಾಗಾದರೆ ಏನು ಮಾಡಬೇಕು?

ಏನು ಮಾಡಬೇಕು ಎಂಬುದನ್ನು ಕುವೆಂಪು 1965ರಲ್ಲೇ ’ರಾಷ್ಟ್ರಕವಿ ಪ್ರಶಸ್ತಿ’ ಸ್ವೀಕಾರ ಮಾಡಿದ ಸಂದರ್ಭದಲ್ಲಿ ಹೀಗೆ ಹೇಳಿದ್ದಾರೆ: “ಮಹನೀಯರೆ, ಕೊನೆಯದಾಗಿ ಅಧಿಕೃತ ಶಾಸನಕರ್ತರಾದ ನಿಮ್ಮಲ್ಲಿ ಅನಧಿಕೃತ ಶಾಸನಕರ್ತನಾದ ನನ್ನ ಒಂದು ಅಹವಾಲು; ಅದು ಇಂಗ್ಲಿಷ್ ಭಾಷೆಗೂ ಶಿಕ್ಷಣ ಮಾಧ್ಯಮಕ್ಕೂ ಸಂಬಂಧಪಟ್ಟಿದ್ದು. ವಿವರಕ್ಕಾಗಲಿ ವಾದಕ್ಕಾಗಲಿ ಜಿಜ್ಞಾಸೆಗಾಗಲಿ ನಾನೀಗ ಕೈ ಹಾಕುವುದಿಲ್ಲ. ಅದು ತತ್ಸಮಯ ಸಾಧ್ಯವು ಅಲ್ಲ; ಅದಕ್ಕಿಲ್ಲಿ ಕಾಲಾವಕಾಶವೂ ಇಲ್ಲ. ತಮ್ಮ ಗಮನವನ್ನು ಅತ್ತಕಡೆ ಎಳೆದು, ಅದು ತಮ್ಮ ಶೀಘ್ರ ಪರಿಶೀಲನೆಗೂ ಇತ್ಯರ್ಥಕ್ಕೂ ಒಳಗಾಗುವಂತೆ ಮಾಡುವುದೆ ನನ್ನ ಸದ್ಯ ಪ್ರಯತ್ನದ ಮುಖ್ಯ ಉದ್ದೇಶ. ಆ ವಿಚಾರವಾಗಿ ನಮ್ಮ ರಾಷ್ಟ್ರಪಿತನಾದಿಯಾಗಿ ಸಾವಿರಾರು ದೇಶಭಕ್ತರೂ ನೂರಾರು ಸ್ವದೇಶೀಯ ಮತ್ತು ವಿದೇಶೀಯ ವಿದ್ಯಾತಜ್ಞರೂ ಹೇಳಿದ್ದಾರೆ, ಮಾತನಾಡಿದ್ದಾರೆ, ಬರೆದಿದ್ದಾರೆ. ಹೊತ್ತಗೆಗಳನ್ನೆ ಪ್ರಕಟಿಸಿಯೂ ಇದ್ದಾರೆ. ಆದರೆ ನಮ್ಮ ದೇಶದ ಪ್ರಚ್ಛನ್ನ ಶತ್ರುಗಳಾದ ಸ್ವಾರ್ಥಸಾಧಕ ಪಟ್ಟಭದ್ರ ಹಿತಾಸಕ್ತ ಪ್ರತಿಗಾಮಿ ಶಕ್ತಿಗಳು, ಮಕ್ಕಳಿಗೆ ಹಾಲುಣಿಸುವ ನೆವದಿಂದ ಅವರನ್ನು ಕೊಲ್ಲುತ್ತಿದ್ದ ಭಾಗವತ ಪುರಾಣದ ಪೂತನಿಯಂತೆ, ಬಲಾತ್ಕಾರದ ಇಂಗ್ಲಿಷ್ ಭಾಷೆಯಿಂದಲೂ ಇಂಗ್ಲಿಷ್ ಮಾಧ್ಯಮದಿಂದಲೂ ವರ್ಷವರ್ಷವೂ ಪರೀಕ್ಷೆಯ ಜಿಲೊಟಿನ್ನಿಗೆ ಕೋಟ್ಯಾಂತರ ಬಾಲಕರ ಮತ್ತು ತರುಣರ ತಲೆಗಳನ್ನು ಬಲಿಕೊಡುತ್ತಿದ್ದಾರೆ. ಆ ನಷ್ಟದ ಪರಿಮಾಣವನ್ನು ಊಹಿಸಲೂ ಸಾಧ್ಯವಿಲ್ಲ. ಬಹುಶಃ ಸರಿಯಾಗಿ ಲೆಕ್ಕ ಹಾಕಿದರೆ, ನಾಲ್ಕಾರು ಪಂಚವಾರ್ಷಿಕ ಯೋಜನೆಗಳ ಮೊತ್ತವೆ ಆದರೂ ಆಗಬಹುದೇನೊ!”

“ಇಂಗ್ಲಿಷ್ ಭಾಷೆ ಬಲಾತ್ಕಾರದ ಸ್ಥಾನದಿಂದ ಐಚ್ಛಿಕ ಸ್ಥಾನಕ್ಕೆ ನಿಯಂತ್ರಣಗೊಳ್ಳದಿದ್ದರೆ, ಇಂಗ್ಲಿಷ್ ಶಿಕ್ಷಣ ಮಾಧ್ಯಮ ತೊಲಗಿ ಪ್ರಾದೇಶಿಕ ಭಾಷೆಗೆ ಆ ಸ್ಥಾನ ಲಭಿಸದಿದ್ದರೆ, ನಮ್ಮ ದೇಶ ಹತ್ತೇ ವರ್ಷಗಳಲ್ಲಿ ಸಾಧಿಸಬೇಕಾದುದನ್ನು ಇನ್ನೊಂದು ನೂರು ವರ್ಷಗಳಲ್ಲಿಯೂ ಸಾಧಿಸಲಾರದೆ ನಿತ್ಯ ರೋಗಿಯಂತಿರಬೇಕಾಗುತ್ತದೆ.”

ಇಂದಿಗೂ ಪರಿಸ್ಥಿತಿ ಕುವೆಂಪು ಅಂದು ಹೇಳಿದ ಹಾಗೇ ಇದೆ. ಬದಲಾಗಿರುವುದೇನೆಂದರೆ ಇಂಗ್ಲಿಷಿನ ಸ್ಥಾನಕ್ಕೆ ಹಿಂದಿಯನ್ನು ತರಲಾಗುತ್ತಿದೆ ಅಷ್ಟೇ! ಇದು ವಿದ್ಯಾರ್ಥಿಗಳ, ರೈತರ, ದಲಿತರ ಮಕ್ಕಳ ದನಿಯನ್ನು ಹತ್ತಿಕ್ಕುತ್ತದೆ. ಅಳದ ಕಂದನಿಗೆ ಯಾವ ತಾಯಿಯೂ ಹಾಲೂಡುವುದಿಲ್ಲ! ಮುಖ್ಯ ನಮ್ಮ ಜನಪ್ರತಿನಿಧಿಗಳು ಹೈಕಮಾಂಡ್ ಹೇಳಿದ ಮಾತಿಗೆಲ್ಲಾ ’ಕೌಲೆ ಬಸವಣ್ಣನಂತೆ ತಲೆ ಹಾಕದೆ’ ಲೋಕಸಭೆಯಲ್ಲಿ ವಿಧಾನಸಭೆಯಲ್ಲಿ ಎದ್ದುನಿಂತು ಪ್ರಾದೇಶಿಕ ಭಾಷೆಗಳ ಪರವಾಗಿ ದನಿ ಎತ್ತಬೇಕು. ಬಂಗಾಳಿ, ತಮಿಳು ಮುಂತಾದ ಭಾಷೆಗಳಂತೆ ಕನ್ನಡದ ’ಅಸ್ಮಿತೆ’ಯನ್ನು ನಾವು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯತತ್ಪರರಾಗಬೇಕು. ಇಲ್ಲವಾದರೆ ಕನ್ನಡ ಭಾಷೆಯೊಂದಿಗೆ ಕನ್ನಡ ಜನಾಂಗವೂ ಕಣ್ಮರೆಯಾಗುವ ಕಾಲ ದೂರವಿಲ್ಲ! ಈ ನಿಟ್ಟಿನಲ್ಲಿ ನಮ್ಮ ಮಾಧ್ಯಮಗಳ ಜವಾಬ್ದಾರಿ ಎಷ್ಟಿದೆಯೆಂಬುದನ್ನು ಒತ್ತಿ ಹೇಳಬೇಕಾಗಿಲ್ಲ.

ಪ್ರೊ. ಶಿವರಾಮಯ್ಯ

ಪ್ರೊ. ಶಿವರಾಮಯ್ಯ
ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತರಾಗಿರುವ ಶಿವರಾಮಯ್ಯನವರು ತಮ್ಮ ಅಧ್ಯಾಪನ ಮತ್ತು ಸಂಶೋಧನಾ ಕಾರ್ಯಗಳ ಜೊತೆಗೆ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡವರು. ಸ್ವಪ್ನ ಸಂಚಯ (ಕವನ ಸಂಕಲನ), ಉರಿಯ ಉಯಾಲೆ (ವಿಮರ್ಶಾ ಬರಹಗಳ ಸಂಕಲನ), ದನಿ ಇಲ್ಲದವರ ದನಿ, ಪಂಪಭಾರತ ಭಾಗ-1 &2 (ಸಂಪಾದನೆ ಮತ್ತು ಗದ್ಯಾನುವಾದ) ಅವರ ಪುಸ್ತಕಗಳಲ್ಲಿ ಕೆಲವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ರಾಷ್ಟ್ರೀಯ ಭಾಷೆಯ ಕಲ್ಪನೆ ಮತ್ತು ಕನ್ನಡದ ಅಸ್ಮಿತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...