Homeಕರ್ನಾಟಕರೋಹಿತ್‌ ಚಕ್ರತೀರ್ಥ ಆಯ್ಕೆಯ ಮಾನದಂಡಗಳೇನು?: ಬಹಿರಂಗ ಪತ್ರ ಬರೆದ ಶಿಕ್ಷಣ ತಜ್ಞರು

ರೋಹಿತ್‌ ಚಕ್ರತೀರ್ಥ ಆಯ್ಕೆಯ ಮಾನದಂಡಗಳೇನು?: ಬಹಿರಂಗ ಪತ್ರ ಬರೆದ ಶಿಕ್ಷಣ ತಜ್ಞರು

ಪಠ್ಯ ಪುಸ್ತಕ ರಚನೆ ಮತ್ತು ಪರಿಶೀಲನೆಗೆ, ಭಾರತದ ಚುನಾವಣಾ ಆಯೋಗದ ರೀತಿಯಲ್ಲೇ ಒಂದು ಸ್ವಾಯತ್ತ ಆಯೋಗ ರಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ

- Advertisement -
- Advertisement -

ಪಠ್ಯ ಪುಸ್ತಕಗಳನ್ನು ‘ಬ್ರಾಹ್ಮಣೀಕರಣ’ ಮಾಡಿರುವ ರಾಜ್ಯ ಬಿಜೆಪಿ ಸರ್ಕಾರದ ನಿಲುವು ಹಾಗೂ ಪಠ್ಯಗಳನ್ನು ಪರಿಷ್ಕರಣೆ ಮಾಡಿರುವ ಬಲಪಂಥೀಯ ಲೇಖಕ ರೋಹಿತ್‌ ಚಕ್ರತೀರ್ಥ ಅವರ ಅರ್ಹತೆಗಳನ್ನು ಪ್ರಶ್ನಿಸಿ ರಾಜ್ಯದ ಶಿಕ್ಷಣ ತಜ್ಞರು, ಪ್ರಾಧ್ಯಾಪಕರುಗಳು, ಸಂಶೋಧಕರು, ಸಾಹಿತಿಗಳು ಹಾಗೂ ಹೋರಾಟಗಾರರು ಸೇರಿದಂತೆ ಹಲವು ಗಣ್ಯರು ಬಹಿರಂಗ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅವರು ಪಠ್ಯ ಪುಸ್ತಕಗಳ ರಚನೆ ಮತ್ತು ಪರಿಶೀಲನೆಗೆ, ಭಾರತದ ಚುನಾವಣಾ ಆಯೋಗದ ರೀತಿಯಲ್ಲೇ ಒಂದು ಸ್ವಾಯತ್ತ ಆಯೋಗ ರಚಿಸಬೇಕು ಎಂದು ಆಗ್ರಹಿಸಿದ್ದಾರೆ.

“ಶಿಕ್ಷಣ ತಜ್ಞರಲ್ಲದ, ಶಿಕ್ಷಣ ಕ್ಷೇತ್ರದಲ್ಲಿ ಯಾವುದೇ ಬಗೆಯಲ್ಲಿ ಸಕ್ರಿಯವಾಗಿ ಸಂಶೋಧನೆ ಮಾಡಿಲ್ಲದ ಚಕ್ರತೀರ್ಥ ಅವರನ್ನು ಯಾವ ಮಾನದಂಡದಲ್ಲಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ? ಈ ಮುಖ್ಯ ಪ್ರಶ್ನೆಗೆ ಸಂಬಂಧಪಟ್ಟವರಿಂದ ಉತ್ತರವಿಲ್ಲ” ಎಂದು ಪತ್ರವು ಉಲ್ಲೇಖಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಈ ಸಮಿತಿಯು ಆರಂಭದಲ್ಲಿಯೇ ಆರನೇ ತರಗತಿಯ ಸಮಾಜ ವಿಜ್ಞಾನದ ಹೊಸ ಧರ್ಮಗಳ ಉದಯ ಎನ್ನುವ ಪಠ್ಯದಲ್ಲಿ ಜೈನ, ಬುದ್ಧದಮ್ಮಗಳ ಉದಯವಾದದ್ದು ಯಾಕೆ ಎಂದು ವಿವರಿಸುವ ಪಠ್ಯ ಭಾಗಗಳನ್ನು ತೆಗೆಯಬೇಕೆಂದು ಸೂಚನೆ ಮಾಡಿತ್ತು. ಮತ್ತು ಈ ಹೊಸ ಪರಿಷ್ಕರಣ ಸಮಿತಿಯ ಜವಾಬ್ದಾರಿ ಇದರಾಚೆಗೆ ಎಲ್ಲ ಪಠ್ಯ ಪುಸ್ತಕಗಳನ್ನು ಪರಿಶೀಲಿಸುವುದು ಎಂದೂ ಸಹ ವರದಿಯಾಗಿದೆ. ಅದರ ಮುಂದುವರೆದ ಭಾಗವಾಗಿ ಯಾವ ಮುನ್ಸೂಚನೆಯೂ ಇಲ್ಲದೇ, ಶಿಕ್ಷಣದ ಭಾಗೀದಾರರೊಂದಿಗೆ, ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸದೇ ಏಕಪಕ್ಷೀಯವಾಗಿ 10 ನೇ ತರಗತಿಯ ಪಠ್ಯಗಳಲ್ಲಿ ಅನೇಕ ಬದಲಾವಣೆ ಮಾಡಿದೆ” ಎಂದು ಪತ್ರವೂ ಹೇಳಿದೆ.

ಇದನ್ನೂ ಓದಿ: ರಹಸ್ಯ ಕಾರ್ಯಸೂಚಿಗಳನ್ನು ಒಳಗೊಂಡ ನೂತನ ಪಠ್ಯಪುಸ್ತಕಗಳು ಬೇಕೆ?

ಪರಿಷ್ಕರಣೆಗೊಂಡಿರುವ ಪಠ್ಯ ಪುಸ್ತಕದಲ್ಲಿ ಪಿ. ಲಂಕೇಶ್‌ರ ‘ಮೃಗ ಮತ್ತು ಸುಂದರಿ’, ಡಾ.ಜಿ. ರಾಮಕೃಷ್ಣರ ‘ಭಗತಸಿಂಗ್’, ಸಾರಾ ಅಬೂಬಕರ್‌ರವರ ‘ಯುದ್ಧ’, ಎ.ಎನ್. ಮೂರ್ತಿರಾಯರ ‘ವ್ಯಾಘ್ರ ಕಥೆ’, ಶಿವ ಕೋಟ್ಯಾಚಾರ್ಯರ ‘ಸುಕುಮಾರ ಸ್ವಾಮಿ ಕಥೆ’ ಈ ಪಠ್ಯಗಳನ್ನು ಕೈ ಬಿಡಲಾಗಿದೆ ಎಂದು ಲಭ್ಯವಿರುವ ಪಿಡಿಎಫ್‌ಯಿಂದ ತಿಳಿದು ಬರುತ್ತದೆ. ಆದರೆ ಸರ್ಕಾರ ಮತ್ತು ಪರಿಷ್ಕರಣೆ ಸಮಿತಿ ಭಗತ್ ಸಿಂಗ್ ಪಠ್ಯವನ್ನು ಕೈಬಿಟ್ಟಿಲ್ಲವೆಂದು ಹೇಳಿಕೆ ನೀಡುತ್ತಲೆ ಬರುತ್ತಿದೆ.

“ಕೈ ಬಿಟ್ಟ ಪಠ್ಯ ಮತ್ತು ಸೇರ್ಪಡೆ ಮಾಡಿದ ಪಠ್ಯಗಳನ್ನು ನೋಡಿದರೆ, ಸಮಾಜದ ಪುರೋಗಾಮಿ ಅಬಿವೃದ್ದಿಗೆ ಪೂರಕವಲ್ಲದ, ಸನಾತನವಾದವನ್ನು ಎತ್ತಿ ಹಿಡಿಯುವ, ಆರ್.ಎಸ್.ಎಸ್ ಸಿದ್ದಾಂತಕ್ಕೆ ಬದ್ಧವಾದ ಎಲ್ಲ ಅಂಶಗಳೂ ಸ್ಪಷ್ಟವಾಗಿ ಕಾಣುತ್ತಿವೆ. ಶಿಕ್ಷಣ ಸಚಿವರು ಇನ್ನೂ ಪಠ್ಯ ಪುಸ್ತಕಗಳ ಮುದ್ರಣವೇ ಆಗಿಲ್ಲ ಇವೆಲ್ಲ ವದಂತಿ ಎಂದು ನಿರಾಕರಿಸಿದ್ದಾರೆಂದೂ ವರದಿಗಳಿವೆ. ನಿಯಮದಂತೆ ಮೇ 25 ರೊಳಗೆ ಪಠ್ಯ ಪುಸ್ತಕ ಪೂರೈಕೆ ಆಗಬೇಕು, ಆದರೆ ಇನ್ನೂ ವಿವಾದವನ್ನೇ ಇಟ್ಟುಕೊಂಡಿರುವ ಸರಕಾರ ಪುಸ್ತಕ ಪೂರೈಸಬಹುದೇ ಎಂಬ ಪ್ರಶ್ನೆಯೂ ಇದೆ” ಎಂದು ಪತ್ರ ಉಲ್ಲೇಖಿಸಿದೆ.

“ಕನ್ನಡ ನಾಡಿನ ಅಸ್ಮಿತೆ, ಕನ್ನಡ ಭಾಷೆಯ ಘನತೆಗಳನ್ನು ಗಾಳಿಗೆ ತೂರುವ ರೋಹಿತ್ ಚಕ್ರತೀರ್ಥರವರ ಸಮಿತಿ ಅದಕ್ಕೆ ಬದಲಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ಥಾಪಕರಲ್ಲೊಬ್ಬರಾದ ಹೆಡಗೆವಾರ್‌‌ರವರ ‘ನಿಜವಾದ ಆದರ್ಶ ಪುರುಷ ಯಾರಾಗಬೇಕು’, ಬನ್ನಂಜೆ ಗೋವಿಂದಾಚಾರ್ಯರವರ ‘ಶುಕನಾಸನ ಉಪದೇಶ’, ಶತಾವಧಾನಿ ಗಣೇಶ್‌ರವರ ‘ಶ್ರೇಷ್ಠ ಭಾರತೀಯ ಚಿಂತನೆಗಳು’, ಶಿವಾನಂದ ಕಳವೆಯವರ ‘ಸ್ವದೇಶಿ ಸೂತ್ರದ ಸರಳ ಹಬ್ಬ’ ಪಠ್ಯಗಳನ್ನು ಸೇರಿಸಲಾಗಿದೆ” ಎಂದು ಪತ್ರ ಹೇಳಿದೆ.

ಇದನ್ನೂ ಓದಿ: ಪಠ್ಯಪುಸ್ತಕಗಳಿಗೂ ಪ್ರತಿಕ್ರಾಂತಿ; ಪಕ್ಷರಾಜಕೀಯಕ್ಕೆ ನೈಜ ಶಿಕ್ಷಣದ ಬಲಿ

“ಯಾವ ಕಾರಣಕ್ಕೆ ಕನ್ನಡದ ಪ್ರಮುಖ ಲೇಖಕ, ಲೇಖಕಿಯರ ಪಠ್ಯಗಳನ್ನು ಕೈ ಬಿಟ್ಟಿದ್ದಾರೆ ಎನ್ನುವುದಕ್ಕೆ ಯಾವುದೇ ಕಾರಣಗಳನ್ನು ಕೊಟ್ಟಿಲ್ಲ. ಹಾಗೆಯೇ ಹೆಡಗೇವಾರ್ ಅವರ ಭಾಷಣವನ್ನು ಸೇರಿಸುವುದರ ಕಾರಣ ಮಾತ್ರ ಹೇಳದೇ ಹೋದರೂ ಅರ್ಥವಾಗುತ್ತದೆ. ಒಟ್ಟಾರೆಯಾಗಿ ಇಲ್ಲಿ ಯಾವುದೇ ರೀತಿಯ ಪಾರದರ್ಶಕತೆ ಕಂಡು ಬರುತ್ತಿಲ್ಲ” ಎಂದು ಪತ್ರವು ಹೇಳಿದೆ.

ಪಠ್ಯ ಪುಸ್ತಕ ರಚನೆಯ ಸಂದರ್ಭದಲ್ಲಿ ಕಡ್ಡಾಯವಾಗಿ ಅನುಸರಿಸಬೇಕಾದ ಮೌಲ್ಯಗಳು, ನೀತಿಗಳು ಪ್ರಜಾತಾಂತ್ರಿಕತೆಗೆ ಪೂರಕವಾಗಿರಬೇಕು ಎಂದು ಹೇಳಿರುವ ಪತ್ರವೂ ಪಠ್ಯ ಪುಸ್ತಕಗಳನ್ನು ರಚನೆ ಮಾಡಲು ಬೇಕಾದ ಕೆಲವು ಮುಖ್ಯ ಮೌಲ್ಯಗಳನ್ನು, ನೀತಿ ನಿಯಮಗಳನ್ನು ಹೇಳಿದೆ.

  1. ಸರಕಾರಗಳು ಬದಲಾದಂತೆ ತಮ್ಮ ಸಿದ್ಧಾಂತಕ್ಕೆ ಅನುಗುಣವಾಗಿ ಪಠ್ಯಪುಸ್ತಕಗಳನ್ನು ಬದಲಾಯಿಸುವ ಈ ಪರಿಪಾಠ ಸರಿಯಲ್ಲ.
  2. ಪಠ್ಯ ಪುಸ್ತಕಗಳ ರಚನೆ ಮತ್ತು ಪರಿಷ್ಕರಣೆಯು ಸಂಪೂರ್ಣವಾಗಿ ಶಿಕ್ಷಣ ತಜ್ಞರ ಮೂಲಕ ಮಾತ್ರ ನಡೆಯಬೇಕು ಎನ್ನುವುದು ಇಲ್ಲಿನ ಪ್ರಜ್ಞಾವಂತರ ಆಶಯವಾಗಿದೆ. ಭಾರತದ ಚುನಾವಣಾ ಆಯೋಗದ ರೀತಿಯಲ್ಲಿ ಈ ಪಠ್ಯ ಪುಸ್ತಕಗಳ ರಚನೆ ಮತ್ತು ಪರಿಶೀಲನೆಗೆ ಒಂದು ಸ್ವಾಯತ್ತ ಆಯೋಗ ರಚಿಸಬೇಕು ಮತ್ತು ಇದು ಸರಕಾರದ ನಿಯಂತ್ರಣದಲ್ಲಿ ಇರಬಾರದು ಎಂದು ಶಿಕ್ಷಣ ತಜ್ಞರು ಅಭಿಪ್ರಾಯ ಪಡುತ್ತಾರೆ.
  3. ಯಾವುದೇ ಪೂರ್ವಾಲೋಚನೆ ಇಲ್ಲದೇ ಶಿಕ್ಷಣ ತಜ್ಞರು, ವಿಷಯ ತಜ್ಞರುಗಳ ಜೊತೆ, ಹಿಂದಿನ ಪರಿಷ್ಕರಣಾ ಸಮಿತಿಯ ಅಧ್ಯಕ್ಷರ ಜೊತೆ ಸಮಾಲೋಚಿಸದೇ, ತನ್ನ ಹಿಂದುತ್ವ ಸಿದ್ಧಾಂತಕ್ಕೆ ಬದ್ಧರಾಗಿರುವವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಅವರ ಮೂಲಕ ಪಠ್ಯಪುಸ್ತಕಗಳ ಬದಲಾವಣೆಗೆ ಮುಂದಾಗಿರುವುದು ನಮ್ಮ ಆತಂಕಕ್ಕೆ ಕಾರಣ.
  4. ಪಠ್ಯ ಪುಸ್ತಕ ರಚನಾ ಸಮಿತಿ, ಪರಿಷ್ಕರಣಾ ಸಮಿತಿಗಳಿಗೆ ಅದರದೇ ಆದ ಮಾನದಂಡಗಳಿರುತ್ತವೆ. ಅದರ ಅಧ್ಯಕ್ಷರು ಮತ್ತು ಸದಸ್ಯರು ಶಿಕ್ಷಣ ತಜ್ಞರಾಗಿರಬೇಕು. ಸಮಿತಿಯ ರಚನೆಯಲ್ಲಿ ಸಾಮಾಜಿಕ ನ್ಯಾಯವನ್ನು ಪಾಲಿಸಬೇಕು. ಮುಖ್ಯವಾಗಿ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ ಅದು ಕನ್ನಡದ ಅಸ್ಮಿತೆಗೆ ಪೂರಕವಾಗಿದ್ದು, ಇಲ್ಲಿನ ಬಹು ಸಂಸ್ಕೃತಿಯ ಆಶಯಗಳನ್ನು ಪ್ರತಿನಿಧಿಸುವಂತಿರಬೇಕು. ವೈಜ್ಞಾನಿಕ ಮನೋಧರ್ಮ, ವೈಚಾರಿಕತೆ, ಆಧುನಿಕ ಪ್ರಜ್ಞೆ, ಜಾತ್ಯಾತೀತ ತತ್ವಗಳಿಗೆ ಬದ್ಧವಾಗಿರಬೇಕು. ಸಾಮಾಜಿಕ ಸಾಮರಸ್ಯ, ನೈತಿಕತೆ, ವ್ಯಕ್ತಿತ್ವ ವಿಕಸನಕ್ಕೆ ಅನುವಾಗುವಂತೆ ಪಠ್ಯಪುಸ್ತಕಗಳನ್ನು ರೂಪಿಸಬೇಕು.
  5. ಸಂವಿಧಾನದ ಆಶಯಗಳ ಅನುಸಾರ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ರೂಪಿಸಿದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಪಠ್ಯಕ್ರಮ ರೂಪಿಸಬೇಕು.
  6. ಪಠ್ಯಗಳನ್ನು ಆಯ್ಕೆ ಮಾಡುವಾಗ ಲಿಂಗತ್ವ ಅಸಮಾನತೆ, ಪ್ರಾದೇಶಿಕ ಅಸಮಾನತೆಯನ್ನು ತಪ್ಪಿಸಬೇಕು. ಸಾಮಾಜಿಕ ನ್ಯಾಯದ ತತ್ವ ಪಾಲನೆಯಾಗಬೇಕು.
  7. ತರಗತಿಗಳ ಮಕ್ಕಳ ವಯೋಮಾನವನ್ನು ಆಧರಿಸಿ ಪಠ್ಯಗಳನ್ನು ಆಯ್ಕೆ ಮಾಡಬೇಕು.
  8. ಪಠ್ಯಕ್ರಮವು ಕನ್ನಡ ಭಾಷೆಯ ಎಲ್ಲಾ ಸಾಹಿತ್ಯ ಪರಂಪರೆಯನ್ನು ಪ್ರತಿನಿಧಿಸಬೇಕು.
  9. ಮುಖ್ಯವಾಗಿ ಮಕ್ಕಳ ನಡುವೆ ದ್ವೇಷವನ್ನು ಬಿತ್ತುವಂತಹ, ದೇಶ, ಸಂವಿಧಾನ, ರಾಷ್ಟ್ರದ ಬಾವುಟಕ್ಕೆ ಅವಮಾನ ಮಾಡುವ ಪಠ್ಯಗಳನ್ನು ಯಾವುದೇ ಕಾರಣಕ್ಕೂ ಆಯ್ಕೆ ಮಾಡಬಾರದು. ಜಾತೀಯತೆಯನ್ನು ಪೋಷಿಸುವಂತಹ ಪಠ್ಯಗಳನ್ನು ಆಯ್ಕೆ ಮಾಡಬಾರದು.
  10. ಪಠ್ಯ ಪುಸ್ತಕಗಳ ಪರಿಷ್ಕರಣೆಯು ಪ್ರಜಾಸತ್ತಾತ್ಮಕವಾಗಿರಬೇಕು.
  11. ಮಕ್ಕಳ ಮೇಲೆ ಯಾವುದೇ ರಾಜಕೀಯ, ಧಾರ್ಮಿಕ ಸಿದ್ಧಾಂತಗಳನ್ನು ಹೇರುವ ಪಠ್ಯಗಳನ್ನು ಆಯ್ಕೆ ಮಾಡಬಾರದು.

ರೋಹಿತ್ ಚಕ್ರತೀರ್ಥರ ಅಧ್ಯಕ್ಷತೆಯ ಈ ಪಠ್ಯಪುಸ್ತಕ ಪರಿಷ್ಕರಣೆಯ ಸಮಿತಿಯು ಯಾವುದೇ ಮೌಲ್ಯಗಳನ್ನು , ನೀತಿ ನಿಯಮಗಳನ್ನು ಪಾಲನೆ ಮಾಡಿಲ್ಲ ಎಂದು ಆರೋಪಿಸಿರುವ ಪತ್ರ, ಹಲವು ಪಠ್ಯಗಳನ್ನು ಕೈ ಬಿಟ್ಟಿದ್ದೇಕೆ ಎಂದು ಕೇಳಿದಾಗ ಶಿಕ್ಷಣ ಸಚಿವರಿಂದ ಉತ್ತರವೇ ಇಲ್ಲ. ಹಾಗಾಗಿ ಅದು ಪೂರ್ವಗ್ರಹಪೀಡಿತವಾಗಿದೆ ಎಂದು ತಿಳಿದಿದೆ.

ಇದನ್ನೂ ಓದಿ: ಸ್ವಾಮಿ ವಿವೇಕಾನಂದರ ಚಿಂತನೆಗಳ ತಿರುಚುವಿಕೆ: ಪ್ರಗತಿಪರ ವಿಚಾರ ಕೈಬಿಟ್ಟು, ಶಾಸ್ತ್ರ, ವೇದಾಂತ ಹೇರಿದ ನೂತನ ಪಠ್ಯ ಸಮಿತಿ

“ಆರ್.ಎಸ್.ಎಸ್‌ನ ಹಿಂದುತ್ವ ಸಿದ್ಧಾಂತವನ್ನು ರೂಪಿಸಿದ ಹೆಡಗೇವಾರ್ ಅವರ ಭಾಷಣವನ್ನು ಸೇರಿಸುವ ಔಚಿತ್ಯವೇನು ಎಂಬುದಕ್ಕೆ ಯಾವುದೇ ಸ್ಪಷ್ಟೀಕರಣವಿಲ. ಬದಲಿಗೆ ಹೆಡಗೇವಾರ್ ಭಾಷಣ ಸೇರಿಸಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಒಬ್ಬ ಜವಾಬ್ದಾರಿಯುತ ಸಚಿವರಾಗಿ ಈ ವಿಷಯದಲ್ಲಿ ಸಂವಿಧಾನಕ್ಕೆ ಬದ್ಧರಾಗಿ ನಡೆದುಕೊಂಡಿಲ್ಲ” ಎಂದು ಪತ್ರವೂ ಹೇಳಿದ್ದು, ಸಚಿವರ ವರ್ತನೆಯು ಇದು ಪ್ರಶ್ನಾರ್ಹವಾಗಿದೆ ಎಂದು ತಿಳಿಸಿದೆ.

“ಇದೇ ಪದ್ಧತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಗೋಡ್ಸೆ ಕುರಿತಾದ ಆಧ್ಯಾಯವನ್ನು ಸೇರಿಸುವ ದಿನಗಳು ದೂರವಿಲ್ಲ” ಎಂದು ಆತಂಕ ವ್ಯಕ್ತಪಡಿಸಿರುವ ಪತ್ರವು, ಈ ಬದಲಾವಣೆ ಕುರಿತು ಸ್ಪಷ್ಟೀಕರಣ ಕೇಳಿದಾಗ ಆರ್.ಎಸ್.ಎಸ್ ಸಿದ್ಧಾಂತದಲ್ಲಿ ನಂಬಿಕೆ, ಗೌರವವಿದೆ ಎಂದು ಹೇಳಿಕೊಳ್ಳುತ್ತಿರುವ ರೋಹಿತ್ ಚಕ್ರತೀರ್ಥರವರು ಉಡಾಫೆಯಲ್ಲಿ ಮಾತನಾಡಿದ್ದಾರೆ ಎಂದು ತಿಳಿಸಿದ್ದಾರೆ.

ಹೊಸ ಪರಿಷ್ಕರಣೆಯನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು. ಶಿಕ್ಷಣ ತಜ್ಞರು ಹಾಗೂ ಭಾಗೀದಾರರೊಂದಿಗೆ ಸಮಾಲೋಚನೆ ನಡೆಸುವ ಕ್ರಮ ಅಳವಡಿಕೆಯಾಗಬೇಕು. ಕನ್ನಡದ ಅಸ್ಮಿತೆಯ, ಘನತೆ ಹಾಗೂ ಪ್ರಾದೇಶಿಕ ಆಶೋತ್ತರಗಳಿಗೆ ಕುಂದು ತರಬಾರದು ಎಂದು ಪತ್ರವೂ ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...