Homeಮುಖಪುಟಪುಸ್ತಕದಲ್ಲಿ ಹೆಡಗೇವಾರ್ ಪಠ್ಯ ಸೇರ್ಪಡೆಗೆ ಸ್ವಪಕ್ಷೀಯರಿಂದಲೆ ವಿರೋಧ: ಸರ್ಕಾರಕ್ಕೆ ಚಾಟಿ ಬೀಸಿದ ಎಚ್.ವಿಶ್ವನಾಥ್

ಪುಸ್ತಕದಲ್ಲಿ ಹೆಡಗೇವಾರ್ ಪಠ್ಯ ಸೇರ್ಪಡೆಗೆ ಸ್ವಪಕ್ಷೀಯರಿಂದಲೆ ವಿರೋಧ: ಸರ್ಕಾರಕ್ಕೆ ಚಾಟಿ ಬೀಸಿದ ಎಚ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದೇಶಕ್ಕಾಗಿ ತನ್ನ ಮಕ್ಕಳನ್ನೆ ಒತ್ತೆ ಇಟ್ಟವನು. ಆತ ಬ್ರೀಟಿಷರ ಎದುರು ಮಂಡಿಯೂರಲಿಲ್ಲ. ಆದರೆ ಹೆಡಗೇವಾರ್ ಯಾರು? ಅವರ ಕೊಡುಗೆಯೇನು?

- Advertisement -
- Advertisement -

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯು ಶಾಲಾ ಪಠ್ಯದಲ್ಲಿ ಭಗತ್‌ ಸಿಂಗ್, ನಾರಾಯಣ ಗುರುಗಳ ಪಠ್ಯ ಕೈಬಿಟ್ಟು ಹೆಡಗೇವಾರ್ ಪಠ್ಯ ಸೇರಿಸಿರುವುದಕ್ಕೆ ಬಿಜೆಪಿ ಸರ್ಕಾರದ ಸ್ವಪಕ್ಷೀಯರಿಂದಲೇ ತೀವ್ರ ವಿರೋಧ ವ್ಯಕ್ತವಾಗಿದೆ. ರೋಹಿತ್ ಚಕ್ರತೀರ್ಥ ಶಿಕ್ಷಣ ತಜ್ಞ ಅಲ್ಲ. ಶಿಕ್ಷಣ ತಜ್ಞರಲ್ಲದವರು ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಿರುವುದು ದುರಂತ ಎಂದು ವಿಧಾನ ಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್ ಬೇಸರ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮನಸ್ಸಿಗೆ ಬಹಳ ಬೇಜಾರಾಗುತ್ತಿದೆ. ಪಠ್ಯಪುಸ್ತಕ ಎಂಬುದು ರಾಜಕೀಯ ಸಂಘರ್ಷವಲ್ಲ. ಒಂದು ಸರ್ಕಾರದ ನೀತಿಯ ಮೇಲೆ ಅವುಗಳು ರಚನೆಯಾಗಬಾರದು. ಇನ್ನೊಂದು ಸರ್ಕಾರ ಅವುಗಳನ್ನು ಬದಲಿಸುವುದು ಸರಿಯಲ್ಲ” ಎಂದು ಅಭಿಪ್ರಾಯಪಟ್ಟರು.

ಇವತ್ತು ನಾವು ಶಿಕ್ಷಣವನ್ನು ಹಾಳು ಮಾಡಿದರೆ ದೇಶವನ್ನು ಹಾಳು ಮಾಡಿದ ಹಾಗೆ ಅರ್ಥ. ಈ ರೋಹಿತ್ ಚಕ್ರತೀರ್ಥ ಎಂಬುವವರು ಯಾರು? ನೀನೇನು ಪ್ರೊಫೆಸರ? ಯಾವ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡಿದ್ದೀಯ? ನೀವು ಸಂಘಪರಿವಾರದ ಕಾರ್ಯಕರ್ತರು ಅಷ್ಟೇ ಎಂದು ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡರು.

ಹೆಡಗೇವಾರ್ ಪಠ್ಯ ಸೇರಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಟಿಪ್ಪು ಸುಲ್ತಾನ್‌ಗೂ ಹೆಡಗೇವಾರ್‌ಗೂ ಹೋಲಿಕೆ ಸಾಧ್ಯವಿಲ್ಲ. ಟಿಪ್ಪು ಸುಲ್ತಾನ್ ದೇಶಕ್ಕಾಗಿ ತನ್ನ ಮಕ್ಕಳನ್ನೆ ಒತ್ತೆ ಇಟ್ಟವನು. ಆತ ಬ್ರೀಟಿಷರ ಎದುರು ಮಂಡಿಯೂರಲಿಲ್ಲ. ಆದರೆ ಹೆಡಗೇವಾರ್ ಯಾರು? ಅವರ ಕೊಡುಗೆಯೇನು? ಆತ ಆರ್‌ಎಸ್‌ಎಸ್‌ ಸ್ಥಾಪಕ ಅಷ್ಟೆ ಎಂದರು.

ನಾರಾಯಣ ಗುರುರವರು ಹೋರಾಟ, ಚಳವಳಿ ಮಾಡದಿದ್ದರೆ ಕೇರಳ ಹೀಗೆ ಇರಲು ಸಾಧ್ಯವಾಗುತ್ತಿರಲಿಲ್ಲ. ಅಲ್ಲಿನ ಮಹಿಳೆಯರು ಹಿಂದೆ ಬಟ್ಟೆ ಹಾಕದಂತಹ ಪರಿಸ್ಥಿತಿಯಲ್ಲಿದ್ದಾಗ ಹೋರಾಟ ಮಾಡಿದ ನಾರಾಯಣ ಗುರುಗಳ ಪಠ್ಯ ತೆಗೆದಿರುವುದು ಅಕ್ಷಮ್ಯ ಎಂದರು.

ಭಗತ್ ಸಿಂಗ್ ದೊಡ್ಡ ಸ್ವಾತಂತ್ರ್ಯ ಹೋರಾಟಗಾರರು. ಅವರನ್ನು ಏಕೆ ತೆಗೆದು ಹಾಕಿದ್ದೀರಿ.ಇದಕ್ಕೆ ಮಂತ್ರಿಗಳು ಮತ್ತು ಸರ್ಕಾರ ಉತ್ತರ ಕೊಡಬೇಕು. ಡಿಎಸ್‌ಆರ್‌ಟಿಇ, ಎನ್‌ಸಿಆರ್‌ಟಿಇ ಗಳನ್ನು ಒಳಗೊಂಡು ಪಠ್ಯಪುಸ್ತಕ ರಚಿಸಬೇಕು. ರಾಷ್ಟ್ರೀಯ ಪಠ್ಯ ಚೌಕಟ್ಟಿನಲ್ಲಿ ಅದು ಇರಬೇಕು ಹೊರತು ಮನಸ್ಸಿಗೆ ಬಂದಾಗೆ ಸೇರಿಸಬಾರದು. ಹಿಂದಿನ ಯಾವ ಸರ್ಕಾರಗಳು ಇಂತಹ ಕೆಲಸ ಮಾಡಿಲ್ಲ ಎಂದರು.

ಈ ಸಮಿತಿಯಲ್ಲಿ ಯಾರು ಯಾರು ಇದ್ದಾರೆ? ಯಾವ ಯಾವ ಪಠ್ಯ ಕೈಬಿಟ್ಟೀದ್ದೀರಿ, ಯಾವುದನ್ನು ಸೇರಿಸಿದ್ದೀರಿ ಎಂಬುದನ್ನು ಹಾಗೂ ರೋಹಿತ್ ಚಕ್ರತೀರ್ಥರ ಹಿನ್ನೆಲೆ ಏನು ಎಂಬುದನ್ನು ಸರ್ಕಾರ ಇಡೀ ರಾಜ್ಯದ ಜನರಿಗೆ ತಿಳಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ರಹಸ್ಯ ಕಾರ್ಯಸೂಚಿಗಳನ್ನು ಒಳಗೊಂಡ ನೂತನ ಪಠ್ಯಪುಸ್ತಕಗಳು ಬೇಕೆ?

ಪಠ್ಯಪುಸ್ತಕಗಳ ಕರಡು ಸಾರ್ವಜನಿಕವಾಗಿ ಚರ್ಚೆಯಾಗಬೇಕು. ವೈಜ್ಞಾನಿಕವಾಗಿ, ವೈಚಾರಿಕತೆಯಿಂದ ಕೂಡಿರುವ ಪಠ್ಯಗಳು ನಮಗೆ ಬೇಕೆ ಹೊರತು ಧರ್ಮದ ಆಧಾರದ ಮೇಲೆ ರಚನೆಯಾದವು ಇರಬಾರದು ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....