Homeರಾಷ್ಟ್ರೀಯಮುಸ್ಲಿಂ ಎಂದು ಶಂಕಿಸಿ ಹಲ್ಲೆಗೊಳಗಾದ ವ್ಯಕ್ತಿ ಶವವಾಗಿ ಪತ್ತೆ; ಬಿಜೆಪಿಯ ಮಾಜಿ ಕಾರ್ಪೋರೇಟ್‌ ಪತಿ ಆರೋಪಿ

ಮುಸ್ಲಿಂ ಎಂದು ಶಂಕಿಸಿ ಹಲ್ಲೆಗೊಳಗಾದ ವ್ಯಕ್ತಿ ಶವವಾಗಿ ಪತ್ತೆ; ಬಿಜೆಪಿಯ ಮಾಜಿ ಕಾರ್ಪೋರೇಟ್‌ ಪತಿ ಆರೋಪಿ

- Advertisement -
- Advertisement -

ಬಿಜೆಪಿ ಮಾಜಿ ಕಾರ್ಪೋರೇಟರೊಬ್ಬರ ಪತಿ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರನ್ನು ಮುಸ್ಲಿಂ ಎಂದು ಶಂಕಿಸಿ ನಿರಂತವಾಗಿ ಥಳಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದೀಗ ವ್ಯಕ್ತಿಯು ಶವವಾಗಿ ಮಧ್ಯಪ್ರದೇಶದ ನೀಮುಚ್‌ ಜಿಲ್ಲೆಯಲ್ಲಿ ಶುಕ್ರವಾರ ಪತ್ತೆಯಾಗಿದ್ದಾರೆ.

ವ್ಯಕ್ತಿಯನ್ನು ಭವರ್‌ ಲಾಲ್‌ ಜೈನ್ ಎಂದು ಗುರುತಿಸಲಾಗಿದ್ದು, ಅವರು ಜೈನ ಸಮುದಾಯಕ್ಕೆ ಸೇರಿದವರಾಗಿದ್ದಾರೆ. 65 ವರ್ಷದ ಭವರ್‌ ಲಾಲ್‌ ಅವರು ಮಾನಸಿಕ ಅಸ್ವಸ್ಥರಾಗಿದ್ದು, ಐದು ದಿನಗಳಿಂದ ನಾಪತ್ತೆಯಾಗಿದ್ದರು ಎಂದು ಪಿಟಿಐ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅವರಿಗೆ ಥಳಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದರಲ್ಲಿ ವ್ಯಕ್ತಿಯೊಬ್ಬ ಭವರ್‌ ಲಾಲ್‌ಗೆ ಪದೇ ಪದೇ ಕಪಾಳಮೋಕ್ಷ ಮಾಡುವುದನ್ನು ಕಾಣಬಹುದು. ದುಷ್ಕರ್ಮಿಯು ಭವರ್‌ ಲಾಲ್‌ ಅವರ ಗುರುತನ್ನು ಕೇಳುವುದನ್ನು ಕಾಣಬಹುದಾಗಿದೆ. ಜೊತೆಗೆ ಕಪಾಳಮೋಕ್ಷ ಮಾಡುತ್ತಲೆ, ‘ನಿನ್ನ ಹೆಸರು ಮೊಹಮ್ಮದ್’ ಎಂದು ಕೇಳುತ್ತಾ ಆಧಾರ್ ಕಾರ್ಡ್‌ ತೋರಿಸಲು ಒತ್ತಾಯಿಸುತ್ತಿರುವುದು ಕಂಡುಬಂದಿದೆ.

ಭವರ್‌‌ ಲಾಲ್‌ ಅವರಿಗೆ ಕಪಾಳಮೋಕ್ಷ ಮಾಡುತ್ತಿದ್ದ ವ್ಯಕ್ತಿಯನ್ನು ದಿನೇಶ್ ಕುಶವಾಹ ಎಂದು ಗುರುತಿಸಲಾಗಿದೆ ಎಂದು ಜಿಲ್ಲೆಯ ಮಾನಸ ಪೊಲೀಸ್ ಠಾಣೆಯ ಉಸ್ತುವಾರಿ ಕೆ.ಎಲ್.ಡಂಗಿ ತಿಳಿಸಿದ್ದಾರೆ. ಆರೋಪಿ ಕುಶ್ವಾಹಾ ಬಿಜೆಪಿಯ ಮಾಜಿ ಕಾರ್ಪೊರೇಟರ್ ಪತಿ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ರಹಸ್ಯ ಕಾರ್ಯಸೂಚಿಗಳನ್ನು ಒಳಗೊಂಡ ನೂತನ ಪಠ್ಯಪುಸ್ತಕಗಳು ಬೇಕೆ?

ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು ಸೆಕ್ಷನ್ 304 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನವಭಾರತ್ ಟೈಮ್ಸ್ ಪ್ರಕಾರ ಭವರ್‌ ಲಾ‌ಲ್‌ ಅವರು ರತ್ಲಂ ಜಿಲ್ಲೆಯ ಸರ್ಸಿ ಗ್ರಾಮದ ನಿವಾಸಿಯಾಗಿದ್ದರು. ರಾಜಸ್ಥಾನದ ಚಿತ್ತೋರ್‌ಗಢ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಬಳಿಕ ಅವರು ನಾಪತ್ತೆಯಾಗಿದ್ದರು.

ಇದರ ನಂತರ ಮಾನಸ ಪೊಲೀಸ್ ಠಾಣೆಯು ಅವರು ಕಾಣೆಯಾಗಿರುವ ಬಗ್ಗೆ ನೋಟಿಸ್‌ ಅನ್ನು ಬಿಡುಗಡೆ ಮಾಡಿತ್ತು. ಭವರ್‌ ಲಾಲ್ ಅವರ ಮೃತದೇಹವು ನೀಮುಚ್‌ನ ರಾಂಪುರ ರಸ್ತೆಯಲ್ಲಿರುವ ಕಾರ್ ಶೋ ರೂಂ ಎದುರು ಪತ್ತೆಯಾಗಿದೆ.

ಭವರ್‌‌ ಲಾಲ್‌ ಅವರ ಮೃತದೇಹ ಪತ್ತೆಯಾದ ನಂತರ, ಅವರ ಕುಟುಂಬ ಸದಸ್ಯರು, ಅವರ ಗ್ರಾಮದ ನಿವಾಸಿಗಳು ಮತ್ತು ಜೈನ ಸಮುದಾಯದ ಸದಸ್ಯರು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಪೊಲೀಸ್ ಠಾಣೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ಆಯ್ಕೆಯ ಮಾನದಂಡಗಳೇನು?: ಬಹಿರಂಗ ಪತ್ರ ಬರೆದ ಶಿಕ್ಷಣ ತಜ್ಞರು

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಕಮಲ್ ನಾಥ್, “ಮಧ್ಯಪ್ರದೇಶದ ಅಪರಾಧಿಗಳು ಅಷ್ಟೊಂದು ಧೈರ್ಯ ಯಾಕೆ ಹೊಂದಿದ್ದಾರೆ” ಎಂದು ಪ್ರಶ್ನಿಸಿದ್ದಾರೆ. “ರಾಜ್ಯ ಸರ್ಕಾರವು ಈವೆಂಟ್ ಮ್ಯಾನೇಜ್‌ಮೆಂಟ್‌ನಲ್ಲಿ ಮಾತ್ರ ಆಸಕ್ತಿ ಹೊಂದಿದೆ” ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ.

“ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎಲ್ಲಿದೆ?” ಎಂದು ಕೇಳಿರುವ ಅವರು, “ಎಲ್ಲಿಯವರೆಗೆ ಜನರು ಈ ರೀತಿ ಕೊಲ್ಲಲ್ಪಡುತ್ತಾರೆ?” ಎಂದು ಪ್ರಶ್ನಿಸಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ಕಾರ್ಯದರ್ಶಿ ರಜನೀಶ್ ಅಗರವಾಲ್, “ಘಟನೆಯು ದುರದೃಷ್ಟಕರ” ಎಂದು  ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಪುಸ್ತಕದಲ್ಲಿ ಹೆಡಗೇವಾರ್ ಪಠ್ಯ ಸೇರ್ಪಡೆಗೆ ಸ್ವಪಕ್ಷೀಯರಿಂದಲೆ ವಿರೋಧ: ಸರ್ಕಾರಕ್ಕೆ ಚಾಟಿ ಬೀಸಿದ ಎಚ್.ವಿಶ್ವನಾಥ್

“ಆರೋಪಿಯು ಆರೋಪಿಯಾಗಿದ್ದು, ಅದಕ್ಕೂ ಪಕ್ಷ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ಅವರು ಹೇಳಿದ್ದು, ಇಂತಹ ಕೃತ್ಯದಲ್ಲಿ ಭಾಗಿಯಾಗಿರುವ ಯಾವುದೇ ವ್ಯಕ್ತಿಯನ್ನು ರಾಜ್ಯ ಸರ್ಕಾರ ಬಿಡುವುದಿಲ್ಲ, ನಮ್ಮ ಪಕ್ಷವು ಕಾನೂನಿನ ಆಳ್ವಿಕೆಯಲ್ಲಿ ನಂಬಿಕೆ ಹೊಂದಿದೆ ಎಂದು ತಿಳಿಸಿದ್ದಾರೆ.

ಹಿಂದಿನ ಕಾಂಗ್ರೆಸ್ ಸರ್ಕಾರಗಳು ಅಪರಾಧಿಗಳನ್ನು ರಕ್ಷಿಸುವಲ್ಲಿ ನಿರತವಾಗಿದ್ದವು ಎಂದು ಅಗರವಾಲ್ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...