Homeರಾಷ್ಟ್ರೀಯಮುಸ್ಲಿಂ ಎಂದು ಶಂಕಿಸಿ ಹಲ್ಲೆಗೊಳಗಾದ ವ್ಯಕ್ತಿ ಶವವಾಗಿ ಪತ್ತೆ; ಬಿಜೆಪಿಯ ಮಾಜಿ ಕಾರ್ಪೋರೇಟ್‌ ಪತಿ ಆರೋಪಿ

ಮುಸ್ಲಿಂ ಎಂದು ಶಂಕಿಸಿ ಹಲ್ಲೆಗೊಳಗಾದ ವ್ಯಕ್ತಿ ಶವವಾಗಿ ಪತ್ತೆ; ಬಿಜೆಪಿಯ ಮಾಜಿ ಕಾರ್ಪೋರೇಟ್‌ ಪತಿ ಆರೋಪಿ

- Advertisement -
- Advertisement -

ಬಿಜೆಪಿ ಮಾಜಿ ಕಾರ್ಪೋರೇಟರೊಬ್ಬರ ಪತಿ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರನ್ನು ಮುಸ್ಲಿಂ ಎಂದು ಶಂಕಿಸಿ ನಿರಂತವಾಗಿ ಥಳಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದೀಗ ವ್ಯಕ್ತಿಯು ಶವವಾಗಿ ಮಧ್ಯಪ್ರದೇಶದ ನೀಮುಚ್‌ ಜಿಲ್ಲೆಯಲ್ಲಿ ಶುಕ್ರವಾರ ಪತ್ತೆಯಾಗಿದ್ದಾರೆ.

ವ್ಯಕ್ತಿಯನ್ನು ಭವರ್‌ ಲಾಲ್‌ ಜೈನ್ ಎಂದು ಗುರುತಿಸಲಾಗಿದ್ದು, ಅವರು ಜೈನ ಸಮುದಾಯಕ್ಕೆ ಸೇರಿದವರಾಗಿದ್ದಾರೆ. 65 ವರ್ಷದ ಭವರ್‌ ಲಾಲ್‌ ಅವರು ಮಾನಸಿಕ ಅಸ್ವಸ್ಥರಾಗಿದ್ದು, ಐದು ದಿನಗಳಿಂದ ನಾಪತ್ತೆಯಾಗಿದ್ದರು ಎಂದು ಪಿಟಿಐ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅವರಿಗೆ ಥಳಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದರಲ್ಲಿ ವ್ಯಕ್ತಿಯೊಬ್ಬ ಭವರ್‌ ಲಾಲ್‌ಗೆ ಪದೇ ಪದೇ ಕಪಾಳಮೋಕ್ಷ ಮಾಡುವುದನ್ನು ಕಾಣಬಹುದು. ದುಷ್ಕರ್ಮಿಯು ಭವರ್‌ ಲಾಲ್‌ ಅವರ ಗುರುತನ್ನು ಕೇಳುವುದನ್ನು ಕಾಣಬಹುದಾಗಿದೆ. ಜೊತೆಗೆ ಕಪಾಳಮೋಕ್ಷ ಮಾಡುತ್ತಲೆ, ‘ನಿನ್ನ ಹೆಸರು ಮೊಹಮ್ಮದ್’ ಎಂದು ಕೇಳುತ್ತಾ ಆಧಾರ್ ಕಾರ್ಡ್‌ ತೋರಿಸಲು ಒತ್ತಾಯಿಸುತ್ತಿರುವುದು ಕಂಡುಬಂದಿದೆ.

ಭವರ್‌‌ ಲಾಲ್‌ ಅವರಿಗೆ ಕಪಾಳಮೋಕ್ಷ ಮಾಡುತ್ತಿದ್ದ ವ್ಯಕ್ತಿಯನ್ನು ದಿನೇಶ್ ಕುಶವಾಹ ಎಂದು ಗುರುತಿಸಲಾಗಿದೆ ಎಂದು ಜಿಲ್ಲೆಯ ಮಾನಸ ಪೊಲೀಸ್ ಠಾಣೆಯ ಉಸ್ತುವಾರಿ ಕೆ.ಎಲ್.ಡಂಗಿ ತಿಳಿಸಿದ್ದಾರೆ. ಆರೋಪಿ ಕುಶ್ವಾಹಾ ಬಿಜೆಪಿಯ ಮಾಜಿ ಕಾರ್ಪೊರೇಟರ್ ಪತಿ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ರಹಸ್ಯ ಕಾರ್ಯಸೂಚಿಗಳನ್ನು ಒಳಗೊಂಡ ನೂತನ ಪಠ್ಯಪುಸ್ತಕಗಳು ಬೇಕೆ?

ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು ಸೆಕ್ಷನ್ 304 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನವಭಾರತ್ ಟೈಮ್ಸ್ ಪ್ರಕಾರ ಭವರ್‌ ಲಾ‌ಲ್‌ ಅವರು ರತ್ಲಂ ಜಿಲ್ಲೆಯ ಸರ್ಸಿ ಗ್ರಾಮದ ನಿವಾಸಿಯಾಗಿದ್ದರು. ರಾಜಸ್ಥಾನದ ಚಿತ್ತೋರ್‌ಗಢ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಬಳಿಕ ಅವರು ನಾಪತ್ತೆಯಾಗಿದ್ದರು.

ಇದರ ನಂತರ ಮಾನಸ ಪೊಲೀಸ್ ಠಾಣೆಯು ಅವರು ಕಾಣೆಯಾಗಿರುವ ಬಗ್ಗೆ ನೋಟಿಸ್‌ ಅನ್ನು ಬಿಡುಗಡೆ ಮಾಡಿತ್ತು. ಭವರ್‌ ಲಾಲ್ ಅವರ ಮೃತದೇಹವು ನೀಮುಚ್‌ನ ರಾಂಪುರ ರಸ್ತೆಯಲ್ಲಿರುವ ಕಾರ್ ಶೋ ರೂಂ ಎದುರು ಪತ್ತೆಯಾಗಿದೆ.

ಭವರ್‌‌ ಲಾಲ್‌ ಅವರ ಮೃತದೇಹ ಪತ್ತೆಯಾದ ನಂತರ, ಅವರ ಕುಟುಂಬ ಸದಸ್ಯರು, ಅವರ ಗ್ರಾಮದ ನಿವಾಸಿಗಳು ಮತ್ತು ಜೈನ ಸಮುದಾಯದ ಸದಸ್ಯರು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಪೊಲೀಸ್ ಠಾಣೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ಆಯ್ಕೆಯ ಮಾನದಂಡಗಳೇನು?: ಬಹಿರಂಗ ಪತ್ರ ಬರೆದ ಶಿಕ್ಷಣ ತಜ್ಞರು

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಕಮಲ್ ನಾಥ್, “ಮಧ್ಯಪ್ರದೇಶದ ಅಪರಾಧಿಗಳು ಅಷ್ಟೊಂದು ಧೈರ್ಯ ಯಾಕೆ ಹೊಂದಿದ್ದಾರೆ” ಎಂದು ಪ್ರಶ್ನಿಸಿದ್ದಾರೆ. “ರಾಜ್ಯ ಸರ್ಕಾರವು ಈವೆಂಟ್ ಮ್ಯಾನೇಜ್‌ಮೆಂಟ್‌ನಲ್ಲಿ ಮಾತ್ರ ಆಸಕ್ತಿ ಹೊಂದಿದೆ” ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ.

“ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎಲ್ಲಿದೆ?” ಎಂದು ಕೇಳಿರುವ ಅವರು, “ಎಲ್ಲಿಯವರೆಗೆ ಜನರು ಈ ರೀತಿ ಕೊಲ್ಲಲ್ಪಡುತ್ತಾರೆ?” ಎಂದು ಪ್ರಶ್ನಿಸಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ಕಾರ್ಯದರ್ಶಿ ರಜನೀಶ್ ಅಗರವಾಲ್, “ಘಟನೆಯು ದುರದೃಷ್ಟಕರ” ಎಂದು  ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಪುಸ್ತಕದಲ್ಲಿ ಹೆಡಗೇವಾರ್ ಪಠ್ಯ ಸೇರ್ಪಡೆಗೆ ಸ್ವಪಕ್ಷೀಯರಿಂದಲೆ ವಿರೋಧ: ಸರ್ಕಾರಕ್ಕೆ ಚಾಟಿ ಬೀಸಿದ ಎಚ್.ವಿಶ್ವನಾಥ್

“ಆರೋಪಿಯು ಆರೋಪಿಯಾಗಿದ್ದು, ಅದಕ್ಕೂ ಪಕ್ಷ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ಅವರು ಹೇಳಿದ್ದು, ಇಂತಹ ಕೃತ್ಯದಲ್ಲಿ ಭಾಗಿಯಾಗಿರುವ ಯಾವುದೇ ವ್ಯಕ್ತಿಯನ್ನು ರಾಜ್ಯ ಸರ್ಕಾರ ಬಿಡುವುದಿಲ್ಲ, ನಮ್ಮ ಪಕ್ಷವು ಕಾನೂನಿನ ಆಳ್ವಿಕೆಯಲ್ಲಿ ನಂಬಿಕೆ ಹೊಂದಿದೆ ಎಂದು ತಿಳಿಸಿದ್ದಾರೆ.

ಹಿಂದಿನ ಕಾಂಗ್ರೆಸ್ ಸರ್ಕಾರಗಳು ಅಪರಾಧಿಗಳನ್ನು ರಕ್ಷಿಸುವಲ್ಲಿ ನಿರತವಾಗಿದ್ದವು ಎಂದು ಅಗರವಾಲ್ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...