Homeರಾಷ್ಟ್ರೀಯ‘ಶಿವಲಿಂಗ’ದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ; ‘ಅಂಬೇಡ್ಕರ್‌ ನಾಮ’ ಸಂಪಾದಕ ಬಂಧನ

‘ಶಿವಲಿಂಗ’ದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ; ‘ಅಂಬೇಡ್ಕರ್‌ ನಾಮ’ ಸಂಪಾದಕ ಬಂಧನ

- Advertisement -
- Advertisement -

ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿರುವ ‘ಶಿವಲಿಂಗ’ದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಕ್ಕಾಗಿ ದೆಹಲಿ ವಿಶ್ವವಿದ್ಯಾಲಯದ (ಡಿಯು) ಪ್ರೊಫೆಸರ್, ‘ಅಂಬೇಡ್ಕರ್‌ ನಾಮ’ ಸಂಪಾದಕ ರತನ್ ಲಾಲ್ ಅವರನ್ನು ಶುಕ್ರವಾರ ಬಂಧಿಸಲಾಗಿದೆ. ಆದರೆ ಶನಿವಾರ, ದೆಹಲಿಯ ತೀಸ್ ಹಜಾರಿ ನ್ಯಾಯಾಲಯವು ಅವರಿಗೆ ಜಾಮೀನು ನೀಡಿದೆ.

ಅವರ ಬಂಧನದ ಬಗ್ಗೆ ಪೊಲೀಸ್ ಉಪ ಆಯುಕ್ತ (ಉತ್ತರ) ಸಾಗರ್ ಸಿಂಗ್ ಕಲ್ಸಿ ದೃಢಪಡಿಸಿದ್ದಾರೆ. “ಪ್ರೊಫೆಸರ್‌‌ ರತನ್ ಅವರು ಮಂಗಳವಾರ ಕಟ್ಟಡವೊಂದರ ಫೋಟೋವನ್ನು ಪೋಸ್ಟ್ ಮಾಡಿ ಆಕ್ಷೇಪಾರ್ಹ ಕಾಮೆಂಟ್‌‌ಗಳನ್ನು ಮಾಡಿದ್ದಾರೆ. ಈ ಬಗ್ಗೆ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದ್ದು, ತನಿಖೆಯನ್ನು ಕೈಗೊಳ್ಳಲಾಗಿದೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರತನ್‌‌ ಅವರನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153A ಮತ್ತು 295A ಅಡಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಮೂಲದ ವಕೀಲರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮಂಗಳವಾರ ರಾತ್ರಿ ರತನ್‌ ಲಾಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

ವಕೀಲ ವಿನೀತ್ ಜಿಂದಾಲ್ ಅವರು ತನ್ನ ದೂರಿನಲ್ಲಿ, ರತನ್‌ ಲಾಲ್ ಅವರು ಇತ್ತೀಚೆಗೆ “ಶಿವಲಿಂಗದ ಮೇಲೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಟ್ವೀಟ್” ಅನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಸಿಕ್ಕಿದೆ ಎನ್ನಲಾಗಿರುವ ‘ಶಿವಲಿಂಗ’ದ ವಿಚಾರದ ಬಗ್ಗೆ ಪೋಸ್ಟ್ ಮಾಡಲಾಗಿದ್ದು, ಇದು ಅತ್ಯಂತ ಸೂಕ್ಷ್ಮ ಸ್ವರೂಪದ್ದಾಗಿದೆ. ಈ ವಿಷಯವು ನ್ಯಾಯಾಲಯದ ಮುಂದೆ ಬಾಕಿ ಇದೆ ಎಂದು ವಕೀಲರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಪ್ರೊಫೆಸರ್‌ ರತನ್ ಲಾಲ್ ಅವರು ತಮ್ಮ ಪೋಸ್ಟ್‌ ಅನ್ನು ಸಮರ್ಥಿಸಿಕೊಂಡಿದ್ದಾರೆ. “ಭಾರತದಲ್ಲಿ, ನೀವು ಯಾವುದೇ ವಿಷಯದ ಬಗ್ಗೆ ಮಾತನಾಡಿದರೆ, ಯಾರಿಗಾದರೂ ಅಥವಾ ಇನ್ನೊಬ್ಬರ ಭಾವನೆಗೆ ಧಕ್ಕೆಯಾಗುತ್ತದೆ. ಹಾಗಾಗಿ ಇದು ಹೊಸದೇನಲ್ಲ. ನಾನು ಇತಿಹಾಸಕಾರನಾಗಿದ್ದು, ಇಂತಹ ಹಲವಾರು ಅವಲೋಕನಗಳನ್ನು ಮಾಡಿದ್ದೇನೆ ಮತ್ತು ಅವುಗಳನ್ನು ಬರೆದಿದ್ದೇನೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಹಿಂದೂ ಭಾವನೆಗಳ ಬಗ್ಗೆ ಮಾತನಾಡಿದ ಈ ಅಯೋಗ್ಯನನ್ನ ಅಲ್ಲೇ ಕಡಿದು ಹಾಕಬೇಕಿತ್ತು .ಈ ಕಮ್ಯೂನಿಸ್ಟ್ ಭೋಳಿ ಮಗನ್ನ ಕಡಿದು ಊರಿನ ಬಾಗಲಿಗೆ ನೇತಾಡಬೇಕಿತ್ತು

  2. ಹಿಂದೂ ವೈದಿಕರಲ್ಲಿ 33 ಕೋಟಿ ದೇವರಿದ್ದು ಅವರ ಕುರಿತು ಅತಿ ವಿಚಿತ್ರ ಕಥೆಗಳೂ ಇರುವುದರಿಂದ, ನಾವು ಜೋರಾಗಿ ಕೆಮ್ಮಿದರೂ 33 ಕೋಟಿ ದೇವರಲ್ಲಿ ಯರಾದರೊಬ್ಬ ದೇವರಿಗೆ ಅವಮಾನ ಆಗುವುದು ಖಚಿತ. ಹಾಗಾದರೆ ನಾವು ಕೆಮ್ಮುವುದನ್ನು ಸೀನುವುದನ್ನು ನಿಲ್ಲಿಸಬೇಕೇ ??😢😢

  3. ಬ್ರಾಹ್ಮಣ್ಯ ಹಿಂದುತ್ವದ ಮುಖವಾಡ ಧರಿಸಿ ಮೇರೆಯಲು ಪ್ರಾರಂಭಿಸಿದೆ ಬಹುಸಂಖ್ಯಾತರಿಗೆ ವಿದ್ಯೆ ನಿಶಿದ್ದವಾಗಿದ್ದ ಕಾಲದಲ್ಲಿ ಎನೆನೊ ಸುಳ್ಳು ಪುಸ್ತಕಗಳು ಕಾಲ್ಪನಿಕ ವೇದ ಪುರಾಣ ಬರೆದು ಜನರನ್ನು ನಂಬಿಸಿ ತಮ್ಮ ಹೊಟ್ಟೆಪಾಡು ಮಾಡಿಕೊಂಡು ಸುಖ ಜೀವನ ಮಾಡಿಕೊಂಡು ರಾಜ ಮಹಾರಾಜರನ್ನು ಓಲೈಸಿಕೊಂಡು ಬದುಕಿದ್ದ ವೈದಿಕ ಸನಾತನಿಗಳಿಗೆ ಆದುನಿಕ ಶಿಕ್ಷಣ ಪಡೆದ ಜನ ತಮ್ಮ ಕಾಲ್ಪನಿಕ ಕಥೆಗೆ ಪ್ರತಿಕ್ರಿಯಿಸುತ್ತಿರುವುದು ಹತಾಶೆ ಮೂಡಿಸಿದೆ.

  4. ಇದೆಲ್ಲ ಮಾಟ ಮಂತ್ರ ಮಾಡಿ ಕಲ್ಪನೆ ಯಾ ಸಂಕಲ್ಪ ಮಾಡಿದ್ದಾರೆ ಬಿಜೆಪಿ ಸರ್ಕಾರ ಬಾರುತ್ತೆ ಅಂತಾ ಈ ಮಾಂತ್ರಿಕ ಚೀನಾ ದ ಮಾಂತ್ರಿಕ ವಿದ್ಯೆ ಜೋತೆಗೆ ಪೆಗಾಸಸ್ ಸ್ಪೈವೇರ್ ಬಳಸಿಕೋಂಡು ಜನರ ನೆಮ್ಮದಿ ಕೆಡಿಸಿ ಸೀನಿಮಾ ತರ ಎಲ್ಲಾರನ್ನು ನಟನೆ ಮಾಡುತ್ತಾನೆ ತುಮಕೂರು ಪ್ರಸಾದ್ ಬಂಗಾರಿ ಮತ್ತು ಮಂತೇಶ್ ಬಾಬು ವಿರಪುರ (ಶಿವಕೂಮಾರ್ ಸ್ವಾಮಿ ಜಿ ಊರು) ಪಕ್ಕಾ ಶಾಂತಪುರ

LEAVE A REPLY

Please enter your comment!
Please enter your name here

- Advertisment -

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...