Homeಕರ್ನಾಟಕ#RejectBrahminTextBooks ಟ್ವಿಟರ್‌ ಅಭಿಯಾನ ಇಂದು

#RejectBrahminTextBooks ಟ್ವಿಟರ್‌ ಅಭಿಯಾನ ಇಂದು

- Advertisement -
- Advertisement -

ಒಂದೇ ಜಾತಿಯವರು ಒಳಗೊಂಡಿರುವ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ರೂಪಿಸಿರುವ ಪಠ್ಯವು ತಾರತಮ್ಯದಿಂದ ಕೂಡಿದ್ದು, ಅದರ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.

ಲಿಂಗ ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ಕುರಿತು ಲಘುವಾದ ಧೋರಣೆ ತಾಳಿರುವ ಸಮಿತಿ ರಚಿಸಿರುವ ಪಠ್ಯಗಳನ್ನು ಬಹಿಷ್ಕರಿಸಲು ಕರೆ ನೀಡಲಾಗಿದ್ದು, #RejectBrahminTextBooks ಹ್ಯಾಷ್‌ ಟ್ಯಾಗ್‌ನಲ್ಲಿ ಟ್ವಿಟರ್‌ ಅಭಿಯಾನವನ್ನು ಆಯೋಜಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ (ಇಂದು) ಸಂಜೆ 5 ಗಂಟೆಗೆ ಅಭಿಯಾನ ನಡೆಯಲಿದ್ದು #RejectBrahminTextBooks ಹ್ಯಾಷ್‌ಟ್ಯಾಗ್‌ನಲ್ಲಿ ಟ್ವೀಟ್ ಮಾಡುವಂತೆ ಸಮಾನತೆ, ಸಾಮಾಜಿಕ ನ್ಯಾಯ, ಸಂವಿಧಾನದ ಆಯಶಗಳನ್ನು ಉಳಿಸಲು ಹೋರಾಡುತ್ತಿರುವ ಮನಸ್ಸುಗಳು ಕರೆ ನೀಡಿವೆ.

“ಪಠ್ಯಪುಸ್ತಕಗಳಲ್ಲಿ ಒಂದು ಜಾತಿಯ ಲೇಖಕರ ವಿಜೃಂಭಣೆ, ಕೇಸರೀಕರಣ- ವೈದೀಕರಣ, ಕರ್ನಾಟಕದ, ಭಾರತದ ಸಮಾಜ ಸುಧಾರಕರ ಕುರಿತಾದ ಪಾಠಗಲನ್ನು ತೆಗೆದು ಹಾಕಿರುವುದನ್ನು ಖಂಡಿಸಿ ಈ ಅಭಿಯಾನ ಕೈಗೊಳ್ಳಲಾಗಿದೆ” ಎಂಬ ಪೋಸ್ಟರ್‌ಗಳು ವೈರಲ್‌ ಆಗುತ್ತಿವೆ.

“ಕೋಮವಾದದ ಪಠ್ಯಗಳನ್ನು ರಾಜ್ಯ ಸರ್ಕಾರ ಕೈಬಿಡಬೇಕು” ಎಂಬ ಆಗ್ರಹ ಜೋರಾಗಿದೆ.

“ಪಠ್ಯ ಪುಸ್ತಕವನ್ನು ಬಿಜೆಪಿಯ ಪುಸ್ತಕವನ್ನಾಗಿ ಮಾಡಿ ಹಿಂಬಾಗಿಲ ಮೂಲಕ ಮನುಸ್ಮೃತಿಯನ್ನು ತರಲಾಗುತ್ತಿದೆ” ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಜೊತೆಗೆ ಶಿಕ್ಷಣದ ವಿಚಾರದಲ್ಲಿ ವಿವಾದಗಳನ್ನು ಸೃಷ್ಟಿಸುತ್ತಿರುವ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ರಾಜೀನಾಮೆಗೆ ಒತ್ತಾಯಿಸಲಾಗಿದೆ.

‘ಪಠ್ಯ ಸೇರಿದ ಸೂಲಿಬೆಲೆ ಪಾಠ; ನಾರಾಯಣಗುರು ಪಠ್ಯ ಪ್ರತ್ಯೇಕವಾಗಿಲ್ಲ’

ಸುಳ್ಳುಗಳನ್ನು ಹೇಳುತ್ತಾ, ಬಿಜೆಪಿ ಪರ ಪ್ರಚಾರ ಮಾಡುತ್ತಾ ಟೀಕೆಗಳಿಗೆ ಒಳಗಾಗಿರುವ ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆಯವರ ಪಾಠವೊಂದನ್ನು ಇಡಲಾಗಿದೆ. ಸಮಾಜ ಸುಧಾರಕ, ಶೂದ್ರ ಸಮುದಾಯದಲ್ಲಿ ಸ್ವಾಭಿಮಾನವನ್ನು ತುಂಬಿದ ನಾರಾಯಣಗುರುಗಳ ಪಠ್ಯವನ್ನು ಮರು ಸೇರಿಸಲಾಗಿದ್ದು, ಆದರೆ ಪ್ರತ್ಯೇಕವಾದ ಅಧ್ಯಾಯವಾಗಿ ರೂಪಿಸಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿರಿ: ಶಿಕ್ಷಣ ಹಕ್ಕು ಕಾಯ್ದೆ ಉಲ್ಲಂಘಿಸಿದ ಚಕ್ರತೀರ್ಥ ಸಮಿತಿ; ಸಚಿವ ಬಿ.ಸಿ.ನಾಗೇಶ್‌ ರಾಜೀನಾಮೆಗೆ ಆಗ್ರಹ

ಡಾ.ಜಿ.ರಾಮಕೃಷ್ಣ ಅವರ ‘ಭಗತ್‌ಸಿಂಗ್‌’ ಪಾಠವನ್ನು ಕೈಬಿಟ್ಟ ಬಳಿಕ ತೀವ್ರ ವಿರೋಧ ವ್ಯಕ್ತವಾಗಿತ್ತು. ಈಗ ಆ ಪಾಠವನ್ನು ಹೊಸ ಪಠ್ಯದಲ್ಲಿ ಸೇರಿಸಿಕೊಳ್ಳಲಾಗಿದ್ದು, ಚಕ್ರವರ್ತಿ ಸೂಲಿಬೆಲೆಯವರ ‘ತಾಯಿ ಭಾರತಿಯ ಅಮರ ಪುತ್ರರು’ ಶೀರ್ಷಿಕೆಯ ಬರಹವನ್ನೂ ಹತ್ತನೇ ತರಗತಿಯ ಕನ್ನಡ ಪ್ರಥಮ ಭಾಷೆ ಪಠ್ಯಪುಸ್ತಕದಲ್ಲಿ ಒಳಗೊಳ್ಳಲಾಗಿದೆ.

‘ಸಾಮಾಜಿಕ ಚಳವಳಿಯನ್ನೇ ಹುಟ್ಟು ಹಾಕಿ, ಹಿಂದುಳಿದ ಸಮುದಾಯದವರಲ್ಲಿ ಸ್ವಾಭಿಮಾನದ ಕಿಡಿ ಹೊತ್ತಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರು ಅವರ ಕುರಿತ ಅಧ್ಯಾಯ ಸಮಾಜ ವಿಜ್ಞಾನ ಪಠ್ಯದಲ್ಲಿತ್ತು. ಅದನ್ನೂ ಕೈಬಿಡಲಾಗಿತ್ತು. ಮತ್ತೆ ಪರಿಷ್ಕರಿಸಿರುವ ಸರ್ಕಾರ ಈ ವಿವರಗಳನ್ನು ಕನ್ನಡ ಪುಸ್ತಕದಲ್ಲಿ ಸೇರಿಸಿದೆ. ಆದರೆ ಇವರ ಬಗ್ಗೆ ಪ್ರತ್ಯೇಕ ಪಾಠ ಇಲ್ಲ” ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.

‘ಭಗತ್‌ಸಿಂಗ್‌’, ‘ತಾಯಿ ಭಾರತಿಯ ಅಮರಪುತ್ರರು’ ಮತ್ತು ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಕರು’ ಅಧ್ಯಾಯಗಳನ್ನು ಪಠ್ಯಪೂರಕ ವಿಭಾಗದಲ್ಲಿ ಸೇರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....