Homeದಲಿತ್ ಫೈಲ್ಸ್ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ಊಟ ಬಹಿಷ್ಕರಿಸುವವರನ್ನು ಶಾಲೆಯಿಂದ ಹೊರಹಾಕಲಾಗುವುದು ಎಂದು ವಿದ್ಯಾರ್ಥಿಗಳ ಪೋಷಕರಿಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ನರೇಂದ್ರ ಸಿಂಗ್ ಎಚ್ಚರಿಕೆಯನ್ನು ನೀಡಿದ್ದಾರೆ.

- Advertisement -
- Advertisement -

ಉತ್ತರಾಖಂಡದ ಚಂಪಾವತ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ದಲಿತ ಮಹಿಳೆ (ಅಡುಗೆ ಸಿಬ್ಬಂದಿ) ಸುನೀತಾ ದೇವಿ ಅವರು ತಯಾರಿಸಿದ ಬಿಸಿಯೂಟವನ್ನು ಸೇವಿಸಲು ಏಳರಿಂದ ಎಂಟು ವಿದ್ಯಾರ್ಥಿಗಳು ಮತ್ತೆ ನಿರಾಕರಿಸಿದ್ದಾರೆ.

ಡಿಸೆಂಬರ್‌ 2021ರಲ್ಲಿ ದಲಿತ ಮಹಿಳೆಯನ್ನು ವಜಾಗೊಳಿಸಿದಾಗ ವಿವಾದ ಸೃಷ್ಟಿಯಾಗಿತ್ತು. ದಲಿತ ವಿದ್ಯಾರ್ಥಿಗಳು ಸವರ್ಣೀಯರು ತಯಾರಿಸಿದ ಊಟವನ್ನು ಸೇವಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದಾಗ ದಲಿತ ಮಹಿಳೆಯನ್ನು ಮರು ನೇಮಕ ಮಾಡಿಕೊಳ್ಳಲಾಯಿತು. ‘ಈಗ ಮತ್ತೆ ವಿವಾದ ಶುರುವಾಗಿದೆ’ ಎಂದು ಶಾಲೆಯ ಪ್ರಾಂಶುಪಾಲರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯ ನಂತರ ಚಂಪಾವತ್ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ನರೇಂದ್ರ ಸಿಂಗ್ ಭಂಡಾರಿ ಅವರು ಮೇ 20ರಂದು ವಿದ್ಯಾರ್ಥಿಗಳ ಪೋಷಕರೊಂದಿಗೆ ಸಭೆ ನಡೆಸಿದ್ದಾರೆ. ಜೌಲ್‌ನಲ್ಲಿರುವ ಸ್ವತಂತ್ರ ಸಂಗ್ರಾಮ ಸೇನಾನಿ ದಿವಂಗತ ಶ್ರೀ ರಾಮಚಂದ್ರ ಸರ್ಕಾರಿ ಅಂತರ ಕಾಲೇಜಿನ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಸೇವಿಸಬೇಕು ಎಂದು ಸೂಚಿಸಿದ್ದಾರೆ.

“ಇಂದು ಜಿಲ್ಲಾ ಮ್ಯಾಜಿಸ್ಟ್ರೇಟ್‌, ಕೆಲವು ಪೊಲೀಸ್ ಅಧಿಕಾರಿಗಳು ಹಾಜರಿದ್ದು ವಿದ್ಯಾರ್ಥಿಗಳು ಮತ್ತು ಅವರ ಪೋಷಕರೊಂದಿಗೆ ಸಭೆ ನಡೆಸಿದರು. ಊಟವನ್ನು ಬಹಿಷ್ಕರಿಸುವುದನ್ನು ನಿಲ್ಲಿಸುವಂತೆ ಮನವೊಲಿಸಲು ಪ್ರಯತ್ನಿಸಿದರು. ಅಧಿಕಾರಿಗಳೇ ಶಾಲೆಯಲ್ಲಿ ಊಟ ಮಾಡಿದರು. ಆದಾಗ್ಯೂ, ಈ 7-8 ವಿದ್ಯಾರ್ಥಿಗಳು ಊಟ ತಿನ್ನಲು ನಿರಾಕರಿಸಿದರು. ಅನ್ನವನ್ನು ತಿನ್ನುವುದಿಲ್ಲ ಎಂದು ಈ ವಿದ್ಯಾರ್ಥಿಗಳು ಹೇಳಿಕೊಂಡರು” ಎಂದು ಪ್ರಾಂಶುಪಾಲರು ತಿಳಿಸಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ..

ಊಟ ಬಹಿಷ್ಕರಿಸುವವರನ್ನು ಶಾಲೆಯಿಂದ ಹೊರಹಾಕಲಾಗುವುದು ಎಂದು ವಿದ್ಯಾರ್ಥಿಗಳ ಪೋಷಕರಿಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ನರೇಂದ್ರ ಸಿಂಗ್ ಎಚ್ಚರಿಕೆಯನ್ನು ನೀಡಿದ್ದಾರೆ.

ದಲಿತ ಮಹಿಳೆಯನ್ನು ವಜಾಗೊಳಿಸಿ ಮರುನೇಮಕ ಮಾಡಲಾಗಿದೆ. ಅದೇ ಶಾಲೆಯಲ್ಲಿ ಆರರಿಂದ ಎಂಟನೇ ತರಗತಿಗಳಲ್ಲಿ ಓದುತ್ತಿರುವ ಸವರ್ಣೀಯ ಸಮುದಾಯಕ್ಕೆ ಸೇರಿದ ಸುಮಾರು 43 ವಿದ್ಯಾರ್ಥಿಗಳು ದೇವಿ ಬೇಯಿಸಿದ ಆಹಾರವನ್ನು ತಿನ್ನಲು ನಿರಾಕರಿಸಿದ್ದರು.

23 ಡಿಸೆಂಬರ್ 2021ರಂದು, ಚಂಪಾವತ್ ಶಿಕ್ಷಣ ಇಲಾಖೆಯ ಅಧಿಕಾರಿಗಳು ದಲಿತ ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿದ್ದರು. ನೇಮಕಾತಿಯಲ್ಲಿನ ಕಾರ್ಯವಿಧಾನದಲ್ಲಿ ಲೋಪವಾಗಿದೆ ಎಂದು ಕಾರಣ ನೀಡಿದ್ದರು. ದಲಿತ ಮಹಿಳೆಯ ಬದಲಿಗೆ ಸವರ್ಣೀಯ ಜಾತಿಗೆ ಸೇರಿದವರನ್ನು ನೇಮಿಸಲಾಗಿತ್ತು. ಇದಕ್ಕೆ ಪ್ರತಿರೋಧವಾಗಿ ಶಾಲೆಯ 23 ದಲಿತ ವಿದ್ಯಾರ್ಥಿಗಳು ಸವರ್ಣೀಯ ಮಹಿಳೆ ತಯಾರಿಸಿದ ಮಧ್ಯಾಹ್ನದ ಊಟವನ್ನು ಸೇವಿಸಲು ನಿರಾಕರಿಸಿದರು.

ಇದನ್ನೂ ಓದಿರಿ: #RejectBrahminTextBooks ಟ್ವಿಟರ್‌ ಅಭಿಯಾನ ಇಂದು

ದೇವಿ ಅವರನ್ನು ವಜಾಗೊಳಿಸಿದ ನಂತರ, ಕಾಂಗ್ರೆಸ್ ರಾಜ್ಯಸಭಾ ಸಂಸದ ಪ್ರದೀಪ್ ತಮ್ತಾ ಅವರು ಧ್ವನಿ ಎತ್ತಿ, “ಮಹಿಳೆಯರ ಸಾಂವಿಧಾನಿಕ ಹಕ್ಕುಗಳನ್ನು ಮರುಸ್ಥಾಪಿಸಲು” ಕಾಂಗ್ರೆಸ್ ಆಂದೋಲನವನ್ನು ಪ್ರಾರಂಭಿಸುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ ಪ್ರತಿಕ್ರಿಯೆ ನೀಡಿ, “ಸುನೀತಾ ದೇವಿಯವರನ್ನು ಮರುಸೇರ್ಪಡೆ ಮಾಡದಿದ್ದರೆ, ನಮ್ಮ ಸಂಘಟನೆಯು ಉತ್ತರಾಖಂಡ್ ಮುಖ್ಯಮಂತ್ರಿ ಸಚಿವ ಪುಷ್ಕರ್ ಸಿಂಗ್ ಧಾಮಿಗೆ ಘೇರಾವ್ ಹಾಕಲಿದೆ” ಎಂದಿದ್ದರು.

ದೇವಿಯವರನ್ನು ಜನವರಿ 1 ರಂದು ಮರು ನೇಮಕ ಮಾಡಲಾಯಿತು. ಮಾರ್ಚ್‌ ತಿಂಗಳಿನಿಂದ ಶಾಲೆಯಲ್ಲಿ ಮಧ್ಯಾಹ್ನದ ಅಡುಗೆ ಮಾಡಲು ದೇವಿ ಆರಂಭಿಸಿದರು.

ತಮ್ಮನ್ನು ವಜಾಗೊಳಿಸಿದ ನಂತರ ಉತ್ತರಾಖಂಡ ಪೊಲೀಸರಿಗೆ ದೇವಿ ದೂರು ನೀಡಿದ್ದರು. ದೇವಿಯವರಿಗೆ ಜಾತಿ ನಿಂದನೆ ಹಾಗೂ ಕ್ರಿಮಿನಲ್ ಬೆದರಿಕೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದಲಿತ ಮಹಿಳೆಗೆ ಸರ್ಕಾರ ನೀಡಿರುವ ಪರಿಶುದ್ದತೆಯ ನಿರ್ವಹಣೆಯ ತರಪೇತಿ, ಅಡುಗೆ ತರಪೇತಿಯ ವಿವರಗಳನ್ನು ಮತ್ತು ಆಕೆ ತರಪೇತಿಯ ಕೊನೆಯಲ್ಲಿ ಜನರ ಆರೋಗ್ಯದ ಮತ್ತು ಯೋಗಕ್ಷೇಮದ ಬಗ್ಗೆ ತೆಗೆದುಕೊಂಡ ಪ್ರತಿಜ್ಞೆಯನ್ನು ಜನರಿಗೆ ಮತ್ತು ಮಕ್ಕಳಿಗೆ ಮನವರಿಕೆ ಮಾಡಿಕೊಡಬೇಕು. ಅಲ್ಲದೆ ಈ ಸಮಸ್ಯೆಗೆ ಉತ್ತರಿಸಲಾಗದಿರುವ ಇನ್ನೂ ಹಲವಾರು ವಿಷಯಗಳಿವೆ. ಅದನ್ನು ಸರ್ಕಾರ ಒಂದು ನಿಯೋಗದ ಮುಖಾಂತರ ಅಧ್ಯಯನ ಮಾಡಿ ಜನರು ಕೇಳುವ ಮತ್ತು ಅವರ ಮನಸ್ಸಿನಲ್ಲಿ ಉಳಿದುಕೊಂಡಿರುವ ಎಲ್ಲಾ ವಿಷಯಗಳಿಗೂ ಕೇವಲ ಮಾತಿನಲ್ಲಲ್ಲದೆ ಕಾರ್ಯತಹ: ಪರಿಹರಿಸುವ ಪ್ರಯತ್ನವನ್ನು ಮಾಡಬೇಕು. ಉದಾಹರಣೆಗೆ : ಒಬ್ಬ ಮ್ಯಾನ್‌ಹೋಲ್‌ ಕ್ಲೀನ್‌ ಮಾಡುವವನ ಹೆಂಡತಿ ಕುಕ್‌ ಆದರೆ ಪರಿಶುದ್ದತೆಯ ಬಗ್ಗೆ ಅನುಮಾನಗಳು ಸಹಜವಾಗಿರುತ್ತವೆ.

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...