HomeಮುಖಪುಟRSS ಪ್ರೇರಿತ ಬ್ರಾಹ್ಮಣ್ಯ ಪಠ್ಯ ತಿರಸ್ಕರಿಸಿ: ಶಿಕ್ಷಣ ಸಚಿವ ನಾಗೇಶ್ ರಾಜೀನಾಮೆಗೆ ಒತ್ತಾಯಿಸಿ ಟ್ವಿಟರ್ ಟ್ರೆಂಡಿಂಗ್

RSS ಪ್ರೇರಿತ ಬ್ರಾಹ್ಮಣ್ಯ ಪಠ್ಯ ತಿರಸ್ಕರಿಸಿ: ಶಿಕ್ಷಣ ಸಚಿವ ನಾಗೇಶ್ ರಾಜೀನಾಮೆಗೆ ಒತ್ತಾಯಿಸಿ ಟ್ವಿಟರ್ ಟ್ರೆಂಡಿಂಗ್

- Advertisement -
- Advertisement -

RSS ಪ್ರೇರಿತ ಬ್ರಾಹ್ಮಣ್ಯ ಪಠ್ಯ ತಿರಸ್ಕರಿಸಿ, ಶಿಕ್ಷಣ ತಜ್ಞರಲ್ಲದ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಟ್ವಿಟರ್‌ನಲ್ಲಿ ಜೋರು ಸದ್ದು ಕೇಳಿಬಂದಿದೆ. #RejectRSSTextBooks #RejectBrahminTextBooks ಎಂಬ ಹ್ಯಾಷ್‌ಟ್ಯಾಗ್‌ಗಳು ಭಾರತ ಮಟ್ಟದಲ್ಲಿ ಟ್ರೆಂಡಿಂಗ್ ಆಗುತ್ತಿದೆ.

ಪಠ್ಯಪುಸ್ತಕ ಸಮಿತಿಯಲ್ಲಿ ಇರುವವರು ಎಲ್ಲರೂ ಬ್ರಾಹ್ಮಣರೇ ಆಗಿದ್ದಾರೆ. 09 ಜನ ಬ್ರಾಹ್ಮಣ ಲೇಖಕರ ಪಠ್ಯ ಸೇರಿಸಲಾಗಿದೆ. 06 ಜನ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗದ ಲೇಖಕರ ಪಠ್ಯ ಕೈಬಿಡಲಾಗಿದೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

ಜೀವನದುದ್ದಕ್ಕೂ ಸುಳ್ಳನ್ನೇ ಹೇಳಿಕೊಂಡು ಬಂದ ಚಕ್ರವರ್ತಿ ಸೂಲಿಬೆಲೆ ಪಠ್ಯ ಸೇರಿಸುವ ಮೂಲಕ ಮಕ್ಕಳಿಗೆ ಯಾವ ಸಂದೇಶ ನೀಡುತ್ತಿದ್ದೀರಿ? ಟ್ರೋಲ್ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪಠ್ಯ ಪರಿಷ್ಕರಣ ಸಮಿತಿಗೆ ಅಧ್ಯಕ್ಷನನ್ನಾಗಿ ನೇಮಿಸಿದ್ದಾಗಲೇ ಕರ್ನಾಟಕ ಮರ್ಯಾದೆ ಹಾಳಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ಟ್ವಿಟರ್‌ನಲ್ಲಿ #RejectRSSTextBooks #RejectBrahminTextBooks ಹ್ಯಾಷ್‌ಟ್ಯಾಗ್‌ಗಳು 13 ಸಾವಿರಕ್ಕೂ ಹೆಚ್ಚು ಟ್ವೀಟ್ ಆಗಿದ್ದು, ಭಾರತ ಮಟ್ಟದಲ್ಲಿ ಟ್ರೆಂಡ್ ಆಗುತ್ತಿವೆ.

ವಿದ್ಯಾರ್ಥಿಗಳು ಕಲಿಯುವ ಇತಿಹಾಸದ ಪಠ್ಯಪುಸ್ತಕಗಳು ನಾಡಿನ ಭವಿಷ್ಯತ್ತಿಗೆ ಮಾರಕವಾಗಬಾರದು, ಪೂರಕವಾಗಿರಬೇಕು. ಹಿಂಸೆ, ದ್ವೇಷ, ಅಸೂಯೆಗಳ ಪುಷ್ಠಿಕರಿಸುವ ವೈದೀಕರಣವನ್ನ ಖಂಡಿಸಿಬೇಕಿದೆ. ಕನ್ನಡದ ಅಸ್ಮಿತೆಗೆ ಧಕ್ಕೆ ತರುವ, ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆಗೆ ಸರ್ಕಾರ ತಡೆ ನೀಡಬೇಕು #RejectRSSTextBooks ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಬಿ.ಕೆ ಹರಿಪ್ರಸಾದ್‌ರವರು ಟ್ವೀಟ್ ಮಾಡಿದ್ದಾರೆ.

RSS ಮತ್ತು ನಕಲಿ ದೇಶಪ್ರೇಮಿಗಳನ್ನು ಪಠ್ಯದೊಳಗೆ ಸೇರಿಸಿ ಅವರ ವಿಷಕಾರಿ ನೀತಿಗಳನ್ನು ಮಕ್ಕಳ ತಲೆಗೆ ತುಂಬಲು ಹೊರಟಿರುವ ಸರ್ಕಾರಕ್ಕೆ ಯಾವುದರ ಬಗ್ಗೆಯೂ ಸ್ಪಷ್ಟತೆ ತಿಳುವಳಿಕೆ ಇಲ್ಲ. ಇಂತಹ ಅಪದ್ದಗಳಿಗೆ ಕಾರಣವಾಗಿರುವ ಸಚಿವ ಬಿ.ಸಿ ನಾಗೇಶ್ ಅಸಮರ್ಥರಾಗಿದ್ದು, ಸಮಾಜ ವಿರೋಧಿ ಶಕ್ತಿಗಳನ್ನು ಉತ್ತೇಜಿಸುತ್ತಿದ್ದಾರೆ #RejectRSSTextBooks ಎಂದು ಮಾಜಿ ಸಚಿವರಾದ ಡಾ.ಎಚ್.ಸಿ ಮಹಾದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕಕ್ಕೆ ಆಧುನಿಕ ಶಿಕ್ಷಣವನ್ನು ತಂದುಕೊಟ್ಟವರು ಕ್ರಿಶ್ಚಿಯನ್ನರು. ಕರ್ನಾಟಕವನ್ನು ಜಾಗತಿಕ ಭೂಪಟಕ್ಕೆ ಸೇರಿಸಿದವರು ಮುಸ್ಲಿಮರು. ಕರ್ನಾಟಕದ ಮೂಲನಿವಾಸಿಗಳು ದಲಿತರು. ಪಠ್ಯಪುಸ್ತಕ ರಚನೆ ಮಾಡುವಾಗ ಸಮಿತಿಯಲ್ಲಿ ಇವರು ಇರಬೇಕಾದ್ದು ಅಗತ್ಯ. ಮಕ್ಕಳಿಗೆ ಜನಾಂಗ ದ್ವೇಷ ಕಲಿಸಬಾರದು #RejectRSSTextBooks #RejectBrahminTextBooks ಎಂದು ಹಿರಿಯ ಚಿಂತಕರು ಮತ್ತು ಜೆಎನ್‌ಯು ಕನ್ನಡ ಪೀಠದ ಅಧ್ಯಕ್ಷರಾಗಿದ್ದ ಪುರುಷೋತ್ತಮ ಬಿಳಿಮಲೆಯವರು ಬರೆದಿದ್ದಾರೆ.

ಕನ್ನಡ ಮಕ್ಕಳು ಓದಬೇಕಿರುವುದು ಸಿದ್ದಲಿಂಗಯ್ಯನವರ ಬಂಡಾಯದ ಹಾಡುಗಳನ್ನು. ಸಂಸ್ಕಾರದ ಹೆಸರಲ್ಲಿ ಬರೀ ವೈದಿಕ ಆಚರಣೆಗಳು, ನಂಬಿಕೆಗಳನ್ನೇ ಕನ್ನಡ ಮಕ್ಕಳಿಗೆ ಕಲಿಸಿದರೆ ಅದು ತಪ್ಪು. ಸಂಸ್ಕಾರ ಬರೀ ಬ್ರಾಹ್ಮಣರಿಗಶ್ಟೇ ಇದೆಯಾ? ಇದೊಂದು ಹೊಣೆಗೇಡಿ ಪುರೋಹಿತಶಾಹಿ ಸರಕಾರ ಎಂದು ಚೈತನ್ಯ ಗೌಡ ಎಂಬುವವರು ಬರೆದಿದ್ದಾರೆ.

ಅರವಿಂದ ಮಾಲಗತ್ತಿಯವರ ಪದ್ಯವನ್ನು ಕಿತ್ತುಹಾಕಲಾಗಿದೆ ಎಂಬುದಷ್ಟೇ ಮುಖ್ಯ ವಿಷಯವಲ್ಲ, ಕಿತ್ತು ಹಾಕಿರುವುದು ಬುದ್ಧನ ಕುರಿತ ಪದ್ಯ. ಕ್ರೂರ ಜನಾಂಗೀಯವಾದಿಗಳಷ್ಟೇ ಹೀಗೆ ಮಾಡಬಲ್ಲರು ಎಂದು ಹೋರಾಟಗಾರರಾದ ದಿನೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಸರ್ವಜನಾಂಗದ ಶಾಂತಿಯ ಬೀಡಾದ ಕರ್ನಾಟಕದ ಮಕ್ಕಳಿಗೆ ಒಳ್ಳೆಯ ಪಠ್ಯಪುಸ್ತಕ ಕೊಡುವಂಥ ಬಲಪಂಥೀಯ ವಿದ್ವಾಂಸರನ್ನು ಹುಡುಕಲು ಸರಕಾರಕ್ಕೆ ಅಸಾಧ್ಯವಾದುದು ಅವರ ಬೌದ್ಧಿಕ ದಾರಿದ್ರ್ಯವನ್ನು ಸೂಚಿಸುವುದೇ? ಚಕ್ರತೀರ್ಥ ಬಿಟ್ಟರೆ ಅವರಲ್ಲಿ ಯಾರೂ ಇಲ್ಲವೇ? ಎಂದು ಬಹುತ್ವ ಕರ್ನಾಟಕ ಸಂಘಟನೆ ಪ್ರಶ್ನಿಸಿದೆ.

ಇದನ್ನೂ ಓದಿ: ಸ್ವಾಮಿ ವಿವೇಕಾನಂದರ ಚಿಂತನೆಗಳ ತಿರುಚುವಿಕೆ: ಪ್ರಗತಿಪರ ವಿಚಾರ ಕೈಬಿಟ್ಟು, ಶಾಸ್ತ್ರ, ವೇದಾಂತ ಹೇರಿದ ನೂತನ ಪಠ್ಯ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Twitter system is not voice of public..
    It’s RSS or any it sd be truth in calabash.. not appraisal of sm wrong history.
    Be courageous to know the real fact instead of trying to divide Brahman,Muslim,dalit etc..
    Don’t try to fill ur bank appraising anti communists.
    Twitter Andolan is to have good dreams by blaming truth

  2. Since 2014-15 this nation is witnessing intolerance . Brahminocracy , Brahmin egimony have ruined the 7 decade old Democracy.
    Textbook committee is luring Brahminical lessons into the Academic curriculum is highly condemnable.
    Karnataka education minister Mr. Nagesh must resign immediately for dropping some of the historical patriots lessons from kannada textbooks.
    Reject out right RSS textbooks…….

  3. What a shame! Although we call ourselves citizens of 21st century, we behave as if we never went through any civilization. We are to teach that love conquerors and hate destroys. Unfortunately, hate is become more sweeter than genuine love. People of goodwill please help each other to build a better society by electing sound minded people.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...