Homeಕರ್ನಾಟಕಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು: ಸಿದ್ದರಾಮಯ್ಯ

- Advertisement -
- Advertisement -

ಮಕ್ಕಳ ಭವಿಷ್ಯವನ್ನು ನಿರ್ಧರಿಸುವ ಪಠ್ಯ ಪುಸ್ತಕಗಳನ್ನು ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ರೂಪಿಸಿರುವುದು ಈಗ ಆಕ್ರೋಶಕ್ಕೆ ಕಾರಣವಾಗಿದೆ. ಚಕ್ರತೀರ್ಥ ಮಾಡಿದ್ದ ಹಳೆಯ ಪೋಸ್ಟ್‌ಗಳು ವೈರಲ್ ಆಗುತ್ತಿವೆ.

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ಅವಮಾನ ಮಾಡಿ ರೋಹಿತ್ ಚಕ್ರತೀರ್ಥ ಮಾಡಿದ್ದ ಪೋಸ್ಟ್‌ನ ಹಳೆಯ ಸ್ಕ್ರೀನ್‌ ಶಾಟ್‌ಗಳನ್ನು ಹಂಚಿಕೊಂಡು ತರಾಟೆಗೆ ತೆಗೆದುಕೊಳ್ಳುತ್ತಿರುವ ಕನ್ನಡಿಗರು, “ಇಂತಹ ವ್ಯಕ್ತಿಯನ್ನು ಸರ್ಕಾರ ನೇಮಿಸಿರುವುದು ದುರದೃಷ್ಟಕರ” ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, “ನಾಡಗೀತೆಯನ್ನು ಅವಹೇಳನ‌ ಮಾಡಿದ, ರಾಷ್ಟ್ರಕವಿಯನ್ನು ಗೇಲಿ ಮಾಡಿದ ಇಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ @BJP4Karnataka ಸರ್ಕಾರಕ್ಕೆ ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು” ಎಂದು ಆಕ್ರೋಶ ಹೊರಹಾಕಿದ್ದಾರೆ.

ಮಾಜಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಅವರು ಫೇಸ್‌ಬುಕ್ ಪೋಸ್ಟ್‌ ಮಾಡಿದ್ದು, “ಕುವೆಂಪು ನಾಡಗೀತೆಯನ್ನು ಈ ಮಟ್ಟಿಗೆ ಅವಮಾನಿಸುವ, ಧರ್ಮಾಂಧರು ಮಕ್ಕಳು ಏನನ್ನು ಓದಬೇಕು ಎಂಬ ಸಂಗತಿಯನ್ನು ನಿರ್ಧರಿಸುವುದು ಅಪಾಯಕಾರಿ ವಿದ್ಯಮಾನವಾಗಿದೆ” ಎಂದಿದ್ದಾರೆ.

ಮುಂದುವರಿದು, “ಈ ನಾಡಿನ ನಾಡಗೀತೆಯನ್ನೇ ಅವಮಾನಿಸಿದವರಿಗೆ ಸರ್ಕಾರ ಮನ್ನಣೆ ನೀಡುತ್ತಿರುವ ಉದ್ದೇಶವಾದರೂ ಏನು? ಅರ್ಥಪೂರ್ಣ ವಿರೋಧದ ನಡುವೆಯೂ ಮತ್ತೆ ಈತನನ್ನೇ ಪಿಯುಸಿ ಪಠ್ಯ ಪುಸ್ತಕ ಸಮಿತಿಗೆ ಶಿಫಾರಸ್ಸು ಮಾಡಿರುವ ಶಿಕ್ಷಣ ಸಚಿವರಿಂದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಕೂಡಲೇ ರಾಜೀನಾಮೆ ಪಡೆದು ಸಮಾಜದ ಪರವಾದ ಕಾಳಜಿ ಉಳ್ಳ ಮತ್ತು ಜ್ಞಾನವಂತರಾದ ಶಿಕ್ಷಣ ತಜ್ಞರನ್ನು ಸಮಿತಿಗೆ ನೇಮಕ ಮಾಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇನೆ” ಎಂದು ತಿಳಿಸಿದ್ದಾರೆ.

“ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷರು ಬರೆದ ನಾಡಗೀತೆ.. ಇನ್ನೀಗ ಪಿಯು ಪಠ್ಯ ಸಮಿತಿಗೂ ಇವರೇ ಅಧ್ಯಕ್ಷರಂತೆ ಧನ್ಯವಾಯಿತು ನಾಡು. ಜೈ ಕರ್ನಾಟಕ ಮಾತೆ” ಎಂದು ರಂಗಕರ್ಮಿ ಪ್ರಸಾದ್ ರಕ್ಷಿದಿಯವರು ವಿಷಾದಿಸಿದ್ದಾರೆ.

“ನಾಡಗೀತೆಯನ್ನು ಬಳಸಿ ವ್ಯಂಗ್ಯ ಮಾಡುವ ಮನಸ್ಥಿತಿ, ಮನುಸ್ಥಿತಿಯ ವ್ಯಕ್ತಿ ಇಂದು ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದಾನೆ..! ಐದು ವರ್ಷಗಳ ಹಿಂದಿನ‌ ಪೋಸ್ಟ್ ಬಗ್ಗೆ ಕೆದಕಬಾರದು ಎನ್ನುವವರು ಐನೂರು ವರ್ಷಗಳ ಹಿಂದಿನ ಮೊಘಲರ ಧಾಳಿಯನ್ನು ಕೆದಕಿ ಕೋಮು ಗಲಭೆ ಸೃಷ್ಟಿಸುತ್ತಿರುತ್ತಾರೆ” ಎಂದು ಪತ್ರಕರ್ತ ಶಶಿಕರ ಪಾತೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಪಿಯು ಪಠ್ಯ ಪರಿಶೀಲನೆಗೂ ಚಾಲನೆ; ಮತ್ತದೇ ಚಕ್ರತೀರ್ಥ ಸಮಿತಿಗೆ ಜವಾಬ್ದಾರಿ!

“ಇದು ನಾಡಗೀತೆಗೆ ಮತ್ತು ರಾಷ್ಟ್ರಕವಿ ಕುವೆಂಪುರವರಿಗೆ ಮಾಡಿದ ಅವಮಾನ ಅಷ್ಟೇ ಅಲ್ಲ. ಎಲ್ಲ ಕನ್ನಡಿಗರಿಗೆ ಮತ್ತು ನಮ್ಮೆಲ್ಲರ ಹೆಮ್ಮೆಯ ಇಡೀ ಕರ್ನಾಟಕಕ್ಕೆ ಮಾಡಿರುವ ಅವಮಾನ. ಈತನಿಗೆ ಸಾರ್ವಜನಿಕ ಜೀವನದಲ್ಲಿ ಘನತೆಯಿಂದ ಇರಬೇಕು ಎಂಬ ಅರಿವಿಲ್ಲ. ಕರ್ನಾಟಕದ ಗೌರವಕ್ಕೆ ಧಕ್ಕೆಯಾಗದ ಹಾಗೆ ನಡೆದುಕೊಳ್ಳಬೇಕು ಎಂಬ ಎಚ್ಚರವೂ ಈ ವ್ಯಕ್ತಿಗೆ ಇಲ್ಲ. ಇಂತಾ ಅವಿವೇಕಿಯನ್ನು ರಾಜ್ಯ ಸರ್ಕಾರ ಈಗಲಾದರೂ ಪಟ್ಯಪುಸ್ತಕ ರಚನಾ ಸಮಿತಿಯಿಂದ ಕಿತ್ತೊಗೆದು ಕರ್ನಾಟಕದ ಗೌರವ ಮತ್ತು ಸರ್ಕಾರದ ಗೌರವವನ್ನೂ ಉಳಿಸುವ ಪ್ರಯತ್ನ ಮಾಡಬೇಕು. ಈತನೂ ನಾಡಗೀತೆಗೆ, ಕನ್ನಡನಾಡಿಗೆ ಮಾಡಿರುವ ಅಪಮಾನಕ್ಕೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...