Homeಮುಖಪುಟಹೆಂಗ್ ಪುಂಗ್ಲಿ ಖ್ಯಾತಿಯ ಬಾಡಿಗೆ ಭಾಷಣಕಾರನ ಪಠ್ಯ ಬೇಡ: ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್...

ಹೆಂಗ್ ಪುಂಗ್ಲಿ ಖ್ಯಾತಿಯ ಬಾಡಿಗೆ ಭಾಷಣಕಾರನ ಪಠ್ಯ ಬೇಡ: ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿ

ಸ್ವಿಸ್‌ನಲ್ಲಿರುವ ಕಪ್ಪು ಹಣವನ್ನು ಭಾರತದ ಬೊಕ್ಕಸಕ್ಕೆ ತಂದು ಹಾಕಿದರೆ ದೇಶದ ಎಲ್ಲಾ ರಸ್ತೆಗಳಿಗೂ ಟಾರ್ ಹಾಕುವ ಬದಲು ಚಿನ್ನ ಹಾಕಬಹುದು ಎಂದು ಚಕ್ರವರ್ತಿ ಸೂಲಿಬೆಲೆ ಭಾಷಣ ಮಾಡಿದ್ದರು.

- Advertisement -
- Advertisement -

ರಾಜ್ಯದಲ್ಲಿ ನಡೆಯುತ್ತಿರುವ ಪಠ್ಯಪುಸ್ತಕ ಪರಿಷ್ಕರಣೆ ವಿವಾದ ತಾರಕಕ್ಕೇರಿದೆ. ಹೆಂಗ್ ಪುಂಗ್ಲಿ ಖ್ಯಾತಿಯ ಬಾಡಿಗೆ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಯ ಪಠ್ಯ ಬೇಡ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ.

BJP ಹಾಗೂ ಸಂಘಪರಿವಾರದ ಬೌದ್ಧಿಕ ದಿವಾಳಿತನ ಈ ಮಟ್ಟಕ್ಕೆ ಇಳಿಬಾರದಾಗಿತ್ತು. ಸುಳ್ಳಿನ ಕಂತೆಗಳನ್ನ ಪೋಣಿಸುವ ಹೆಂಗ್ ಪುಂಗ್ಲಿ ಖ್ಯಾತಿಯ ಬಾಡಿಗೆ ಭಾಷಣಕಾರನನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೆಂಬಲಿಸುವುದು ದುರಂತ ಎಂದಿದ್ದಾರೆ.

ಅಂತಹ ವಾಗ್ಮಿ, ಚಿಂತಕನ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ನಿಮ್ಮದೇ ಪಕ್ಷದ ಮಾಜಿ ಸಿಎಂ ಡಿ.ವಿ ಸದಾನಂದಗೌಡರ ಬಗ್ಗೆ ಮಾರ್ಗದರ್ಶನ ಪಡೆಯುವುದು ಒಳ್ಳೆಯದು ಎಂದು ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ “ವಾಗ್ಮಿ, ಚಿಂತಕ ಚಕ್ರವರ್ತಿ ಸೂಲಿಬೆಲೆಯವರ ಹಿಂದೂಪರ ಚಿಂತನೆಗಳನ್ನು ಶಾಲಾ ಪಠ್ಯ ಪುಸ್ತಕಗಳಲ್ಲಿ ಅಳವಡಿಸಿದರೆ” ತಪ್ಪೇನು ಎಂದು ಪ್ರಶ್ನಿಸಿದ್ದರು. ಅಲ್ಲದೆ ಟಿಪ್ಪು ಒಬ್ಬ ನರಭಕ್ಷಕ ಎಂದು ಸಹ ಹೇಳಿಕೆ ನೀಡಿದ್ದರು.

ಅವರ ಹೇಳಿಕೆಗೆ ಬಿ.ಕೆ ಹರಿಪ್ರಸಾದ್ ತಿರುಗೇಟು ನೀಡಿದ್ದು, “ಜಗದೀಶ್ ಶೆಟ್ಟರ್‌ ಟಿಪ್ಪುವಿನ ಪೋಷಾಕು ಧರಿಸಿ ಪೋಸು ನೀಡಿದ್ದನ್ನ ಮರೆತಿರಬೇಕು. ಚಿತ್ರಗಳು ಬರೀ ಮಾತಾಡುವುದಿಲ್ಲ ಶೆಟ್ಟರ್ ಅವರೇ, ಸತ್ಯವನ್ನ ಬೆತ್ತಲೆ ಕೂಡ ಮಾಡುತ್ತೆ. ಕೋಮುವಾದದ ಕನ್ನಡಕ ಕಳಚಿಟ್ಟು ಓದುವುದಾದರೇ ತಾವೇ ಸಿಎಂ ಆಗಿದ್ದಾಗ ಪ್ರಕಟಿಸಿರುವ ಪುಸ್ತಕ ಕಳಿಸಿ‌ಕೊಡಬೇಕಾ?” ಎಂದು ಶೆಟ್ಟರ್ ಟಿಪ್ಪುವಿನ ವೇಶ ಧರಿಸಿದ್ದ ಫೋಟೋಗಳನ್ನು ಟ್ವಿಟ್ ಮಾಡಿದ್ದಾರೆ.

ಸ್ವಿಸ್‌ನಲ್ಲಿರುವ ಕಪ್ಪು ಹಣವನ್ನು ಭಾರತದ ಬೊಕ್ಕಸಕ್ಕೆ ತಂದು ಹಾಕಿದರೆ ದೇಶದ ಎಲ್ಲಾ ರಸ್ತೆಗಳಿಗೂ ಟಾರ್ ಹಾಕುವ ಬದಲು ಚಿನ್ನ ಹಾಕಬಹುದು. ಸೌದಿಯ ಪೆಟ್ರೋಲಿಯಂ ಸಚಿವರಿಗೆ ಮೋದಿ ಫೋನ್ ಮಾಡಿ ಪೆಟ್ರೋಲ್ ಬೆಲೆ ಕಡಿಮೆ ಮಾಡಲು ಹೇಳಿದ್ದರು. ಬೆಂಗಳೂರಿನಿಂದ ಮಂಗಳೂರಿಗೆ ಬುಲೆಟ್ ಟ್ರೈನ್ ನಲ್ಲಿ 2 ಗಂಟೆಯಲ್ಲಿ ಹೋಗಬಹುದು. ಮೋದಿ ಇವೆಲ್ಲವನ್ನು ಮಾಡುತ್ತಾರೆ ಎಂದು ಚಕ್ರವರ್ತಿ ಸೂಲಿಬೆಲೆ ಭಾಷಣ ಮಾಡಿ ವಿವಾದ ಸೃಷ್ಟಿಸಿದ್ದರು. ಹಾಗಾಗಿ ಅವರನ್ನು ಸೋಷಿಯಲ್ ಮೀಡಿಯಾದಲ್ಲಿ ಹೆಂಗ್ ಪುಂಗ್ಲಿಯೆಂಬ ಅಡ್ಡನಾಮದಿಂದ ಕರೆದು ಟ್ರೋಲ್ ಮಾಡಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಹರಿಪ್ರಸಾದ್ ಅನ್ನೋ ಗುಲಾಮನೇ ಒಬ್ಬಾ ಗೂಂಡಾ ಹಾಗಿರುವಾಗ ಇನ್ನೊಬ್ಬರ ಬಗ್ಗೆ ಮಾತಾಡೋ ಯೋಗ್ಯತೆ ಈ ಗೂಂಡಾ ಗುಲಾಮರಿಗೆ ಇಲ್ಲಾ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...